ತಾಯಿ ಆನೆಯೊಂದಿಗೆ ಕಾಲುವೆ ದಾಟುತ್ತಿದ್ದ ಮರಿಯಾನೆ ಆಕಸ್ಮಿಕವಾಗಿ ನೀರಿನೊಳಗೆ ಬಿದ್ದು ನಂತರ ಅರಣ್ಯ ಇಲಾಖೆಯ ಸಿಬ್ಬಂದಿಗಳು ಮತ್ತು ಸ್ಥಳೀಯರ ನೆರವಿನಿಂದ ರಕ್ಷಿಸಲ್ಪಟ್ಟಿರುವ ಘಟನೆ ಕಂಬಿಬಾಣೆ ಚಿಕ್ಲಿಹೊಳೆ ಜಲಾಶಯ ಸಮೀಪ ನಡೆದಿದೆ.
ಕಳೆದ ಒಂದು ವಾರದಿಂದ
ತಾಯಿ ಆನೆ ಮತ್ತು ಅದರ ಮರಿ ಚಿಕ್ಲಿಹೊಳೆ ಜಲಾಶಯ ಸಮೀಪದಲ್ಲಿ ಅಡ್ಡಾಡಿಕೊಂಡಿದ್ದು,
ಮೊನ್ನೆ ರಾತ್ರಿ ಕಬ್ಬಿನಗದ್ದೆ ಕಾಲುವೆಯನ್ನು ದಾಟಲು ಮುಂದಾಗಿವೆ. ತಾಯಿ ಆನೆ ಕಾಲುವೆ ದಾಟಿದೆ. ಆದರೆ ಮರಿ ಆನೆ ಕಾಲುವೆಯಿಂದ ಹಾರುವಾಗ ನೀರಿನೊಳಗೆ ಬಿದ್ದಿದೆ. ನೆನ್ನೆ ಬೆಳಿಗ್ಗೆ ಇದನ್ನು ಗಮನಿಸಿದ ಸ್ಥಳೀಯರು ಆನೆಕಾಡು ಮೀಸಲು ಅರಣ್ಯ ಇಲಾಖೆಯವರ ಗಮನಕ್ಕೆ ತಂದಿದ್ದಾರೆ. ನಂತರ ಅರಣ್ಯ ಇಲಾಖೆಯವರು ಮತ್ತು ಸ್ಥಳೀಯರು ಕಾಲುವೆಯ ಒಂದು ಭಾಗದಲ್ಲಿ ಕಾಡಾನೆ ನೀರಿನಿಂದ ಮೇಲಕ್ಕೆ ಬರಲು ದಾರಿ ಮಾಡಿಕೊಟ್ಟಿದ್ದಾರೆ. ಇವರ ಪರಿಶ್ರಮದಿಂದಾಗಿ ಮರಿ ಆನೆ ಸುರಕ್ಷಿತವಾಗಿ ದಡ ಸೇರಿದೆ.
ಘಟನೆಯ ನಂತರ ಕಾಡು ಸೇರಿಕೊಂಡಿರುವ ತಾಯಿ ಆನೆಯೊಂದಿಗೆ ಅಂದಾಜು 6 ತಿಂಗಳ ಮರಿ ಆನೆಯನ್ನು ಸೇರಿಸುವ ಕಾರ್ಯಾಚರಣೆ ನಡೆಯುತ್ತಿದೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕ್ಷಯರೋಗ (ಟಿಬಿ) ನಿಯಂತ್ರಣಕ್ಕೆ ಆರೋಗ್ಯ ಇಲಾಖೆ ಹಲವು ಹಂತಗಳಲ್ಲಿ ತಪಾಸಣೆ ಹಾಗೂ ಚಿಕಿತ್ಸಾ ಕ್ರಮಗಳನ್ನು ಕೈಗೊಂಡಿದ್ದರೂ,…
ದೊಡ್ಡಬಳ್ಳಾಪುರ: ನಾಗರಾಧನೆಗೆ ಪ್ರಸಿದ್ಧವಾಗಿರುವ ತಾಲೂಕಿನ ಘಾಟಿ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಸೋಮವಾರ ನಾಗರ ಪಂಚಮಿ ಹಬ್ಬವನ್ನು ಭಕ್ತಿಭಾವದಿಂದ ಆಚರಿಸಲಾಯಿತು. ನಾಗರ ಪಂಚಮಿ…
ದೊಡ್ಡಬಳ್ಳಾಪುರ: ನಗರದ 66/11 ಕೆವಿ ಡಿ.ಕ್ರಾಸ್ ವಿದ್ಯುತ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗಿರುವ ಹಿನ್ನೆಲೆಯಲ್ಲಿ ಆ.18ರಂದು ಬೆಳಿಗ್ಗೆ 10ರಿಂದ…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಲಾಗಿದೆ. ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರನ್ನು ಅಧ್ಯಕ್ಷರಾಗಿ,…
ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…
ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…