ಕಾಲಮಿತಿಯಲ್ಲಿ ಜನತಾ‌ದರ್ಶನದ ಅರ್ಜಿಗಳ ವಿಲೇವಾರಿಗೆ ಕ್ರಮ ವಹಿಸಿ: ಜಿಲ್ಲಾಧಿಕಾರಿ ಡಾ. ಶಿವಶಂಕರ.ಎನ್

ಜಿಲ್ಲಾ ಜನತಾ ದರ್ಶನ ಸೇರಿದಂತೆ ಮುಖ್ಯಮಂತ್ರಿಗಳ ಜನತಾ ದರ್ಶನದಲ್ಲಿ ಸ್ವೀಕೃತಿಯಾಗಿರುವ ಅರ್ಜಿಗಳಿಗೆ ಮೊದಲ ಆದ್ಯತೆ ನೀಡಿ ಕಾಲ ಮಿತಿಯೊಳಗೆ ಬಗೆಹರಿಸುವಂತೆ ಜಿಲ್ಲಾಧಿಕಾರಿ ಡಾ.ಎನ್. ಶಿವಶಂಕರ್ ಅವರು ಅಧಿಕಾರಿಗಳಿಗೆ ಸೂಚಿಸಿದರು.

ದೇವನಹಳ್ಳಿ ತಾಲೂಕಿನ ಬೀರಸಂದ್ರ ಗ್ರಾಮದ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಯವರ ಜಿಲ್ಲಾ ಕಛೇರಿ ಸಭಾಂಗಣದಲ್ಲಿ ಇಂದು ನಡೆದ ಕಂದಾಯ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಸಕಾಲದಲ್ಲಿ ಬಾಕಿ ಇರುವ ಅರ್ಜಿಗಳನ್ನು ಅವಧಿ ಮೀರದಂತೆ ತ್ವರಿತವಾಗಿ ಬಗೆಹರಿಸಲು ಕ್ರಮವಹಿಸಿ, ಕಾಲಮಿತಿಯೊಳಗೆ ಬಗೆಹರಿಸದೆ ಇದ್ದರೆ ಸಂಬಂಧಿಸಿದ ಅಧಿಕಾರಿಗಳೇ ನೇರ ಹೊಣೆಯಾಗುತ್ತಾರೆ ಎಂದು ತಿಳಿಸಿದರು.

ಸರ್ಕಾರಿ ಸ್ಮಶಾನ ಜಾಗ ಒತ್ತುವರಿ ಸಮಸ್ಯೆ, ಸಂಪರ್ಕ ರಸ್ತೆ ಸಮಸ್ಯೆಗಳ ಬಗ್ಗೆ ದೂರುಗಳು ಬಂದಲ್ಲಿ ಆದ್ಯತೆ ಮೇರೆಗೆ ಶೀಘ್ರವಾಗಿ ಬಗೆಹರಿಸಲು ತಾಲ್ಲೂಕು ತಹಸೀಲ್ದಾರ್ ಗಳಿಗೆ ಸೂಚನೆ ನೀಡಿದರು.

ಆಶ್ರಯ ಯೋಜನೆಗೆ ಗುರುತಿಸಿರುವ ಸ್ಥಳಗಳನ್ನು ಶೀಘ್ರವಾಗಿ ಸರ್ವೆ ಮಾಡಿಸಿ ಪ್ರಸ್ತಾವನೆ ಸಲ್ಲಿಸಲು ಜಿಲ್ಲೆಯ ತಾಲ್ಲೂಕು ಕಾರ್ಯ ನಿರ್ವಾಹಕ ಅಧಿಕಾರಿಗಳಿಗೆ ಸೂಚನೆ ನೀಡಿದರು.‌

ಘನತ್ಯಾಜ್ಯ ವಿಲೇವಾರಿ ಘಟಕಗಳಿಗೆ ಸಂಬಂಧಿಸಿದಂತೆ ವಿಲೇವಾರಿ ಘಟಕಗಳ ಜಮೀನು ಮಂಜೂರಾತಿಗೆ ಕ್ರಮವಹಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದರು.
ತಾಲ್ಲೂಕುವಾರು ಮತ್ತು ಇಲಾಖಾವಾರು ಕೆರೆಗಳ ಮಾಹಿತಿ ಪಡೆದು ಕೆರೆ ಒತ್ತುವರಿ ತೆರವುಗೊಳಿಸಲು ಶೀಘ್ರ ಕ್ರಮ ವಹಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಫ್ರೂಟ್ಸ್’ ತಂತ್ರಾಂಶದಡಿ ನೋಂದಣಿ ಮಾಡಿಸಿ

ಬರಗಾಲ ಮತ್ತು ಪ್ರವಾಹ ಸಂದರ್ಭದಲ್ಲಿ ಬೆಳೆ ನಷ್ಟ ಪರಿಹಾರ ವಿತರಿಸಲು, ಬೆಂಬಲ ಬೆಲೆ ಯೋಜನೆಯಲ್ಲಿ ಕೃಷಿ ಉತ್ಪನ್ನ ಖರೀದಿಸಲು, ಬ್ಯಾಂಕ್‌ಗಳಿಂದ ಸಾಲ ಸೌಲಭ್ಯ ಪಡೆಯಲು, ಕೃಷಿ/ತೋಟಗಾರಿಕೆ/ರೇಷ್ಮೆ ಮತ್ತು ಇತರೆ ಇಲಾಖೆಗಳಲ್ಲಿ ಸವಲತ್ತುಗಳನ್ನು ಪಡೆಯಲು ಅನುಕೂಲವಾಗುವಂತೆ ಜಿಲ್ಲೆಯ ಎಲ್ಲಾ ರೈತರು ಕಡ್ಡಾಯವಾಗಿ ತಮ್ಮ ಎಲ್ಲಾ ಜಮೀನುಗಳ ವಿವರಗಳನ್ನು ಫ್ರೂಟ್ಸ್ ತಂತ್ರಾಂಶದಡಿ ಡಿಸೆಂಬರ್ 11ರೊಳಗೆ ನೋಂದಾಯಿಸಿಕೊಳ್ಳಲು ಕ್ರಮ ವಹಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.

ಯುವ ಮತದಾರರ ನೋಂದಣಿಗೆ ಕ್ರಮ

ಚುನಾವಣಾ ಹಿನ್ನೆಲೆಯಲ್ಲಿ ಯುವ ಮತದಾರರ ನೋಂದಣಿ ಹೆಚ್ಚಳಕ್ಕೆ ಮತ್ತು ಪದವೀಧರರ ನೋಂದಣಿಗೆ ಕ್ರಮ ವಹಿಸಿ ಸ್ವೀಪ್ ಸಮಿತಿಯ ಮೂಲಕ ಜಾಗೃತಿ ಮೂಡಿಸಲು ಇದೇ ಸಂದರ್ಭದಲ್ಲಿ ಜಿಲ್ಲಾಧಿಕಾರಿಗಳು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕಾಧಿಕಾರಿ ಡಾ.ಅನುರಾಧ ಕೆ.ಎನ್ , ಅಪರ ಜಿಲ್ಲಾಧಿಕಾರಿ ಹೆಚ್ .ಅಮರೇಶ್, ಸಾಮಾಜಿಕ ಅರಣ್ಯ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಸರಿನಾ, ಜಿಲ್ಲಾ ಪಂಚಾಯತಿ ಉಪ ಕಾರ್ಯದರ್ಶಿ ಟಿ.ಕೆ ರಮೇಶ್, ಉಪವಿಭಾಗಾಧಿಕಾರಿ ಶ್ರೀನಿವಾಸ್, ದೊಡ್ಡಬಳ್ಳಾಪುರ ತಾಲ್ಲೂಕು ತಹಸೀಲ್ದಾರ್ ವಿದ್ಯಾ ವಿಭಾ ರಾಥೋಡ್, ದೇವನಹಳ್ಳಿ ತಾಲ್ಲೂಕು ತಹಸೀಲ್ದಾರ್ ಶಿವರಾಜ್, ನೆಲಮಂಗಲ ತಾಲ್ಲೂಕು ತಹಸೀಲ್ದಾರ್ ಅರುಂಧತಿ, ಹೊಸಕೋಟೆ ತಾಲ್ಲೂಕು ತಹಸೀಲ್ದಾರ್ ವಿಜಯ ಕುಮಾರ್, ತಾಲ್ಲೂಕು ಕಾರ್ಯ ನಿರ್ವಾಹಕ ಅಧಿಕಾರಿಗಳು ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

Ramesh Babu

Journalist

Recent Posts

2026-27ನೇ ಸಾಲಿನ ರಾಜ್ಯ ಬಜೆಟ್ ಮಂಡನೆಗೆ ದಿನಾಂಕ ಫಿಕ್ಸ್​​

2026-27ನೇ ಸಾಲಿನ ರಾಜ್ಯ ಬಜೆಟ್ ಮಂಡನೆಗೆ ದಿನಾಂಕ ಫಿಕ್ಸ್​​ ಆಗಿದೆ. ಸಿಎಂ ಕುರ್ಚಿ ಕಾಳಗದ ನಡುವೆಯೇ ಹಣಕಾಸು ಖಾತೆಯನ್ನ ಹೊಂದಿರುವ…

5 hours ago

ನಟ ವಿಜಯ್ ದೇವರಕೊಂಡ – ಕೊಡಗಿನ ಬೆಡಗಿ ರಶ್ಮಿಕಾ ಮಂದಣ್ಣ ಅವರದ್ದು ಎನ್ನಲಾದ ವಿವಾಹ ಆಮಂತ್ರಣ ಪತ್ರಿಕೆ ಸೋಷಿಯಲ್ ಮೀಡಿಯಾದಲ್ಲಿ ಫುಲ್ ವೈರಲ್

ಕೊಡಗಿನ ಬೆಡಗಿ ಬಹುಭಾಷಾ ನಟಿ ರಶ್ಮಿಕಾ ಮಂದಣ್ಣ ಮತ್ತು ಟಾಲಿವುಡ್ ನಟ ವಿಜಯ್ ದೇವರಕೊಂಡ ಹಲವು ವರ್ಷಗಳಿಂದ ಡೇಟಿಂಗ್‌ನಲ್ಲಿದ್ದಾರೆ ಎನ್ನುವುದು…

5 hours ago

ಜಿಲ್ಲಾ ಮಟ್ಟದ ಕೈಗಾರಿಕಾ ಸಂವಾದ ಸಭೆ: ಸ್ಥಳೀಯರಿಗೆ ಉದ್ಯೋಗಾವಕಾಶ ಮೊದಲ ಆದ್ಯತೆ ಆಗಲಿ- ಸಚಿವ ಕೆ.ಎಚ್ ಮುನಿಯಪ್ಪ

ಕಂಪನಿಗಳಲ್ಲಿ ಖಾಲಿ ಇರುವ ಹುದ್ದೆಗಳ ನೇಮಕ ಮಾಡಿಕೊಳ್ಳುವ ಸಂದರ್ಭದಲ್ಲಿ ಸ್ಥಳೀಯ ಅಭ್ಯರ್ಥಿಗಳಿಗೆ ಮೊದಲ ಆದ್ಯತೆ ನೀಡಲು ಜಿಲ್ಲಾ ಉಸ್ತುವಾರಿ ಸಚಿವರಾದ…

8 hours ago

ಆಸ್ತಿ ವಿವರ ಮುಚ್ಚಿಟ್ಟು ಸುಳ್ಳು ಪ್ರಮಾಣಪತ್ರ ಸಲ್ಲಿಕೆ ವಿಚಾರ: ಬಾಗೇಪಲ್ಲಿ ವಿಧಾನಸಭಾ ಕ್ಷೇತ್ರ ಕಾಂಗ್ರೆಸ್​ ಶಾಸಕ ಎಸ್‌.ಎನ್‌. ಸುಬ್ಬಾರೆಡ್ಡಿ ಆಯ್ಕೆ ಅಸಿಂಧುಗೊಳಿಸಿ ಕರ್ನಾಟಕ ಹೈಕೋರ್ಟ್ ಆದೇಶ

ಬಾಗೇಪಲ್ಲಿ ಕಾಂಗ್ರೆಸ್‌ ಶಾಸಕ ಎಸ್ ಎನ್ ಸುಬ್ಬಾರೆಡ್ಡಿ ಆಯ್ಕೆ ಅಸಿಂಧು ಎಂದು ಕರ್ನಾಟಕ ಹೈಕೋರ್ಟ್‌ ಆದೇಶ ನೀಡಿದೆ. ಚುನಾವಣಾ ಆಯೋಗ…

10 hours ago

ಜೆಡಿಎಸ್ ಕಾರ್ಯಕರ್ತರನ್ನ ಮುಟ್ಟಬೇಡಿ- ಶಾಸಕ ಧೀರಜ್ ಮುನಿರಾಜುಗೆ ಜೆಡಿಎಸ್ ನೂತನ ಜಿಲ್ಲಾಧ್ಯಕ್ಷ ಖಡಕ್ ಮಾತು: ಮುಂದಿನ 20 ದಿನದೊಳಗಾಗಿ ತಾಲೂಕು ಪದಾಧಿಕಾರಿಗಳ ನೇಮಕ

ನಮ್ಮ ಕಾರ್ಯಕರ್ತರನ್ನು ಮುಟ್ಟಬೇಡಿ, ಆಸೆ ಆಮಿಷವೊಡ್ಡಿ ನಿಮ್ಮ ಪಕ್ಷಕ್ಕೆ ಸೇರಿಸಿಕೊಳ್ಳಬೇಡಿ. ನಮ್ಮ ಕಾರ್ಯಕರ್ತರನ್ನು ನಿಮ್ಮ ಪಕ್ಷಕ್ಕೆ ಸೇರಿಸುತ್ತೇವೆ ಎಂದು ಹೇಳಿಲ್ಲ.…

12 hours ago

ಮೊಬೈಲ್ ಚಾರ್ಜಿಂಗ್ ಶಾರ್ಟ್ ಸರ್ಕಿಟ್: ಮನೆಯಲ್ಲಿ ದಟ್ಟ ಹೊಗೆ: ಭಯಭೀತರಾದ ಜನ: ತಪ್ಪಿದ ಭಾರೀ ಅನಾಹುತ

ಮೊಬೈಲ್ ಚಾರ್ಜ್ ಆಗುತ್ತಿರುವಾಗ ಶಾರ್ಟ್ ಸರ್ಕಿಟ್ ಆಗಿ ಮನೆಯಲ್ಲಿ ದಟ್ಟಹೊಗೆ ಆವರಿಸಿಕೊಂಡು ಕೆಲಕಾಲ ಎಲ್ಲರಲ್ಲಿ ಆತಂಕ ಮೂಡಿಸಿದ್ದ ಘಟನೆ ದೊಡ್ಡಬಳ್ಳಾಪುರ…

17 hours ago