ಕಾಲವಾದ ಕಲಾವಿದ ಗುರುಗಳಿಗೆ ಕೃತಜ್ಞತೆಯ ನುಡಿನಮನಗಳು

ದೊಡ್ಡಬಳ್ಳಾಪುರ: ಇತ್ತೀಚೆಗಷ್ಟೇ ಹೃದಯಾಘಾತದಿಂದ ಸಾವನ್ನಪ್ಪಿದ ಹೆಸರಾಂತ ಕಲಾವಿದ ಸೂರ್ಯಕುಮಾರ್ ರವರಿಗೆ ನುಡಿ ನಮನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ
ಕರ್ನಾಟಕ ರಾಜ್ಯ ನಾಮಫಲಕ ಕಲಾವಿದರ ಸಂಘದ ರಾಜ್ಯಾಧ್ಕಕ್ಷ ಗುರುರಾಜ್ ಕೃಷ್ಣಪ್ಪ, ಹಿರಿಯ ಕಲಾವಿದರು ಸಂಘಟನೆಯ ಮಾರ್ಗದರ್ಶಕರು ಆದ ಸೂರ್ಯಕುಮಾರ್ ರವರ ಸಾವು ನಮ್ಮ ಸಂಘಟನೆ ತುಂಬಲಾರದ ನಷ್ಟ, ಸಂಘಟನೆ ಪ್ರಾರಂಭದ ದಿನಗಳಿಂದಲೂ ಸಕ್ರಿಯರಾಗಿದ್ದ ಹಿರಿಯರು ಮತ್ತು ಕಾಲಾವಿಧರ ಶ್ರೇಯೋಭಿಲಾಷಿಗಳು ನಮ್ಮಿಂದ ಭೌತಿಕವಾಗಿ ದೂರವಾದರೂ ಕಲಾವಿದರ ಬಗ್ಗೆ ಅವರಿಗಿದ್ದ ಕಾಳಜಿ ಮತ್ತು ದೇಯೋದ್ದೇಶಗಳು ಮಾತ್ರ ಜೀವಂತ ಅವರ ದೇಯೋದ್ದೇಶಗಳನ್ನು ಕಾರ್ಯರೂಪಕ್ಕೆ ತರುವುದು ನಮ್ಮ ನಿಮ್ಮೆಲ್ಲರ ಕರ್ತವ್ಯ ಎಂದರು.

ರಾಜ್ಯ ಉಪಾಧ್ಯಕ್ಷ ಚಂದ್ರಶೇಖರ್.ಡಿ.ಉಪ್ಪಾಮಾತನಾಡಿ, ತಾಲ್ಲೂಕಿನಲ್ಲಿ ದಶಕಗಳಿಂದ ನಾಮಪಲಕ ಗಳನ್ನು ಬರೆಯುತ್ತಾ,ತನ್ನ ಹೆಸರಿನ “ಎಸ್ ಕೆ ಆರ್ಟ್ಸ್,” ಎಂಬ ಅಂಗಡಿ ತೆರೆದು ವೃತ್ತಿಯನ್ನೇ ನಂಬಿ ಬಂದ ಕಾಯಕ ಯೋಗಿ ಇವರು, ಬಸವಣ್ಣ ನವರು ಜಗತ್ತಿಗೆ ಸಾರಿದಂತಹ “ಕಾಯವೇ ಕೈಲಾಸ’ ಎಂಬ ತತ್ವಸಿದ್ದಾಂತವನ್ನೇ ನಂಬಿ ಸಾರ್ಥಕತೆ ಕಂಡ ಕುಂಚ ಕಲಾವಿದ.ತಾನು ನಂಬಿದ ಕುಂಚ ಮತ್ತು ಬಣ್ಣ ದಿಂದಲ್ಲೇ ಬದುಕು ಕಟ್ಟಿಕೊಂಡು ತಾನೂ ಬೆಳೆಯತ್ತಾ ಹತ್ತಾರು ಮಂದಿ ಯುವ ಕಲಾವಿದರನ್ನೂ ಬೆಳೆಸುತ್ತಾ ಕಲಾಸೇವೆ ಮಾಡಿದ,ಹಲವರಿಗೆ ಮಾರ್ಗದರ್ಶಕ ರಾಗಿ, ಗುರುಗಳಾಗಿ ತಮ್ಮ ಬದುಕಿನಲ್ಲಿ ಸಾಕಷ್ಟು ಜನ ಕಲಾವಿದರಿಗೆ ಬದುಕು ಕಟ್ಟಿ ಕೊಟ್ಟ ಮಹಾನ್‌ ಮಾನವತಾವಾದಿ,ತಮ್ಮ ಜೀವನದಲ್ಲಿ ಸಾಕಷ್ಡ ಏರಿಳಿತಗಳನ್ನು ಕಂಡ ಕಲಾವಿದ ಸೂರ್ಯ ಕುಮಾರ್ ರವರು ಇತ್ತೀಚೆಗಷ್ಟೆ ಸ್ವರ್ಗಸ್ಥರಾಗಿದ್ದು ದೊಡ್ಡಬಳ್ಳಾಪುರ ದ ಜನತೆಗೆ ನಂಬಲಾಗದ ಸತ್ಯವಾದರೂ ನಂಬಲೇ ಬೇಕಿದೆ.ತನ್ನ ಜೀವಿತಾವಧಿಯಲ್ಲಿ , ಸಾಕಷ್ಟು ಕಷ್ಟನಷ್ಟಗಳನ್ನು ಅನುಭವಿಸಿದರೂ ಧೃತಿಗೆಡದೆ ಸಾರ್ಥಕ ಜೀವನ ನಡೆಸಿಸಿದಂತಹ ಕಲಾವಿದರು ಎಂದರೆ ತಪ್ಪಾಗಲಾರದು ಎಂದರು.

ಎಷ್ಟೇ ಕಷ್ಟ ನಷ್ಟಗಳು ಬಂದರು ತನ್ನ ಬಳಿ ಕೆಲಸ ಮಾಡುತಿದ್ದ ಕೆಲಸ ಮತ್ತು ಕಲಿಯುತಿದ್ದ ಕಲಾವಿದರನ್ನೂ ತನ್ನ ಇಬ್ಬರು ಮಕ್ಕಳಂತೆ ಅವರನ್ನೂ ಸಲುಹಿ, ಬೆಳೆಸಿದ ಸಾಹುಕಾರ ಈ ಸೂರ್ಯಕುಮಾರ್ ಕರ್ನಾಟಕ ನಾಮಫಲಕ ಕಲಾವಿದರ ಸಂಘದ ದೊಡ್ಡ ಬಳ್ಳಾಪುರ ತಾಲ್ಲೂಕಿನ ಅಧ್ಯಕ್ಷರಾಗಿ ಐದು ವರ್ಷಗಳಕಾಲ ಸೇವೆದಲ್ಲಿಸಿದ್ದರು.ತಮ್ಮ ಸೇವೆ ಯಿಂದ ಇಡೀ ರಾಜ್ಯದಲ್ಲಿ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದಲ್ಲಿ ಹೆಸರು ಪಡೆದಿದ್ದರು ಎಂದು ಹೇಳಿದರು.

ಒಟ್ಟಾರೆ ಒಬ್ಬಕಲಾವಿದರಾಗಿ ವೃತ್ತಿಯೊಂದಿಗೆ ಸಾಮಾಜಿಕ ಕಾಲಜಿಯನ್ನು ಹೊಂದಿದ್ದ ಗುರುಗಳು ನಮ್ಮಿಂದ ದೂರ ವಾದರೂ ಅವರ ಕನಸುಗಳು ನಮ್ಮೊಂದಿಗಿವೆ ಅವುಗಳನ್ನು ಖಂಡಿತವಾಗಿ ನೆರವೇರಿಸಲು ಶಕ್ತಿ ಮೀರಿ ಶ್ಮಿಸುವುದಾಗಿ ಹೇಳುತ್ತಾ ಅವರಿಗೆ ನನ್ನ ನುಡಿನಮಗಳನ್ನು ಅರ್ಪಿಸಿತ್ತೇನೆ ಎಂದರು.

ಕಾರ್ಯಕ್ರಮದಲ್ಲಿ ಕಾರ್ನಾಟಕ ರಾಜ್ಯ ನಾಮ ಫಲಕ ಕಲಾವಿದರ ಸಂಘದ ರಾಜ್ಯಾಧ್ಯಕ್ಚರಾದ ಗುರುರಾಜ್ ಕೃಷ್ಣಪ್ಪ , ಕಾರ್ಯಾಧ್ಯಕ್ಷ ರಂಗನಾಥ ಬಾಬು, ಉಪಾಧ್ಯಕ್ಷ ಚಂದ್ರಶೇಖರ್.ಡಿ. ಉಪ್ಪಾರ್, ನಿರ್ಧೇಶಕರ ಕೆ.ಜೆ.ವೆಂಕಟೇಶ್, ನಾಗಪ್ರದೀಪ್, ವಿನೋದ್ ಆಚಾರ್ಯ, ತಾಲ್ಲೂಕು ನೂತನ ಅಧ್ಯಕ್ಷ ಎಸ್.ಕೆ.ಸತೀಶ್, ಕಾರ್ಯಾಧ್ಯಕ್ಷ ವರದರಾಜ್, ಪ್ರದಾನ ಕಾರ್ಯದರ್ಶಿ ಉಮಾಶಂಕರ್, ಕಾರ್ಯದರ್ಶಿ ಸುಬ್ರಮಣಿ,ಖಂಜಾಂಚಿ ನಿಥಿನ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

Ramesh Babu

Journalist

Recent Posts

ಯೂರಿಯಾ ಖರೀದಿಗೆ ಎಫ್‌ಐಡಿ ಕಡ್ಡಾಯ: ಎಕರೆಗೆ ತಿಂಗಳಿಗೆ ಒಂದು ಬ್ಯಾಗ್ ವಿತರಣೆ

ಬೆಂಗಳೂರು ಗ್ರಾಮಾಂತರ: ಮುಂಗಾರು ಕೃಷಿ ಚಟುವಟಿಕೆಗಳು ಚುರುಕುಗೊಂಡಿರುವ ನಡುವೆಯೇ ರೈತರಿಗೆ ಯೂರಿಯಾ ರಸಗೊಬ್ಬರ ವಿತರಣೆಯಲ್ಲಿ ಹೊಸ ನಿಯಮ ಜಾರಿಯಾಗಿದೆ. ಯೂರಿಯಾ…

7 hours ago

ಒಂದೇ ರಾತ್ರಿ ಎರಡು ಕಡೆ ಶ್ರೀಗಂಧದ ಮರಗಳ ಕಳವು

ದೊಡ್ಡಬಳ್ಳಾಪುರ: ಒಂದೇ ರಾತ್ರಿ ಎರಡು ಸ್ಥಳಗಳಲ್ಲಿ ಶ್ರೀಗಂಧದ ಮರಗಳನ್ನು ಕಳ್ಳರು ಕತ್ತರಿಸಿ ಕದ್ದೊಯ್ದಿರುವ ಘಟನೆ ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣಾ…

17 hours ago

ಬೈಕ್‌ಗೆ ಟಿಟಿ ವಾಹನ ಡಿಕ್ಕಿ ಪ್ರಕರಣ: ಇಬ್ಬರು ಯುವತಿಯರ ದುರ್ಮರಣ – ಮೃತರ ಕಣ್ಣು ದಾನ ಮಾಡಿ ಸಾರ್ಥಕತೆ ಮೆರೆದ ಕುಟುಂಬಸ್ಥರು

ದೊಡ್ಡಬಳ್ಳಾಪುರ: ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದ ಓಬದೇನಹಳ್ಳಿ ರಸ್ತೆಯ ಕಾಂತಿ ಸ್ವೀಟ್ಸ್ ಮುಂಭಾಗ ಸೋಮವಾರ ಬೆಳಗ್ಗೆ ಸಂಭವಿಸಿದ ಭೀಕರ ರಸ್ತೆ…

19 hours ago

ಬೈಕ್ ಗೆ ಟಿಟಿ ವಾಹನ ಡಿಕ್ಕಿ: ಮಹಿಳೆ ಸಾವು: ಮತ್ತೋರ್ವ ಯುವತಿಗೆ ಗಂಭೀರ ಗಾಯ

ಬಾಶೆಟ್ಟಿಹಳ್ಳಿ ಬಳಿ ಭೀಕರ ಅಪಘಾತವಾಗಿ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮತ್ತೋರ್ವ ಯುವತಿಗೆ ಗಂಭೀರವಾಗಿ ಗಾಯಗೊಂಡಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ‌ ಬಾಶೆಟ್ಟಿಹಳ್ಳಿ ಕೈಗಾರಿಕಾ…

24 hours ago

ಹೆಣ್ಣು ಕೊಟ್ಟ ಮಾವನನ್ನೇ ಕೊಲೆಗೈದ ಅಳಿಯ

ದೊಡ್ಡಬಳ್ಳಾಪುರ: ಕ್ಷುಲ್ಲಕ ಕಾರಣಕ್ಕೆ ಹೆಣ್ಣು ಕೊಟ್ಟ ಮಾವನನ್ನೇ ಅಳಿಯ ಕೊಲೆಗೈದ ಘಟನೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ನೇರಳೇಘಟ್ಟ…

1 day ago

ಕರ್ನಾಟಕದ ಮುಖ್ಯಮಂತ್ರಿ  ಡಿಕೆ ಶಿವಕುಮಾರ್ ಅವರಿಗೊಂದು ಬಹಿರಂಗ ಪತ್ರ..

ಗೌರವಾನ್ವಿತ ಮುಖ್ಯಮಂತ್ರಿ ಶ್ರೀ ಡಿಕೆ ಶಿವಕುಮಾರ್ ಅವರೇ, ಪ್ರಜಾಪ್ರಭುತ್ವ ಎಂಬ ಪರಿಕಲ್ಪನೆಯ ಅತ್ಯದ್ಭುತ ಫಲಿತಾಂಶವೆಂದರೆ ಯಾವುದೋ ಹಳ್ಳಿಯಲ್ಲಿ, ಎಲ್ಲಿಯೋ ಹುಟ್ಟಿದ…

1 day ago