ತಾಯಿ ಆನೆಯೊಂದಿಗೆ ಕಾಲುವೆ ದಾಟುತ್ತಿದ್ದ ಮರಿಯಾನೆ ಆಕಸ್ಮಿಕವಾಗಿ ನೀರಿನೊಳಗೆ ಬಿದ್ದು ನಂತರ ಅರಣ್ಯ ಇಲಾಖೆಯ ಸಿಬ್ಬಂದಿಗಳು ಮತ್ತು ಸ್ಥಳೀಯರ ನೆರವಿನಿಂದ ರಕ್ಷಿಸಲ್ಪಟ್ಟಿರುವ ಘಟನೆ ಕಂಬಿಬಾಣೆ ಚಿಕ್ಲಿಹೊಳೆ ಜಲಾಶಯ ಸಮೀಪ ನಡೆದಿದೆ.
ಕಳೆದ ಒಂದು ವಾರದಿಂದ
ತಾಯಿ ಆನೆ ಮತ್ತು ಅದರ ಮರಿ ಚಿಕ್ಲಿಹೊಳೆ ಜಲಾಶಯ ಸಮೀಪದಲ್ಲಿ ಅಡ್ಡಾಡಿಕೊಂಡಿದ್ದು,
ಮೊನ್ನೆ ರಾತ್ರಿ ಕಬ್ಬಿನಗದ್ದೆ ಕಾಲುವೆಯನ್ನು ದಾಟಲು ಮುಂದಾಗಿವೆ. ತಾಯಿ ಆನೆ ಕಾಲುವೆ ದಾಟಿದೆ. ಆದರೆ ಮರಿ ಆನೆ ಕಾಲುವೆಯಿಂದ ಹಾರುವಾಗ ನೀರಿನೊಳಗೆ ಬಿದ್ದಿದೆ. ನೆನ್ನೆ ಬೆಳಿಗ್ಗೆ ಇದನ್ನು ಗಮನಿಸಿದ ಸ್ಥಳೀಯರು ಆನೆಕಾಡು ಮೀಸಲು ಅರಣ್ಯ ಇಲಾಖೆಯವರ ಗಮನಕ್ಕೆ ತಂದಿದ್ದಾರೆ. ನಂತರ ಅರಣ್ಯ ಇಲಾಖೆಯವರು ಮತ್ತು ಸ್ಥಳೀಯರು ಕಾಲುವೆಯ ಒಂದು ಭಾಗದಲ್ಲಿ ಕಾಡಾನೆ ನೀರಿನಿಂದ ಮೇಲಕ್ಕೆ ಬರಲು ದಾರಿ ಮಾಡಿಕೊಟ್ಟಿದ್ದಾರೆ. ಇವರ ಪರಿಶ್ರಮದಿಂದಾಗಿ ಮರಿ ಆನೆ ಸುರಕ್ಷಿತವಾಗಿ ದಡ ಸೇರಿದೆ.
ಘಟನೆಯ ನಂತರ ಕಾಡು ಸೇರಿಕೊಂಡಿರುವ ತಾಯಿ ಆನೆಯೊಂದಿಗೆ ಅಂದಾಜು 6 ತಿಂಗಳ ಮರಿ ಆನೆಯನ್ನು ಸೇರಿಸುವ ಕಾರ್ಯಾಚರಣೆ ನಡೆಯುತ್ತಿದೆ.
ಕರ್ನಾಟಕದ ಮಾನ್ಯ ಮುಖ್ಯಮಂತ್ರಿ ಶ್ರೀ ಡಿಕೆ ಶಿವಕುಮಾರ್ ಅವರ 100ನೇ ದಿನದ ಸಾಧನಾ ಸಂಭ್ರಮದ ಕಾರ್ಯಕ್ರಮ ವಿಧಾನಸೌಧದ ಬ್ಯಾಂಕ್ವೆಟ್ ಹಾಲಿನಲ್ಲಿ…
ದೊಡ್ಡಬಳ್ಳಾಪುರ: ಮಳೆ ಕೈಕೊಟ್ಟ ಪರಿಣಾಮ ಬಿತ್ತಿದ್ದ ರಾಗಿ ಬೆಳೆ ಒಣಗಿ, ಕೈಗೆ ಬಾರದ ಸ್ಥಿತಿಗೆ ತಲುಪಿದ ಹಿನ್ನೆಲೆಯಲ್ಲಿ ಬೇಸರಗೊಂಡ ರೈತರೊಬ್ಬರು…
ಕೋಲಾರ: ತಾಲೂಕಿನ ವಕ್ಕಲೇರಿ ಹೋಬಳಿಯ ಚಿಕ್ಕನಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘವು 2025–26ನೇ ಸಾಲಿನಲ್ಲಿ ₹2.07 ಲಕ್ಷ ನಿವ್ವಳ ಲಾಭ…
ಬೆಂಗಳೂರು ಗ್ರಾಮಾಂತರ: ಪೋಕ್ಸೋ ಕಾಯ್ದೆಯಡಿ ದಾಖಲಾಗಿದ್ದ ಅತ್ಯಾಚಾರ ಪ್ರಕರಣದಲ್ಲಿ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಅಪರಾಧಿಗೆ 20 ವರ್ಷಗಳ ಕಠಿಣ ಕಾರಾಗೃಹ…
ಕೋಲಾರ: ಬರದಿಂದ ತತ್ತರಿಸಿರುವ ರೈತರ ಬೆಳೆಗಳನ್ನು ರಕ್ಷಿಸಲು ಕೃಷಿ ಪಂಪ್ಸೆಟ್ಗಳಿಗೆ ಪ್ರತಿದಿನ 10 ತಾಸು ಗುಣಮಟ್ಟದ ವಿದ್ಯುತ್ ಪೂರೈಸಬೇಕು. ಬೆಸ್ಕಾಂ…
ದೊಡ್ಡಬಳ್ಳಾಪುರ: ತಾಲೂಕಿನ ಪ್ರಸಿದ್ಧ ಪುಣ್ಯಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಸ್ಥಾನದ ಮುಂಭಾಗದ ತೇರಿನಬೀದಿಯಲ್ಲಿ ಹಲವು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದ ಅಂಗಡಿ ಮಳಿಗೆಗಳನ್ನು ಒತ್ತುವರಿ…