Categories: ಕೋಲಾರ

ಕಾರ್ಮಿಕರ ಹಕ್ಕುಗಳನ್ನು ಹತ್ತಿಕ್ಕಲು ಸಾಧ್ಯವಿಲ್ಲ -ಎಸ್.ವರಲಕ್ಷ್ಮೀ

ಕೋಲಾರ: ಎಕ್ಷಿಡಿ ಕಂಪನಿ ಮಾಲೀಕರ ಶೋಷಣೆಯ ವಿರುದ್ದದ ಕಾರ್ಮಿಕರ ಪ್ರತಿಭಟನೆಯನ್ನು ಯಾವುದೇ ಕಾರಣಕ್ಕೂ ಹತ್ತಿಕ್ಕಲು ಸಾಧ್ಯವಿಲ್ಲ. ಕೂಡಲೇ ಕಂಪನಿ ಮಾಲೀಕರೊಂದಿಗೆ ಜಿಲ್ಲಾಧಿಕಾರಿ ಮಧ್ಯಪ್ರವೇಶಿಸಿ ಬೇಡಿಕೆಗಳನ್ನು ಇತ್ಯರ್ಥಕ್ಕೆ ಮುಂದಾಗಬೇಕು ಇಲ್ಲದೇ ಹೋದರೆ ಮುಂದೆ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಸಿಐಟಿಯು ರಾಜ್ಯಾಧ್ಯಕ್ಷೆ ಎಸ್.ವರಲಕ್ಷ್ಮೀ ಒತ್ತಾಯಿಸಿದರು.

ತಾಲೂಕಿನ ನರಸಾಪುರ ಕೈಗಾರಿಕಾ ಪ್ರದೇಶದ ಎಕ್ಷಿಡಿ ಕಂಪನಿಯ ಎದುರು ಕಾರ್ಮಿಕರ ವೇತನ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ನಡೆಯುತ್ತಾ ಇರುವ ಸತತ 5 ನೇ ದಿನದ ಅನಿರ್ದಿಷ್ಟಾವಧಿ ಧರಣಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಇದು ಕಾರ್ಮಿಕರ ಬದುಕಿನ ಪ್ರಶ್ನೆಯಾಗಿದೆ ಕಾನೂನು ಬದ್ದವಾಗಿ ಕಾರ್ಮಿಕರ ಬೇಡಿಕೆಗಳ ಪಟ್ಟಿಯನ್ನು ಮಾಲೀಕರಿಗೆ ಸಲ್ಲಿಸಿದ್ದಾರೆ ಮಾಲೀಕರು ಷರತ್ತುಗಳ ಮೇಲೆ ಕಾರ್ಮಿಕರನ್ನು ಬೆದರಿಸುವ ಪ್ರವೃತ್ತಿಯನ್ನು ಬಿಟ್ಟು ಕಾರ್ಮಿಕರು ಕಾನೂನು ಕೈ ತೆಗೆದುಕೊಳ್ಳುವ ಮುಂಚೆ ಮುಖಾಮುಖಿ ಬಗೆಹರಿಸಿಕೊಳ್ಳಬೇಕು ಎಂದು ಮಾಲೀಕರಿಗೆ ಎಚ್ಚರಿಕೆ ನೀಡಿದರು.

ಈ ಕೈಗಾರಿಕಾ ಪ್ರದೇಶದಲ್ಲಿ ಕೃಷಿ ಭೂಮಿಯನ್ನು ಕಳೆದುಕೊಂಡ ಸಾವಿರಾರು ರೈತರು ಉದ್ಯೋಗಕ್ಕಾಗಿ ಕೈಕಟ್ಟಿ ಮಾಲೀಕನ ಮುಂದೆ ನಿಲ್ಲಬೇಕಾಗಿದೆ ಕಾರ್ಮಿಕರನ್ನು ಎದುರು ಹಾಕಿಕೊಂಡು ಕಂಪನಿ ಅಭಿವೃದ್ಧಿಯಾದ ಉದಾಹರಣೆ ಇಲ್ಲ ಕಾರ್ಮಿಕರು ಒಗ್ಗಟ್ಟಿನಿಂದ ಮನಸ್ಸು ಮಾಡಿದರೆ ಕಂಪನಿಯಲ್ಲಿನ ಯಂತ್ರೋಪಕರಣಗಳನ್ನು ನಿಲ್ಲಿಸುವ ತಾಕತ್ತು ಅವರಿಗಿದೆ ಮಾಲೀಕನಿಗೆ ಒಂದೇ ಕಂಪನಿ ಆದರೆ ದುಡಿಯುವ ಕಾರ್ಮಿಕರಿಗೆ ನೂರಾರು ಕಂಪನಿ ಎಂಬುದನ್ನು ಮರೆಯಬಾರದು ಎಂದರು.

ಕಂಪನಿಯೊಂದಿಗೆ ಸುಮಾರು ಬಾರಿ ಕಾರ್ಮಿಕರ ಬೇಡಿಕೆ ಪಟ್ಟಿಯನ್ನು ಇಟ್ಟುಕೊಂಡು ಸಭೆಗಳನ್ನು ನಡೆಸಿದ್ದರೂ ಪ್ರಯೋಜನವಾಗಲಿಲ್ಲ ಕಾರ್ಮಿಕರನ್ನು ಕಟ್ಟಿಹಾಕಿದರೆ ಸಾಕು ಎಂಬುದನ್ನು ಮರೆತು ಬಿಡಿ ಇವತ್ತು ಸಿಐಟಿಯು ಸಂಘಟನೆ ಬಂದು ಬೆಂಬಲ ಕೊಟ್ಟಿದೆ ಕೋಲಾರ ಜಿಲ್ಲೆ ಚಳುವಳಿಗಳ ತವರು ಎಂಬುದನ್ನು ಮರೆಯಬಾರದು ದಿನನಿತ್ಯ ರೈತ, ಕಾರ್ಮಿಕ, ಮಹಿಳಾ, ಯುವಜನ ಸಂಘಟನೆಗಳು ನಿಮ್ಮ ಹೋರಾಟಕ್ಕೆ ಬೆಂಬಲಿಸಲಿದ್ದಾರೆ ನಮ್ಮ ಬೇಡಿಕೆಗಳು ನ್ಯಾಯಯುತವಾಗಿ ಇದ್ದು ನಮ್ಮ ಹಕ್ಕನ್ನು ಕೇಳಲು ಬಂದಿದ್ದೇವೆ ಉತ್ಪಾದನೆಗೆ ತಕ್ಕಂತೆ ವೇತನ ಸೌಲಭ್ಯಗಳನ್ನು ಕೊಡುವುದು ಮಾಲೀಕರ ಜವಾಬ್ದಾರಿ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಎಕ್ಷಿಡಿ ಕ್ಲಚ್ ಇಂಡಿಯಾ ಕಂಪನಿಯ ಯೂನಿಯನ್ ಅಧ್ಯಕ್ಷ ಹರೀಶ್ ಮಾತನಾಡಿ, ಸುಮಾರು ಒಂದುವರೆ ವರ್ಷದ ಹಿಂದೆಯಿಂದ ಕಾರ್ಮಿಕರ ಬೇಡಿಕೆಗಳನ್ನು ಈಡೇರಿಸಲು ಒತ್ತಾಯಿಸಿಕೊಂಡು ಬಂದಿದ್ದೇವೆ ಸೌಲಭ್ಯಗಳನ್ನು ಕೊಡದೇ ಇದ್ದರಿಂದ ಅನಿರ್ದಿಷ್ಟಾವಧಿ ಧರಣಿಗೆ ಹೋಗಬೇಕಾಗಿದೆ ಎಷ್ಟೇ ದಿನವಾದರೂ ನಮ್ಮ ಬೇಡಿಕೆಗಳನ್ನು ಪಡೆದೇ ಪಡೆಯುತ್ತೇವೆ ಇಲ್ಲಿಯೇ ಅಡಿಗೆ ಮಾಡಿಕೊಂಡು ಧರಣಿ ಮುಂದುವರೆಸುತ್ತೇವೆ ಎಂದು ಇದೇ ಸಂದರ್ಭದಲ್ಲಿ ತಿಳಿಸಿದರು

ಈ ಧರಣಿಯ ನೇತೃತ್ವವನ್ನು ಎಕ್ಷಿಡಿ ಕ್ಲಚ್ ಎಂಪ್ಲಾಯೀಸ್ ಯೂನಿಯನ್ ಪ್ರಧಾನ ಕಾರ್ಯದರ್ಶಿ ಪ್ರಮೋದ್, ಉಪಾಧ್ಯಕ್ಷರಾದ ರಮೇಶ್, ಶರತ್ ಖಜಾಂಚಿ ಮಂಜುನಾಥ್, ಸಹಕಾರ್ಯದರ್ಶಿ ಪೃಥ್ವಿ, ಸಿಐಟಿಯು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎಂ.ವಿಜಯಕೃಷ್ಷ, ಖಜಾಂಚಿ ಎಚ್.ಬಿ ಕೃಷ್ಣಪ್ಪ, ಕಾರ್ಯದರ್ಶಿ ಎಂ.ಭೀಮರಾಜ್ ಅಂಗನವಾಡಿ ನೌಕರರ ಸಂಘದ ಲೋಕೇಶ್ವರಿ, ಸೇರಿದಂತೆ ನೂರಾರು ಕಾರ್ಮಿಕರು ಭಾಗವಹಿಸಿದ್ದರು.

Ramesh Babu

Journalist

Recent Posts

Mejores Gambling Enterprises Mastercard España: An Overview to Using Mastercard at Online Casinos

Mastercard is just one of one of the most widely approved and relied on payment…

21 minutes ago

ಕೋರ್ಟ್ ರಸ್ತೆಯಲ್ಲಿ ಭೀಕರ ಅಪಘಾತ: ಇಬ್ಬರು ಸಾವು

ಟ್ರ್ಯಾಕ್ಟರ್ ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ ಓರ್ವ ಬೈಕ್ ಸಾವನ್ನಪ್ಪಿದರೆ, ಮತ್ತೋರ್ವ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿರುವ ಘಟನೆ…

1 hour ago

ಕೆಯುಡಬ್ಲ್ಯೂಜೆ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

ಎಸ್ಎಸ್ಎಲ್ ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಶೇ.90ಕ್ಕೂ ಹೆಚ್ಚು ಅಂಕಗಳಿಸಿದ ಪತ್ರಕರ್ತರ ಮಕ್ಕಳ ಪ್ರತಿಭಾ ಪುರಸ್ಕಾರಕ್ಕಾಗಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ…

4 hours ago

No Deposit Reward Casino Site List: Every Little Thing You Required to Know

When it involves on-line gambling enterpris padişahbet günceles, among one of the most tempting deals…

10 hours ago

Instant Play Casino

Instant play casinos allow you to play casino games online without installing any software. These…

19 hours ago

ಎಸ್ಸೆಸ್ಸೆಲ್ಸಿ ಪರೀಕ್ಷೆ-01 ಫಲಿತಾಂಶ ಪ್ರಕಟ: ಲಿಟ್ಲ್ ಮಾಸ್ಟರ್ ಪಬ್ಲಿಕ್ ಶಾಲೆ ವಿದ್ಯಾರ್ಥಿನಿಗೆ 625ಕ್ಕೆ 622 ಅಂಕ: ನಮ್ಮ ತಪಸ್ಸಿಗೆ ಸಿಕ್ಕ ಯಶಸ್ಸು- ಶಾಲಾ ಸಂಸ್ಥಾಪಕ ಶ್ರೀನಿವಾಸ್ ಮೂರ್ತಿ

2025-26ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆ-1 ರ ಫಲಿತಾಂಶ ಪ್ರಕಟಗೊಂಡಿದ್ದು, ದೊಡ್ಡಬಳ್ಳಾಪುರ ತಾಲೂಕಿನ ಕಂಟನಕುಂಟೆ ಗ್ರಾಮದ ಲಿಟ್ಲ್ ಮಾಸ್ಟರ್ ಪಬ್ಲಿಕ್ ಶಾಲೆಯು…

22 hours ago