ಕಾಲಿಗೆ ಬ್ಯಾಂಡೇಜ್ ಸುತ್ತಿ ಬ್ಯಾಂಡೇಜ್ ನೊಳಗೆ ಮರೆಮಾಚಿ ಚಿನ್ನ ಸಾಗಣೆ: 43 ಲಕ್ಷ ಮೌಲ್ಯದ 700 ಗ್ರಾಂ ಚಿನ್ನ ಕಸ್ಟಮ್ಸ್ ವಶಕ್ಕೆ

ಕಾಲಿಗೆ ಮೆಡಿಕಲ್ ಬ್ಯಾಂಡೇಜ್ ನಂತೆ ಸುತ್ತಿ, ಅದರೊಳಗೆ ಮರೆಮಾಚಿ ಚಿನ್ನ ಕಳ್ಳಸಾಗಣಿಕೆಗೆ ಯತ್ನಿಸಿದ ಪ್ರಯಾಣಿಕ ಬೆಂಗಳೂರು ಕಸ್ಟಮ್ಸ್ ಅಧಿಕಾರಿಗಳಿಗೆ ಸಿಕ್ಕಿಬಿದ್ದಿದ್ದಾನೆ, ಆರೋಪಿಯಿಂದ 43 ಲಕ್ಷ ಮೌಲ್ಯದ 700 ಗ್ರಾಂ ಚಿನ್ನವನ್ನ ವಶಕ್ಕೆ ಪಡೆಯಲಾಗಿದೆ.

ಮೇ 21 ರಂದು ಬ್ಯಾಂಕಾಕ್ ನಿಂದ ದೇವನಹಳ್ಳಿಯ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಪ್ರಯಾಣಿಕ ಬಂದಿಳಿದ್ದಿದ್ದು, ಪ್ರಯಾಣಿಕನ ಚಲನವಲನಗಳನ್ನು ಹಾಗೂ ಪ್ರಯಾಣಿಕನ ಹಿನ್ನೆಲೆಯ ಮಾಹಿತಿ ಕಲೆಹಾಕಿದ ಕಂದಾಯ ಗುಪ್ತಚಾರ ನಿರ್ದೇಶನಾಲಯ (DRI) ಮತ್ತು ಆದಾಯ ತೆರಿಗೆ ಏರ್ ಇಂಟೆಲಿಜೆನ್ಸ್ ಯೂನಿಟ್ (AIU) ಅಧಿಕಾರಿಗಳಿಗೆ ಸಂಶಯ ಮೂಡಿದೆ.

ಕೂಡಲೇ ಬೆಂಗಳೂರು ಕಸ್ಟಮ್ಸ್ ಅಧಿಕಾರಿಗಳಿಗೆ ಮಾಹಿತಿಯನ್ನ ನೀಡಿದ್ದಾರೆ, ವಿಚಾರಣೆಗಾಗಿ ಆರೋಪಿತ ಪ್ರಯಾಣಿಕನನ್ನ ಬೆಂಗಳೂರು ಕಸ್ಟಮ್ಸ್ ಅಧಿಕಾರಿಗಳು ವಶಕ್ಕೆ ಪಡಿದ್ದಾರೆ, ತಪಾಸಣೆ ನಡೆಸಿದ್ದಾಗ ಆರೋಪಿ ತನ್ನ ಕಾಲಿಗೆ ಮೆಡಿಕಲ್ ಟೇಪ್ ಸುತ್ತಿಗೊಂಡಿದ್ದ, ಅದರೊಳಗೆ ಮರೆಮಾಚಿ ಚಿನ್ನವನ್ನ ಅಡಗಿಸಿಟ್ಟಿದ್ದ, ಆತನಿಂದ 700 ಗ್ರಾಂ ತೂಕದ 43,65,291 ರೂಪಾಯಿ ಮೌಲ್ಯದ ಎರಡು ಚಿನ್ನದ ಬಿಸ್ಕತ್ತು ಮತ್ತು ಚಿನ್ನದ ಚೈನ್ ವಶಕ್ಕೆ ಪಡೆಯಲಾಗಿದೆ. ಹೆಚ್ಚಿನ ವಿಚಾರಣೆಯನ್ನ ಅಧಿಕಾರಿಗಳು ಮುಂದುವರೆಸಿದ್ದಾರೆ.

ಕೈ ಕಡಗಕ್ಕೆ ರೇಡಿಯಮ್ ಲೇಪಿಸಿ ಚಿನ್ನ ಕಳ್ಳಸಾಗಣೆ

ಮೇ 20 ರಂದು ಬ್ಯಾಂಕಾಕ್ ನಿಂದ ದೇವನಹಳ್ಳಿ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದ ಪ್ರಯಾಣಿಕನ ಮೇಲೆ ಸಂಶಯ ಬಂದ ಹಿನ್ನಲೆ, ಬೆಂಗಳೂರು ಕಸ್ಟಮ್ಸ್ ಅಧಿಕಾರಿಗಳು ಆತನನ್ನ ವಶಕ್ಕೆ ಪಡೆದು ತಪಾಸಣೆ ನಡೆಸಿದ್ದಾಗ, ಪ್ರಯಾಣಿಕನ ಬಳಿ ಕೈ ಕಡಗ ಪತ್ತೆಯಾಗಿದೆ, ಚಿನ್ನದ ಕಡಗಕ್ಕೆ ರೇಡಿಯಮ್ ಲೇಪಿಸಿ ಕಳ್ಳ ಸಾಗಣಿಕೆಗೆ ಯತ್ನಸಿದ್ದ, ಆರೋಪಿಯಿಂದ 499.87 ಗ್ರಾಂ ತೂಕದ 31,14,190 ರೂಪಾಯಿ ಮೌಲ್ಯ ಚಿನ್ನ ವಶಕ್ಕೆ ಪಡೆಯಲಾಗಿತ್ತು.

Ramesh Babu

Journalist

Recent Posts

ಜಿಲ್ಲಾ ಮಟ್ಟದ ಕೈಗಾರಿಕಾ ಸಂವಾದ ಸಭೆ: ಸ್ಥಳೀಯರಿಗೆ ಉದ್ಯೋಗಾವಕಾಶ ಮೊದಲ ಆದ್ಯತೆ ಆಗಲಿ- ಸಚಿವ ಕೆ.ಎಚ್ ಮುನಿಯಪ್ಪ

ಕಂಪನಿಗಳಲ್ಲಿ ಖಾಲಿ ಇರುವ ಹುದ್ದೆಗಳ ನೇಮಕ ಮಾಡಿಕೊಳ್ಳುವ ಸಂದರ್ಭದಲ್ಲಿ ಸ್ಥಳೀಯ ಅಭ್ಯರ್ಥಿಗಳಿಗೆ ಮೊದಲ ಆದ್ಯತೆ ನೀಡಲು ಜಿಲ್ಲಾ ಉಸ್ತುವಾರಿ ಸಚಿವರಾದ…

2 hours ago

ಜೆಡಿಎಸ್ ಕಾರ್ಯಕರ್ತರನ್ನ ಮುಟ್ಟಬೇಡಿ- ಶಾಸಕ ಧೀರಜ್ ಮುನಿರಾಜುಗೆ ಜೆಡಿಎಸ್ ನೂತನ ಜಿಲ್ಲಾಧ್ಯಕ್ಷ ಖಡಕ್ ಮಾತು: ಮುಂದಿನ 20 ದಿನದೊಳಗಾಗಿ ತಾಲೂಕು ಪದಾಧಿಕಾರಿಗಳ ನೇಮಕ

ನಮ್ಮ ಕಾರ್ಯಕರ್ತರನ್ನು ಮುಟ್ಟಬೇಡಿ, ಆಸೆ ಆಮಿಷವೊಡ್ಡಿ ನಿಮ್ಮ ಪಕ್ಷಕ್ಕೆ ಸೇರಿಸಿಕೊಳ್ಳಬೇಡಿ. ನಮ್ಮ ಕಾರ್ಯಕರ್ತರನ್ನು ನಿಮ್ಮ ಪಕ್ಷಕ್ಕೆ ಸೇರಿಸುತ್ತೇವೆ ಎಂದು ಹೇಳಿಲ್ಲ.…

6 hours ago

ಮೊಬೈಲ್ ಚಾರ್ಜಿಂಗ್ ಶಾರ್ಟ್ ಸರ್ಕಿಟ್: ಮನೆಯಲ್ಲಿ ದಟ್ಟ ಹೊಗೆ: ಭಯಭೀತರಾದ ಜನ: ತಪ್ಪಿದ ಭಾರೀ ಅನಾಹುತ

ಮೊಬೈಲ್ ಚಾರ್ಜ್ ಆಗುತ್ತಿರುವಾಗ ಶಾರ್ಟ್ ಸರ್ಕಿಟ್ ಆಗಿ ಮನೆಯಲ್ಲಿ ದಟ್ಟಹೊಗೆ ಆವರಿಸಿಕೊಂಡು ಕೆಲಕಾಲ ಎಲ್ಲರಲ್ಲಿ ಆತಂಕ ಮೂಡಿಸಿದ್ದ ಘಟನೆ ದೊಡ್ಡಬಳ್ಳಾಪುರ…

11 hours ago

ವೈಚಾರಿಕ ( ವೈಜ್ಞಾನಿಕ ) ಅಧ್ಯಾತ್ಮ………

ಅಧ್ಯಾತ್ಮ ಮತ್ತು ಸದ್ಗುರು ಜಗ್ಗಿ ವಾಸುದೇವ್........ ಇತ್ತೀಚಿನ ವರ್ಷಗಳಲ್ಲಿ ಹೆಚ್ಚು ಜನಪ್ರಿಯರಾದ ಅಧ್ಯಾತ್ಮ ಗುರು. ಅಧ್ಯಾತ್ಮಿಕ ಚಿಂತಕರಲ್ಲಿ ವಿವಿಧ ರೀತಿಯ…

12 hours ago

ಐಸಿಸಿ ಟಿ-20 ವಿಶ್ವಕಪ್ ಟೂರ್ನಿ: ಪಾಕಿಸ್ತಾನ ತಂಡವನ್ನು 61 ರನ್ ಗಳಿಂದ ಬಗ್ಗುಬಡಿದ ಭಾರತ: ದೇಶದ ಜನತೆಗೆ ಮಹಾಶಿವರಾತ್ರಿ ಗಿಫ್ಟ್

ಕೊಲಂಬೊದ ಪ್ರೇಮದಾಸ ಕ್ರೀಡಾಂಗಣದಲ್ಲಿ ಭಾನುವಾರ ನಡೆದ ಐಸಿಸಿ ಟಿ-20 ವಿಶ್ವಕಪ್ ಟೂರ್ನಿಯ ಗ್ರೂಪ್ ಹಂತದ ಪಂದ್ಯದಲ್ಲಿ ಪಾಕಿಸ್ತಾನ ತಂಡವನ್ನು ಭಾರತ…

13 hours ago