ತಾಯಿ ಆನೆಯೊಂದಿಗೆ ಕಾಲುವೆ ದಾಟುತ್ತಿದ್ದ ಮರಿಯಾನೆ ಆಕಸ್ಮಿಕವಾಗಿ ನೀರಿನೊಳಗೆ ಬಿದ್ದು ನಂತರ ಅರಣ್ಯ ಇಲಾಖೆಯ ಸಿಬ್ಬಂದಿಗಳು ಮತ್ತು ಸ್ಥಳೀಯರ ನೆರವಿನಿಂದ ರಕ್ಷಿಸಲ್ಪಟ್ಟಿರುವ ಘಟನೆ ಕಂಬಿಬಾಣೆ ಚಿಕ್ಲಿಹೊಳೆ ಜಲಾಶಯ ಸಮೀಪ ನಡೆದಿದೆ.
ಕಳೆದ ಒಂದು ವಾರದಿಂದ
ತಾಯಿ ಆನೆ ಮತ್ತು ಅದರ ಮರಿ ಚಿಕ್ಲಿಹೊಳೆ ಜಲಾಶಯ ಸಮೀಪದಲ್ಲಿ ಅಡ್ಡಾಡಿಕೊಂಡಿದ್ದು,
ಮೊನ್ನೆ ರಾತ್ರಿ ಕಬ್ಬಿನಗದ್ದೆ ಕಾಲುವೆಯನ್ನು ದಾಟಲು ಮುಂದಾಗಿವೆ. ತಾಯಿ ಆನೆ ಕಾಲುವೆ ದಾಟಿದೆ. ಆದರೆ ಮರಿ ಆನೆ ಕಾಲುವೆಯಿಂದ ಹಾರುವಾಗ ನೀರಿನೊಳಗೆ ಬಿದ್ದಿದೆ. ನೆನ್ನೆ ಬೆಳಿಗ್ಗೆ ಇದನ್ನು ಗಮನಿಸಿದ ಸ್ಥಳೀಯರು ಆನೆಕಾಡು ಮೀಸಲು ಅರಣ್ಯ ಇಲಾಖೆಯವರ ಗಮನಕ್ಕೆ ತಂದಿದ್ದಾರೆ. ನಂತರ ಅರಣ್ಯ ಇಲಾಖೆಯವರು ಮತ್ತು ಸ್ಥಳೀಯರು ಕಾಲುವೆಯ ಒಂದು ಭಾಗದಲ್ಲಿ ಕಾಡಾನೆ ನೀರಿನಿಂದ ಮೇಲಕ್ಕೆ ಬರಲು ದಾರಿ ಮಾಡಿಕೊಟ್ಟಿದ್ದಾರೆ. ಇವರ ಪರಿಶ್ರಮದಿಂದಾಗಿ ಮರಿ ಆನೆ ಸುರಕ್ಷಿತವಾಗಿ ದಡ ಸೇರಿದೆ.
ಘಟನೆಯ ನಂತರ ಕಾಡು ಸೇರಿಕೊಂಡಿರುವ ತಾಯಿ ಆನೆಯೊಂದಿಗೆ ಅಂದಾಜು 6 ತಿಂಗಳ ಮರಿ ಆನೆಯನ್ನು ಸೇರಿಸುವ ಕಾರ್ಯಾಚರಣೆ ನಡೆಯುತ್ತಿದೆ.
ದೊಡ್ಡಬಳ್ಳಾಪುರ ನಗರದಲ್ಲಿ ಏ.12 ರಂದು 220/66/11ಕೆವಿ ಕೆಐಎಡಿಬಿ ಉಪ ವಿದ್ಯುತ್ ಕೇಂದ್ರದಿಂದ ಹೊರವೊಮ್ಮುವ F02-Birla Super ಫೀಡರ್ನಲ್ಲಿ ವಿದ್ಯುತ್ ಕಾಮಗಾರಿಗಳು…
ಪಿಯುಸಿ ರಿಸಲ್ಟ್ ದಿನವೇ ವಿದ್ಯಾರ್ಥಿನಿ ಘೋರವಾಗಿ ಸಾವನ್ನಪ್ಪಿರುವ ಘಟನೆ ಹೆಬ್ಬಾಳ ಪೊಲೀಸ್ ಠಾಣಾ ವ್ಯಾಪ್ತಿಯ ಮನೋರಾಯನಪಾಳ್ಯದಲ್ಲಿ ನಡೆದಿದೆ.. 17 ವರ್ಷದ…
ರಾಯಚೂರು ಸಿರವಾರ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಸುರೇಶ್ ಶೆಟ್ಟಿ ಲೋಕಾಯುಕ್ತರ ಬಲೆಗೆ ಬಿದ್ದ ಮುಖ್ಯಾಧಿಕಾರಿ. ರಾಘವೇಂದ್ರ…
ದೇಶದ ಎಲ್ಲಾ ದಲಿತ ಕೇರಿಗಳನ್ನು ನಾಶ ಮಾಡಬೇಕು. ಅಲ್ಲಿನ ಎಲ್ಲರಿಗೂ ಊರ ಒಳಗಿನ ಸ್ಥಳದಲ್ಲಿ ವಾಸಕ್ಕೆ ಅವಕಾಶ ಕಲ್ಪಿಸಬೇಕು. ಬ್ರಾಹ್ಮಣರ…
600ಕ್ಕೆ 600 ಅಂಕ ತೆಗೆದು ರಾಜ್ಯಕ್ಕೆ ಟಾಪರ್ ಆದ ದಿಶಾಳ ಸಾಧನೆಯ ಹಿಂದೆ ಎದೆ ನಡುಗಿಸುವ ಕಣ್ಣೀರಿನ ಕಥೆಯಿದೆ. ಮೂರು…
ದೊಡ್ಡಬಳ್ಳಾಪುರ (ತೂಬಗೆರೆ): ಗ್ರಾಮಾಂತರ ಭಾಗದಲ್ಲಿದ್ದರೂ ಶೈಕ್ಷಣಿಕ ಕ್ಷೇತ್ರದಲ್ಲಿ ತನ್ನದೇ ಆದ ಛಾಪು ಮೂಡಿಸಿರುವ ತೂಬಗೆರೆ ಸರ್ಕಾರಿ ಪದವಿ ಪೂರ್ವ ಕಾಲೇಜು…