ಕಾಲಿಗೆ ಬ್ಯಾಂಡೇಜ್ ಸುತ್ತಿ ಬ್ಯಾಂಡೇಜ್ ನೊಳಗೆ ಮರೆಮಾಚಿ ಚಿನ್ನ ಸಾಗಣೆ: 43 ಲಕ್ಷ ಮೌಲ್ಯದ 700 ಗ್ರಾಂ ಚಿನ್ನ ಕಸ್ಟಮ್ಸ್ ವಶಕ್ಕೆ

ಕಾಲಿಗೆ ಮೆಡಿಕಲ್ ಬ್ಯಾಂಡೇಜ್ ನಂತೆ ಸುತ್ತಿ, ಅದರೊಳಗೆ ಮರೆಮಾಚಿ ಚಿನ್ನ ಕಳ್ಳಸಾಗಣಿಕೆಗೆ ಯತ್ನಿಸಿದ ಪ್ರಯಾಣಿಕ ಬೆಂಗಳೂರು ಕಸ್ಟಮ್ಸ್ ಅಧಿಕಾರಿಗಳಿಗೆ ಸಿಕ್ಕಿಬಿದ್ದಿದ್ದಾನೆ, ಆರೋಪಿಯಿಂದ 43 ಲಕ್ಷ ಮೌಲ್ಯದ 700 ಗ್ರಾಂ ಚಿನ್ನವನ್ನ ವಶಕ್ಕೆ ಪಡೆಯಲಾಗಿದೆ.

ಮೇ 21 ರಂದು ಬ್ಯಾಂಕಾಕ್ ನಿಂದ ದೇವನಹಳ್ಳಿಯ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಪ್ರಯಾಣಿಕ ಬಂದಿಳಿದ್ದಿದ್ದು, ಪ್ರಯಾಣಿಕನ ಚಲನವಲನಗಳನ್ನು ಹಾಗೂ ಪ್ರಯಾಣಿಕನ ಹಿನ್ನೆಲೆಯ ಮಾಹಿತಿ ಕಲೆಹಾಕಿದ ಕಂದಾಯ ಗುಪ್ತಚಾರ ನಿರ್ದೇಶನಾಲಯ (DRI) ಮತ್ತು ಆದಾಯ ತೆರಿಗೆ ಏರ್ ಇಂಟೆಲಿಜೆನ್ಸ್ ಯೂನಿಟ್ (AIU) ಅಧಿಕಾರಿಗಳಿಗೆ ಸಂಶಯ ಮೂಡಿದೆ.

ಕೂಡಲೇ ಬೆಂಗಳೂರು ಕಸ್ಟಮ್ಸ್ ಅಧಿಕಾರಿಗಳಿಗೆ ಮಾಹಿತಿಯನ್ನ ನೀಡಿದ್ದಾರೆ, ವಿಚಾರಣೆಗಾಗಿ ಆರೋಪಿತ ಪ್ರಯಾಣಿಕನನ್ನ ಬೆಂಗಳೂರು ಕಸ್ಟಮ್ಸ್ ಅಧಿಕಾರಿಗಳು ವಶಕ್ಕೆ ಪಡಿದ್ದಾರೆ, ತಪಾಸಣೆ ನಡೆಸಿದ್ದಾಗ ಆರೋಪಿ ತನ್ನ ಕಾಲಿಗೆ ಮೆಡಿಕಲ್ ಟೇಪ್ ಸುತ್ತಿಗೊಂಡಿದ್ದ, ಅದರೊಳಗೆ ಮರೆಮಾಚಿ ಚಿನ್ನವನ್ನ ಅಡಗಿಸಿಟ್ಟಿದ್ದ, ಆತನಿಂದ 700 ಗ್ರಾಂ ತೂಕದ 43,65,291 ರೂಪಾಯಿ ಮೌಲ್ಯದ ಎರಡು ಚಿನ್ನದ ಬಿಸ್ಕತ್ತು ಮತ್ತು ಚಿನ್ನದ ಚೈನ್ ವಶಕ್ಕೆ ಪಡೆಯಲಾಗಿದೆ. ಹೆಚ್ಚಿನ ವಿಚಾರಣೆಯನ್ನ ಅಧಿಕಾರಿಗಳು ಮುಂದುವರೆಸಿದ್ದಾರೆ.

ಕೈ ಕಡಗಕ್ಕೆ ರೇಡಿಯಮ್ ಲೇಪಿಸಿ ಚಿನ್ನ ಕಳ್ಳಸಾಗಣೆ

ಮೇ 20 ರಂದು ಬ್ಯಾಂಕಾಕ್ ನಿಂದ ದೇವನಹಳ್ಳಿ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದ ಪ್ರಯಾಣಿಕನ ಮೇಲೆ ಸಂಶಯ ಬಂದ ಹಿನ್ನಲೆ, ಬೆಂಗಳೂರು ಕಸ್ಟಮ್ಸ್ ಅಧಿಕಾರಿಗಳು ಆತನನ್ನ ವಶಕ್ಕೆ ಪಡೆದು ತಪಾಸಣೆ ನಡೆಸಿದ್ದಾಗ, ಪ್ರಯಾಣಿಕನ ಬಳಿ ಕೈ ಕಡಗ ಪತ್ತೆಯಾಗಿದೆ, ಚಿನ್ನದ ಕಡಗಕ್ಕೆ ರೇಡಿಯಮ್ ಲೇಪಿಸಿ ಕಳ್ಳ ಸಾಗಣಿಕೆಗೆ ಯತ್ನಸಿದ್ದ, ಆರೋಪಿಯಿಂದ 499.87 ಗ್ರಾಂ ತೂಕದ 31,14,190 ರೂಪಾಯಿ ಮೌಲ್ಯ ಚಿನ್ನ ವಶಕ್ಕೆ ಪಡೆಯಲಾಗಿತ್ತು.

Ramesh Babu

Journalist

Recent Posts

ಅಯೋಧ್ಯೆಯಲ್ಲಿ ಆರ್‌ಎಸ್‌ಎಸ್‌, ಬಿಜೆಪಿ ಪರವಾಗಿರುವವರಿಂದಲೇ ಲೂಟಿ: ಮಲ್ಲಿಕಾರ್ಜುನ ಖರ್ಗೆ ಆರೋಪ

ಬೆಂಗಳೂರು ಗ್ರಾಮಾಂತರ: ಅಯೋಧ್ಯೆಯಲ್ಲಿ ಆರ್‌ಎಸ್‌ಎಸ್‌ ಹಾಗೂ ಬಿಜೆಪಿ ಪರವಾಗಿರುವವರಿಂದಲೇ ಭಾರೀ ಪ್ರಮಾಣದ ಲೂಟಿ ನಡೆದಿದೆ ಎಂದು ರಾಜ್ಯಸಭೆ ವಿರೋಧ ಪಕ್ಷದ…

12 hours ago

ಇದು ಡಿ.ಕೆ. ಶಿವಕುಮಾರ್ ಸರ್ಕಾರವಲ್ಲ, ಜನರ ಸರ್ಕಾರ, ಸಂವಿಧಾನದ ಆಶಯಗಳಿಗೆ ಬದ್ಧವಾಗಿರುವ ಸರ್ಕಾರ- ಸಿಎಂ ಡಿಕೆಶಿ

ಸಂವಿಧಾನ ಶಿಲ್ಪಿ ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರು ಯಾವುದೇ ಒಂದು ಸಮುದಾಯಕ್ಕಾಗಿ ಮಾತ್ರ ಹೋರಾಟ ನಡೆಸಿಲ್ಲ. ದೇಶದ ಪ್ರತಿಯೊಬ್ಬ…

12 hours ago

ಡಾ.ಬಿ.ಆರ್. ಅಂಬೇಡ್ಕರ್ ಪ್ರತಿಮೆ ಅನಾವರಣ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಿಎಂ ಡಿಕೆಶಿ ಭಾಗಿ

ಬೆಂಗಳೂರು ಗ್ರಾಮಾಂತರ ಜಿಲ್ಲಾ ಆಡಳಿತ ಭವನದ ಆವರಣದಲ್ಲಿ ನಿರ್ಮಿಸಲಾಗಿರುವ ಸಂವಿಧಾನಶಿಲ್ಪಿ, ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರ ಭವ್ಯ ಪ್ರತಿಮೆ…

15 hours ago

ನಾಳೆ ಡಾ.ಬಿ.ಆರ್. ಅಂಬೇಡ್ಕರ್ ಪ್ರತಿಮೆ ಅನಾವರಣ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಿಎಂ ಡಿಕೆಶಿ ಭಾಗಿ: ಸಿದ್ಧತೆ ಪರಿಶೀಲಿಸಿದ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್.ಮುನಿಯಪ್ಪ

ಬೆಂಗಳೂರು ಗ್ರಾಮಾಂತರ ಜಿಲ್ಲಾ ಆಡಳಿತ ಭವನದ ಆವರಣದಲ್ಲಿ ನಿರ್ಮಿಸಲಾಗಿರುವ ಸಂವಿಧಾನಶಿಲ್ಪಿ, ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರ ಭವ್ಯ ಪ್ರತಿಮೆ…

1 day ago

“ವಿಬಿ-ಜಿ ರಾಮ್ ಜಿ” ಯೋಜನೆಗೆ ಚಾಲನೆ

"ವಿಕಸಿತ ಭಾರತ – ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಕಾಯ್ದೆ, 2025" ಗ್ರಾಮೀಣ ಭಾರತದ ಸಮಗ್ರ…

1 day ago

ಕಳುವಾಗಿದ್ದ ಚಿನ್ನಾಭರಣ, ನಗದು ದೂರುದಾರರಿಗೆ ಹಸ್ತಾಂತರ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಮನೆ ಕಳ್ಳತನ ಪ್ರಕರಣದಲ್ಲಿ ಪತ್ತೆಹಚ್ಚಲಾಗಿದ್ದ ಬೆಲೆಬಾಳುವ ಚಿನ್ನಾಭರಣ ಹಾಗೂ ನಗದು…

2 days ago