ತಾಯಿ ಆನೆಯೊಂದಿಗೆ ಕಾಲುವೆ ದಾಟುತ್ತಿದ್ದ ಮರಿಯಾನೆ ಆಕಸ್ಮಿಕವಾಗಿ ನೀರಿನೊಳಗೆ ಬಿದ್ದು ನಂತರ ಅರಣ್ಯ ಇಲಾಖೆಯ ಸಿಬ್ಬಂದಿಗಳು ಮತ್ತು ಸ್ಥಳೀಯರ ನೆರವಿನಿಂದ ರಕ್ಷಿಸಲ್ಪಟ್ಟಿರುವ ಘಟನೆ ಕಂಬಿಬಾಣೆ ಚಿಕ್ಲಿಹೊಳೆ ಜಲಾಶಯ ಸಮೀಪ ನಡೆದಿದೆ.
ಕಳೆದ ಒಂದು ವಾರದಿಂದ
ತಾಯಿ ಆನೆ ಮತ್ತು ಅದರ ಮರಿ ಚಿಕ್ಲಿಹೊಳೆ ಜಲಾಶಯ ಸಮೀಪದಲ್ಲಿ ಅಡ್ಡಾಡಿಕೊಂಡಿದ್ದು,
ಮೊನ್ನೆ ರಾತ್ರಿ ಕಬ್ಬಿನಗದ್ದೆ ಕಾಲುವೆಯನ್ನು ದಾಟಲು ಮುಂದಾಗಿವೆ. ತಾಯಿ ಆನೆ ಕಾಲುವೆ ದಾಟಿದೆ. ಆದರೆ ಮರಿ ಆನೆ ಕಾಲುವೆಯಿಂದ ಹಾರುವಾಗ ನೀರಿನೊಳಗೆ ಬಿದ್ದಿದೆ. ನೆನ್ನೆ ಬೆಳಿಗ್ಗೆ ಇದನ್ನು ಗಮನಿಸಿದ ಸ್ಥಳೀಯರು ಆನೆಕಾಡು ಮೀಸಲು ಅರಣ್ಯ ಇಲಾಖೆಯವರ ಗಮನಕ್ಕೆ ತಂದಿದ್ದಾರೆ. ನಂತರ ಅರಣ್ಯ ಇಲಾಖೆಯವರು ಮತ್ತು ಸ್ಥಳೀಯರು ಕಾಲುವೆಯ ಒಂದು ಭಾಗದಲ್ಲಿ ಕಾಡಾನೆ ನೀರಿನಿಂದ ಮೇಲಕ್ಕೆ ಬರಲು ದಾರಿ ಮಾಡಿಕೊಟ್ಟಿದ್ದಾರೆ. ಇವರ ಪರಿಶ್ರಮದಿಂದಾಗಿ ಮರಿ ಆನೆ ಸುರಕ್ಷಿತವಾಗಿ ದಡ ಸೇರಿದೆ.
ಘಟನೆಯ ನಂತರ ಕಾಡು ಸೇರಿಕೊಂಡಿರುವ ತಾಯಿ ಆನೆಯೊಂದಿಗೆ ಅಂದಾಜು 6 ತಿಂಗಳ ಮರಿ ಆನೆಯನ್ನು ಸೇರಿಸುವ ಕಾರ್ಯಾಚರಣೆ ನಡೆಯುತ್ತಿದೆ.
ಜಿಲ್ಲೆಯಲ್ಲಿ ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (ಎಸ್ಐಆರ್) ಪ್ರಕ್ರಿಯೆ ಪ್ರಗತಿಯಲ್ಲಿದ್ದು, ಶೇಕಡ 87.44% ಗಣತಿ ನಮೂನೆ ಮತದಾರರಿಗೆ ವಿತರಿಸಲಾಗಿದೆ ಎಂದು…
ದೇವನಹಳ್ಳಿ: ವಸತಿ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದ 12 ವರ್ಷದ ವಿದ್ಯಾರ್ಥಿಯೊಬ್ಬ ಅನುಮಾನಾಸ್ಪದ ರೀತಿಯಲ್ಲಿ ಮೃತಪಟ್ಟಿರುವ ಘಟನೆ ಬೆಂಗಳೂರು ಉತ್ತರ ತಾಲೂಕಿನ…
ಬೆಂಗಳೂರು: ಆದಾಯ ಮೀರಿ ಆಸ್ತಿ ಗಳಿಕೆ ಹಾಗೂ ಭ್ರಷ್ಟಾಚಾರದ ಆರೋಪಗಳ ಹಿನ್ನೆಲೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು ರಾಜ್ಯದ ವಿವಿಧೆಡೆ ಏಕಕಾಲದಲ್ಲಿ ದಾಳಿ…
ನವದೆಹಲಿ: 2026ರಲ್ಲಿ ರೂಪುಗೊಳ್ಳುತ್ತಿರುವ "ಸೂಪರ್ ಎಲ್ ನಿನೊ" ಪರಿಣಾಮ ದೇಶದ ಮಾನ್ಸೂನ್ ಮೇಲೆ ಗಂಭೀರ ಪರಿಣಾಮ ಬೀರುವ ಸಾಧ್ಯತೆ ಇದೆ…
ದೆಹಲಿಯಲ್ಲಿ ಭಾರತದ ಮುಖ್ಯ ಚುನಾವಣಾ ಆಯುಕ್ತರಾದ ಶ್ರೀ ಜ್ಞಾನೇಶ್ ಕುಮಾರ್ ಅವರನ್ನು ಇಂದು ಕೇಂದ್ರ ಸಚಿವರಾದ ಎಚ್.ಡಿ. ಕುಮಾರಸ್ವಾಮಿ, ಶ್ರೀ…
ದೇವನಹಳ್ಳಿ: ತನ್ನ ಗ್ರಾಮದ ಕಡೆಗೆ ತೆರಳಲು ಹೆದ್ದಾರಿ ಪಕ್ಕದ ರೈಲ್ವೇ ಹಳಿ ದಾಟಲು ಹೋದ ಕಾಲೇಜು ಯುವತಿ ರೈಲಿಗೆ ಸಿಲುಕಿ…