ತಾಯಿ ಆನೆಯೊಂದಿಗೆ ಕಾಲುವೆ ದಾಟುತ್ತಿದ್ದ ಮರಿಯಾನೆ ಆಕಸ್ಮಿಕವಾಗಿ ನೀರಿನೊಳಗೆ ಬಿದ್ದು ನಂತರ ಅರಣ್ಯ ಇಲಾಖೆಯ ಸಿಬ್ಬಂದಿಗಳು ಮತ್ತು ಸ್ಥಳೀಯರ ನೆರವಿನಿಂದ ರಕ್ಷಿಸಲ್ಪಟ್ಟಿರುವ ಘಟನೆ ಕಂಬಿಬಾಣೆ ಚಿಕ್ಲಿಹೊಳೆ ಜಲಾಶಯ ಸಮೀಪ ನಡೆದಿದೆ.
ಕಳೆದ ಒಂದು ವಾರದಿಂದ
ತಾಯಿ ಆನೆ ಮತ್ತು ಅದರ ಮರಿ ಚಿಕ್ಲಿಹೊಳೆ ಜಲಾಶಯ ಸಮೀಪದಲ್ಲಿ ಅಡ್ಡಾಡಿಕೊಂಡಿದ್ದು,
ಮೊನ್ನೆ ರಾತ್ರಿ ಕಬ್ಬಿನಗದ್ದೆ ಕಾಲುವೆಯನ್ನು ದಾಟಲು ಮುಂದಾಗಿವೆ. ತಾಯಿ ಆನೆ ಕಾಲುವೆ ದಾಟಿದೆ. ಆದರೆ ಮರಿ ಆನೆ ಕಾಲುವೆಯಿಂದ ಹಾರುವಾಗ ನೀರಿನೊಳಗೆ ಬಿದ್ದಿದೆ. ನೆನ್ನೆ ಬೆಳಿಗ್ಗೆ ಇದನ್ನು ಗಮನಿಸಿದ ಸ್ಥಳೀಯರು ಆನೆಕಾಡು ಮೀಸಲು ಅರಣ್ಯ ಇಲಾಖೆಯವರ ಗಮನಕ್ಕೆ ತಂದಿದ್ದಾರೆ. ನಂತರ ಅರಣ್ಯ ಇಲಾಖೆಯವರು ಮತ್ತು ಸ್ಥಳೀಯರು ಕಾಲುವೆಯ ಒಂದು ಭಾಗದಲ್ಲಿ ಕಾಡಾನೆ ನೀರಿನಿಂದ ಮೇಲಕ್ಕೆ ಬರಲು ದಾರಿ ಮಾಡಿಕೊಟ್ಟಿದ್ದಾರೆ. ಇವರ ಪರಿಶ್ರಮದಿಂದಾಗಿ ಮರಿ ಆನೆ ಸುರಕ್ಷಿತವಾಗಿ ದಡ ಸೇರಿದೆ.
ಘಟನೆಯ ನಂತರ ಕಾಡು ಸೇರಿಕೊಂಡಿರುವ ತಾಯಿ ಆನೆಯೊಂದಿಗೆ ಅಂದಾಜು 6 ತಿಂಗಳ ಮರಿ ಆನೆಯನ್ನು ಸೇರಿಸುವ ಕಾರ್ಯಾಚರಣೆ ನಡೆಯುತ್ತಿದೆ.
ಅಪಘಾತವಾಗಿ ಬಿದ್ದಿದ್ದ ವ್ಯಕ್ತಿಯ ಮೊಬೈಲ್ ನಿಂದ ಫೋನ್ ಪೇ ಮೂಲಕ 80 ಸಾವಿರ ಮೋಸದಿಂದ ಪಡೆದು ಆಸ್ಪತ್ರೆಗೂ ಸಹ ದಾಖಲಿಸದೇ…
ಚಿಕ್ಕಬಳ್ಳಾಪುರ ನಗರದ ಬಿ ಬಿ ರಸ್ತೆಯಲ್ಲಿರುವ ಎಯು ಜ್ಯುವೆಲ್ಲರಿ ಶಾಪ್ ಗೆ ಕನ್ನ ಹಾಕಿರುವ ಕಳ್ಳರು ಸರಿಸುಮಾರು 3 ಕೋಟಿ…
ಜೆಸಿಬಿ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿ ಓರ್ವ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮತ್ತೋರ್ವನಿಗೆ ಗಾಯಗಳಾಗಿರುವ ಘಟನೆ ನಿನ್ನೆ…
ದೊಡ್ಡಬಳ್ಳಾಪುರ ನಗರದ ಸಾರ್ವಜನಿಕ ಆಸ್ಪತ್ರೆಗೆ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಇಂದು ದಿಢೀರ್ ಭೇಟಿ ನೀಡಿ, ಆಸ್ಪತ್ರೆಯಲ್ಲಿನ…
ದೊಡ್ಡಬಳ್ಳಾಪುರ ತಾಲೂಕಿನ ಹಾದ್ರೀಪುರ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಮಕ್ಕಳ ಹಕ್ಕುಗಳ ಸಂರಕ್ಷಣೆ ಕುರಿತು ಗ್ರಾಮ ಸಭೆಯನ್ನು ಆಯೋಜಿಸಲಾಗಿತ್ತು. ಗ್ರಾಮ ಸಭೆಯಲ್ಲಿ…
ಡಿ.25ರಂದು ದಕ್ಷಿಣ ಭಾರತದ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವರ ಬ್ರಹ್ಮರಥೋತ್ಸವ ನಡೆಯಲಿದೆ.... ಬ್ರಹ್ಮರಥೋತ್ಸವವನ್ನು ಸುಸೂತ್ರವಾಗಿ ನಡೆಸಲು…