Categories: ಕೋಲಾರ

ಕಾರ್ಮಿಕರ ವಿರೋಧಿ ನೀತಿಗಳ ವಿರುದ್ಧ ಬೃಹತ್ ಪ್ರತಿಭಟನೆ

ಕೋಲಾರ: ಕೇಂದ್ರ ಸರ್ಕಾರ ಜಾರಿಗೊಳಿಸಿರುವ ನಾಲ್ಕು ಕಾರ್ಮಿಕರ ವಿರೋಧಿ ನೀತಿಗಳ ವಿರುದ್ದ ಕಾರ್ಮಿಕ ಸಂಘಗಳ ಜಂಟಿ ಸಮಿತಿ ಹಾಗೂ ಸಂಯುಕ್ತ ಹೋರಾಟ ಕರ್ನಾಟಕ ವತಿಯಿಂದ ಗುರುವಾರ ಕರೆ ನೀಡಿದ್ದ ಅಖಿಲ ಭಾರತ ಸಾರ್ವತ್ರಿಕ ಮುಷ್ಕರದ ಭಾಗವಾಗಿ ನಗರದ ಗಾಂಧಿವನದಿಂದ ಮೆರವಣಿಗೆ ನಡೆಸಿ ತಹಶಿಲ್ದಾರ್ ಕಛೇರಿ ಮುಂದೆ ಬೃಹತ್ ಪ್ರತಿಭಟನೆ ನಡೆಸಿದರು.

ಈ ಸಂದರ್ಭದಲ್ಲಿ ಹಿರಿಯ ಕಾರ್ಮಿಕ ಮುಖಂಡ ಗಾಂಧಿನಗರ ನಾರಾಯಣಸ್ವಾಮಿ ಮಾತನಾಡಿ ದೇಶದಲ್ಲಿ ಕಾರ್ಮಿಕರ ಹಕ್ಕುಗಳಿಗಾಗಿ ಇದ್ದ 29 ಕಾರ್ಮಿಕ ಕಾಯ್ದೆಗಳನ್ನು 4 ಕಾರ್ಮಿಕ ಕೋಡ್‌ಗಳಾಗಿ ಜಾರಿಗೊಳಿಸಿದ್ದಾರೆ ಕಾರ್ಮಿಕರು ಮುಷ್ಕರ ನಡೆಸಿದರೆ ದಂಡ, ಜೈಲು ಶಿಕ್ಷೆ, ವೇತನ ಕಡಿತಗೊಳಿಸಲಾಗುವ ನೀತಿಗಳು ಜಾರಿ ಮಾಡಿದ್ದಾರೆ. ನರೇಗಾದಡಿ ಕೆಲಸದ ಹಕ್ಕನ್ನು ಕಸೆದುಕೊಂಡು ಗ್ರಾಮೀಣ ಜನರ ದುಡಿಯುವ ಹಕ್ಕನ್ನು ನಿಯಂತ್ರಣ ಮಾಡುವ ಮೂಲಕ ಗ್ರಾಮೀಣ ಜನರ ಜೀವನ ಕಸೆದುಕೊಂಡು ಬೀದಿ ಪಾಲಾಗುವಂತೆ ಮಾಡುತ್ತಿದ್ದಾರೆ ಎಂದು ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಸಿಐಟಿಯು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎಂ.ವಿಜಯಕೃಷ್ಣ ಮಾತನಾಡಿ ದೇಶದಲ್ಲಿ ಮೋದಿ ಸರ್ಕಾರ ಅಧಿಕಾರಕ್ಕೆ ಬಂದ ನಂತರ ವಿದ್ಯುಚ್ಛಕ್ತಿ ಖಾಸಗೀಕರಣ, ಪ್ರಸರಣ ಮತ್ತು ಅನುಷ್ಠಾನ ನಿರ್ವಹಣೆ ಖಾಸಗಿ ಬಂಡವಾಳಗಾರರಿಗೆ ನೀಡುವ ಮೂಲಕ ರೈತರು, ಜನ ಸಾಮಾನ್ಯರ ಸಬ್ಸಿಡಿಗೆ ಮೋಸ ಮಾಡಿದ್ದಾರೆ ರೈತರ ಉತ್ಪನ್ನಗಳಿಗೆ ಬೆಂಬಲ ಬೆಲೆ ನೀಡದೇ ಕೃಷಿಯನ್ನು ಉತ್ತೇಜಿಸದೇ ಭೂ ಸ್ವಾದೀನ ಕಾಯ್ದೆ ಮೂಲಕ ರೈತ ಜಮೀನು ಕಸಿದುಕೊಳ್ಳುವ ಹುನ್ನಾರ ಮಾಡಿದ್ದಾರೆ ಇದನ್ನು ವಿರೋಧವನ್ನು ವ್ಯಕ್ತಪಡಿಸಬೇಕಾಗಿದೆ ಎಂದರು.

ಈ ಸಂದರ್ಭದಲ್ಲಿ ರೈತ ಸಂಘದ ರಾಜ್ಯ ಕಾರ್ಯಾಧ್ಯಕ್ಷ ಅಬ್ಬಣಿ ಶಿವಪ್ಪ ಮಾತನಾಡಿ‌ ನರೇಗಾ ಯೋಜನೆಯನ್ನು ಪುನರ್ ಸ್ಥಾಪಿಸಿ, ವಿ.ಜಿ ಗ್ರಾಮ್ ಜಿ ಕಾಯ್ದೆ ರದ್ದುಗೊಳಿಸಬೇಕು, ಭೂ ಸ್ವಾಧೀನ ಕಾಯ್ದೆಯನ್ನು ಹಿಂಪಡೆದು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ತಂದಿರುವ ಭೂಸುಧಾರಣಾ, ಎಪಿಎಂಸಿ, ಜಾನುವಾರು ಸಂರಕ್ಷಣಾ ತಿದ್ದುಪಡಿ ಕಾಯ್ದೆಗಳು ಸೇರಿದಂತೆ ವಿದ್ಯುಚ್ಛಕ್ತಿ ಖಾಸಗೀಕರಣ ಮಾಡುವುದನ್ನು ನಿಲ್ಲಿಸಬೇಕು. ಬೀಜ ಮಸೂದೆ ಕಾಯ್ದೆಯನ್ನು ವಾಪಸು ಮಾಡುವ ಜೊತೆಗೆ ಕಾರ್ಮಿಕರ ನಾಲ್ಕು ಕೋಡ್ ಗಳನ್ನು ಜಾರಿ ಮಾಡಲು ಯಾವುದೇ ಕಾರಣಕ್ಕೂ ಬಿಡಬಾರದು ಎಂದು ತಿಳಿಸಿದರು

ಈ ಸಂದರ್ಭದಲ್ಲಿ ಕೆ.ಪಿ.ಆರ್.ಎಸ್ ಜಿಲ್ಲಾಧ್ಯಕ್ಷ ಟಿ.ಎಂ ವೆಂಕಟೇಶ್ ಮಾತನಾಡಿ ಕರ್ನಾಟಕ ಸರ್ಕಾರ ಕಾರ್ಮಿಕ ಸಂಹಿತೆಗಳಿಗೆ ಈಗ ತಂದಿರುವ ಗೆಜೆಟ್ ನೋಟಿಫಿಕೇಷನ್‌ನ್ನು ವಾಪಸ್ಸು ಪಡೆಯಬೇಕು. ಮತ್ತು ಒಕ್ಕೂಟ ಸರ್ಕಾರ ತಂದಿರುವ ಜನವಿರೋಧಿ ಮಸೂದೆಗಳನ್ನು ವಿರೋಧಿಸಬೇಕು. 2025 ಆಗಸ್ಟ್ ತಿಂಗಳಲ್ಲಿ ಕನಿಷ್ಠ ವೇತನ ಹೆಚ್ಚಳದ ಕುರಿತು ಕನಿಷ್ಠ ವೇತನ ಸಲಹಾ ಮಂಡಳಿ ನೀಡಿರುವ ಶಿಫಾರಸ್ಸುನ್ನು ಅಂತಿಮ ಅಧಿಸೂಚನೆಯಾಗಿ ಹೊರಡಿಸಬೇಕು ಎಂದು ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಮುಖಂಡರಾದ ಹೆಚ್.ಬಿ ಕೃಷ್ಣಪ್ಪ, ಎಂ. ಭೀಮರಾಜ್, ಎನ್.ಕಲ್ಪನಾ, ಆಶಾ, ವಿ.ಮಂಜುಳ, ಲಕ್ಷ್ಮಿದೇವಿ, ರಾಜಮ್ಮ, ರಾಮಚಂದ್ರಪ್ಪ, ವಿಜಯಕುಮಾರ್, ಅಂಜನಪ್ಪ, ನಿಕಿಲ್, ಶಿವಕುಮಾರ್, ಪೃಥ್ವಿ, ಮೂರ್ತಿ, ರಮೇಶ್, ನಾರಾಯಣರೆಡ್ಡಿ, ಶಾಂತಮ್ಮ, ಬುಟ್ಟಾಲ ಗಣೇಶ್, ಎಂ.ಶ್ರೀನಿವಾಸ್, ನವೀನ್ ಕುಮಾರ್, ಮುಂತಾದವರು ಇದ್ದರು,

Ramesh Babu

Journalist

Recent Posts

ಹೆದ್ದಾರಿ ಸರ್ವೀಸ್ ರಸ್ತೆಗಳಲ್ಲಿ ಭಾರೀ ವಾಹನಗಳ ಅನಧಿಕೃತ ನಿಲುಗಡೆ: ಸಾರ್ವಜನಿಕರ ಜೀವದೊಂದಿಗೆ ಚೆಲ್ಲಾಟ

  ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮೂಲಕ ಹಾದುಹೋಗುವ ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಗಳ ಸರ್ವೀಸ್ ರಸ್ತೆಗಳು ದಿನದಿಂದ ದಿನಕ್ಕೆ ಭಾರಿ…

19 hours ago

ಬೆಂಗಳೂರು ಗ್ರಾಮಾಂತರದಲ್ಲಿ ಕ್ಷಯರೋಗದ ಆತಂಕ: ಏಳು ತಿಂಗಳಲ್ಲಿ 26,531 ಮಂದಿಗೆ ಕಫ ಪರೀಕ್ಷೆ; 434 ಪ್ರಕರಣಗಳು ಪತ್ತೆ, 530 ಸಕ್ರಿಯ ರೋಗಿಗಳು

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕ್ಷಯರೋಗ (ಟಿಬಿ) ನಿಯಂತ್ರಣಕ್ಕೆ ಆರೋಗ್ಯ ಇಲಾಖೆ ಹಲವು ಹಂತಗಳಲ್ಲಿ ತಪಾಸಣೆ ಹಾಗೂ ಚಿಕಿತ್ಸಾ ಕ್ರಮಗಳನ್ನು ಕೈಗೊಂಡಿದ್ದರೂ,…

1 day ago

ಘಾಟಿ ಕ್ಷೇತ್ರದಲ್ಲಿ ನಾಗರ ಪಂಚಮಿ ಸಂಭ್ರಮ

ದೊಡ್ಡಬಳ್ಳಾಪುರ: ನಾಗರಾಧನೆಗೆ ಪ್ರಸಿದ್ಧವಾಗಿರುವ ತಾಲೂಕಿನ ಘಾಟಿ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಸೋಮವಾರ ನಾಗರ ಪಂಚಮಿ ಹಬ್ಬವನ್ನು ಭಕ್ತಿಭಾವದಿಂದ ಆಚರಿಸಲಾಯಿತು. ನಾಗರ ಪಂಚಮಿ…

3 days ago

ದೊಡ್ಡಬಳ್ಳಾಪುರದಲ್ಲಿ ಆ.18ರಂದು ವಿದ್ಯುತ್ ವ್ಯತ್ಯಯ

ದೊಡ್ಡಬಳ್ಳಾಪುರ: ನಗರದ 66/11 ಕೆವಿ ಡಿ.ಕ್ರಾಸ್ ವಿದ್ಯುತ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗಿರುವ ಹಿನ್ನೆಲೆಯಲ್ಲಿ ಆ.18ರಂದು ಬೆಳಿಗ್ಗೆ 10ರಿಂದ…

3 days ago

ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷ, ಸದಸ್ಯರ ನೇಮಕ: ಯೋಜಿತ ನಗರಾಭಿವೃದ್ಧಿಗೆ ಆದ್ಯತೆ- ಸದಸ್ಯ ಎಸ್.ಡಿ. ಮುನಿರಾಜು

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಲಾಗಿದೆ. ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರನ್ನು ಅಧ್ಯಕ್ಷರಾಗಿ,…

4 days ago

ಮಕ್ಕಳೇ ದೇಶದ ಆಸ್ತಿ, ಉತ್ತಮ ಶಿಕ್ಷಣದಿಂದ ಭವಿಷ್ಯ ನಿರ್ಮಾಣ- ಶಿವಕುಮಾರ್

ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…

4 days ago