Categories: ಕೋಲಾರ

ಕಾರ್ಮಿಕರ ವಿರೋಧಿ ನೀತಿಗಳ ವಿರುದ್ಧ ಬೃಹತ್ ಪ್ರತಿಭಟನೆ

ಕೋಲಾರ: ಕೇಂದ್ರ ಸರ್ಕಾರ ಜಾರಿಗೊಳಿಸಿರುವ ನಾಲ್ಕು ಕಾರ್ಮಿಕರ ವಿರೋಧಿ ನೀತಿಗಳ ವಿರುದ್ದ ಕಾರ್ಮಿಕ ಸಂಘಗಳ ಜಂಟಿ ಸಮಿತಿ ಹಾಗೂ ಸಂಯುಕ್ತ ಹೋರಾಟ ಕರ್ನಾಟಕ ವತಿಯಿಂದ ಗುರುವಾರ ಕರೆ ನೀಡಿದ್ದ ಅಖಿಲ ಭಾರತ ಸಾರ್ವತ್ರಿಕ ಮುಷ್ಕರದ ಭಾಗವಾಗಿ ನಗರದ ಗಾಂಧಿವನದಿಂದ ಮೆರವಣಿಗೆ ನಡೆಸಿ ತಹಶಿಲ್ದಾರ್ ಕಛೇರಿ ಮುಂದೆ ಬೃಹತ್ ಪ್ರತಿಭಟನೆ ನಡೆಸಿದರು.

ಈ ಸಂದರ್ಭದಲ್ಲಿ ಹಿರಿಯ ಕಾರ್ಮಿಕ ಮುಖಂಡ ಗಾಂಧಿನಗರ ನಾರಾಯಣಸ್ವಾಮಿ ಮಾತನಾಡಿ ದೇಶದಲ್ಲಿ ಕಾರ್ಮಿಕರ ಹಕ್ಕುಗಳಿಗಾಗಿ ಇದ್ದ 29 ಕಾರ್ಮಿಕ ಕಾಯ್ದೆಗಳನ್ನು 4 ಕಾರ್ಮಿಕ ಕೋಡ್‌ಗಳಾಗಿ ಜಾರಿಗೊಳಿಸಿದ್ದಾರೆ ಕಾರ್ಮಿಕರು ಮುಷ್ಕರ ನಡೆಸಿದರೆ ದಂಡ, ಜೈಲು ಶಿಕ್ಷೆ, ವೇತನ ಕಡಿತಗೊಳಿಸಲಾಗುವ ನೀತಿಗಳು ಜಾರಿ ಮಾಡಿದ್ದಾರೆ. ನರೇಗಾದಡಿ ಕೆಲಸದ ಹಕ್ಕನ್ನು ಕಸೆದುಕೊಂಡು ಗ್ರಾಮೀಣ ಜನರ ದುಡಿಯುವ ಹಕ್ಕನ್ನು ನಿಯಂತ್ರಣ ಮಾಡುವ ಮೂಲಕ ಗ್ರಾಮೀಣ ಜನರ ಜೀವನ ಕಸೆದುಕೊಂಡು ಬೀದಿ ಪಾಲಾಗುವಂತೆ ಮಾಡುತ್ತಿದ್ದಾರೆ ಎಂದು ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಸಿಐಟಿಯು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎಂ.ವಿಜಯಕೃಷ್ಣ ಮಾತನಾಡಿ ದೇಶದಲ್ಲಿ ಮೋದಿ ಸರ್ಕಾರ ಅಧಿಕಾರಕ್ಕೆ ಬಂದ ನಂತರ ವಿದ್ಯುಚ್ಛಕ್ತಿ ಖಾಸಗೀಕರಣ, ಪ್ರಸರಣ ಮತ್ತು ಅನುಷ್ಠಾನ ನಿರ್ವಹಣೆ ಖಾಸಗಿ ಬಂಡವಾಳಗಾರರಿಗೆ ನೀಡುವ ಮೂಲಕ ರೈತರು, ಜನ ಸಾಮಾನ್ಯರ ಸಬ್ಸಿಡಿಗೆ ಮೋಸ ಮಾಡಿದ್ದಾರೆ ರೈತರ ಉತ್ಪನ್ನಗಳಿಗೆ ಬೆಂಬಲ ಬೆಲೆ ನೀಡದೇ ಕೃಷಿಯನ್ನು ಉತ್ತೇಜಿಸದೇ ಭೂ ಸ್ವಾದೀನ ಕಾಯ್ದೆ ಮೂಲಕ ರೈತ ಜಮೀನು ಕಸಿದುಕೊಳ್ಳುವ ಹುನ್ನಾರ ಮಾಡಿದ್ದಾರೆ ಇದನ್ನು ವಿರೋಧವನ್ನು ವ್ಯಕ್ತಪಡಿಸಬೇಕಾಗಿದೆ ಎಂದರು.

ಈ ಸಂದರ್ಭದಲ್ಲಿ ರೈತ ಸಂಘದ ರಾಜ್ಯ ಕಾರ್ಯಾಧ್ಯಕ್ಷ ಅಬ್ಬಣಿ ಶಿವಪ್ಪ ಮಾತನಾಡಿ‌ ನರೇಗಾ ಯೋಜನೆಯನ್ನು ಪುನರ್ ಸ್ಥಾಪಿಸಿ, ವಿ.ಜಿ ಗ್ರಾಮ್ ಜಿ ಕಾಯ್ದೆ ರದ್ದುಗೊಳಿಸಬೇಕು, ಭೂ ಸ್ವಾಧೀನ ಕಾಯ್ದೆಯನ್ನು ಹಿಂಪಡೆದು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ತಂದಿರುವ ಭೂಸುಧಾರಣಾ, ಎಪಿಎಂಸಿ, ಜಾನುವಾರು ಸಂರಕ್ಷಣಾ ತಿದ್ದುಪಡಿ ಕಾಯ್ದೆಗಳು ಸೇರಿದಂತೆ ವಿದ್ಯುಚ್ಛಕ್ತಿ ಖಾಸಗೀಕರಣ ಮಾಡುವುದನ್ನು ನಿಲ್ಲಿಸಬೇಕು. ಬೀಜ ಮಸೂದೆ ಕಾಯ್ದೆಯನ್ನು ವಾಪಸು ಮಾಡುವ ಜೊತೆಗೆ ಕಾರ್ಮಿಕರ ನಾಲ್ಕು ಕೋಡ್ ಗಳನ್ನು ಜಾರಿ ಮಾಡಲು ಯಾವುದೇ ಕಾರಣಕ್ಕೂ ಬಿಡಬಾರದು ಎಂದು ತಿಳಿಸಿದರು

ಈ ಸಂದರ್ಭದಲ್ಲಿ ಕೆ.ಪಿ.ಆರ್.ಎಸ್ ಜಿಲ್ಲಾಧ್ಯಕ್ಷ ಟಿ.ಎಂ ವೆಂಕಟೇಶ್ ಮಾತನಾಡಿ ಕರ್ನಾಟಕ ಸರ್ಕಾರ ಕಾರ್ಮಿಕ ಸಂಹಿತೆಗಳಿಗೆ ಈಗ ತಂದಿರುವ ಗೆಜೆಟ್ ನೋಟಿಫಿಕೇಷನ್‌ನ್ನು ವಾಪಸ್ಸು ಪಡೆಯಬೇಕು. ಮತ್ತು ಒಕ್ಕೂಟ ಸರ್ಕಾರ ತಂದಿರುವ ಜನವಿರೋಧಿ ಮಸೂದೆಗಳನ್ನು ವಿರೋಧಿಸಬೇಕು. 2025 ಆಗಸ್ಟ್ ತಿಂಗಳಲ್ಲಿ ಕನಿಷ್ಠ ವೇತನ ಹೆಚ್ಚಳದ ಕುರಿತು ಕನಿಷ್ಠ ವೇತನ ಸಲಹಾ ಮಂಡಳಿ ನೀಡಿರುವ ಶಿಫಾರಸ್ಸುನ್ನು ಅಂತಿಮ ಅಧಿಸೂಚನೆಯಾಗಿ ಹೊರಡಿಸಬೇಕು ಎಂದು ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಮುಖಂಡರಾದ ಹೆಚ್.ಬಿ ಕೃಷ್ಣಪ್ಪ, ಎಂ. ಭೀಮರಾಜ್, ಎನ್.ಕಲ್ಪನಾ, ಆಶಾ, ವಿ.ಮಂಜುಳ, ಲಕ್ಷ್ಮಿದೇವಿ, ರಾಜಮ್ಮ, ರಾಮಚಂದ್ರಪ್ಪ, ವಿಜಯಕುಮಾರ್, ಅಂಜನಪ್ಪ, ನಿಕಿಲ್, ಶಿವಕುಮಾರ್, ಪೃಥ್ವಿ, ಮೂರ್ತಿ, ರಮೇಶ್, ನಾರಾಯಣರೆಡ್ಡಿ, ಶಾಂತಮ್ಮ, ಬುಟ್ಟಾಲ ಗಣೇಶ್, ಎಂ.ಶ್ರೀನಿವಾಸ್, ನವೀನ್ ಕುಮಾರ್, ಮುಂತಾದವರು ಇದ್ದರು,

Ramesh Babu

Journalist

Recent Posts

ಬಿಜೆಪಿ – ಕಾಂಗ್ರೆಸ್ ನಡುವೆ SIR ಫೈಟ್: ಕಾಂಗ್ರೆಸ್ ನಾಯಕರ ವಿರುದ್ಧ ಸಂಸದ ಡಾ.ಕೆ.ಸುಧಾಕರ್ ಕಿಡಿ

ಬೆಂಗಳೂರು ಗ್ರಾಮಾಂತರ: ಮತದಾರರ ವಿಶೇಷ ತೀವ್ರ ಪಟ್ಟಿ ಪರಿಷ್ಕರಣೆ (SIR) ವಿಚಾರವಾಗಿ ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷಗಳ ನಡುವೆ ರಾಜಕೀಯ…

16 minutes ago

ನಗರಸಭೆ ಉಪಾಧ್ಯಕ್ಷರಾಗಿ ವೆಂಕಟೇಶ್(ಬಂತಿ) ಅವಿರೋಧ ಆಯ್ಕೆ

ದೊಡ್ಡಬಳ್ಳಾಪುರ ನಗರಸಭೆ ಉಪಾಧ್ಯಕ್ಷರಾಗಿ ವೆಂಕಟೇಶ್(ಬಂತಿ) ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ದೊಡ್ಡಬಳ್ಳಾಪುರ ನಗರಸಭೆ ಉಪಾಧ್ಯಕ್ಷ ಸ್ಥಾನಕ್ಕೆ ಮಲ್ಲೇಶ್ ರಾಜೀನಾಮೆ ನೀಡಿದ್ದು, ತೆರವಾದ ಸ್ಥಾನಕ್ಕೆ…

3 hours ago

ಸ್ಪರ್ಶ್ ಆಸ್ಪತ್ರೆ ಹೆಣ್ಣೂರು ಒಂದು ವರ್ಷ ಪೂರ್ಣಗೊಳಿಸಿದೆ .ಉತ್ತರ ಬೆಂಗಳೂರಿನಲ್ಲಿ ಸಮಗ್ರ ಮಲ್ಟಿಸ್ಪೆಷಾಲಿಟಿ ಆರೈಕೆಯ ಹೆಚ್ಚುತ್ತಿರುವ ಅಗತ್ಯವನ್ನು ಪ್ರತಿಬಿಂಬಿಸುತ್ತದೆ

ಸ್ಪರ್ಶ್ ಆಸ್ಪತ್ರೆ, ಹೆಣ್ಣೂರು ತನ್ನ ಕಾರ್ಯಾಚರಣೆಯ ಒಂದು ವರ್ಷವನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದೆ. ಆಸ್ಪತ್ರೆಯ ಮೊದಲ ವರ್ಷದ ಕ್ಲಿನಿಕಲ್ ಅಂಕಿಅಂಶಗಳು ಉತ್ತರ…

5 hours ago

ಮತ್ತೆ ಪೆಟ್ರೋಲ್, ಡೀಸೆಲ್ ದರ ಏರಿಕೆ: ದರ‌‌ ಪಟ್ಟಿ‌ ಇಲ್ಲಿದೆ ನೋಡಿ

ನವದೆಹಲಿ: ದೇಶದಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ದರಗಳು ಮತ್ತೆ ಏರಿಕೆಯಾಗಿದ್ದು, ವಾಹನ ಸವಾರರಿಗೆ ಮತ್ತೊಂದು ಹೊರೆ ಬಿದ್ದಿದೆ. ಕೇಂದ್ರ ಸರ್ಕಾರ…

9 hours ago

“ಕಾಂಗ್ರೆಸ್ ನಡೆ – ಮತ ರಕ್ಷಣೆಯ ಕಡೆ”: ಕೆಪಿಸಿಸಿ ವತಿಯಿಂದ ಮಹತ್ವದ ಕಾರ್ಯಾಗಾರ: ಸಿಎಂ, ಡಿಸಿಎಂ‌ ಭಾಗಿ

ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯು ಚಿಕ್ಕಬಳ್ಳಾಪುರದ ನಂದಿಬೆಟ್ಟ ರಸ್ತೆಯ ಖಾಸಗಿ ಹೋಟೆಲ್‌ನಲ್ಲಿ‌ ಆಯೋಜಿಸಿದ್ದ "ಕಾಂಗ್ರೆಸ್ ನಡೆ-ಮತ ರಕ್ಷಣೆಯ ಕಡೆ" ಜಾಗೃತ…

12 hours ago

1 ವರ್ಷ 4 ತಿಂಗಳ ಮಗುವಿನ ಕಣ್ಣು ದಾನ: ಸಾವಿನಲ್ಲೂ ಮಾನವೀಯತೆ ಮೆರೆದ ಕುಟುಂಬ

ದೊಡ್ಡಬಳ್ಳಾಪುರ: ನಗರದ ದೇವರಾಜನಗರ ನಿವಾಸಿಗಳಾದ ಭರತ್ ಅವರ 1 ವರ್ಷ 4 ತಿಂಗಳ ಮಗ ಪೋಷಕ್ ಆರೋಗ್ಯದ ವ್ಯತ್ಯಯದಿಂದ ವಿಧಿವಶರಾದ…

2 days ago