ತಾಯಿ ಆನೆಯೊಂದಿಗೆ ಕಾಲುವೆ ದಾಟುತ್ತಿದ್ದ ಮರಿಯಾನೆ ಆಕಸ್ಮಿಕವಾಗಿ ನೀರಿನೊಳಗೆ ಬಿದ್ದು ನಂತರ ಅರಣ್ಯ ಇಲಾಖೆಯ ಸಿಬ್ಬಂದಿಗಳು ಮತ್ತು ಸ್ಥಳೀಯರ ನೆರವಿನಿಂದ ರಕ್ಷಿಸಲ್ಪಟ್ಟಿರುವ ಘಟನೆ ಕಂಬಿಬಾಣೆ ಚಿಕ್ಲಿಹೊಳೆ ಜಲಾಶಯ ಸಮೀಪ ನಡೆದಿದೆ.
ಕಳೆದ ಒಂದು ವಾರದಿಂದ
ತಾಯಿ ಆನೆ ಮತ್ತು ಅದರ ಮರಿ ಚಿಕ್ಲಿಹೊಳೆ ಜಲಾಶಯ ಸಮೀಪದಲ್ಲಿ ಅಡ್ಡಾಡಿಕೊಂಡಿದ್ದು,
ಮೊನ್ನೆ ರಾತ್ರಿ ಕಬ್ಬಿನಗದ್ದೆ ಕಾಲುವೆಯನ್ನು ದಾಟಲು ಮುಂದಾಗಿವೆ. ತಾಯಿ ಆನೆ ಕಾಲುವೆ ದಾಟಿದೆ. ಆದರೆ ಮರಿ ಆನೆ ಕಾಲುವೆಯಿಂದ ಹಾರುವಾಗ ನೀರಿನೊಳಗೆ ಬಿದ್ದಿದೆ. ನೆನ್ನೆ ಬೆಳಿಗ್ಗೆ ಇದನ್ನು ಗಮನಿಸಿದ ಸ್ಥಳೀಯರು ಆನೆಕಾಡು ಮೀಸಲು ಅರಣ್ಯ ಇಲಾಖೆಯವರ ಗಮನಕ್ಕೆ ತಂದಿದ್ದಾರೆ. ನಂತರ ಅರಣ್ಯ ಇಲಾಖೆಯವರು ಮತ್ತು ಸ್ಥಳೀಯರು ಕಾಲುವೆಯ ಒಂದು ಭಾಗದಲ್ಲಿ ಕಾಡಾನೆ ನೀರಿನಿಂದ ಮೇಲಕ್ಕೆ ಬರಲು ದಾರಿ ಮಾಡಿಕೊಟ್ಟಿದ್ದಾರೆ. ಇವರ ಪರಿಶ್ರಮದಿಂದಾಗಿ ಮರಿ ಆನೆ ಸುರಕ್ಷಿತವಾಗಿ ದಡ ಸೇರಿದೆ.
ಘಟನೆಯ ನಂತರ ಕಾಡು ಸೇರಿಕೊಂಡಿರುವ ತಾಯಿ ಆನೆಯೊಂದಿಗೆ ಅಂದಾಜು 6 ತಿಂಗಳ ಮರಿ ಆನೆಯನ್ನು ಸೇರಿಸುವ ಕಾರ್ಯಾಚರಣೆ ನಡೆಯುತ್ತಿದೆ.
ಕೋಲಾರ: ಕೆ.ಸಿ.ವ್ಯಾಲಿ ಯೋಜನೆಯಿಂದ ಅಂತರ್ಜಲ ಹೆಚ್ಚಿ ರೈತರ ಬದುಕು ಹಸನಾಗಿದ್ದು, ಜೆಡಿಎಸ್ ಪಕ್ಷ ಸೇರಿದಂತೆ ಕೆಲ ಮುಖಂಡರಿಂದ ದಾರಿ ತಪ್ಪಿಸುವ…
ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಕನ್ನಡ ಜಾಗೃತ ಪರಿಷತ್ತು ವತಿಯಿಂದ ಪದ್ಮಶ್ರೀ ಸಾಲುಮರದ ತಿಮ್ಮಕ್ಕ ಅವರಿಗೆ ನುಡಿನಮನ…
ಆಲಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯ ಸಹ ಶಿಕ್ಷಕ ಅರುಣ್ ಅವರು ವರ್ಗಾವಣೆಗೊಂಡಿದ್ದು, ಈ ಹಿನ್ನೆಲೆ ಇಂದು ಎಸ್…
ಬಿಜೆಪಿ-ಜೆಡಿಎಸ್ ಸಂಸದರು ರಾಜ್ಯಕ್ಕೆ ಕೇಂದ್ರದಿಂದ ಆಗುತ್ತಿರುವ ಅನ್ಯಾಯದ ಬಗ್ಗೆ ಬಾಯಿಯನ್ನೇ ಬಿಡುತ್ತಿಲ್ಲ. ಪ್ರಹ್ಲಾದ್ ಜೋಶಿ ಕೂಡ ಒಂದೇ ಒಂದು ದಿನ…
ಗೆದ್ದವರಿಗೆ ಅಭಿನಂದಿಸುತ್ತಾ, ಸೋತವರಿಗೆ ಸಾಂತ್ವನ ಹೇಳುತ್ತಾ, ಮತದಾರರಿಗೆ ಧನ್ಯವಾದಗಳನ್ನು ಅರ್ಪಿಸುತ್ತಾ, ಸಂವಿಧಾನಕ್ಕೆ ಸಲಾಂ ಹೊಡೆಯುತ್ತಾ, ನಮ್ಮ ಮುಗ್ದತೆ ಮತ್ತು ಮೂರ್ಖತನ…
ಡಿ.13ರಂದು ರಾಷ್ಟ್ರೀಯ ಲೋಕ ಅದಾಲತ್ ನಡೆಯಲಿದ್ದು, ರಾಷ್ಟ್ರೀಯ ಲೋಕ ಅದಾಲತ್ ಮುಖೇನ ರಾಜೀಯಾಗುವ ಪ್ರಕರಣಗಳ ವಿಲೇವಾರಿಗೊಳಿಸುವಂತೆ ಕರ್ನಾಟಕ ರಾಜ್ಯ ಕಾನೂನು…