ಜಿಲ್ಲೆಯಲ್ಲಿರುವ ಎಲ್ಲಾ ಜಾನುವಾರುಗಳಿಗೆ ಕಾಲುಬಾಯಿ ಲಸಿಕೆ ಹಾಕಲು ಅಗತ್ಯ ಸಿದ್ದತೆ ಕೈಗೊಂಡು ಶೇಕಡ 100 ರಷ್ಟು ಪ್ರಗತಿ ಸಾಧಿಸಿ ಎಂದು ಜಿಲ್ಲಾಧಿಕಾರಿ ಡಾ.ಶಿವಶಂಕರ್. ಎನ್ ಅವರು ಪಶು ವೈದ್ಯಾಧಿಕಾರಿಗಳಿಗೆ ಸೂಚಿಸಿದರು.
ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ಇಂದು ನಡೆದ ರಾಷ್ಟ್ರೀಯ ಜಾನುವಾರು ರೋಗಗಳ ನಿಯಂತ್ರಣ ಕಾರ್ಯಕ್ರಮದಡಿಯಲ್ಲಿ 4 ನೇ ಸುತ್ತಿನ ಕಾಲು ಬಾಯಿ ರೋಗ ಲಸಿಕೆ ಕಾರ್ಯಕ್ರಮದ ಪೂರ್ವ ತಯಾರಿ ಸಂಬಂಧ ಜಿಲ್ಲಾ ಮಟ್ಟದ ನಿರ್ವಹಣಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಜಿಲ್ಲೆಯಲ್ಲಿ ಒಟ್ಟು 1,62,980 ದನ ಮತ್ತು ಎಮ್ಮೆಗಳಿದ್ದು, ಈ ಎಲ್ಲಾ ಜಾನುವಾರುಗಳಿಗೆ ದಿನಾಂಕ 26.09.2023 ರಿಂದ 25.10.2023 ರವರೆಗೆ 4ನೇ ಸುತ್ತಿನ ಕಾಲುಬಾಯಿ ರೋಗ ಲಸಿಕಾ ಕಾರ್ಯಕ್ರಮವನ್ನು ಬಮೂಲ್ ಸಹಯೋಗದೊಂದಿಗೆ ಹಮ್ಮಿಕೊಳ್ಳಲಾಗುವುದು.
ಒಟ್ಟು 65 ತಂಡಗಳಲ್ಲಿ 276 ಲಸಿಕೆದಾರರು ಪ್ರತಿದಿನ ಬೆಳಿಗ್ಗೆ 06.00 ಗಂಟೆಯಿಂದ ಬೆಳಿಗ್ಗೆ 11.00 ಗಂಟೆಯವರೆಗೆ ನಿಗದಿತ ವೇಳಾಪಟ್ಟಿಯಂತೆ ಗ್ರಾಮಗಳಿಗೆ ಭೇಟಿ ನೀಡಿ, ಜಾನುವಾರುಗಳಿಗೆ ಉಚಿತವಾಗಿ ಲಸಿಕೆ ನೀಡಲಿದ್ದಾರೆ. ಈಗಾಗಲೇ ಪ್ರತೀ ಗ್ರಾಮವಾರು ಮೈಕ್ರೋಪ್ಲಾನ್ ಮಾಡಲಾಗಿದ್ದು, ಅದರನ್ವಯ ಲಸಿಕಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗುವುದು ಮತ್ತು ಈ ಲಸಿಕಾ ಕಾರ್ಯಕ್ರಮದ ಕುರಿತು ರೈತರಿಗೆ ಮನವರಿಕೆ ಮಾಡಿ ಕೊಡುವ ಸಲುವಾಗಿ ಫ್ಲೆಕ್ಸ್ ಬ್ಯಾನರ್, ಪೋಸ್ಟರ್ ಮತ್ತು ಕರಪತ್ರಗಳನ್ನು ಮುದ್ರಿಸಿ ಜಿಲ್ಲೆಯ ಪ್ರತಿ ಪಶುವೈದ್ಯಕೀಯ ಸಂಸ್ಥೆ ಮತ್ತು ಹಾಲು ಉತ್ಪಾದಕರ ಸಹಕಾರ ಸಂಘಗಳ ಆವರಣದಲ್ಲಿ ಪ್ರದರ್ಶಿಸಿ ಎಂದರು.
ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ 1,87,700 ಡೋಸಸ್ ಕಾಲುಬಾಯಿ ರೋಗ ಲಸಿಕೆ ಹಾಗೂ 1,67,000 ಸಿರಿಂಜ್ಗಳು ಸರಬರಾಜಾಗಿವೆ. ಬಮೂಲ್ ವತಿಯಿಂದ ಈ ಲಸಿಕಾ ಕಾರ್ಯಕ್ರಮಕ್ಕೆ ಒಟ್ಟು 36 ವಾಹನಗಳನ್ನು ಹಾಗೂ 51 ಲಸಿಕೆದಾರರನ್ನು ಒದಗಿಸಲಾಗುತ್ತಿದೆ. ಪ್ರತಿ ರಾಸಿಗೆ 01 ರಂತೆ ಸಿರಿಂಜ್ ಮತ್ತು ನೀಡಲ್ಗಳನ್ನು ಬಳಸಿ ಲಸಿಕೆ ಹಾಕಲಾಗುವುದು. ಆದ ಪ್ರಯುಕ್ತ ಎಲ್ಲಾ ರೈತ ಬಾಂಧವರು 03 ತಿಂಗಳ ಮೇಲ್ಪಟ್ಟ ಎಲ್ಲಾ ಜಾನುವಾರುಗಳಿಗೆ ತಪ್ಪದೇ ಕಾಲುಬಾಯಿ ರೋಗ ಲಸಿಕೆ ಹಾಕಿಸಲು ಕ್ರಮ ವಹಿಸಿ ಎಂದು ಹೇಳಿದರು.
ಸಭೆಯಲ್ಲಿ ಪಶುಪಾಲನೆ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ ಉಪನಿರ್ದೇಶಕರಾದ ಡಾ.ಜಗದೀಶ್ ಕುಮಾರ್ ಎನ್, ತಾಲ್ಲೂಕು ಸಹಾಯಕ ನಿರ್ದೇಶಕರು, ತಾಲ್ಲೂಕು ಮುಖ್ಯ ಪಶುವೈದ್ಯಾಧಿಕಾರಿಗಳು, ಬಮುಲ್ ಉಪ ವ್ಯವಸ್ಥಾಪಕರು ಉಪಸ್ಥಿತರಿದ್ದರು.
ರಾಜ್ಯದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ ಇಲ್ಲದೆ ಸರಬರಾಜು ನಿಯಮಿತವಾಗಿ ನಡೆಯುತ್ತಿದೆ. ಕೆಲವೆಡೆ ಜನರು ಪ್ಯಾನಿಕ್ನಿಂದ ಅಗತ್ಯಕ್ಕಿಂತ ಹೆಚ್ಚು ಬುಕ್ಕಿಂಗ್ ಮಾಡುತ್ತಿರುವುದರಿಂದ…
ನವದೆಹಲಿಯಲ್ಲಿ ಕೇಂದ್ರ ಪ್ರವಾಸೋದ್ಯಮ ಸಚಿವರಾದ ಶ್ರೀ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು ಸಂಸದ ಡಾ.ಕೆ.ಸುಧಾಕರ್ ಭೇಟಿ ಮಾಡಿ, 'ಪ್ರಸಾದ್ 2.0'…
ಸಾಮಾಜಿಕ ಜಾಲತಾಣಗಳಲ್ಲಿ ವಿಚಿತ್ರ, ವಿಕಾರವಾಗಿ ರೀಲ್ಸ್ ಮಾಡುತ್ತಿದ್ದ ರೀಲ್ಸ್ ಮಂಜಣ್ಣ ಅಂತಾನೇ ಕರೆಸಿಕೊಳ್ಳುವ ಮಂಜ ಬೈಕ್ ನಲ್ಲಿ ತ್ರಿಬಲ್ ರೈಡ್…
ಕೋಲಾರ: ಅಮೆಜಾನ್ ಸಹಭಾಗಿತ್ವದ ಫ್ಲಿಪ್ ಕಾರ್ಟ್ ನಲ್ಲಿ ಲೀಟರ್ ಹಾಲನ್ನು ಒಂದು ರೂ. ಗೆ ಮಾರಾಟದ ಅವಕಾಶ ಕಲ್ಪಿಸಿರುವುದು ಅತ್ಯಂತ…
ಭೀಕರ ಅಪಘಾತದಲ್ಲಿ ಮೂವರು ರಿಸರ್ವ್ (ಮೀಸಲು ಪೊಲೀಸ್ ಪಡೆ) ಸಬ್ ಇನ್ಸ್ಪೆಕ್ಟರ್ಗಳು ಸಾವನ್ನಪ್ಪಿದ್ದು, ಇಬ್ಬರು ಗಾಯಗೊಂಡಿದ್ದಾರೆ. ಇದಲ್ಲದೆ, ಚಾಮರಾಜನಗರ ಮತ್ತು…
ಕಾನ್ಸಿರಾಮ್ ಅವರು 1978 ರಲ್ಲಿ ಅಖಿಲ ಭಾರತ ಹಿಂದುಳಿದ ಹಾಗೂ ಅಲ್ಪಸಂಖ್ಯಾತ ನೌಕರರ ಒಕ್ಕೂಟ (ಬಿಎಎಂಸಿಇಎಫ್) ಸ್ಥಾಪಿಸಿದ್ದರು. 1984ರಲ್ಲಿ ಬಹುಜನ್…