ಕಾರ್ಮಿಕರ ಶ್ರಮದಿಂದ ಸಮಾಜ ಸುವ್ಯವಸ್ಥಿತವಾಗಿ ನಡೆಯುತ್ತಿದೆ- ಜಿಲ್ಲಾಧಿಕಾರಿ ಡಾ.ಎನ್. ಶಿವಶಂಕರ್

ಕಾರ್ಮಿಕರ ಶ್ರಮದಿಂದ ಸಮಾಜ ಸುವ್ಯವಸ್ಥಿತವಾಗಿ ನಡೆಯುತ್ತಿದೆ. ಅದೇ ರೀತಿಯಲ್ಲಿ ಕಾರ್ಮಿಕ ವರ್ಗದ ಕಲ್ಯಾಣಕ್ಕಾಗಿ ಸರ್ಕಾರ ಹಲವಾರು ಯೋಜನೆಗಳು, ಸೌಲಭ್ಯಗಳನ್ನು ಹಾಗೂ ಕಾನೂನುಗಳು ಜಾರಿಗೊಳಿಸಿದೆ. ಇದರ ಸದುಪಯೋಗವನ್ನು ಕಾರ್ಮಿಕರು ಪಡೆದುಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ. ಎನ್. ಶಿವಶಂಕರ್ ಅವರು ಹೇಳಿದರು.

ದೇವನಹಳ್ಳಿ ತಾಲೂಕಿನ ಬೀರಸಂದ್ರ ಗ್ರಾಮದಲ್ಲಿರುವ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತದ ಸಮ್ಮೇಳನ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕಾರ್ಮಿಕ ಇಲಾಖೆ, ಕಾರ್ಖಾನೆಗಳು ಬಾಯ್ಲರುಗಳು, ಕೈಗಾರಿಕಾ ಸುರಕ್ಷತೆ ಮತ್ತು ಸ್ವಾಸ್ಥ್ಯ ಇಲಾಖೆ, ಉದ್ಯೋಗಿಗಳ ರಾಜ್ಯ ವಿಮಾ ನಿಧಿ ಸಂಸ್ಥೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ಇವರ ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ್ದ ಸಾರ್ವಜನಿಕರು, ಉದ್ಯೋಗದಾತರು ಹಾಗೂ ಕಾರ್ಮಿಕ ಸಂಘಟನೆಗಳ ಪದಾಧಿಕಾರಿಗಳಿಗೆ
ಅನುಷ್ಠಾನಗೊಳಿಸಲಾಗುತ್ತಿರುವ ಯೋಜನೆ/ಕಾನೂನುಗಳ ಅರಿವು ಹಾಗೂ ಅಭಿಪ್ರಾಯ ಸಂಗ್ರಹ ಸಂಬಂಧಿತ ‘ಜಿಲ್ಲಾ ಮಟ್ಟದ ಕಾನೂನು ಅರಿವು ಕಾರ್ಯಗಾರ’ವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಜಿಲ್ಲೆಯಲ್ಲಿ ಅನೇಕ ಕೈಗಾರಿಕೆ ಸಂಸ್ಥೆಗಳು ಹಾಗೂ ಕಾರ್ಖಾನೆಗಳು ಸ್ಥಾಪನೆಗೊಂಡಿದ್ದು, ಸಾವಿರಾರು ಜನರಿಗೆ ಉದ್ಯೋಗವನ್ನು ಪಡೆದುಕೊಂಡು ನೂರಾರು ಕುಟುಂಬದವರು ಆರ್ಥಿಕವಾಗಿ ಸಬಲರಾಗುತ್ತಿದ್ದಾರೆ ಎಂದರು.

ಬೆಂಗಳೂರು ವಿಭಾಗದ ಸಹಾಯಕ ಕಾರ್ಮಿಕ ಆಯುಕ್ತರಾದ ಜಹೀರ್ ಬಾಷ ಅವರು ಮಾತನಾಡಿ, ಕಾರ್ಖಾನೆ ಹಾಗೂ ಕೈಗಾರಿಕೆಗಳಲ್ಲಿ ಮತ್ತು ಕಟ್ಟಡ ನಿರ್ಮಾಣದಲ್ಲಿ ಕಾರ್ಮಿಕರು ತಮ್ಮ ಸುರಕ್ಷತೆಯನ್ನು ವಹಿಸಬೇಕು. ಸರ್ಕಾರ ಕಾರ್ಮಿಕ ಇಲಾಖೆ ಮೂಲಕ ಸಾಕಷ್ಟು ಯೋಜನೆಗಳು ಹಾಗೂ ಕಾನೂನುಗಳನ್ನು ಜಾರಿಗೆ ತಂದು ಕಾರ್ಮಿಕ ವರ್ಗದವರ ಕಲ್ಯಾಣ ಮಾಡಲಾಗುತ್ತಿದೆ ಎಂದು ಹೇಳಿದರು.

ಕಾರ್ಯಗಾರದಲ್ಲಿ ಸಂಪನ್ಮೂಲ ವ್ಯಕ್ತಿಗಳಾದ ಬಿಸ್ಸೆ ಇಂಡಿಯಾ ಮತ್ತು ಕೈಗಾರಿಕಾ ಬಾಂಧವ್ಯ ವೃತ್ತಿಪರ ಕೇಂದ್ರದ ಹೆಚ್.ಆರ್ ಶೇಖರ್ ಗಣಗಲೂರೂ ಅವರು ಪ್ರಮುಖ ಕಾರ್ಮಿಕ ಕಾನೂನುಗಳ ಕುರಿತು ಉಪನ್ಯಾಸ, ಪಿಎಫ್ ಆಯುಕ್ತರಾದ ರಾಮಕೃಷ್ಣನ್ ಅವರು ದಿ ಎಂಪ್ಲಾಯಿಸ್ ಪ್ರೋವಿಡೆಂಟ್ ಫಂಡ್ ಮತ್ತು ಪಬ್ಲಿಕ್ ಪ್ರೋವಿಡೆಂಟ್ ಫಂಡ್ ವಿಷಯ ಕುರಿತು ಉಪನ್ಯಾಸ, ಯಲಹಂಕ ಇಎಸ್ಐ ಶಾಖಾ ವ್ಯವಸ್ಥಾಪಕರಾದ ಅಕ್ಷತಾ ರಾವ್ ಅವರು ದಿ ಎಂಪ್ಲಾಯಿಸ್ ಸ್ಟೇಟ್ ಇನ್ಸುರೇನ್ಸ್(ಇಎಸ್ಐ), ಎ ಸೋಸಿಯಲ್ ಸೆಕ್ಯುರಿಟಿ ಸ್ಕಿಂ ವಿಷಯ ಕುರಿತು ಉಪನ್ಯಾಸ, ಕಾರ್ಖಾನೆಗಳು ಬಾಯ್ಲರುಗಳು ಕೈಗಾರಿಕಾ ಸುರಕ್ಷತೆ ಮತ್ತು ಸ್ವಾಸ್ಥ್ಯ ಇಲಾಖೆ ಉಪ ನಿರ್ದೇಶಕರಾದ ಎಂ.ಎ ಸೋಮಶೇಖರ್, ತಿಮ್ಮರಾಜು ವಿ ಅವರು ವೇತನ ಸಂದಾಯ ಕಾಯ್ದೆ, ಪ್ರಸ್ತೂತಿ ಸೌಕರ್ಯ ಕಾಯ್ದೆ ಹಾಗೂ ಕಾರ್ಖಾನೆಗಳಲ್ಲಿ ಮತ್ತು ಕಟ್ಟಡ ನಿರ್ಮಾಣದಲ್ಲಿ ಕಾರ್ಮಿಕರ ಸುರಕ್ಷತೆ ವಿಷಯ ಕುರಿತು ಕೈಗಾರಿಕೆಗಳ ಮುಖ್ಯಸ್ಥರು ಹಾಗೂ ಕಾರ್ಮಿಕರ ಜತೆಯಲ್ಲಿ ಸಂವಾದವನ್ನು ನಡೆಸಿದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಕಾರ್ಮಿಕ ಅಧಿಕಾರಿಗಳಾದ ಹರ್ಷವರ್ಧನ್ ಎಸ್.ಎಲ್, ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೊಸೈಟಿಯ ನಿರ್ದೇಶಕ ಸುಬ್ಬರಾವ್ ಎಸ್, ಜಿಲ್ಲೆಯ ನಾಲ್ಕು ತಾಲೂಕು ಕಾರ್ಮಿಕ ನಿರೀಕ್ಷಕರು, ಕಾರ್ಮಿಕ ಇಲಾಖೆಯ ಸಿಬ್ಬಂದಿಗಳು ಸೇರಿದಂತೆ ಕೈಗಾರಿಕೆಗಳ ಮುುಖ್ಯಸ್ಥರು ಹಾಗೂ ಕಾರ್ಮಿಕರು ಉಪಸ್ಥಿತರಿದ್ದರು.

Ramesh Babu

Journalist

Recent Posts

ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಗೂಡ್ಸ್ ವಾಹನ: ತಪ್ಪಿದ ಭಾರೀ ಅನಾಹುತ

ದೊಡ್ಡಬಳ್ಳಾಪುರ: ನೆಲಮಂಗಲದಿಂದ ದೊಡ್ಡಬಳ್ಳಾಪುರದತ್ತ ಬರುತ್ತಿದ್ದ ಗೂಡ್ಸ್ ವಾಹನವು ಅರಳುಮಲ್ಲಿಗೆ ಗ್ರಾಮದ ಬಳಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…

4 hours ago

ಮದ್ಯಪಾನ, ಡ್ರಗ್ಸ್ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ- ಸಚಿವ ಕೆ.ಎಚ್ ಮುನಿಯಪ್ಪ

ಮದ್ಯಪಾನ, ಡ್ರಗ್ಸ್ ನಂತಹ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ ಎಂದು ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕ…

4 hours ago

ಅನ್ನದಾಸೋಹ ಮಾಡುವ ಮೂಲಕ ಸಂದೀಪ್ ಹುಟ್ಟುಹಬ್ಬ ಆಚರಿಸಿದ ಅಭಿಮಾನಿಗಳು

ದೊಡ್ಡಬಳ್ಳಾಪುರ : ಉದ್ಯಮಿಗಳು ಮತ್ತು ಸಮಾಜ ಸೇವಕರಾದ ಗಂಟಿಗಾನಹಳ್ಳಿ ಸಂದೀಪ್ ರವರ ಹುಟ್ಟುಹಬ್ಬವನ್ನು ಸರ್ಕಾರಿ ಶಾಲಾ ಮಕ್ಕಳಿಗೆ ನೋಟ್‌ಬುಕ್, ಸಿಹಿ,…

7 hours ago

ರೈಲ್ವೆ ನಿಲ್ದಾಣದ ಬಳಿ ನವಜಾತ ಶಿಶುವಿನ ಮೃತದೇಹ ಪತ್ತೆ; ಸ್ಥಳಕ್ಕೆ ಪೊಲೀಸರು ಭೇಟಿ, ಪರಿಶೀಲನೆ

ದೊಡ್ಡಬಳ್ಳಾಪುರ: ನಗರದ ರೈಲ್ವೆ ನಿಲ್ದಾಣದ ಸಮೀಪದ ಆಂಜನೇಯ ದೇವಾಲಯದ ಪಕ್ಕದಲ್ಲಿ ಹೂತುಹಾಕಲಾಗಿದ್ದ ನವಜಾತ ಶಿಶುವಿನ ಮೃತದೇಹ ಶುಕ್ರವಾರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ…

8 hours ago

ರಾಹುಲ್ ಗಾಂಧಿ ಕುರಿತು ಅವಹೇಳನಕಾರಿ ಹೇಳಿಕೆ ಖಂಡನೆ: ಶಾಸಕ ಯಶ್ ಪಾಲ್ ಆನಂದ್ ಸುವರ್ಣ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಕಾಂಗ್ರೆಸ್ ಪ್ರತಿಭಟನೆ

ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಶಾಸಕ ಯಶ್ಪಾಲ್…

12 hours ago

ಮಳೆ ಕೈಕೊಟ್ಟು ಮುಂಗಾರು ಬಿತ್ತನೆ ಕುಂಠಿತ: ಶೇ.66ರಷ್ಟು ಮಳೆ ಕೊರತೆ; ಗುರಿಯ ಶೇ.3ರಷ್ಟು ಮಾತ್ರ ಬಿತ್ತನೆ ಪೂರ್ಣ

ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೃಷಿ ಚಟುವಟಿಕೆಗಳು ಈ ಬಾರಿ ತೀವ್ರ ಹಿನ್ನಡೆ ಅನುಭವಿಸಿವೆ. ಸಾಮಾನ್ಯಕ್ಕಿಂತ…

16 hours ago