ಕಾರ್ಮಿಕರ ಶ್ರಮದಿಂದ ಸಮಾಜ ಸುವ್ಯವಸ್ಥಿತವಾಗಿ ನಡೆಯುತ್ತಿದೆ- ಜಿಲ್ಲಾಧಿಕಾರಿ ಡಾ.ಎನ್. ಶಿವಶಂಕರ್

ಕಾರ್ಮಿಕರ ಶ್ರಮದಿಂದ ಸಮಾಜ ಸುವ್ಯವಸ್ಥಿತವಾಗಿ ನಡೆಯುತ್ತಿದೆ. ಅದೇ ರೀತಿಯಲ್ಲಿ ಕಾರ್ಮಿಕ ವರ್ಗದ ಕಲ್ಯಾಣಕ್ಕಾಗಿ ಸರ್ಕಾರ ಹಲವಾರು ಯೋಜನೆಗಳು, ಸೌಲಭ್ಯಗಳನ್ನು ಹಾಗೂ ಕಾನೂನುಗಳು ಜಾರಿಗೊಳಿಸಿದೆ. ಇದರ ಸದುಪಯೋಗವನ್ನು ಕಾರ್ಮಿಕರು ಪಡೆದುಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ. ಎನ್. ಶಿವಶಂಕರ್ ಅವರು ಹೇಳಿದರು.

ದೇವನಹಳ್ಳಿ ತಾಲೂಕಿನ ಬೀರಸಂದ್ರ ಗ್ರಾಮದಲ್ಲಿರುವ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತದ ಸಮ್ಮೇಳನ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕಾರ್ಮಿಕ ಇಲಾಖೆ, ಕಾರ್ಖಾನೆಗಳು ಬಾಯ್ಲರುಗಳು, ಕೈಗಾರಿಕಾ ಸುರಕ್ಷತೆ ಮತ್ತು ಸ್ವಾಸ್ಥ್ಯ ಇಲಾಖೆ, ಉದ್ಯೋಗಿಗಳ ರಾಜ್ಯ ವಿಮಾ ನಿಧಿ ಸಂಸ್ಥೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ಇವರ ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ್ದ ಸಾರ್ವಜನಿಕರು, ಉದ್ಯೋಗದಾತರು ಹಾಗೂ ಕಾರ್ಮಿಕ ಸಂಘಟನೆಗಳ ಪದಾಧಿಕಾರಿಗಳಿಗೆ
ಅನುಷ್ಠಾನಗೊಳಿಸಲಾಗುತ್ತಿರುವ ಯೋಜನೆ/ಕಾನೂನುಗಳ ಅರಿವು ಹಾಗೂ ಅಭಿಪ್ರಾಯ ಸಂಗ್ರಹ ಸಂಬಂಧಿತ ‘ಜಿಲ್ಲಾ ಮಟ್ಟದ ಕಾನೂನು ಅರಿವು ಕಾರ್ಯಗಾರ’ವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಜಿಲ್ಲೆಯಲ್ಲಿ ಅನೇಕ ಕೈಗಾರಿಕೆ ಸಂಸ್ಥೆಗಳು ಹಾಗೂ ಕಾರ್ಖಾನೆಗಳು ಸ್ಥಾಪನೆಗೊಂಡಿದ್ದು, ಸಾವಿರಾರು ಜನರಿಗೆ ಉದ್ಯೋಗವನ್ನು ಪಡೆದುಕೊಂಡು ನೂರಾರು ಕುಟುಂಬದವರು ಆರ್ಥಿಕವಾಗಿ ಸಬಲರಾಗುತ್ತಿದ್ದಾರೆ ಎಂದರು.

ಬೆಂಗಳೂರು ವಿಭಾಗದ ಸಹಾಯಕ ಕಾರ್ಮಿಕ ಆಯುಕ್ತರಾದ ಜಹೀರ್ ಬಾಷ ಅವರು ಮಾತನಾಡಿ, ಕಾರ್ಖಾನೆ ಹಾಗೂ ಕೈಗಾರಿಕೆಗಳಲ್ಲಿ ಮತ್ತು ಕಟ್ಟಡ ನಿರ್ಮಾಣದಲ್ಲಿ ಕಾರ್ಮಿಕರು ತಮ್ಮ ಸುರಕ್ಷತೆಯನ್ನು ವಹಿಸಬೇಕು. ಸರ್ಕಾರ ಕಾರ್ಮಿಕ ಇಲಾಖೆ ಮೂಲಕ ಸಾಕಷ್ಟು ಯೋಜನೆಗಳು ಹಾಗೂ ಕಾನೂನುಗಳನ್ನು ಜಾರಿಗೆ ತಂದು ಕಾರ್ಮಿಕ ವರ್ಗದವರ ಕಲ್ಯಾಣ ಮಾಡಲಾಗುತ್ತಿದೆ ಎಂದು ಹೇಳಿದರು.

ಕಾರ್ಯಗಾರದಲ್ಲಿ ಸಂಪನ್ಮೂಲ ವ್ಯಕ್ತಿಗಳಾದ ಬಿಸ್ಸೆ ಇಂಡಿಯಾ ಮತ್ತು ಕೈಗಾರಿಕಾ ಬಾಂಧವ್ಯ ವೃತ್ತಿಪರ ಕೇಂದ್ರದ ಹೆಚ್.ಆರ್ ಶೇಖರ್ ಗಣಗಲೂರೂ ಅವರು ಪ್ರಮುಖ ಕಾರ್ಮಿಕ ಕಾನೂನುಗಳ ಕುರಿತು ಉಪನ್ಯಾಸ, ಪಿಎಫ್ ಆಯುಕ್ತರಾದ ರಾಮಕೃಷ್ಣನ್ ಅವರು ದಿ ಎಂಪ್ಲಾಯಿಸ್ ಪ್ರೋವಿಡೆಂಟ್ ಫಂಡ್ ಮತ್ತು ಪಬ್ಲಿಕ್ ಪ್ರೋವಿಡೆಂಟ್ ಫಂಡ್ ವಿಷಯ ಕುರಿತು ಉಪನ್ಯಾಸ, ಯಲಹಂಕ ಇಎಸ್ಐ ಶಾಖಾ ವ್ಯವಸ್ಥಾಪಕರಾದ ಅಕ್ಷತಾ ರಾವ್ ಅವರು ದಿ ಎಂಪ್ಲಾಯಿಸ್ ಸ್ಟೇಟ್ ಇನ್ಸುರೇನ್ಸ್(ಇಎಸ್ಐ), ಎ ಸೋಸಿಯಲ್ ಸೆಕ್ಯುರಿಟಿ ಸ್ಕಿಂ ವಿಷಯ ಕುರಿತು ಉಪನ್ಯಾಸ, ಕಾರ್ಖಾನೆಗಳು ಬಾಯ್ಲರುಗಳು ಕೈಗಾರಿಕಾ ಸುರಕ್ಷತೆ ಮತ್ತು ಸ್ವಾಸ್ಥ್ಯ ಇಲಾಖೆ ಉಪ ನಿರ್ದೇಶಕರಾದ ಎಂ.ಎ ಸೋಮಶೇಖರ್, ತಿಮ್ಮರಾಜು ವಿ ಅವರು ವೇತನ ಸಂದಾಯ ಕಾಯ್ದೆ, ಪ್ರಸ್ತೂತಿ ಸೌಕರ್ಯ ಕಾಯ್ದೆ ಹಾಗೂ ಕಾರ್ಖಾನೆಗಳಲ್ಲಿ ಮತ್ತು ಕಟ್ಟಡ ನಿರ್ಮಾಣದಲ್ಲಿ ಕಾರ್ಮಿಕರ ಸುರಕ್ಷತೆ ವಿಷಯ ಕುರಿತು ಕೈಗಾರಿಕೆಗಳ ಮುಖ್ಯಸ್ಥರು ಹಾಗೂ ಕಾರ್ಮಿಕರ ಜತೆಯಲ್ಲಿ ಸಂವಾದವನ್ನು ನಡೆಸಿದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಕಾರ್ಮಿಕ ಅಧಿಕಾರಿಗಳಾದ ಹರ್ಷವರ್ಧನ್ ಎಸ್.ಎಲ್, ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೊಸೈಟಿಯ ನಿರ್ದೇಶಕ ಸುಬ್ಬರಾವ್ ಎಸ್, ಜಿಲ್ಲೆಯ ನಾಲ್ಕು ತಾಲೂಕು ಕಾರ್ಮಿಕ ನಿರೀಕ್ಷಕರು, ಕಾರ್ಮಿಕ ಇಲಾಖೆಯ ಸಿಬ್ಬಂದಿಗಳು ಸೇರಿದಂತೆ ಕೈಗಾರಿಕೆಗಳ ಮುುಖ್ಯಸ್ಥರು ಹಾಗೂ ಕಾರ್ಮಿಕರು ಉಪಸ್ಥಿತರಿದ್ದರು.

Ramesh Babu

Journalist

Recent Posts

ಯುವ ಆಪದ್ ಮಿತ್ರ ಯೋಜನೆ: ವಿಪತ್ತು ನಿರ್ವಹಣೆ ಕುರಿತು ಒಂದು ವಾರ ತರಬೇತಿ ಶಿಬಿರ

ಯುವ ಆಪದ್ ಮಿತ್ರ ಯೋಜನೆಯ ಅಂಗವಾಗಿ ಕಾಲೇಜಿನ ವಿದ್ಯಾರ್ಥಿಗಳು ದೊಡ್ಡಬಳ್ಳಾಪುರದ ಅನಿಬೆಸೆಂಟ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ತರಬೇತಿ ಮತ್ತು…

10 hours ago

ಮಹಿಳೆಯರನ್ನು ಮಂಚಕ್ಕೆ ಕರೆದ ಆರೋಪ: ಮೂಡುಬಿದಿರೆ ಪೊಲೀಸ್ ಇನ್ಸ್‌ಪೆಕ್ಟರ್ ಸಂದೇಶ್ ಪಿ.ಜಿ ಅಮಾನತು

ಪೊಲೀಸ್ ಠಾಣೆಗೆ ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ದೂರು ಕೊಡಲು ಬಂದ ಮಹಿಳೆಯರನ್ನು ಮಂಚಕ್ಕೆ ಕರೆಯುತ್ತಾರೆ ಎಂಬ ಆರೋಪದ ಮೇರೆಗೆ ಮೂಡುಬಿದಿರೆ…

10 hours ago

ಮುಂಗಾರು ಪೂರ್ವ ಮಳೆ: ಮಳೆಯಲ್ಲಿ ಸಾಲುಗಟ್ಟಿ ನಿಂತ ರಾಗಿ‌ ಮಾರಾಟ ಮಾಡಲು ಬಂದ ಟ್ರ್ಯಾಕ್ಟರ್ ಗಳು

ಇಂದು ಸಂಜೆ ಸುಮಾರು 4:30ರಲ್ಲಿ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಪ್ರಾರಂಭವಾದ ಮಳೆಯು ಸತತವಾಗಿ 7ಗಂಟೆಯವರೆಗೆ ಬಿದ್ದಿದ್ದು, ಜನ ಜೀವನ ಅಸ್ತವ್ಯಸ್ತಗೊಂಡಿತು. ಅದೇರೀತಿ…

11 hours ago

ರಣ ಬಿಸಿಲಿನಿಂದ ಕಂಗೆಟ್ಟಿದ್ದ ಜನ: ಧರೆಗಿಳಿದ ವರ್ಷದ ಮೊದಲ ಮಳೆ: ಬಿಸಿಲಿನ ಬೇಗೆಗೆ ಬೆಂದಿದ್ದ ಭೂಮಿ ತಂಪು ತಂಪು: ಗುಡುಗು ಸಹಿತ ಬಿದ್ದ ಮಳೆ ಹನಿಗೆ ಜನ ಫುಲ್ ಖುಷ್

ಬಿಸಿಲಿನ ತಾಪ ಹೆಚ್ಚಾಗುತ್ತಿದ್ದ ಸಂದರ್ಭದಲ್ಲಿ ದೊಡ್ಡಬಳ್ಳಾಪುರ ನಗರದ ಕೆಲವು ಪ್ರದೇಶಗಳಲ್ಲಿ ಮಂಗಳವಾರ ಸಂಜೆ ವರ್ಷದ ಮೊದಲ ಮಳೆ ಸುರಿಯಿತು. ಬಂಗಾಳ…

12 hours ago

ನಾಳೆ (ಮಾ.18) ಎಸ್.ಎಸ್.ಎಲ್.ಸಿ ಪರೀಕ್ಷೆ -01: ಬೆಂ. ಗ್ರಾ ಜಿಲ್ಲೆಯಲ್ಲಿ 14,314 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ

2025-26ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಗಳು ಮಾರ್ಚ್ 18 ಬುಧವಾರದಿಂದ ಏಪ್ರಿಲ್ 02 ಗುರುವಾರದ ವರೆಗೆ ಬೆಳಿಗ್ಗೆ 10:15 ಗಂಟೆಯಿಂದ ಮಧ್ಯಾಹ್ನ…

14 hours ago

ನೂತನ ಶಾಲಾ ಕಟ್ಟಡ ಮತ್ತು ಅಂಗನವಾಡಿ ಕೇಂದ್ರ ಉದ್ಘಾಟನೆ

ದೊಡ್ಡಬಳ್ಳಾಪುರ: ನಗರದ 4 ನೇ ವಾರ್ಡ್‌ನ ವಿನಾಯಕ ನಗರದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ಅಸ್ಟಿಮೊ ಫೈ ಕಂಪನಿಯ…

21 hours ago