Categories: ಕೋಲಾರ

ಕಾರ್ಮಿಕರ ವಿರೋಧಿ ನೀತಿಗಳ ವಿರುದ್ಧ ಬೃಹತ್ ಪ್ರತಿಭಟನೆ

ಕೋಲಾರ: ಕೇಂದ್ರ ಸರ್ಕಾರ ಜಾರಿಗೊಳಿಸಿರುವ ನಾಲ್ಕು ಕಾರ್ಮಿಕರ ವಿರೋಧಿ ನೀತಿಗಳ ವಿರುದ್ದ ಕಾರ್ಮಿಕ ಸಂಘಗಳ ಜಂಟಿ ಸಮಿತಿ ಹಾಗೂ ಸಂಯುಕ್ತ ಹೋರಾಟ ಕರ್ನಾಟಕ ವತಿಯಿಂದ ಗುರುವಾರ ಕರೆ ನೀಡಿದ್ದ ಅಖಿಲ ಭಾರತ ಸಾರ್ವತ್ರಿಕ ಮುಷ್ಕರದ ಭಾಗವಾಗಿ ನಗರದ ಗಾಂಧಿವನದಿಂದ ಮೆರವಣಿಗೆ ನಡೆಸಿ ತಹಶಿಲ್ದಾರ್ ಕಛೇರಿ ಮುಂದೆ ಬೃಹತ್ ಪ್ರತಿಭಟನೆ ನಡೆಸಿದರು.

ಈ ಸಂದರ್ಭದಲ್ಲಿ ಹಿರಿಯ ಕಾರ್ಮಿಕ ಮುಖಂಡ ಗಾಂಧಿನಗರ ನಾರಾಯಣಸ್ವಾಮಿ ಮಾತನಾಡಿ ದೇಶದಲ್ಲಿ ಕಾರ್ಮಿಕರ ಹಕ್ಕುಗಳಿಗಾಗಿ ಇದ್ದ 29 ಕಾರ್ಮಿಕ ಕಾಯ್ದೆಗಳನ್ನು 4 ಕಾರ್ಮಿಕ ಕೋಡ್‌ಗಳಾಗಿ ಜಾರಿಗೊಳಿಸಿದ್ದಾರೆ ಕಾರ್ಮಿಕರು ಮುಷ್ಕರ ನಡೆಸಿದರೆ ದಂಡ, ಜೈಲು ಶಿಕ್ಷೆ, ವೇತನ ಕಡಿತಗೊಳಿಸಲಾಗುವ ನೀತಿಗಳು ಜಾರಿ ಮಾಡಿದ್ದಾರೆ. ನರೇಗಾದಡಿ ಕೆಲಸದ ಹಕ್ಕನ್ನು ಕಸೆದುಕೊಂಡು ಗ್ರಾಮೀಣ ಜನರ ದುಡಿಯುವ ಹಕ್ಕನ್ನು ನಿಯಂತ್ರಣ ಮಾಡುವ ಮೂಲಕ ಗ್ರಾಮೀಣ ಜನರ ಜೀವನ ಕಸೆದುಕೊಂಡು ಬೀದಿ ಪಾಲಾಗುವಂತೆ ಮಾಡುತ್ತಿದ್ದಾರೆ ಎಂದು ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಸಿಐಟಿಯು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎಂ.ವಿಜಯಕೃಷ್ಣ ಮಾತನಾಡಿ ದೇಶದಲ್ಲಿ ಮೋದಿ ಸರ್ಕಾರ ಅಧಿಕಾರಕ್ಕೆ ಬಂದ ನಂತರ ವಿದ್ಯುಚ್ಛಕ್ತಿ ಖಾಸಗೀಕರಣ, ಪ್ರಸರಣ ಮತ್ತು ಅನುಷ್ಠಾನ ನಿರ್ವಹಣೆ ಖಾಸಗಿ ಬಂಡವಾಳಗಾರರಿಗೆ ನೀಡುವ ಮೂಲಕ ರೈತರು, ಜನ ಸಾಮಾನ್ಯರ ಸಬ್ಸಿಡಿಗೆ ಮೋಸ ಮಾಡಿದ್ದಾರೆ ರೈತರ ಉತ್ಪನ್ನಗಳಿಗೆ ಬೆಂಬಲ ಬೆಲೆ ನೀಡದೇ ಕೃಷಿಯನ್ನು ಉತ್ತೇಜಿಸದೇ ಭೂ ಸ್ವಾದೀನ ಕಾಯ್ದೆ ಮೂಲಕ ರೈತ ಜಮೀನು ಕಸಿದುಕೊಳ್ಳುವ ಹುನ್ನಾರ ಮಾಡಿದ್ದಾರೆ ಇದನ್ನು ವಿರೋಧವನ್ನು ವ್ಯಕ್ತಪಡಿಸಬೇಕಾಗಿದೆ ಎಂದರು.

ಈ ಸಂದರ್ಭದಲ್ಲಿ ರೈತ ಸಂಘದ ರಾಜ್ಯ ಕಾರ್ಯಾಧ್ಯಕ್ಷ ಅಬ್ಬಣಿ ಶಿವಪ್ಪ ಮಾತನಾಡಿ‌ ನರೇಗಾ ಯೋಜನೆಯನ್ನು ಪುನರ್ ಸ್ಥಾಪಿಸಿ, ವಿ.ಜಿ ಗ್ರಾಮ್ ಜಿ ಕಾಯ್ದೆ ರದ್ದುಗೊಳಿಸಬೇಕು, ಭೂ ಸ್ವಾಧೀನ ಕಾಯ್ದೆಯನ್ನು ಹಿಂಪಡೆದು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ತಂದಿರುವ ಭೂಸುಧಾರಣಾ, ಎಪಿಎಂಸಿ, ಜಾನುವಾರು ಸಂರಕ್ಷಣಾ ತಿದ್ದುಪಡಿ ಕಾಯ್ದೆಗಳು ಸೇರಿದಂತೆ ವಿದ್ಯುಚ್ಛಕ್ತಿ ಖಾಸಗೀಕರಣ ಮಾಡುವುದನ್ನು ನಿಲ್ಲಿಸಬೇಕು. ಬೀಜ ಮಸೂದೆ ಕಾಯ್ದೆಯನ್ನು ವಾಪಸು ಮಾಡುವ ಜೊತೆಗೆ ಕಾರ್ಮಿಕರ ನಾಲ್ಕು ಕೋಡ್ ಗಳನ್ನು ಜಾರಿ ಮಾಡಲು ಯಾವುದೇ ಕಾರಣಕ್ಕೂ ಬಿಡಬಾರದು ಎಂದು ತಿಳಿಸಿದರು

ಈ ಸಂದರ್ಭದಲ್ಲಿ ಕೆ.ಪಿ.ಆರ್.ಎಸ್ ಜಿಲ್ಲಾಧ್ಯಕ್ಷ ಟಿ.ಎಂ ವೆಂಕಟೇಶ್ ಮಾತನಾಡಿ ಕರ್ನಾಟಕ ಸರ್ಕಾರ ಕಾರ್ಮಿಕ ಸಂಹಿತೆಗಳಿಗೆ ಈಗ ತಂದಿರುವ ಗೆಜೆಟ್ ನೋಟಿಫಿಕೇಷನ್‌ನ್ನು ವಾಪಸ್ಸು ಪಡೆಯಬೇಕು. ಮತ್ತು ಒಕ್ಕೂಟ ಸರ್ಕಾರ ತಂದಿರುವ ಜನವಿರೋಧಿ ಮಸೂದೆಗಳನ್ನು ವಿರೋಧಿಸಬೇಕು. 2025 ಆಗಸ್ಟ್ ತಿಂಗಳಲ್ಲಿ ಕನಿಷ್ಠ ವೇತನ ಹೆಚ್ಚಳದ ಕುರಿತು ಕನಿಷ್ಠ ವೇತನ ಸಲಹಾ ಮಂಡಳಿ ನೀಡಿರುವ ಶಿಫಾರಸ್ಸುನ್ನು ಅಂತಿಮ ಅಧಿಸೂಚನೆಯಾಗಿ ಹೊರಡಿಸಬೇಕು ಎಂದು ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಮುಖಂಡರಾದ ಹೆಚ್.ಬಿ ಕೃಷ್ಣಪ್ಪ, ಎಂ. ಭೀಮರಾಜ್, ಎನ್.ಕಲ್ಪನಾ, ಆಶಾ, ವಿ.ಮಂಜುಳ, ಲಕ್ಷ್ಮಿದೇವಿ, ರಾಜಮ್ಮ, ರಾಮಚಂದ್ರಪ್ಪ, ವಿಜಯಕುಮಾರ್, ಅಂಜನಪ್ಪ, ನಿಕಿಲ್, ಶಿವಕುಮಾರ್, ಪೃಥ್ವಿ, ಮೂರ್ತಿ, ರಮೇಶ್, ನಾರಾಯಣರೆಡ್ಡಿ, ಶಾಂತಮ್ಮ, ಬುಟ್ಟಾಲ ಗಣೇಶ್, ಎಂ.ಶ್ರೀನಿವಾಸ್, ನವೀನ್ ಕುಮಾರ್, ಮುಂತಾದವರು ಇದ್ದರು,

Ramesh Babu

Journalist

Recent Posts

ಅಗಸ್ಟ್ 2ರ ಪೊಲೀಸ್ ಕಾನ್‌ಸ್ಟೇಬಲ್ ಪರೀಕ್ಷೆ: ಸಿದ್ಧತೆ ಪರಿಶೀಲಿಸಿದ ಜಿಲ್ಲಾಧಿಕಾರಿ, ಎಸ್ಪಿ

ಆಗಸ್ಟ್ 2ರಂದು ನಡೆಯಲಿರುವ ಪೊಲೀಸ್ ಕಾನ್‌ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆಗೆ ಸಂಬಂಧಿಸಿದಂತೆ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ. ಕೆ.ಎನ್. ಅನುರಾಧ…

43 minutes ago

ದೊಡ್ಡಬಳ್ಳಾಪುರದಲ್ಲಿ ನೈತಿಕ ಪೊಲೀಸ್‌ಗಿರಿ ಆರೋಪ: ಯುವಕನ ಮೇಲೆ ಹಲ್ಲೆ, 6 ಜನರ ವಿರುದ್ಧ ಪ್ರಕರಣ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ಕಾರಿನಲ್ಲಿ ಮಾತನಾಡುತ್ತಿದ್ದ ಸ್ನೇಹಿತರ ಮೇಲೆ ನೈತಿಕ ಪೊಲೀಸ್‌ಗಿರಿ ನಡೆಸಿ…

1 day ago

ಮಳೆಗಾಗಿ ಆಚರಣೆಗಳ ಮೊರೆ: ಬರದ ನಡುವೆ ಭರವಸೆಯ ಸಂಪ್ರದಾಯಗಳು

ಮಳೆ ಎನ್ನುವುದು ರೈತನ ಬದುಕಿನ ಜೀವನಾಡಿ. ಮುಂಗಾರು ವಿಳಂಬವಾದಾಗ ಅಥವಾ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದಿದ್ದರೆ ರೈತರು ಮಾತ್ರವಲ್ಲ, ಗ್ರಾಮೀಣ ಜೀವನವೇ…

3 days ago

ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಾರು–ಅಶೋಕ್ ಲೇಲ್ಯಾಂಡ್ ನಡುವೆ ಅಪಘಾತ

ದೊಡ್ಡಬಳ್ಳಾಪುರ–ನೆಲಮಂಗಲ ಮುಖ್ಯ ರಸ್ತೆಯ ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಳೆದರಾತ್ರಿ ಕಾರು ಹಾಗೂ ಅಶೋಕ್ ಲೇಲ್ಯಾಂಡ್ ಸರಕು ವಾಹನದ ನಡುವೆ…

4 days ago

ರಾಷ್ಟ್ರೀಯ ಸಾಹಿತ್ಯ ಸೌರಭದಲ್ಲಿ ಕವಿ ರವಿಕುಮಾರ್ ಅವರ ‘ಅಂಚಿನ ತೊರೆ’ ಕವನ ಸಂಕಲನ ಲೋಕಾರ್ಪಣೆ

ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…

4 days ago

ನಾಡಕಚೇರಿ ಸರ್ವರ್ ಪದೇ ಪದೇ ಡೌನ್: ರಾಜ್ಯಾದ್ಯಂತ ಜನರಿಗೆ ಸಂಕಷ್ಟ – ತುರ್ತು ಪರಿಹಾರಕ್ಕೆ ಸರ್ಕಾರ ಮುಂದಾಗಬೇಕಿದೆ

ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…

5 days ago