ಕಾಲವಾದ ಕಲಾವಿದ ಗುರುಗಳಿಗೆ ಕೃತಜ್ಞತೆಯ ನುಡಿನಮನಗಳು

ದೊಡ್ಡಬಳ್ಳಾಪುರ: ಇತ್ತೀಚೆಗಷ್ಟೇ ಹೃದಯಾಘಾತದಿಂದ ಸಾವನ್ನಪ್ಪಿದ ಹೆಸರಾಂತ ಕಲಾವಿದ ಸೂರ್ಯಕುಮಾರ್ ರವರಿಗೆ ನುಡಿ ನಮನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ
ಕರ್ನಾಟಕ ರಾಜ್ಯ ನಾಮಫಲಕ ಕಲಾವಿದರ ಸಂಘದ ರಾಜ್ಯಾಧ್ಕಕ್ಷ ಗುರುರಾಜ್ ಕೃಷ್ಣಪ್ಪ, ಹಿರಿಯ ಕಲಾವಿದರು ಸಂಘಟನೆಯ ಮಾರ್ಗದರ್ಶಕರು ಆದ ಸೂರ್ಯಕುಮಾರ್ ರವರ ಸಾವು ನಮ್ಮ ಸಂಘಟನೆ ತುಂಬಲಾರದ ನಷ್ಟ, ಸಂಘಟನೆ ಪ್ರಾರಂಭದ ದಿನಗಳಿಂದಲೂ ಸಕ್ರಿಯರಾಗಿದ್ದ ಹಿರಿಯರು ಮತ್ತು ಕಾಲಾವಿಧರ ಶ್ರೇಯೋಭಿಲಾಷಿಗಳು ನಮ್ಮಿಂದ ಭೌತಿಕವಾಗಿ ದೂರವಾದರೂ ಕಲಾವಿದರ ಬಗ್ಗೆ ಅವರಿಗಿದ್ದ ಕಾಳಜಿ ಮತ್ತು ದೇಯೋದ್ದೇಶಗಳು ಮಾತ್ರ ಜೀವಂತ ಅವರ ದೇಯೋದ್ದೇಶಗಳನ್ನು ಕಾರ್ಯರೂಪಕ್ಕೆ ತರುವುದು ನಮ್ಮ ನಿಮ್ಮೆಲ್ಲರ ಕರ್ತವ್ಯ ಎಂದರು.

ರಾಜ್ಯ ಉಪಾಧ್ಯಕ್ಷ ಚಂದ್ರಶೇಖರ್.ಡಿ.ಉಪ್ಪಾಮಾತನಾಡಿ, ತಾಲ್ಲೂಕಿನಲ್ಲಿ ದಶಕಗಳಿಂದ ನಾಮಪಲಕ ಗಳನ್ನು ಬರೆಯುತ್ತಾ,ತನ್ನ ಹೆಸರಿನ “ಎಸ್ ಕೆ ಆರ್ಟ್ಸ್,” ಎಂಬ ಅಂಗಡಿ ತೆರೆದು ವೃತ್ತಿಯನ್ನೇ ನಂಬಿ ಬಂದ ಕಾಯಕ ಯೋಗಿ ಇವರು, ಬಸವಣ್ಣ ನವರು ಜಗತ್ತಿಗೆ ಸಾರಿದಂತಹ “ಕಾಯವೇ ಕೈಲಾಸ’ ಎಂಬ ತತ್ವಸಿದ್ದಾಂತವನ್ನೇ ನಂಬಿ ಸಾರ್ಥಕತೆ ಕಂಡ ಕುಂಚ ಕಲಾವಿದ.ತಾನು ನಂಬಿದ ಕುಂಚ ಮತ್ತು ಬಣ್ಣ ದಿಂದಲ್ಲೇ ಬದುಕು ಕಟ್ಟಿಕೊಂಡು ತಾನೂ ಬೆಳೆಯತ್ತಾ ಹತ್ತಾರು ಮಂದಿ ಯುವ ಕಲಾವಿದರನ್ನೂ ಬೆಳೆಸುತ್ತಾ ಕಲಾಸೇವೆ ಮಾಡಿದ,ಹಲವರಿಗೆ ಮಾರ್ಗದರ್ಶಕ ರಾಗಿ, ಗುರುಗಳಾಗಿ ತಮ್ಮ ಬದುಕಿನಲ್ಲಿ ಸಾಕಷ್ಟು ಜನ ಕಲಾವಿದರಿಗೆ ಬದುಕು ಕಟ್ಟಿ ಕೊಟ್ಟ ಮಹಾನ್‌ ಮಾನವತಾವಾದಿ,ತಮ್ಮ ಜೀವನದಲ್ಲಿ ಸಾಕಷ್ಡ ಏರಿಳಿತಗಳನ್ನು ಕಂಡ ಕಲಾವಿದ ಸೂರ್ಯ ಕುಮಾರ್ ರವರು ಇತ್ತೀಚೆಗಷ್ಟೆ ಸ್ವರ್ಗಸ್ಥರಾಗಿದ್ದು ದೊಡ್ಡಬಳ್ಳಾಪುರ ದ ಜನತೆಗೆ ನಂಬಲಾಗದ ಸತ್ಯವಾದರೂ ನಂಬಲೇ ಬೇಕಿದೆ.ತನ್ನ ಜೀವಿತಾವಧಿಯಲ್ಲಿ , ಸಾಕಷ್ಟು ಕಷ್ಟನಷ್ಟಗಳನ್ನು ಅನುಭವಿಸಿದರೂ ಧೃತಿಗೆಡದೆ ಸಾರ್ಥಕ ಜೀವನ ನಡೆಸಿಸಿದಂತಹ ಕಲಾವಿದರು ಎಂದರೆ ತಪ್ಪಾಗಲಾರದು ಎಂದರು.

ಎಷ್ಟೇ ಕಷ್ಟ ನಷ್ಟಗಳು ಬಂದರು ತನ್ನ ಬಳಿ ಕೆಲಸ ಮಾಡುತಿದ್ದ ಕೆಲಸ ಮತ್ತು ಕಲಿಯುತಿದ್ದ ಕಲಾವಿದರನ್ನೂ ತನ್ನ ಇಬ್ಬರು ಮಕ್ಕಳಂತೆ ಅವರನ್ನೂ ಸಲುಹಿ, ಬೆಳೆಸಿದ ಸಾಹುಕಾರ ಈ ಸೂರ್ಯಕುಮಾರ್ ಕರ್ನಾಟಕ ನಾಮಫಲಕ ಕಲಾವಿದರ ಸಂಘದ ದೊಡ್ಡ ಬಳ್ಳಾಪುರ ತಾಲ್ಲೂಕಿನ ಅಧ್ಯಕ್ಷರಾಗಿ ಐದು ವರ್ಷಗಳಕಾಲ ಸೇವೆದಲ್ಲಿಸಿದ್ದರು.ತಮ್ಮ ಸೇವೆ ಯಿಂದ ಇಡೀ ರಾಜ್ಯದಲ್ಲಿ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದಲ್ಲಿ ಹೆಸರು ಪಡೆದಿದ್ದರು ಎಂದು ಹೇಳಿದರು.

ಒಟ್ಟಾರೆ ಒಬ್ಬಕಲಾವಿದರಾಗಿ ವೃತ್ತಿಯೊಂದಿಗೆ ಸಾಮಾಜಿಕ ಕಾಲಜಿಯನ್ನು ಹೊಂದಿದ್ದ ಗುರುಗಳು ನಮ್ಮಿಂದ ದೂರ ವಾದರೂ ಅವರ ಕನಸುಗಳು ನಮ್ಮೊಂದಿಗಿವೆ ಅವುಗಳನ್ನು ಖಂಡಿತವಾಗಿ ನೆರವೇರಿಸಲು ಶಕ್ತಿ ಮೀರಿ ಶ್ಮಿಸುವುದಾಗಿ ಹೇಳುತ್ತಾ ಅವರಿಗೆ ನನ್ನ ನುಡಿನಮಗಳನ್ನು ಅರ್ಪಿಸಿತ್ತೇನೆ ಎಂದರು.

ಕಾರ್ಯಕ್ರಮದಲ್ಲಿ ಕಾರ್ನಾಟಕ ರಾಜ್ಯ ನಾಮ ಫಲಕ ಕಲಾವಿದರ ಸಂಘದ ರಾಜ್ಯಾಧ್ಯಕ್ಚರಾದ ಗುರುರಾಜ್ ಕೃಷ್ಣಪ್ಪ , ಕಾರ್ಯಾಧ್ಯಕ್ಷ ರಂಗನಾಥ ಬಾಬು, ಉಪಾಧ್ಯಕ್ಷ ಚಂದ್ರಶೇಖರ್.ಡಿ. ಉಪ್ಪಾರ್, ನಿರ್ಧೇಶಕರ ಕೆ.ಜೆ.ವೆಂಕಟೇಶ್, ನಾಗಪ್ರದೀಪ್, ವಿನೋದ್ ಆಚಾರ್ಯ, ತಾಲ್ಲೂಕು ನೂತನ ಅಧ್ಯಕ್ಷ ಎಸ್.ಕೆ.ಸತೀಶ್, ಕಾರ್ಯಾಧ್ಯಕ್ಷ ವರದರಾಜ್, ಪ್ರದಾನ ಕಾರ್ಯದರ್ಶಿ ಉಮಾಶಂಕರ್, ಕಾರ್ಯದರ್ಶಿ ಸುಬ್ರಮಣಿ,ಖಂಜಾಂಚಿ ನಿಥಿನ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

Ramesh Babu

Journalist

Recent Posts

ದೇವರಾಜ ಅರಸು ಅವರ ಆಶಯಗಳಿಗೆ ಧ್ವನಿಯಾಗೋಣ-ಡಿಸಿ ಡಾ. ಕೆ.ಎನ್ ಅನುರಾಧ

ಕರ್ನಾಟಕ ಕಂಡ ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಜನಪರ ಯೋಜನೆಗಳು, ಆಶೋತ್ತರಗಳಿಗೆ ನಾವೆಲ್ಲರೂ ಧ್ವನಿಯಾಗಿ ಮುಂದಿನ…

2 minutes ago

ಅಂಗನವಾಡಿ ಕಟ್ಟಡ ಅರ್ಧಕ್ಕೆ; ಬಾಡಿಗೆ ಮನೆಯಲ್ಲಿ 30 ಕಂದಮ್ಮಗಳ ಪರದಾಟ: 17.50 ಲಕ್ಷ ವೆಚ್ಚದ ಕಾಮಗಾರಿ ಪೂರ್ಣಗೊಳಿಸದೆ ನಿರ್ಲಕ್ಷ್ಯ ಆರೋಪ

ಮನೆಯಲ್ಲಿ ಆಟವಾಡಿಕೊಂಡು ಕಾಲ ಕಳೆಯುತ್ತಿದ್ದ ಪುಟ್ಟ ಕಂದಮ್ಮಗಳನ್ನು ಪೋಷಕರು ಉತ್ತಮ ಶಿಕ್ಷಣ ದೊರೆಯಲಿ ಎಂಬ ಆಶಯದಿಂದ ಅಂಗನವಾಡಿ ಕೇಂದ್ರಕ್ಕೆ ಕಳುಹಿಸುತ್ತಿದ್ದಾರೆ.…

27 minutes ago

ಮೀಸಲಾತಿ ಘೋಷಣೆ ಬೆನ್ನಲ್ಲೇ ಗ್ರಾಮಾಂತರದಲ್ಲಿ ಚುನಾವಣಾ ಕಾವು: ಹಳ್ಳಿಗಳಲ್ಲಿ ಚುರುಕಾದ ರಾಜಕೀಯ ಚಟುವಟಿಕೆ: ಆಕಾಂಕ್ಷಿಗಳಿಂದ ಲೆಕ್ಕಾಚಾರ ಆರಂಭ

  ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗ್ರಾಮ ಪಂಚಾಯಿತಿಗಳ ಚುನಾವಣೆಗೆ ಮೀಸಲಾತಿ ಪ್ರಕಟವಾಗುತ್ತಿದ್ದಂತೆ ಗ್ರಾಮೀಣ ಭಾಗದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಯಾವ…

8 hours ago

ಹೆದ್ದಾರಿ ಸರ್ವೀಸ್ ರಸ್ತೆಗಳಲ್ಲಿ ಭಾರೀ ವಾಹನಗಳ ಅನಧಿಕೃತ ನಿಲುಗಡೆ: ಸಾರ್ವಜನಿಕರ ಜೀವದೊಂದಿಗೆ ಚೆಲ್ಲಾಟ

  ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮೂಲಕ ಹಾದುಹೋಗುವ ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಗಳ ಸರ್ವೀಸ್ ರಸ್ತೆಗಳು ದಿನದಿಂದ ದಿನಕ್ಕೆ ಭಾರಿ…

1 day ago

ಬೆಂಗಳೂರು ಗ್ರಾಮಾಂತರದಲ್ಲಿ ಕ್ಷಯರೋಗದ ಆತಂಕ: ಏಳು ತಿಂಗಳಲ್ಲಿ 26,531 ಮಂದಿಗೆ ಕಫ ಪರೀಕ್ಷೆ; 434 ಪ್ರಕರಣಗಳು ಪತ್ತೆ, 530 ಸಕ್ರಿಯ ರೋಗಿಗಳು

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕ್ಷಯರೋಗ (ಟಿಬಿ) ನಿಯಂತ್ರಣಕ್ಕೆ ಆರೋಗ್ಯ ಇಲಾಖೆ ಹಲವು ಹಂತಗಳಲ್ಲಿ ತಪಾಸಣೆ ಹಾಗೂ ಚಿಕಿತ್ಸಾ ಕ್ರಮಗಳನ್ನು ಕೈಗೊಂಡಿದ್ದರೂ,…

2 days ago

ಘಾಟಿ ಕ್ಷೇತ್ರದಲ್ಲಿ ನಾಗರ ಪಂಚಮಿ ಸಂಭ್ರಮ

ದೊಡ್ಡಬಳ್ಳಾಪುರ: ನಾಗರಾಧನೆಗೆ ಪ್ರಸಿದ್ಧವಾಗಿರುವ ತಾಲೂಕಿನ ಘಾಟಿ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಸೋಮವಾರ ನಾಗರ ಪಂಚಮಿ ಹಬ್ಬವನ್ನು ಭಕ್ತಿಭಾವದಿಂದ ಆಚರಿಸಲಾಯಿತು. ನಾಗರ ಪಂಚಮಿ…

3 days ago