ಕಾಲಿಗೆ ಬ್ಯಾಂಡೇಜ್ ಸುತ್ತಿ ಬ್ಯಾಂಡೇಜ್ ನೊಳಗೆ ಮರೆಮಾಚಿ ಚಿನ್ನ ಸಾಗಣೆ: 43 ಲಕ್ಷ ಮೌಲ್ಯದ 700 ಗ್ರಾಂ ಚಿನ್ನ ಕಸ್ಟಮ್ಸ್ ವಶಕ್ಕೆ

ಕಾಲಿಗೆ ಮೆಡಿಕಲ್ ಬ್ಯಾಂಡೇಜ್ ನಂತೆ ಸುತ್ತಿ, ಅದರೊಳಗೆ ಮರೆಮಾಚಿ ಚಿನ್ನ ಕಳ್ಳಸಾಗಣಿಕೆಗೆ ಯತ್ನಿಸಿದ ಪ್ರಯಾಣಿಕ ಬೆಂಗಳೂರು ಕಸ್ಟಮ್ಸ್ ಅಧಿಕಾರಿಗಳಿಗೆ ಸಿಕ್ಕಿಬಿದ್ದಿದ್ದಾನೆ, ಆರೋಪಿಯಿಂದ 43 ಲಕ್ಷ ಮೌಲ್ಯದ 700 ಗ್ರಾಂ ಚಿನ್ನವನ್ನ ವಶಕ್ಕೆ ಪಡೆಯಲಾಗಿದೆ.

ಮೇ 21 ರಂದು ಬ್ಯಾಂಕಾಕ್ ನಿಂದ ದೇವನಹಳ್ಳಿಯ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಪ್ರಯಾಣಿಕ ಬಂದಿಳಿದ್ದಿದ್ದು, ಪ್ರಯಾಣಿಕನ ಚಲನವಲನಗಳನ್ನು ಹಾಗೂ ಪ್ರಯಾಣಿಕನ ಹಿನ್ನೆಲೆಯ ಮಾಹಿತಿ ಕಲೆಹಾಕಿದ ಕಂದಾಯ ಗುಪ್ತಚಾರ ನಿರ್ದೇಶನಾಲಯ (DRI) ಮತ್ತು ಆದಾಯ ತೆರಿಗೆ ಏರ್ ಇಂಟೆಲಿಜೆನ್ಸ್ ಯೂನಿಟ್ (AIU) ಅಧಿಕಾರಿಗಳಿಗೆ ಸಂಶಯ ಮೂಡಿದೆ.

ಕೂಡಲೇ ಬೆಂಗಳೂರು ಕಸ್ಟಮ್ಸ್ ಅಧಿಕಾರಿಗಳಿಗೆ ಮಾಹಿತಿಯನ್ನ ನೀಡಿದ್ದಾರೆ, ವಿಚಾರಣೆಗಾಗಿ ಆರೋಪಿತ ಪ್ರಯಾಣಿಕನನ್ನ ಬೆಂಗಳೂರು ಕಸ್ಟಮ್ಸ್ ಅಧಿಕಾರಿಗಳು ವಶಕ್ಕೆ ಪಡಿದ್ದಾರೆ, ತಪಾಸಣೆ ನಡೆಸಿದ್ದಾಗ ಆರೋಪಿ ತನ್ನ ಕಾಲಿಗೆ ಮೆಡಿಕಲ್ ಟೇಪ್ ಸುತ್ತಿಗೊಂಡಿದ್ದ, ಅದರೊಳಗೆ ಮರೆಮಾಚಿ ಚಿನ್ನವನ್ನ ಅಡಗಿಸಿಟ್ಟಿದ್ದ, ಆತನಿಂದ 700 ಗ್ರಾಂ ತೂಕದ 43,65,291 ರೂಪಾಯಿ ಮೌಲ್ಯದ ಎರಡು ಚಿನ್ನದ ಬಿಸ್ಕತ್ತು ಮತ್ತು ಚಿನ್ನದ ಚೈನ್ ವಶಕ್ಕೆ ಪಡೆಯಲಾಗಿದೆ. ಹೆಚ್ಚಿನ ವಿಚಾರಣೆಯನ್ನ ಅಧಿಕಾರಿಗಳು ಮುಂದುವರೆಸಿದ್ದಾರೆ.

ಕೈ ಕಡಗಕ್ಕೆ ರೇಡಿಯಮ್ ಲೇಪಿಸಿ ಚಿನ್ನ ಕಳ್ಳಸಾಗಣೆ

ಮೇ 20 ರಂದು ಬ್ಯಾಂಕಾಕ್ ನಿಂದ ದೇವನಹಳ್ಳಿ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದ ಪ್ರಯಾಣಿಕನ ಮೇಲೆ ಸಂಶಯ ಬಂದ ಹಿನ್ನಲೆ, ಬೆಂಗಳೂರು ಕಸ್ಟಮ್ಸ್ ಅಧಿಕಾರಿಗಳು ಆತನನ್ನ ವಶಕ್ಕೆ ಪಡೆದು ತಪಾಸಣೆ ನಡೆಸಿದ್ದಾಗ, ಪ್ರಯಾಣಿಕನ ಬಳಿ ಕೈ ಕಡಗ ಪತ್ತೆಯಾಗಿದೆ, ಚಿನ್ನದ ಕಡಗಕ್ಕೆ ರೇಡಿಯಮ್ ಲೇಪಿಸಿ ಕಳ್ಳ ಸಾಗಣಿಕೆಗೆ ಯತ್ನಸಿದ್ದ, ಆರೋಪಿಯಿಂದ 499.87 ಗ್ರಾಂ ತೂಕದ 31,14,190 ರೂಪಾಯಿ ಮೌಲ್ಯ ಚಿನ್ನ ವಶಕ್ಕೆ ಪಡೆಯಲಾಗಿತ್ತು.

Ramesh Babu

Journalist

Recent Posts

ನಾಡಕಚೇರಿ ಸರ್ವರ್ ಪದೇ ಪದೇ ಡೌನ್: ರಾಜ್ಯಾದ್ಯಂತ ಜನರಿಗೆ ಸಂಕಷ್ಟ – ತುರ್ತು ಪರಿಹಾರಕ್ಕೆ ಸರ್ಕಾರ ಮುಂದಾಗಬೇಕಿದೆ

ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…

3 hours ago

ಮಧುರನಹೊಸಹಳ್ಳಿಯಲ್ಲಿ ವಿಜೃಂಭಣೆಯಿಂದ ಆಷಾಡ ಏಕಾದಶಿ ಆಚರಣೆ

ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…

3 hours ago

ಬಾಶೆಟ್ಟಿಹಳ್ಳಿ ಯೂ-ಟರ್ನ್‌ನಲ್ಲಿ ಕೆಟ್ಟು ನಿಂತ ಟ್ರಕ್: ಯಲಹಂಕ–ಹಿಂದೂಪುರ ಹೆದ್ದಾರಿಯಲ್ಲಿ ಭಾರೀ ಟ್ರಾಫಿಕ್ ಜಾಮ್

ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…

18 hours ago

ಹೆದ್ದಾರಿ ಸ್ಕೈವಾಕ್‌ಗಳ ಕನಸು ಇನ್ನೂ ಅಪೂರ್ಣ…: ದಾಬಸ್‌ಪೇಟೆ–ಹೊಸಕೋಟೆ ಹೆದ್ದಾರಿಯಲ್ಲಿ ಆಮೆಗತಿಯ ಕಾಮಗಾರಿ: ಜೀವ ಕೈಯಲ್ಲಿ ಹಿಡಿದು ರಸ್ತೆ ದಾಟುವ ಜನರು

ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್‌ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…

1 day ago

ಬೆಂಗಳೂರು ಗ್ರಾಮಾಂತರದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಬಿರುಸು: 15,721 ಮೃತರ ಹೆಸರು ಪತ್ತೆ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (ಎಸ್ಐಆರ್) ಪ್ರಕ್ರಿಯೆ ಬಿರುಸಿನಿಂದ ಸಾಗುತ್ತಿದ್ದು, ಜಿಲ್ಲೆಯಾದ್ಯಂತ ಒಟ್ಟು 15,721 ಮೃತರ…

2 days ago

ದೇವಾಲಯಗಳ ಹುಂಡಿ ಭದ್ರತೆಗೆ ಸಿಸಿಟಿವಿ ಕಣ್ಗಾವಲು- ಜಿಲ್ಲಾಧಿಕಾರಿ ಡಾ. ಕೆ.ಎನ್ ಅನುರಾಧ

ಧಾರ್ಮಿಕ ದತ್ತಿ ಇಲಾಖೆ ವ್ಯಾಪ್ತಿಗೆ ಒಳಪಡುವ ಪ್ರವರ್ಗ ಎ ಮತ್ತು ಬಿ ದೇವಾಲಯಗಳ ಹುಂಡಿ ಭದ್ರತೆ ಸೇರಿದಂತೆ ಎಣಿಕೆ ಕಾರ್ಯ,…

2 days ago