ಕಾಲಮಿತಿಯಲ್ಲಿ ಜನತಾ‌ದರ್ಶನದ ಅರ್ಜಿಗಳ ವಿಲೇವಾರಿಗೆ ಕ್ರಮ ವಹಿಸಿ: ಜಿಲ್ಲಾಧಿಕಾರಿ ಡಾ. ಶಿವಶಂಕರ.ಎನ್

ಜಿಲ್ಲಾ ಜನತಾ ದರ್ಶನ ಸೇರಿದಂತೆ ಮುಖ್ಯಮಂತ್ರಿಗಳ ಜನತಾ ದರ್ಶನದಲ್ಲಿ ಸ್ವೀಕೃತಿಯಾಗಿರುವ ಅರ್ಜಿಗಳಿಗೆ ಮೊದಲ ಆದ್ಯತೆ ನೀಡಿ ಕಾಲ ಮಿತಿಯೊಳಗೆ ಬಗೆಹರಿಸುವಂತೆ ಜಿಲ್ಲಾಧಿಕಾರಿ ಡಾ.ಎನ್. ಶಿವಶಂಕರ್ ಅವರು ಅಧಿಕಾರಿಗಳಿಗೆ ಸೂಚಿಸಿದರು.

ದೇವನಹಳ್ಳಿ ತಾಲೂಕಿನ ಬೀರಸಂದ್ರ ಗ್ರಾಮದ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಯವರ ಜಿಲ್ಲಾ ಕಛೇರಿ ಸಭಾಂಗಣದಲ್ಲಿ ಇಂದು ನಡೆದ ಕಂದಾಯ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಸಕಾಲದಲ್ಲಿ ಬಾಕಿ ಇರುವ ಅರ್ಜಿಗಳನ್ನು ಅವಧಿ ಮೀರದಂತೆ ತ್ವರಿತವಾಗಿ ಬಗೆಹರಿಸಲು ಕ್ರಮವಹಿಸಿ, ಕಾಲಮಿತಿಯೊಳಗೆ ಬಗೆಹರಿಸದೆ ಇದ್ದರೆ ಸಂಬಂಧಿಸಿದ ಅಧಿಕಾರಿಗಳೇ ನೇರ ಹೊಣೆಯಾಗುತ್ತಾರೆ ಎಂದು ತಿಳಿಸಿದರು.

ಸರ್ಕಾರಿ ಸ್ಮಶಾನ ಜಾಗ ಒತ್ತುವರಿ ಸಮಸ್ಯೆ, ಸಂಪರ್ಕ ರಸ್ತೆ ಸಮಸ್ಯೆಗಳ ಬಗ್ಗೆ ದೂರುಗಳು ಬಂದಲ್ಲಿ ಆದ್ಯತೆ ಮೇರೆಗೆ ಶೀಘ್ರವಾಗಿ ಬಗೆಹರಿಸಲು ತಾಲ್ಲೂಕು ತಹಸೀಲ್ದಾರ್ ಗಳಿಗೆ ಸೂಚನೆ ನೀಡಿದರು.

ಆಶ್ರಯ ಯೋಜನೆಗೆ ಗುರುತಿಸಿರುವ ಸ್ಥಳಗಳನ್ನು ಶೀಘ್ರವಾಗಿ ಸರ್ವೆ ಮಾಡಿಸಿ ಪ್ರಸ್ತಾವನೆ ಸಲ್ಲಿಸಲು ಜಿಲ್ಲೆಯ ತಾಲ್ಲೂಕು ಕಾರ್ಯ ನಿರ್ವಾಹಕ ಅಧಿಕಾರಿಗಳಿಗೆ ಸೂಚನೆ ನೀಡಿದರು.‌

ಘನತ್ಯಾಜ್ಯ ವಿಲೇವಾರಿ ಘಟಕಗಳಿಗೆ ಸಂಬಂಧಿಸಿದಂತೆ ವಿಲೇವಾರಿ ಘಟಕಗಳ ಜಮೀನು ಮಂಜೂರಾತಿಗೆ ಕ್ರಮವಹಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದರು.
ತಾಲ್ಲೂಕುವಾರು ಮತ್ತು ಇಲಾಖಾವಾರು ಕೆರೆಗಳ ಮಾಹಿತಿ ಪಡೆದು ಕೆರೆ ಒತ್ತುವರಿ ತೆರವುಗೊಳಿಸಲು ಶೀಘ್ರ ಕ್ರಮ ವಹಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಫ್ರೂಟ್ಸ್’ ತಂತ್ರಾಂಶದಡಿ ನೋಂದಣಿ ಮಾಡಿಸಿ

ಬರಗಾಲ ಮತ್ತು ಪ್ರವಾಹ ಸಂದರ್ಭದಲ್ಲಿ ಬೆಳೆ ನಷ್ಟ ಪರಿಹಾರ ವಿತರಿಸಲು, ಬೆಂಬಲ ಬೆಲೆ ಯೋಜನೆಯಲ್ಲಿ ಕೃಷಿ ಉತ್ಪನ್ನ ಖರೀದಿಸಲು, ಬ್ಯಾಂಕ್‌ಗಳಿಂದ ಸಾಲ ಸೌಲಭ್ಯ ಪಡೆಯಲು, ಕೃಷಿ/ತೋಟಗಾರಿಕೆ/ರೇಷ್ಮೆ ಮತ್ತು ಇತರೆ ಇಲಾಖೆಗಳಲ್ಲಿ ಸವಲತ್ತುಗಳನ್ನು ಪಡೆಯಲು ಅನುಕೂಲವಾಗುವಂತೆ ಜಿಲ್ಲೆಯ ಎಲ್ಲಾ ರೈತರು ಕಡ್ಡಾಯವಾಗಿ ತಮ್ಮ ಎಲ್ಲಾ ಜಮೀನುಗಳ ವಿವರಗಳನ್ನು ಫ್ರೂಟ್ಸ್ ತಂತ್ರಾಂಶದಡಿ ಡಿಸೆಂಬರ್ 11ರೊಳಗೆ ನೋಂದಾಯಿಸಿಕೊಳ್ಳಲು ಕ್ರಮ ವಹಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.

ಯುವ ಮತದಾರರ ನೋಂದಣಿಗೆ ಕ್ರಮ

ಚುನಾವಣಾ ಹಿನ್ನೆಲೆಯಲ್ಲಿ ಯುವ ಮತದಾರರ ನೋಂದಣಿ ಹೆಚ್ಚಳಕ್ಕೆ ಮತ್ತು ಪದವೀಧರರ ನೋಂದಣಿಗೆ ಕ್ರಮ ವಹಿಸಿ ಸ್ವೀಪ್ ಸಮಿತಿಯ ಮೂಲಕ ಜಾಗೃತಿ ಮೂಡಿಸಲು ಇದೇ ಸಂದರ್ಭದಲ್ಲಿ ಜಿಲ್ಲಾಧಿಕಾರಿಗಳು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕಾಧಿಕಾರಿ ಡಾ.ಅನುರಾಧ ಕೆ.ಎನ್ , ಅಪರ ಜಿಲ್ಲಾಧಿಕಾರಿ ಹೆಚ್ .ಅಮರೇಶ್, ಸಾಮಾಜಿಕ ಅರಣ್ಯ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಸರಿನಾ, ಜಿಲ್ಲಾ ಪಂಚಾಯತಿ ಉಪ ಕಾರ್ಯದರ್ಶಿ ಟಿ.ಕೆ ರಮೇಶ್, ಉಪವಿಭಾಗಾಧಿಕಾರಿ ಶ್ರೀನಿವಾಸ್, ದೊಡ್ಡಬಳ್ಳಾಪುರ ತಾಲ್ಲೂಕು ತಹಸೀಲ್ದಾರ್ ವಿದ್ಯಾ ವಿಭಾ ರಾಥೋಡ್, ದೇವನಹಳ್ಳಿ ತಾಲ್ಲೂಕು ತಹಸೀಲ್ದಾರ್ ಶಿವರಾಜ್, ನೆಲಮಂಗಲ ತಾಲ್ಲೂಕು ತಹಸೀಲ್ದಾರ್ ಅರುಂಧತಿ, ಹೊಸಕೋಟೆ ತಾಲ್ಲೂಕು ತಹಸೀಲ್ದಾರ್ ವಿಜಯ ಕುಮಾರ್, ತಾಲ್ಲೂಕು ಕಾರ್ಯ ನಿರ್ವಾಹಕ ಅಧಿಕಾರಿಗಳು ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

Ramesh Babu

Journalist

Recent Posts

ಗ್ಯಾಸ್ ಸಿಲಿಂಡರ್ ವಿತರಣೆಯಲ್ಲಿ ಸಮಸ್ಯೆ ಉಂಟಾದಲ್ಲಿ ಆಹಾರ ನಿರೀಕ್ಷಕರನ್ನು ಸಂಪರ್ಕಿಸಿ- ಡಿಸಿ ಡಾ. ಕೆ.ಎನ್ ಅನುರಾಧ

ಜಿಲ್ಲೆಯಾದ್ಯಂತ ಎಲ್ಪಿಜಿ ಸಿಲಿಂಡರ್ ಪೂರೈಕೆಯಲ್ಲಿ ಸಾರ್ವಜನಿಕ ಕುಂದುಕೊರತೆಗಳು ಕಂಡು ಬಂದಲ್ಲಿ ತಾಲ್ಲೂಕಿನ ಆಹಾರ ಶಾಖೆಯ ಆಹಾರ ನಿರೀಕ್ಷಕರನ್ನು ದೂರವಾಣಿ ಮೂಲಕ…

4 hours ago

ಶೀಘ್ರದಲ್ಲೇ ಹೋಟೆಲ್ ಗಳಿಗೂ ಅಡಿಗೆ ಅನಿಲ ಪೂರೈಕೆ – ಆಹಾರ ಸಚಿವ ಕೆ ಎಚ್ ಮುನಿಯಪ್ಪ‌

ರಾಜ್ಯದಲ್ಲಿ ಎಲ್‌ಪಿಜಿ ಸಿಲಿಂಡರ್ ಕೊರತೆ ಇಲ್ಲದೆ ಸರಬರಾಜು ನಿಯಮಿತವಾಗಿ ನಡೆಯುತ್ತಿದೆ. ಕೆಲವೆಡೆ ಜನರು ಪ್ಯಾನಿಕ್‌ನಿಂದ ಅಗತ್ಯಕ್ಕಿಂತ ಹೆಚ್ಚು ಬುಕ್ಕಿಂಗ್ ಮಾಡುತ್ತಿರುವುದರಿಂದ…

9 hours ago

‘ಪ್ರಸಾದ್ 2.0’ (PRASHAD 2.0) ಯೋಜನೆಯಡಿ ಘಾಟಿ ಸುಬ್ರಹ್ಮಣ್ಯ ಸ್ವಾಮಿ ದೇವಾಲಯದ ಸಮಗ್ರ ಅಭಿವೃದ್ಧಿ ವಿಚಾರ: ಶ್ರೀ ಘಾಟಿ ಸುಬ್ರಹ್ಮಣ್ಯ ಅಭಿವೃದ್ಧಿ ಪ್ರಾಧಿಕಾರ ಸದಸ್ಯರಾದ ರಂಗಪ್ಪ, ಆರ್.ವಿ ಮಹೇಶ್ ಕುಮಾರ್ ಸಂತಸ

ನವದೆಹಲಿಯಲ್ಲಿ ಕೇಂದ್ರ ಪ್ರವಾಸೋದ್ಯಮ ಸಚಿವರಾದ ಶ್ರೀ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು ಸಂಸದ ಡಾ.ಕೆ.ಸುಧಾಕರ್ ಭೇಟಿ ಮಾಡಿ, 'ಪ್ರಸಾದ್ 2.0'…

9 hours ago

ರೀಲ್ಸ್ ಮಾಡುವ ಮಹಿಳೆಯರ ಜೊತೆ ರೀಲ್ಸ್ ಮಂಜಣ್ಣ ಹೆಲ್ಮೆಟ್ ಇಲ್ಲದೇ ಬೈಕಿನಲ್ಲಿ ತ್ರಿಬಲ್ ರೈಡಿಂಗ್: ಸಾಮಾಜಿಕ‌ ಜಾಲತಣದಲ್ಲಿ ವಿಡಿಯೋ ಪೋಸ್ಟ್: ಪೊಲೀಸರಿಂದ ಬಿತ್ತು ಫೈನ್: ಕೊನೆಗೆ ಫೈನ್ ಕಟ್ಟಿ ಕ್ಷಮೆಯಾಚನೆ

ಸಾಮಾಜಿಕ ಜಾಲತಾಣಗಳಲ್ಲಿ ವಿಚಿತ್ರ, ವಿಕಾರವಾಗಿ ರೀಲ್ಸ್ ಮಾಡುತ್ತಿದ್ದ ರೀಲ್ಸ್ ಮಂಜಣ್ಣ ಅಂತಾನೇ ಕರೆಸಿಕೊಳ್ಳುವ ಮಂಜ ಬೈಕ್ ನಲ್ಲಿ ತ್ರಿಬಲ್ ರೈಡ್…

17 hours ago

ಆನ್ ಲೈನ್ ನಲ್ಲಿ ಒಂದು ರೂ. ಗೆ ಹಾಲು ಮಾರಾಟ: ಪ್ರಾಂತ ರೈತ ಸಂಘ ಆಕ್ರೋಶ: ಅಮಿತ್ ಶಾ ರಾಜೀನಾಮೆಗೆ ಆಗ್ರಹ

ಕೋಲಾರ: ಅಮೆಜಾನ್‌ ಸಹಭಾಗಿತ್ವದ ಫ್ಲಿಪ್ ಕಾರ್ಟ್ ನಲ್ಲಿ ಲೀಟರ್ ಹಾಲನ್ನು ಒಂದು ರೂ. ಗೆ ಮಾರಾಟದ ಅವಕಾಶ ಕಲ್ಪಿಸಿರುವುದು ಅತ್ಯಂತ…

1 day ago