Categories: ಕೋಲಾರ

ಕಾರ್ಮಿಕರ ಹಕ್ಕುಗಳಿಗಾಗಿ ಸಿಐಟಿಯು ನೇತೃತ್ವದಲ್ಲಿ ಸಂಸದ ಮುನಿಸ್ವಾಮಿ ಕಚೇರಿ ಮುಂದೆ ಬೃಹತ್ ಪ್ರತಿಭಟನೆ

ಕೋಲಾರ: ಕಾರ್ಮಿಕರಿಗೆ ಕನಿಷ್ಠ ವೇತನ, ಬೆಲೆ ಏರಿಕೆ, ಕಾರ್ಮಿಕರ ಹಕ್ಕುಗಳು, ಸಂವಿಧಾನದ ಉಳುವಿಗಾಗಿ ಹಾಗೂ ಕಾರ್ಮಿಕ ವಿರೋಧಿ ಕಾನೂನುಗಳ ವಾಪಸ್ಸಾತಿಗೆ ಆಗ್ರಹಿಸಿ ನಗರದಲ್ಲಿರುವ ಸಂಸದ ಎಸ್.ಮುನಿಸ್ವಾಮಿ ಕಚೇರಿ ಮುಂದೆ ಬುಧವಾರ ಸಿಐಟಿಯು ನೇತೃತ್ವದಲ್ಲಿ ಬೃಹತ್ ಧರಣಿ ನಡೆಸಲಾಯಿತು.

ಈ ಸಂದರ್ಭದಲ್ಲಿ ಸಿಐಟಿಯು ಜಿಲ್ಲಾ ಗೌರವ ಅಧ್ಯಕ್ಷ ಗಾಂಧಿನಗರ ನಾರಾಯಣಸ್ವಾಮಿ ಮಾತನಾಡಿ, ಕಳೆದ 10 ವರ್ಷಗಳಿಂದ ದೇಶದ ಕಾರ್ಮಿಕ ವರ್ಗ ತೀವ್ರ ಸಂಕಷ್ಟದಲ್ಲಿದ್ದು, ಬದುಕು ಸಾಗಿಸಲು ಹರಸಾಹಸಪಡುವಂತಾಗಿದೆ. ದೇಶವನ್ನಾಳುವ ನರೇಂದ್ರ ಮೋದಿ ಸರಕಾರ ನಿರಂತರವಾಗಿ ಕಾರ್ಪೊರೇಟ್ ಪರ ನೀತಿಗಳನ್ನು ಜಾರಿಗೊಳಿಸುತ್ತಿದೆ. ಕೇಂದ್ರ ಸರಕಾರದ ಕಾರ್ಮಿಕ ವಿರೋಧಿ ನೀತಿಗಳನ್ನು ಕೈಬಿಡಬೇಕು, ಜನಪರ ಪರ್ಯಾಯ ನೀತಿಗಳನ್ನು ಜಾರಿಗೊಳಿಸಬೇಕು ಹಾಗೂ ದುಡಿಯುವ ವರ್ಗದ ಹಕ್ಕನ್ನು ಸಂರಕ್ಷಿಸಬೇಕು ಇತ್ಯಾದಿ ಬೇಡಿಕೆಗಳನ್ನು ಮುಂದಿಟ್ಟು ದೇಶ ಉಳಿಸಿ, ಜನತೆಯ ಬದುಕನ್ನು ರಕ್ಷಿಸಿ ಎಂಬ ಘೋಷಣೆಯೊಂದಿಗೆ ದೇಶಾದ್ಯಂತ ವ್ಯಾಪಕ ಪ್ರಚಾರಾಂದೋಲನ ನಡೆಸಿದ್ದಾರೆ

ಕೇಂದ್ರದಲ್ಲಿ ಅಧಿಕಾರಕ್ಕೆ ಬಂದ ನರೇಂದ್ರ ಮೋದಿ ಸರಕಾರವು ಕೇವಲ ಬಂಡವಾಳಶಾಹಿಗಳ ಪರವಾದ ಯೋಜನೆಗಳನ್ನು ಜಾರಿಬಮಾಡುವ ಮೂಲಕ ಕಾರ್ಪೊರೇಟ್ ಸಂಸ್ಥೆಗಳ ಕೈಗೊಂಬೆಯಾಗಿದೆ. ಅಷ್ಟೇ ಅಲ್ಲದೇ ಅಯೋಧ್ಯೆ ರಾಮನ ಹೆಸರಿನಲ್ಲಿ ರಾಜಕಾರಣ ಮಾಡಲು ಹೊರಟಿದ್ದಾರೆ. ರಾಮಂದಿರ ಸ್ಥಾಪನೆ ಮಾಡಿದರೆ ಸಾಲದು ಬಡವರ ದಲಿತರ ಕಾರ್ಮಿಕರ ಅಭಿವೃದ್ಧಿಗೆ ಪೂರಕವಾದ ಅಂಶಗಳನ್ನು ಜಾರಿ ಮಾಡಬೇಕು. ಕೋಲಾರದಲ್ಲಿ ಐದು ವರ್ಷಗಳ ಕಾಲ ಅಧಿಕಾರ ಅನುಭವಿಸಿರುವ ಸಂಸದ ಮುನಿಸ್ವಾಮಿ ಅವರ ಸಾಧನೆ ಶೂನ್ಯ ಎಂದರು.

ಈ ಸಂದರ್ಭದಲ್ಲಿ ಸಿಐಟಿಯು ಜಿಲ್ಲಾ ಉಪಾಧ್ಯಕ್ಷ ಪಿ.ಶ್ರೀನಿವಾಸ್ ಮಾತನಾಡಿ, ಕೇಂದ್ರದ ನರೇಂದ್ರ ಮೋದಿ ಸರಕಾರವು ಕಾರ್ಪೊರೇಟ್, ಕೋಮುವಾದಿಗಳ ಅಕ್ರಮ ಕೂಟವಾಗಿದೆ. ತನ್ನ ಜನವಿರೋಧಿ ನೀತಿಗಳಿಂದ ದುಡಿಯುವ ವರ್ಗ ಹಾಗೂ ಜನಸಾಮಾನ್ಯರ ಬದುಕನ್ನು ನಾಶಗೊಳಿಸಿದೆ. ದೇಶದ ಪ್ರಮುಖ ಕಾರ್ಮಿಕ ಕಾನೂನುಗಳನ್ನು ಸಂಹಿತೆಯನ್ನಾಗಿ ರೂಪಿಸಲು ಹೊರಟಿದ್ದು, ಮತ್ತೆ ಕಾರ್ಮಿಕರನ್ನು ಗುಲಾಮರನ್ನಾಗಿ ದುಡಿಸುವ ಷಡ್ಯಂತ್ರ ಅಡಗಿದೆ. ಕನಿಷ್ಠ ಕೂಲಿ, ಸಾಮಾಜಿಕ ಭದ್ರತೆ ಇಲ್ಲದೆ ಅಸಂಘಟಿತ ಕ್ಷೇತ್ರದ ಕಾರ್ಮಿಕರು ಅತ್ಯಂತ ನಿಕೃಷ್ಟವಾಗಿ ಬದುಕುವಂತಾಗಿದೆ ಎಂದು ಆರೋಪಿಸಿದರು.

ಸಿಐಟಿಯು ಜಿಲ್ಲಾ ಖಜಾಂಚಿ ಎಚ್.ಬಿ ಕೃಷ್ಣಪ್ಪ ಮಾತನಾಡಿ, ಕೇಂದ್ರ ಸರ್ಕಾರದ ನವ ಉದಾರೀಕರಣ ನೀತಿಗಳ ಜಾರಿಯ ವೇಗದಲ್ಲಿ ದೇಶದ ಅಭಿವೃದ್ಧಿಯ ಸಂಕೇತಗಳಾದ ಮಕ್ಕಳು ಮತ್ತು ಮಹಿಳೆಯರಿಗಾಗಿ ಕೊಡುವ ಸೌಲಭ್ಯಗಳಲ್ಲಿ ಕಳೆದ ಬಜೆಟ್ ನಲ್ಲಿ 8542 ಕೋಟಿ ರೂಗಳನ್ನು ಕಡಿತ ಮಾಡುವ ಮುಖಾಂತರ ಕತ್ತರಿ ಹಾಕುತ್ತಿದೆ, ಇದರಿಂದ ದೇಶದ ವಿವಿಧ ಯೋಜನೆಯಲ್ಲಿ ಸುಮಾರು 12 ಕೋಟಿ ಫಲಾನುಭವಿಗಳು ಸರಕಾರಿ ಸೌಲಭ್ಯಗಳಿಂದ ವಂಚಿತರಾಗುತ್ತಿದ್ದಾರೆ ಎಂದು ಆರೋಪಿಸಿದರು.

ಕಳೆದ ಬಾರಿಯು ಸಂಸತ್ತಿನಲ್ಲಿ ಸುಮಾರು146 ಸದಸ್ಯರನ್ನು ಹೊರಗೆ ಹಾಕಿ ಲೋಕಸಭಯಲ್ಲಿ 18, ರಾಜ್ಯಸಭೆಯಲ್ಲಿ 17 ಬಿಲ್ ಗಳನ್ನು ಮಂಡಿಸಿ ಅಂಗೀಕರಿಸಿದೆ. ಇದು ಪ್ರಜಾತಂತ್ರಕ್ಕೆ ಎಸಗಿದ ದ್ರೋಹ, ಬಡ ಜನತೆಯ ಯೋಜನೆಗಳಿಗೆ ಹಣ ನೀಡದ ಸರ್ಕಾರ ದೇಶದ ಬಂಡವಾಳಗಾರರು ಮತ್ತು ಕಾರ್ಪೋರೇಟ್ ಕಂಪನಿಗಳಿಗೆ 14.5 ಲಕ್ಷ ಕೋಟಿ ಸಾಲ ಮನ್ನ ಮಾಡಿದೆ. ರೈತ, ಕಾರ್ಮಿಕರ ಮತ್ತು ಜನತೆಯ ಪ್ರಶ್ನೆಗಳನ್ನು ಪರಿಹರಿಸದೆ ಜನ ವಿರೋಧಿಯಾಗಿ ವರ್ತಿಸುತ್ತಿದೆ ಎಂದು ಆರೋಪಿಸಿದರು.

ಈ ಸಂದರ್ಭದಲ್ಲಿ ಸಿಐಟಿಯು ಜಿಲ್ಲಾ ಅಧ್ಯಕ್ಷ ಅಮರನಾರಾಯಣಪ್ಪ, ಪ್ರಧಾನ ಕಾರ್ಯದರ್ಶಿ ಎಂ.ವಿಜಯಕೃಷ್ಣ, ಮುಖಂಡರಾದ ಎಂ ಭೀಮರಾಜ್, ಆಶಾ, ಕೆ.ಮಂಜುನಾಥ್, ಕೇಶವರಾವ್, ತಿರುಪತಿ, ಎಲ್ಐಸಿ ಜಯರಾಂ, ತಂಗರಾಜ್, ಲಿಯೋ, ಅಶೋಕ್, ಶಿವಾನಂದ್, ನಾಗರಾಜಪ್ಪ, ಕೆ.ವಿ ಮಂಜುನಾಥ್, ನಾರಾಯಣಪ್ಪ, ಸುಶೀಲಾ, ಯಲ್ಲಪ್ಪ, ಮುನಿಸ್ವಾಮಿ, ಪೇರುಮಲಪ್ಪ, ಸುಮತಿ, ಮಂಜುಳಮ್ಮ ಇನ್ನೂ ಮುಂತಾದವರು ಭಾಗವಹಿಸಿದ್ದರು.

Ramesh Babu

Journalist

Recent Posts

ಪ್ರತಿ ಮನೆಗೂ ಪೊಲೀಸರು ಭೇಟಿ ನೀಡಿ, ಸಮಸ್ಯೆಗಳನ್ನು ಆಲಿಸಿ, ಅಗತ್ಯ ಕ್ರಮ ಕೈಗೊಳ್ಳಲಾಗುವುದು- ಎಸ್ಪಿ ಸಿ.ಕೆ ಬಾಬಾ

ಪ್ರತಿ ಮನೆಗೂ ಪೊಲೀಸರು ಭೇಟಿ ನೀಡಿ, ಜನರ ಸಮಸ್ಯೆಗಳನ್ನು ಆಲಿಸಿ, ಅಗತ್ಯ ಕ್ರಮ ಕೈಗೊಳ್ಳಲಿದ್ದಾರೆ. ಇದರಿಂದಾಗಿ ಕಾನೂನಿಗೆ ಸಂಬಂಧಿತ ಸಮಸ್ಯೆಗಳ…

2 hours ago

ಗೊತ್ತಿರದ ವಿಷಯ ಕಲಿಯುವ ಕಡೆ ಗಮನ ಕೇಂದ್ರೀಕರಿಸಿ- ಡಾ. ಸೀಮಾ ಚೋಪ್ರಾ

"ನೀವು ಮಾಡುವ ಕೆಲಸವನ್ನು ಪ್ರೀತಿಸಿ. ನಿಮಗೆ ಗೊತ್ತಿಲ್ಲದ ವಿಷಯಗಳನ್ನು ಕಲಿಯುವ ಕಡೆಗೆ ಗಮನ ಕೇಂದ್ರೀಕರಿಸಿ ಮತ್ತು ಜೀವನಪರ್ಯಂತ ಕಲಿಯುತ್ತಲೇ ಇರಿ,…

2 hours ago

ಅಣ್ಣನ ಮೂವರು ಮಕ್ಕಳ ಮೇಲೆ ತಮ್ಮನಿಂದ ಕ್ರೂರವಾಗಿ ಹಲ್ಲೆ: ಇಬ್ಬರು ಮಕ್ಕಳು ಸ್ಥಳದಲ್ಲೇ ಸಾವು: ಒಬ್ಬ ಬಾಲಕ ಜೀವನ್ಮರಣ ಹೋರಾಟ

ಅಣ್ಣನ ಮೂವರು ಮಕ್ಕಳ ಮೇಲೆ ತಮ್ಮನೇ ಕ್ರೂರವಾಗಿ ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನ ಕಮ್ಮಸಂದ್ರದಲ್ಲಿ ನಡೆದಿದೆ. ಘಟನೆಯಲ್ಲಿ 9 ವರ್ಷದ…

10 hours ago

ನಟ ಪ್ರಥಮ್ ಮೇಲೆ ದುಷ್ಕರ್ಮಿಗಳಿಂದ ಹಲ್ಲೆ ಆರೋಪ: ಹಲ್ಲೆ ಎಲ್ಲಿ ಆಯ್ತು…? ಘಟನೆ ಬಗ್ಗೆ ನಟ ಪ್ರಥಮ್ ಏನಂದ್ರು… ಗೊತ್ತಾ….? ಸಂಪೂರ್ಣ ಮಾಹಿತಿ ಇಲ್ಲಿದೆ ಓದಿ….

ಜು.22ರ ಮಂಗಳವಾರ ದೊಡ್ಡಬಳ್ಳಾಪುರದ ರಾಮಯ್ಯನಪಾಳ್ಯ ಸಮೀಪವಿರುವ ಶ್ರೀ ಆದಿಶಕ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಪೂಜೆಗೆಂದು ಬಿಗ್ ಬಾಸ್ ವಿನ್ನರ್ ನಟ…

1 day ago

ಈ ವರ್ಷ ಕೇಂದ್ರ ಸರ್ಕಾರ ಸರಬರಾಜು ಮಾಡಿರುವ ರಸಗೊಬ್ಬರ ಸಾಕಾಗುತ್ತಿಲ್ಲ- ಸಿಎಂ ಸಿದ್ದರಾಮಯ್ಯ

ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಜಾತಿ ಸಮೀಕ್ಷೆ ಅನಿವಾರ್ಯವಾಗಿದ್ದು, ಈ ದಿಸೆಯಲ್ಲಿ ದೇಶದ ಪ್ರತಿ ನಾಗರಿಕನ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ,…

1 day ago

ಹಣ ಕೇಂದ್ರೀಕೃತ ಸಮಾಜಕ್ಕೆ ಬದಲಾಗಿ ಮನುಷ್ಯತ್ವ ಕೇಂದ್ರಿತ ಸಮಾಜ ನಿರ್ಮಾಣವಾಗಲಿ…..

ಬದಲಾವಣೆ......... ರೋಗಗಳ ಆವಾಸಸ್ಥಾನವಾಗುತ್ತಿರುವ ಆಸ್ಪತ್ರೆಗಳು...... ರೋಗಿಗಳ ತವರುಮನೆಯಂತಾಗುತ್ತಿರುವ ಮೆಡಿಕಲ್ ಲ್ಯಾಬೋರೇಟರಿಗಳು..... ಅನಾಗರಿಕ ಸಮಾಜ ನಿರ್ಮಾಣಕ್ಕೆ ಕಾರಣವಾಗುತ್ತಿರುವ ಶಿಕ್ಷಣ ಸಂಸ್ಥೆಗಳು........ ಭ್ರಷ್ಟಾಚಾರದ…

1 day ago