ಜಿಲ್ಲೆಯಲ್ಲಿರುವ ಎಲ್ಲಾ ಜಾನುವಾರುಗಳಿಗೆ ಕಾಲುಬಾಯಿ ಲಸಿಕೆ ಹಾಕಲು ಅಗತ್ಯ ಸಿದ್ದತೆ ಕೈಗೊಂಡು ಶೇಕಡ 100 ರಷ್ಟು ಪ್ರಗತಿ ಸಾಧಿಸಿ ಎಂದು ಜಿಲ್ಲಾಧಿಕಾರಿ ಡಾ.ಶಿವಶಂಕರ್. ಎನ್ ಅವರು ಪಶು ವೈದ್ಯಾಧಿಕಾರಿಗಳಿಗೆ ಸೂಚಿಸಿದರು.
ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ಇಂದು ನಡೆದ ರಾಷ್ಟ್ರೀಯ ಜಾನುವಾರು ರೋಗಗಳ ನಿಯಂತ್ರಣ ಕಾರ್ಯಕ್ರಮದಡಿಯಲ್ಲಿ 4 ನೇ ಸುತ್ತಿನ ಕಾಲು ಬಾಯಿ ರೋಗ ಲಸಿಕೆ ಕಾರ್ಯಕ್ರಮದ ಪೂರ್ವ ತಯಾರಿ ಸಂಬಂಧ ಜಿಲ್ಲಾ ಮಟ್ಟದ ನಿರ್ವಹಣಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಜಿಲ್ಲೆಯಲ್ಲಿ ಒಟ್ಟು 1,62,980 ದನ ಮತ್ತು ಎಮ್ಮೆಗಳಿದ್ದು, ಈ ಎಲ್ಲಾ ಜಾನುವಾರುಗಳಿಗೆ ದಿನಾಂಕ 26.09.2023 ರಿಂದ 25.10.2023 ರವರೆಗೆ 4ನೇ ಸುತ್ತಿನ ಕಾಲುಬಾಯಿ ರೋಗ ಲಸಿಕಾ ಕಾರ್ಯಕ್ರಮವನ್ನು ಬಮೂಲ್ ಸಹಯೋಗದೊಂದಿಗೆ ಹಮ್ಮಿಕೊಳ್ಳಲಾಗುವುದು.
ಒಟ್ಟು 65 ತಂಡಗಳಲ್ಲಿ 276 ಲಸಿಕೆದಾರರು ಪ್ರತಿದಿನ ಬೆಳಿಗ್ಗೆ 06.00 ಗಂಟೆಯಿಂದ ಬೆಳಿಗ್ಗೆ 11.00 ಗಂಟೆಯವರೆಗೆ ನಿಗದಿತ ವೇಳಾಪಟ್ಟಿಯಂತೆ ಗ್ರಾಮಗಳಿಗೆ ಭೇಟಿ ನೀಡಿ, ಜಾನುವಾರುಗಳಿಗೆ ಉಚಿತವಾಗಿ ಲಸಿಕೆ ನೀಡಲಿದ್ದಾರೆ. ಈಗಾಗಲೇ ಪ್ರತೀ ಗ್ರಾಮವಾರು ಮೈಕ್ರೋಪ್ಲಾನ್ ಮಾಡಲಾಗಿದ್ದು, ಅದರನ್ವಯ ಲಸಿಕಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗುವುದು ಮತ್ತು ಈ ಲಸಿಕಾ ಕಾರ್ಯಕ್ರಮದ ಕುರಿತು ರೈತರಿಗೆ ಮನವರಿಕೆ ಮಾಡಿ ಕೊಡುವ ಸಲುವಾಗಿ ಫ್ಲೆಕ್ಸ್ ಬ್ಯಾನರ್, ಪೋಸ್ಟರ್ ಮತ್ತು ಕರಪತ್ರಗಳನ್ನು ಮುದ್ರಿಸಿ ಜಿಲ್ಲೆಯ ಪ್ರತಿ ಪಶುವೈದ್ಯಕೀಯ ಸಂಸ್ಥೆ ಮತ್ತು ಹಾಲು ಉತ್ಪಾದಕರ ಸಹಕಾರ ಸಂಘಗಳ ಆವರಣದಲ್ಲಿ ಪ್ರದರ್ಶಿಸಿ ಎಂದರು.
ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ 1,87,700 ಡೋಸಸ್ ಕಾಲುಬಾಯಿ ರೋಗ ಲಸಿಕೆ ಹಾಗೂ 1,67,000 ಸಿರಿಂಜ್ಗಳು ಸರಬರಾಜಾಗಿವೆ. ಬಮೂಲ್ ವತಿಯಿಂದ ಈ ಲಸಿಕಾ ಕಾರ್ಯಕ್ರಮಕ್ಕೆ ಒಟ್ಟು 36 ವಾಹನಗಳನ್ನು ಹಾಗೂ 51 ಲಸಿಕೆದಾರರನ್ನು ಒದಗಿಸಲಾಗುತ್ತಿದೆ. ಪ್ರತಿ ರಾಸಿಗೆ 01 ರಂತೆ ಸಿರಿಂಜ್ ಮತ್ತು ನೀಡಲ್ಗಳನ್ನು ಬಳಸಿ ಲಸಿಕೆ ಹಾಕಲಾಗುವುದು. ಆದ ಪ್ರಯುಕ್ತ ಎಲ್ಲಾ ರೈತ ಬಾಂಧವರು 03 ತಿಂಗಳ ಮೇಲ್ಪಟ್ಟ ಎಲ್ಲಾ ಜಾನುವಾರುಗಳಿಗೆ ತಪ್ಪದೇ ಕಾಲುಬಾಯಿ ರೋಗ ಲಸಿಕೆ ಹಾಕಿಸಲು ಕ್ರಮ ವಹಿಸಿ ಎಂದು ಹೇಳಿದರು.
ಸಭೆಯಲ್ಲಿ ಪಶುಪಾಲನೆ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ ಉಪನಿರ್ದೇಶಕರಾದ ಡಾ.ಜಗದೀಶ್ ಕುಮಾರ್ ಎನ್, ತಾಲ್ಲೂಕು ಸಹಾಯಕ ನಿರ್ದೇಶಕರು, ತಾಲ್ಲೂಕು ಮುಖ್ಯ ಪಶುವೈದ್ಯಾಧಿಕಾರಿಗಳು, ಬಮುಲ್ ಉಪ ವ್ಯವಸ್ಥಾಪಕರು ಉಪಸ್ಥಿತರಿದ್ದರು.
The desert sun has always promised a bright future for Arizona residents, but the rising…
ಪಿ. ಲಂಕೇಶ್........ ಮಾರ್ಚ್ 8, 1935, ಜನವರಿ 25, 2000.... ಎರಡು ವೈರುಧ್ಯಗಳ ಚಿಂತನೆಯ ಜನರಲ್ಲಿ ಪ್ರೀತಿ - ದ್ವೇಷ…
ಕರ್ನಾಟಕದ ಸರ್ಕಾರಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುವ ರೋಗಿಗಳಿಗೆ ಮಾರ್ಚ್ 11ರಿಂದ ಸಂಕಷ್ಟ ಎದುರಾಗುವ ಸಾಧ್ಯತೆ ಇದೆ. ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು…
ಮೇಲಿನ ಜೂಗಾನಹಳ್ಳಿ ಕ್ರಿಕೆಟರ್ಸ್ ವತಿಯಿಂದ (ದಿವಂಗತ ಡಾ. ಪುನಿತ್ ರಾಜ್ಕುಮಾರ್ ಸವಿನೆನಪಿಗಾಗಿ) ವಿಕ್ಕಿ ಬಾಲ್ ಕ್ರಿಕೆಟ್ ಟೂರ್ನಿಮೆಂಟನ್ನು ಮಾ.19 ರಿಂದ…
ನನ್ನ ಶಾಲೆ ನನ್ನ ಜವಾಬ್ದಾರಿ ಎಂಬ ಧ್ಯೇಯ ವಾಕ್ಯದೊಂದಿಗೆ ತಾನು ಓದಿದ ಸರ್ಕಾರಿ ಶಾಲೆಯ ಪರಿಸ್ಥಿತಿ ಹೇಗಿದೆ ಎಂಬುದನ್ನು ಹಿಂದಿರುಗಿ…
ಮುಂದಿದ್ದ ವಾಹನವನ್ನ ಹಿಂದಿಕ್ಕುವ ಭರದಲ್ಲಿ ನಿಯಂತ್ರಣ ತಪ್ಪಿದ ಸರಕು ಸಾಗಣೆಯ ಟೆಂಪೋ ವಿದ್ಯುತ್ ಪ್ರಸರಣ ಕೇಂದ್ರಕ್ಕೆ ಡಿಕ್ಕಿ ಹೊಡೆದಿರುವ ಘಟನೆ…