Categories: ಕೋಲಾರ

ಕಾರ್ಮಿಕರ ಹಕ್ಕುಗಳನ್ನು ಹತ್ತಿಕ್ಕಲು ಸಾಧ್ಯವಿಲ್ಲ -ಎಸ್.ವರಲಕ್ಷ್ಮೀ

ಕೋಲಾರ: ಎಕ್ಷಿಡಿ ಕಂಪನಿ ಮಾಲೀಕರ ಶೋಷಣೆಯ ವಿರುದ್ದದ ಕಾರ್ಮಿಕರ ಪ್ರತಿಭಟನೆಯನ್ನು ಯಾವುದೇ ಕಾರಣಕ್ಕೂ ಹತ್ತಿಕ್ಕಲು ಸಾಧ್ಯವಿಲ್ಲ. ಕೂಡಲೇ ಕಂಪನಿ ಮಾಲೀಕರೊಂದಿಗೆ ಜಿಲ್ಲಾಧಿಕಾರಿ ಮಧ್ಯಪ್ರವೇಶಿಸಿ ಬೇಡಿಕೆಗಳನ್ನು ಇತ್ಯರ್ಥಕ್ಕೆ ಮುಂದಾಗಬೇಕು ಇಲ್ಲದೇ ಹೋದರೆ ಮುಂದೆ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಸಿಐಟಿಯು ರಾಜ್ಯಾಧ್ಯಕ್ಷೆ ಎಸ್.ವರಲಕ್ಷ್ಮೀ ಒತ್ತಾಯಿಸಿದರು.

ತಾಲೂಕಿನ ನರಸಾಪುರ ಕೈಗಾರಿಕಾ ಪ್ರದೇಶದ ಎಕ್ಷಿಡಿ ಕಂಪನಿಯ ಎದುರು ಕಾರ್ಮಿಕರ ವೇತನ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ನಡೆಯುತ್ತಾ ಇರುವ ಸತತ 5 ನೇ ದಿನದ ಅನಿರ್ದಿಷ್ಟಾವಧಿ ಧರಣಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಇದು ಕಾರ್ಮಿಕರ ಬದುಕಿನ ಪ್ರಶ್ನೆಯಾಗಿದೆ ಕಾನೂನು ಬದ್ದವಾಗಿ ಕಾರ್ಮಿಕರ ಬೇಡಿಕೆಗಳ ಪಟ್ಟಿಯನ್ನು ಮಾಲೀಕರಿಗೆ ಸಲ್ಲಿಸಿದ್ದಾರೆ ಮಾಲೀಕರು ಷರತ್ತುಗಳ ಮೇಲೆ ಕಾರ್ಮಿಕರನ್ನು ಬೆದರಿಸುವ ಪ್ರವೃತ್ತಿಯನ್ನು ಬಿಟ್ಟು ಕಾರ್ಮಿಕರು ಕಾನೂನು ಕೈ ತೆಗೆದುಕೊಳ್ಳುವ ಮುಂಚೆ ಮುಖಾಮುಖಿ ಬಗೆಹರಿಸಿಕೊಳ್ಳಬೇಕು ಎಂದು ಮಾಲೀಕರಿಗೆ ಎಚ್ಚರಿಕೆ ನೀಡಿದರು.

ಈ ಕೈಗಾರಿಕಾ ಪ್ರದೇಶದಲ್ಲಿ ಕೃಷಿ ಭೂಮಿಯನ್ನು ಕಳೆದುಕೊಂಡ ಸಾವಿರಾರು ರೈತರು ಉದ್ಯೋಗಕ್ಕಾಗಿ ಕೈಕಟ್ಟಿ ಮಾಲೀಕನ ಮುಂದೆ ನಿಲ್ಲಬೇಕಾಗಿದೆ ಕಾರ್ಮಿಕರನ್ನು ಎದುರು ಹಾಕಿಕೊಂಡು ಕಂಪನಿ ಅಭಿವೃದ್ಧಿಯಾದ ಉದಾಹರಣೆ ಇಲ್ಲ ಕಾರ್ಮಿಕರು ಒಗ್ಗಟ್ಟಿನಿಂದ ಮನಸ್ಸು ಮಾಡಿದರೆ ಕಂಪನಿಯಲ್ಲಿನ ಯಂತ್ರೋಪಕರಣಗಳನ್ನು ನಿಲ್ಲಿಸುವ ತಾಕತ್ತು ಅವರಿಗಿದೆ ಮಾಲೀಕನಿಗೆ ಒಂದೇ ಕಂಪನಿ ಆದರೆ ದುಡಿಯುವ ಕಾರ್ಮಿಕರಿಗೆ ನೂರಾರು ಕಂಪನಿ ಎಂಬುದನ್ನು ಮರೆಯಬಾರದು ಎಂದರು.

ಕಂಪನಿಯೊಂದಿಗೆ ಸುಮಾರು ಬಾರಿ ಕಾರ್ಮಿಕರ ಬೇಡಿಕೆ ಪಟ್ಟಿಯನ್ನು ಇಟ್ಟುಕೊಂಡು ಸಭೆಗಳನ್ನು ನಡೆಸಿದ್ದರೂ ಪ್ರಯೋಜನವಾಗಲಿಲ್ಲ ಕಾರ್ಮಿಕರನ್ನು ಕಟ್ಟಿಹಾಕಿದರೆ ಸಾಕು ಎಂಬುದನ್ನು ಮರೆತು ಬಿಡಿ ಇವತ್ತು ಸಿಐಟಿಯು ಸಂಘಟನೆ ಬಂದು ಬೆಂಬಲ ಕೊಟ್ಟಿದೆ ಕೋಲಾರ ಜಿಲ್ಲೆ ಚಳುವಳಿಗಳ ತವರು ಎಂಬುದನ್ನು ಮರೆಯಬಾರದು ದಿನನಿತ್ಯ ರೈತ, ಕಾರ್ಮಿಕ, ಮಹಿಳಾ, ಯುವಜನ ಸಂಘಟನೆಗಳು ನಿಮ್ಮ ಹೋರಾಟಕ್ಕೆ ಬೆಂಬಲಿಸಲಿದ್ದಾರೆ ನಮ್ಮ ಬೇಡಿಕೆಗಳು ನ್ಯಾಯಯುತವಾಗಿ ಇದ್ದು ನಮ್ಮ ಹಕ್ಕನ್ನು ಕೇಳಲು ಬಂದಿದ್ದೇವೆ ಉತ್ಪಾದನೆಗೆ ತಕ್ಕಂತೆ ವೇತನ ಸೌಲಭ್ಯಗಳನ್ನು ಕೊಡುವುದು ಮಾಲೀಕರ ಜವಾಬ್ದಾರಿ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಎಕ್ಷಿಡಿ ಕ್ಲಚ್ ಇಂಡಿಯಾ ಕಂಪನಿಯ ಯೂನಿಯನ್ ಅಧ್ಯಕ್ಷ ಹರೀಶ್ ಮಾತನಾಡಿ, ಸುಮಾರು ಒಂದುವರೆ ವರ್ಷದ ಹಿಂದೆಯಿಂದ ಕಾರ್ಮಿಕರ ಬೇಡಿಕೆಗಳನ್ನು ಈಡೇರಿಸಲು ಒತ್ತಾಯಿಸಿಕೊಂಡು ಬಂದಿದ್ದೇವೆ ಸೌಲಭ್ಯಗಳನ್ನು ಕೊಡದೇ ಇದ್ದರಿಂದ ಅನಿರ್ದಿಷ್ಟಾವಧಿ ಧರಣಿಗೆ ಹೋಗಬೇಕಾಗಿದೆ ಎಷ್ಟೇ ದಿನವಾದರೂ ನಮ್ಮ ಬೇಡಿಕೆಗಳನ್ನು ಪಡೆದೇ ಪಡೆಯುತ್ತೇವೆ ಇಲ್ಲಿಯೇ ಅಡಿಗೆ ಮಾಡಿಕೊಂಡು ಧರಣಿ ಮುಂದುವರೆಸುತ್ತೇವೆ ಎಂದು ಇದೇ ಸಂದರ್ಭದಲ್ಲಿ ತಿಳಿಸಿದರು

ಈ ಧರಣಿಯ ನೇತೃತ್ವವನ್ನು ಎಕ್ಷಿಡಿ ಕ್ಲಚ್ ಎಂಪ್ಲಾಯೀಸ್ ಯೂನಿಯನ್ ಪ್ರಧಾನ ಕಾರ್ಯದರ್ಶಿ ಪ್ರಮೋದ್, ಉಪಾಧ್ಯಕ್ಷರಾದ ರಮೇಶ್, ಶರತ್ ಖಜಾಂಚಿ ಮಂಜುನಾಥ್, ಸಹಕಾರ್ಯದರ್ಶಿ ಪೃಥ್ವಿ, ಸಿಐಟಿಯು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎಂ.ವಿಜಯಕೃಷ್ಷ, ಖಜಾಂಚಿ ಎಚ್.ಬಿ ಕೃಷ್ಣಪ್ಪ, ಕಾರ್ಯದರ್ಶಿ ಎಂ.ಭೀಮರಾಜ್ ಅಂಗನವಾಡಿ ನೌಕರರ ಸಂಘದ ಲೋಕೇಶ್ವರಿ, ಸೇರಿದಂತೆ ನೂರಾರು ಕಾರ್ಮಿಕರು ಭಾಗವಹಿಸಿದ್ದರು.

Ramesh Babu

Journalist

Recent Posts

ಗುರುಭವನದಲ್ಲಿ ಅದ್ಧೂರಿ ವಿಶ್ವ ಮಹಿಳಾ ದಿನಾಚರಣೆ

ಸೇವೆಗಾಗಿ ಬಾಳು ಭಾರತ ಸೇವಾದಳ ಬೆಂಗಳೂರು ಗ್ರಾಮಾಂತರ ಜಿಲ್ಲೆ, ಭಾರತ ಸೇವಾದಳ ದೇವನಹಳ್ಳಿ ತಾಲೂಕು ಘಟಕ, ಕರ್ನಾಟಕ ರಾಜ್ಯ ಪ್ರಾಥಮಿಕ…

3 hours ago

ಭೂದಾಖಲೆಗಳ ತಿದ್ದುಪಡಿಗಾಗಿ ಸಾರ್ವಜನಿಕರಿಂದ ಲಂಚಕ್ಕೆ ಬೇಡಿಕೆ: ಲೋಕಾ ಬಲೆಗೆ ಬಿದ್ದ ಭ್ರಷ್ಟ ಗ್ರಾಮ ಆಡಳಿತಾಧಿಕಾರಿ

ಭೂದಾಖಲೆಗಳ ತಿದ್ದುಪಡಿಗಾಗಿ ಸಾರ್ವಜನಿಕರಿಂದ ಹಣಕ್ಕೆ ಬೇಡಿಕೆಯಿಟ್ಟಿದ್ದ ಗ್ರಾಮ ಆಡಳಿತಾಧಿಕಾರಿಯೊಬ್ಬರು ಲೋಕಾಯುಕ್ತ ಪೊಲೀಸರ ಕಾರ್ಯಾಚರಣೆಯಲ್ಲಿ ಸಿಕ್ಕಿಬಿದ್ದಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಜೋಯಿಡಾ…

4 hours ago

ಯುಗಾದಿ ಸಮಯದಲ್ಲಿ ಮತ್ತೆ ಚಿಗುರಿದ ಪ್ರೀತಿ: ವಿಚ್ಚೇದನಕ್ಕೆ ಅರ್ಜಿ ಸಲ್ಲಿಸಿದ್ದವರು ಕಟೆಕಟೆಯಲ್ಲಿ ಒಂದಾದರು: ಒಂದಾದ ದಂಪತಿಗೆ ಪ್ರೀತಿಯ ಪಾಠ ಹೇಳಿದ ನ್ಯಾಯಾಧೀಶರು

ಸಣ್ಣಪುಟ್ಟ ಜಗಳಗಳಿಂದ ಕೋರ್ಟಿನ ಮೆಟ್ಟಿಲೇರಿ ದೂರಾವಾಗಲು ನಿರ್ಧರಿಸಿದ್ದ ನಾಲ್ವರು ದಂಪತಿಗಳನ್ನು ಶನಿವಾರ ನಡೆದ ಲೋಕಾಅದಾಲತ್ ನಲ್ಲಿ ನ್ಯಾಯಾಧೀಶರುಗಳು ಹೇಳಿದ ಬುದ್ಧಿಮಾತಿನಿಂದ…

6 hours ago

ವಾರದೊಳಗೆ ಸಹಜ ಸ್ಥಿತಿಗೆ ಗ್ಯಾಸ್ ಸಿಲಿಂಡರ್ ಪೂರೈಕೆ- ಆಹಾರ ಸಚಿವ ಕೆ.ಎಚ್ ಮುನಿಯಪ್ಪ

ಕೊಲ್ಲಿ ದೇಶಗಳಲ್ಲಿ ಯುದ್ಧದ ಪರಿಸ್ಥಿತಿ ಹಿನ್ನೆಲೆಯಲ್ಲಿ ಉಂಟಾದ ಗೃಹ ಬಳಕೆ ಹಾಗೂ ವಾಣಿಜ್ಯ ಬಳಕೆ ಗ್ಯಾಸ್ ಸಿಲಿಂಡರ್ ಗಳ ಪೂರೈಕೆ…

7 hours ago

“ಗೃಹಬಳಕೆ ಸಿಲಿಂಡರ್ ವಾಣಿಜ್ಯ ಉದ್ದೇಶಕ್ಕಾಗಿ ಬಳಸಿದ್ದಲ್ಲಿ ಸೂಕ್ತ ಕಾನೂನು ಕ್ರಮ”

ಗೃಹಬಳಕೆ ಸಿಲಿಂಡರ್ ಅನ್ನು ವಾಣಿಜ್ಯ ಉದ್ದೇಶಕ್ಕಾಗಿ ಬಳಸಿದ್ದಲ್ಲಿ ಸೂಕ್ತ ಕಾನೂನುಕ್ರಮ ಕೈಗೊಳ್ಳಲು ಆಹಾರ ಸಚಿವರು ಸೂಚಿಸಿದ್ದು, ಅದರಂತೆ ಗೃಹ ಬಳಕೆ…

7 hours ago

ವಾಣಿಜ್ಯ ಗ್ಯಾಸ್ ಸಿಲಿಂಡರ್ ಸಮಸ್ಯೆ: ಆಹಾರ ಸಚಿವ ಕೆ.ಎಚ್.ಮುನಿಯಪ್ಪ ಏನಂದ್ರು ಗೊತ್ತಾ….?

ವಾಣಿಜ್ಯ ಗ್ಯಾಸ್ ಸಿಲಿಂಡರ್ ಸಮಸ್ಯೆ ಹಿನ್ನೆಲೆ ಆಹಾರ ಸಚಿವ ಕೆ.ಎಚ್.ಮುನಿಯಪ್ಪ ಪ್ರತಿಕ್ರಿಯೆ. ಈ ಸಮಸ್ಯೆ ಇನ್ನು ಒಂದು ವಾರಗಳ ಕಾಲ…

8 hours ago