ಕಾಲಿಗೆ ಮೆಡಿಕಲ್ ಬ್ಯಾಂಡೇಜ್ ನಂತೆ ಸುತ್ತಿ, ಅದರೊಳಗೆ ಮರೆಮಾಚಿ ಚಿನ್ನ ಕಳ್ಳಸಾಗಣಿಕೆಗೆ ಯತ್ನಿಸಿದ ಪ್ರಯಾಣಿಕ ಬೆಂಗಳೂರು ಕಸ್ಟಮ್ಸ್ ಅಧಿಕಾರಿಗಳಿಗೆ ಸಿಕ್ಕಿಬಿದ್ದಿದ್ದಾನೆ, ಆರೋಪಿಯಿಂದ 43 ಲಕ್ಷ ಮೌಲ್ಯದ 700 ಗ್ರಾಂ ಚಿನ್ನವನ್ನ ವಶಕ್ಕೆ ಪಡೆಯಲಾಗಿದೆ.
ಮೇ 21 ರಂದು ಬ್ಯಾಂಕಾಕ್ ನಿಂದ ದೇವನಹಳ್ಳಿಯ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಪ್ರಯಾಣಿಕ ಬಂದಿಳಿದ್ದಿದ್ದು, ಪ್ರಯಾಣಿಕನ ಚಲನವಲನಗಳನ್ನು ಹಾಗೂ ಪ್ರಯಾಣಿಕನ ಹಿನ್ನೆಲೆಯ ಮಾಹಿತಿ ಕಲೆಹಾಕಿದ ಕಂದಾಯ ಗುಪ್ತಚಾರ ನಿರ್ದೇಶನಾಲಯ (DRI) ಮತ್ತು ಆದಾಯ ತೆರಿಗೆ ಏರ್ ಇಂಟೆಲಿಜೆನ್ಸ್ ಯೂನಿಟ್ (AIU) ಅಧಿಕಾರಿಗಳಿಗೆ ಸಂಶಯ ಮೂಡಿದೆ.
ಕೂಡಲೇ ಬೆಂಗಳೂರು ಕಸ್ಟಮ್ಸ್ ಅಧಿಕಾರಿಗಳಿಗೆ ಮಾಹಿತಿಯನ್ನ ನೀಡಿದ್ದಾರೆ, ವಿಚಾರಣೆಗಾಗಿ ಆರೋಪಿತ ಪ್ರಯಾಣಿಕನನ್ನ ಬೆಂಗಳೂರು ಕಸ್ಟಮ್ಸ್ ಅಧಿಕಾರಿಗಳು ವಶಕ್ಕೆ ಪಡಿದ್ದಾರೆ, ತಪಾಸಣೆ ನಡೆಸಿದ್ದಾಗ ಆರೋಪಿ ತನ್ನ ಕಾಲಿಗೆ ಮೆಡಿಕಲ್ ಟೇಪ್ ಸುತ್ತಿಗೊಂಡಿದ್ದ, ಅದರೊಳಗೆ ಮರೆಮಾಚಿ ಚಿನ್ನವನ್ನ ಅಡಗಿಸಿಟ್ಟಿದ್ದ, ಆತನಿಂದ 700 ಗ್ರಾಂ ತೂಕದ 43,65,291 ರೂಪಾಯಿ ಮೌಲ್ಯದ ಎರಡು ಚಿನ್ನದ ಬಿಸ್ಕತ್ತು ಮತ್ತು ಚಿನ್ನದ ಚೈನ್ ವಶಕ್ಕೆ ಪಡೆಯಲಾಗಿದೆ. ಹೆಚ್ಚಿನ ವಿಚಾರಣೆಯನ್ನ ಅಧಿಕಾರಿಗಳು ಮುಂದುವರೆಸಿದ್ದಾರೆ.
ಕೈ ಕಡಗಕ್ಕೆ ರೇಡಿಯಮ್ ಲೇಪಿಸಿ ಚಿನ್ನ ಕಳ್ಳಸಾಗಣೆ
ಮೇ 20 ರಂದು ಬ್ಯಾಂಕಾಕ್ ನಿಂದ ದೇವನಹಳ್ಳಿ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದ ಪ್ರಯಾಣಿಕನ ಮೇಲೆ ಸಂಶಯ ಬಂದ ಹಿನ್ನಲೆ, ಬೆಂಗಳೂರು ಕಸ್ಟಮ್ಸ್ ಅಧಿಕಾರಿಗಳು ಆತನನ್ನ ವಶಕ್ಕೆ ಪಡೆದು ತಪಾಸಣೆ ನಡೆಸಿದ್ದಾಗ, ಪ್ರಯಾಣಿಕನ ಬಳಿ ಕೈ ಕಡಗ ಪತ್ತೆಯಾಗಿದೆ, ಚಿನ್ನದ ಕಡಗಕ್ಕೆ ರೇಡಿಯಮ್ ಲೇಪಿಸಿ ಕಳ್ಳ ಸಾಗಣಿಕೆಗೆ ಯತ್ನಸಿದ್ದ, ಆರೋಪಿಯಿಂದ 499.87 ಗ್ರಾಂ ತೂಕದ 31,14,190 ರೂಪಾಯಿ ಮೌಲ್ಯ ಚಿನ್ನ ವಶಕ್ಕೆ ಪಡೆಯಲಾಗಿತ್ತು.
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಲಾಗಿದೆ. ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರನ್ನು ಅಧ್ಯಕ್ಷರಾಗಿ,…
ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…
ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…
ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…
80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ಆಡಳಿತ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು.…
ಗ್ರಾಮೀಣರಿಗೆ ಸ್ಥಳೀಯವಾಗಿ ಉದ್ಯೋಗ ಒದಗಿಸುವ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಯೋಜನೆಯಡಿ (ವಿಬಿ…