ಕಾಲುಬಾಯಿ ರೋಗ ಲಸಿಕಾ ಕಾರ್ಯಕ್ರಮದಲ್ಲಿ ಶೇಕಡ 100 ರಷ್ಟು ಪ್ರಗತಿ ಸಾಧಿಸಿ:ಜಿಲ್ಲಾಧಿಕಾರಿ ಡಾ.ಶಿವಶಂಕರ್. ಎನ್

ಜಿಲ್ಲೆಯಲ್ಲಿರುವ ಎಲ್ಲಾ ಜಾನುವಾರುಗಳಿಗೆ ಕಾಲುಬಾಯಿ ಲಸಿಕೆ ಹಾಕಲು ಅಗತ್ಯ ಸಿದ್ದತೆ ಕೈಗೊಂಡು ಶೇಕಡ 100 ರಷ್ಟು ಪ್ರಗತಿ ಸಾಧಿಸಿ ಎಂದು ಜಿಲ್ಲಾಧಿಕಾರಿ ಡಾ.ಶಿವಶಂಕರ್. ಎನ್ ಅವರು ಪಶು ವೈದ್ಯಾಧಿಕಾರಿಗಳಿಗೆ ಸೂಚಿಸಿದರು.

ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ಇಂದು ನಡೆದ ರಾಷ್ಟ್ರೀಯ ಜಾನುವಾರು ರೋಗಗಳ ನಿಯಂತ್ರಣ ಕಾರ್ಯಕ್ರಮದಡಿಯಲ್ಲಿ 4 ನೇ ಸುತ್ತಿನ ಕಾಲು ಬಾಯಿ ರೋಗ ಲಸಿಕೆ ಕಾರ್ಯಕ್ರಮದ ಪೂರ್ವ ತಯಾರಿ ಸಂಬಂಧ ಜಿಲ್ಲಾ ಮಟ್ಟದ ನಿರ್ವಹಣಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಜಿಲ್ಲೆಯಲ್ಲಿ ಒಟ್ಟು 1,62,980 ದನ ಮತ್ತು ಎಮ್ಮೆಗಳಿದ್ದು, ಈ ಎಲ್ಲಾ ಜಾನುವಾರುಗಳಿಗೆ ದಿನಾಂಕ 26.09.2023 ರಿಂದ 25.10.2023 ರವರೆಗೆ 4ನೇ ಸುತ್ತಿನ ಕಾಲುಬಾಯಿ ರೋಗ ಲಸಿಕಾ ಕಾರ್ಯಕ್ರಮವನ್ನು ಬಮೂಲ್ ಸಹಯೋಗದೊಂದಿಗೆ ಹಮ್ಮಿಕೊಳ್ಳಲಾಗುವುದು.

ಒಟ್ಟು 65 ತಂಡಗಳಲ್ಲಿ 276 ಲಸಿಕೆದಾರರು ಪ್ರತಿದಿನ ಬೆಳಿಗ್ಗೆ 06.00 ಗಂಟೆಯಿಂದ ಬೆಳಿಗ್ಗೆ 11.00 ಗಂಟೆಯವರೆಗೆ ನಿಗದಿತ ವೇಳಾಪಟ್ಟಿಯಂತೆ ಗ್ರಾಮಗಳಿಗೆ ಭೇಟಿ ನೀಡಿ, ಜಾನುವಾರುಗಳಿಗೆ ಉಚಿತವಾಗಿ ಲಸಿಕೆ ನೀಡಲಿದ್ದಾರೆ. ಈಗಾಗಲೇ ಪ್ರತೀ ಗ್ರಾಮವಾರು ಮೈಕ್ರೋಪ್ಲಾನ್ ಮಾಡಲಾಗಿದ್ದು, ಅದರನ್ವಯ ಲಸಿಕಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗುವುದು ಮತ್ತು ಈ ಲಸಿಕಾ ಕಾರ್ಯಕ್ರಮದ ಕುರಿತು ರೈತರಿಗೆ ಮನವರಿಕೆ ಮಾಡಿ ಕೊಡುವ ಸಲುವಾಗಿ ಫ್ಲೆಕ್ಸ್ ಬ್ಯಾನರ್, ಪೋಸ್ಟರ್ ಮತ್ತು ಕರಪತ್ರಗಳನ್ನು ಮುದ್ರಿಸಿ ಜಿಲ್ಲೆಯ ಪ್ರತಿ ಪಶುವೈದ್ಯಕೀಯ ಸಂಸ್ಥೆ ಮತ್ತು ಹಾಲು ಉತ್ಪಾದಕರ ಸಹಕಾರ ಸಂಘಗಳ ಆವರಣದಲ್ಲಿ ಪ್ರದರ್ಶಿಸಿ ಎಂದರು.

ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ 1,87,700 ಡೋಸಸ್‌ ಕಾಲುಬಾಯಿ ರೋಗ ಲಸಿಕೆ ಹಾಗೂ 1,67,000 ಸಿರಿಂಜ್‌ಗಳು ಸರಬರಾಜಾಗಿವೆ. ಬಮೂಲ್ ವತಿಯಿಂದ ಈ ಲಸಿಕಾ ಕಾರ್ಯಕ್ರಮಕ್ಕೆ ಒಟ್ಟು 36 ವಾಹನಗಳನ್ನು ಹಾಗೂ 51 ಲಸಿಕೆದಾರರನ್ನು ಒದಗಿಸಲಾಗುತ್ತಿದೆ. ಪ್ರತಿ ರಾಸಿಗೆ 01 ರಂತೆ ಸಿರಿಂಜ್ ಮತ್ತು ನೀಡಲ್‌ಗಳನ್ನು ಬಳಸಿ ಲಸಿಕೆ ಹಾಕಲಾಗುವುದು. ಆದ ಪ್ರಯುಕ್ತ ಎಲ್ಲಾ ರೈತ ಬಾಂಧವರು 03 ತಿಂಗಳ ಮೇಲ್ಪಟ್ಟ ಎಲ್ಲಾ ಜಾನುವಾರುಗಳಿಗೆ ತಪ್ಪದೇ ಕಾಲುಬಾಯಿ ರೋಗ ಲಸಿಕೆ ಹಾಕಿಸಲು ಕ್ರಮ ವಹಿಸಿ ಎಂದು ಹೇಳಿದರು.

ಸಭೆಯಲ್ಲಿ ಪಶುಪಾಲನೆ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ ಉಪನಿರ್ದೇಶಕರಾದ ಡಾ.ಜಗದೀಶ್ ಕುಮಾರ್ ಎನ್, ತಾಲ್ಲೂಕು ಸಹಾಯಕ ನಿರ್ದೇಶಕರು, ತಾಲ್ಲೂಕು ಮುಖ್ಯ ಪಶುವೈದ್ಯಾಧಿಕಾರಿಗಳು, ಬಮುಲ್ ಉಪ ವ್ಯವಸ್ಥಾಪಕರು ಉಪಸ್ಥಿತರಿದ್ದರು.

Ramesh Babu

Journalist

Recent Posts

ಬಾಶೆಟ್ಟಿಹಳ್ಳಿ ಯೂ-ಟರ್ನ್‌ನಲ್ಲಿ ಕೆಟ್ಟು ನಿಂತ ಟ್ರಕ್: ಯಲಹಂಕ–ಹಿಂದೂಪುರ ಹೆದ್ದಾರಿಯಲ್ಲಿ ಭಾರೀ ಟ್ರಾಫಿಕ್ ಜಾಮ್

ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…

14 hours ago

ಹೆದ್ದಾರಿ ಸ್ಕೈವಾಕ್‌ಗಳ ಕನಸು ಇನ್ನೂ ಅಪೂರ್ಣ…: ದಾಬಸ್‌ಪೇಟೆ–ಹೊಸಕೋಟೆ ಹೆದ್ದಾರಿಯಲ್ಲಿ ಆಮೆಗತಿಯ ಕಾಮಗಾರಿ: ಜೀವ ಕೈಯಲ್ಲಿ ಹಿಡಿದು ರಸ್ತೆ ದಾಟುವ ಜನರು

ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್‌ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…

23 hours ago

ಬೆಂಗಳೂರು ಗ್ರಾಮಾಂತರದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಬಿರುಸು: 15,721 ಮೃತರ ಹೆಸರು ಪತ್ತೆ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (ಎಸ್ಐಆರ್) ಪ್ರಕ್ರಿಯೆ ಬಿರುಸಿನಿಂದ ಸಾಗುತ್ತಿದ್ದು, ಜಿಲ್ಲೆಯಾದ್ಯಂತ ಒಟ್ಟು 15,721 ಮೃತರ…

1 day ago

ದೇವಾಲಯಗಳ ಹುಂಡಿ ಭದ್ರತೆಗೆ ಸಿಸಿಟಿವಿ ಕಣ್ಗಾವಲು- ಜಿಲ್ಲಾಧಿಕಾರಿ ಡಾ. ಕೆ.ಎನ್ ಅನುರಾಧ

ಧಾರ್ಮಿಕ ದತ್ತಿ ಇಲಾಖೆ ವ್ಯಾಪ್ತಿಗೆ ಒಳಪಡುವ ಪ್ರವರ್ಗ ಎ ಮತ್ತು ಬಿ ದೇವಾಲಯಗಳ ಹುಂಡಿ ಭದ್ರತೆ ಸೇರಿದಂತೆ ಎಣಿಕೆ ಕಾರ್ಯ,…

2 days ago

ಜು.25ರಂದು ಹಲವೆಡೆ ವಿದ್ಯುತ್ ವ್ಯತ್ಯಯ

ದೊಡ್ಡಬಳ್ಳಾಪುರ: ಬೆಸ್ಕಾಂ ವತಿಯಿಂದ ತುರ್ತು ನಿರ್ವಹಣೆ ಮತ್ತು ವಿದ್ಯುತ್ ಮಾರ್ಗಗಳ ಕಾಮಗಾರಿ ಹಿನ್ನೆಲೆಯಲ್ಲಿ ಜುಲೈ 25ರಂದು (ಶನಿವಾರ) ದೊಡ್ಡಬಳ್ಳಾಪುರ ನಗರದ…

2 days ago

ಆಕ್ರೋಶ, ಅರಾಜಕತೆ ಮತ್ತು ಮಾಧ್ಯಮಗಳು…..

ದೆಹಲಿ ಮತ್ತು ದೇಶದ ಇತರ ಭಾಗಗಳಲ್ಲಿ ಕಳೆದ ಕೆಲವು ದಿನಗಳ ಘಟನೆಗಳನ್ನು ನೋಡುತ್ತಿದ್ದರೆ ನಮ್ಮ ದೇಶದ ಸುತ್ತಮುತ್ತ ನಡೆದ ಬಾಂಗ್ಲಾ,…

2 days ago