ಕೋಲಾರ ತಾಲೂಕಿನ ನರಸಾಪುರ ಕೈಗಾರಿಕಾ ಪ್ರದೇಶದಲ್ಲಿನ ಕಾರ್ಮಿಕರ ವೇತನ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಎಕ್ಸಿಡಿ ಕಂಪನಿಯ ಆಡಳಿತದ ಮಂಡಳಿಯ ವಿರುದ್ಧದ ಸಿಐಟಿಯು ನೇತೃತ್ವದ ಎಕ್ಷಿಡಿ ಕ್ಲಚ್ ಇಂಡಿಯಾ ಎಂಪ್ಲಾಯೀಸ್ ಯೂನಿಯನ್ ವತಿಯಿಂದ ಸೋಮವಾರ ಕಂಪನಿ ಎದುರು ಅನಿರ್ದಿಷ್ಟಾವಧಿ ಪ್ರತಿಭಟನೆ ನಡೆಸಿದರು.
ಈ ಸಂದರ್ಭದಲ್ಲಿ ಕಂಪನಿಯ ಯೂನಿಯನ್ ಅಧ್ಯಕ್ಷ ಹರೀಶ್ ಮಾತನಾಡಿ, ಸುಮಾರು ಒಂದುವರೆ ವರ್ಷದ ಹಿಂದೆಯಿಂದ ಕಾರ್ಮಿಕರ ಬೇಡಿಕೆಗಳನ್ನು ಈಡೇರಿಸಲು ಸಾಕಷ್ಟು ಬಾರಿ ಮನವಿಗಳನ್ನು ಕೊಟ್ಟರೂ ಈಡೇರಿಸಲು ಕಂಪನಿಯ ಆಡಳಿತ ಮಂಡಳಿ ಸಿದ್ದವಾಗಿಲ್ಲ. ಕಾರ್ಮಿಕರ ಮತ್ತು ಆಡಳಿತ ಮಂಡಳಿಯ ಮಧ್ಯೆ ಸುಮಾರು 30 ರಿಂದ 40 ಸಭೆಗಳು ಆಗಿವೆ ಒಂದು ಬೇಡಿಕೆಯನ್ನು ಸಹ ಈಡೇರಿಸಲು ಸಾಧ್ಯವಾಗಲಿಲ್ಲ ಈ ಸಂಬಂಧವಾಗಿ ಮೂರು ತಿಂಗಳ ಹಿಂದೆ ಜಿಲ್ಲಾಧಿಕಾರಿಗಳು ಸೇರಿದಂತೆ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ, ಕಾರ್ಮಿಕ ಜಿಲ್ಲಾ ಆಯುಕ್ತರಿಗೆ ಮನವಿ ನೀಡಿದ್ದರೂ ಯಾವುದೇ ಪ್ರಯೋಜನವಾಗಲಿಲ್ಲ ಅನಿವಾರ್ಯವಾಗಿ ಇಂದಿನಿಂದ ಅನಿರ್ದಿಷ್ಟಾವಧಿ ಪ್ರತಿಭಟನೆ ಹಮ್ಮಿಕೊಳ್ಳುವ ಸಂದರ್ಭ ಬಂದಿದೆ ಎಂದು ತಿಳಿಸಿದರು.
ಕಾರ್ಮಿಕರ ಬೇಡಿಕೆಗಳ ಬಗ್ಗೆ ಜೆಡಿ, ಆಡಳಿತ ಮಂಡಳಿ, ಸಂಘದ ಪದಾಧಿಕಾರಿಗಳೊಂದಿಗೆ ಪರಸ್ಪರ ಮಾತುಕತೆ ಮೂಲಕ ಈಡೇರಿಸಬೇಕು ಸಂಘದ ಸದಸ್ಯತ್ವದ ಶುಲ್ಕವನ್ನು ಮಾಸಿಕ ವೇತನದಿಂದ ಕಡಿತಗೊಳಿಸಿ ಸಂಘದ ಖಾತೆಗೆ ನೇರವಾಗಿ ನೀಡಬೇಕು ಇಲ್ಲದೇ ಹೋದರೆ ಬೇರೆ ಮಾರ್ಗದ ಮೂಲಕ ನಮ್ಮ ಹಕ್ಕುಗಳನ್ನು ಪಡೆಯಬೇಕಾಗುತ್ತದೆ ಎಂದು ಕಂಪನಿಯ ಆಡಳಿತ ಮಂಡಳಿಯ ವಿರುದ್ಧ ಗುಡುಗಿದರು.
ಈ ಸಂದರ್ಭದಲ್ಲಿ ಪ್ರತಿಭಟನೆಯನ್ನು ಉದ್ದೇಶಿಸಿ ಸಿಐಟಿಯು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎಂ.ವಿಜಯಕೃಷ್ಣ ಮಾತನಾಡಿ ಕಾರ್ಮಿಕ ಬೇಡಿಕೆಗಳ ಬಗ್ಗೆ ಟ್ರೇಡ್ ಯೂನಿಯನ್ ಜೊತೆ ಚರ್ಚೆ ಮಾಡದಿರುವುದು ಇಂತಹ ಸಮಸ್ಯೆಗಳಿಗೆ ಕಾರಣವಾಗಿದೆ ಕಾರ್ಮಿಕರ ಸಂಬಳದಿಂದ ಪರಸ್ಪರ ಕಡಿತಗೊಳಿಸುವುದು, ಸುಳ್ಳು ದೂರುಗಳ ಆಧಾರದ ಮೇಲೆ ಅವರ ಮೇಲೆ ಕೇಸ್ ನೀಡುವುದು, ಅಮಾನತು, ಶಿಸ್ತು ಕ್ರಮ ವಹಿಸುವುದು ಆಡಳಿತದ ಕೆಲಸವಾಗಬಾರದು ಕಾರ್ಮಿಕರನ್ನು ಗೌರವದಿಂದ ನಡೆಸಿಕೊಳ್ಳುಬೇಕು ಕಾರ್ಮಿಕರ ಮತ್ತು ಯೂನಿಯನ್ ಸದಸ್ಯರ ವಿರುದ್ಧ ಕ್ರಮ ವಹಿಸಬಾರದು ಉದ್ಯೋಗ ಒಪ್ಪಂದಗಳನ್ನು ಉಲ್ಲಂಘಿಸಿ ಗುತ್ತಿಗೆ ಕಾರ್ಮಿಕರ ಬಲವಂತದ ಉದ್ಯೋಗವನ್ನು ಕೈಬಿಡಬೇಕು ಎಂದು ಒತ್ತಾಯಿಸಿದರು.
ಪಟಾಕಿ ದುರಂತಕ್ಕೆ ಯಾರು ಹೊಣೆ.... ಬಡ ಕಾರ್ಮಿಕರ ಜೀವಕ್ಕೆ ಬೆಲೆ ಇಲ್ಲವೇ, ಲೇಸರ್ ಗಳ ಯುಗದಲ್ಲಿ ಪಟಾಕಿಗೇನು ಕೆಲಸ..... ಲೇಸರ್…
ದೊಡ್ಡಬಳ್ಳಾಪುರ ನಗರದಲ್ಲಿ ಏ.23 ರಂದು 66/11ಕೆವಿ ಡಿಕ್ರಾಸ್ ಉಪ ವಿದ್ಯುತ್ ಕೇಂದ್ರದಿಂದ ಹೊರಹೊಮ್ಮುವ F09-Rajaghatta, F03-Thalagavara, F12-Heggadihalli, F17- Nandi…
ಖಾಯಂ ನೇಮಕಾತಿ, ಕನಿಷ್ಠ ವೇತನ, ಸಮಾನ ಕೆಲಸಕ್ಕೆ ಸಮಾನ ವೇತನ ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಸರ್ಕಾರಿ ಪರವಾನಗಿ…
2026-27 ನೇ ಸಾಲಿನಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಪ್ರತಿಷ್ಠಿತ ಶಾಲೆಗಳಲ್ಲಿ 6ನೇ ತರಗತಿ(ಆಂಗ್ಲ ಮಾಧ್ಯಮ)ಗೆ ಸೇರಲು ಪರಿಶಿಷ್ಟ ಪಂಗಡದ ಪ್ರತಿಭಾವಂತ…
ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ರಾಜ್ಯ ಮಟ್ಟದ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಗೆ…
ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಕೊಟ್ಟಿಗೆಮಾಚೇನಹಳ್ಳಿ ಗ್ರಾಮದಲ್ಲಿ ಕರಡಿ ಹಾವಳಿ ಮುಂದುವರಿದಿದೆ.. ರಾತ್ರೋರಾತ್ರಿ ರೈತರ ಹೊಲಗಳಿಗೆ ನುಗ್ಗಿ ಬಾಳೆ, ಹಲಸಿನ…