ತಾಯಿ ಆನೆಯೊಂದಿಗೆ ಕಾಲುವೆ ದಾಟುತ್ತಿದ್ದ ಮರಿಯಾನೆ ಆಕಸ್ಮಿಕವಾಗಿ ನೀರಿನೊಳಗೆ ಬಿದ್ದು ನಂತರ ಅರಣ್ಯ ಇಲಾಖೆಯ ಸಿಬ್ಬಂದಿಗಳು ಮತ್ತು ಸ್ಥಳೀಯರ ನೆರವಿನಿಂದ ರಕ್ಷಿಸಲ್ಪಟ್ಟಿರುವ ಘಟನೆ ಕಂಬಿಬಾಣೆ ಚಿಕ್ಲಿಹೊಳೆ ಜಲಾಶಯ ಸಮೀಪ ನಡೆದಿದೆ.
ಕಳೆದ ಒಂದು ವಾರದಿಂದ
ತಾಯಿ ಆನೆ ಮತ್ತು ಅದರ ಮರಿ ಚಿಕ್ಲಿಹೊಳೆ ಜಲಾಶಯ ಸಮೀಪದಲ್ಲಿ ಅಡ್ಡಾಡಿಕೊಂಡಿದ್ದು,
ಮೊನ್ನೆ ರಾತ್ರಿ ಕಬ್ಬಿನಗದ್ದೆ ಕಾಲುವೆಯನ್ನು ದಾಟಲು ಮುಂದಾಗಿವೆ. ತಾಯಿ ಆನೆ ಕಾಲುವೆ ದಾಟಿದೆ. ಆದರೆ ಮರಿ ಆನೆ ಕಾಲುವೆಯಿಂದ ಹಾರುವಾಗ ನೀರಿನೊಳಗೆ ಬಿದ್ದಿದೆ. ನೆನ್ನೆ ಬೆಳಿಗ್ಗೆ ಇದನ್ನು ಗಮನಿಸಿದ ಸ್ಥಳೀಯರು ಆನೆಕಾಡು ಮೀಸಲು ಅರಣ್ಯ ಇಲಾಖೆಯವರ ಗಮನಕ್ಕೆ ತಂದಿದ್ದಾರೆ. ನಂತರ ಅರಣ್ಯ ಇಲಾಖೆಯವರು ಮತ್ತು ಸ್ಥಳೀಯರು ಕಾಲುವೆಯ ಒಂದು ಭಾಗದಲ್ಲಿ ಕಾಡಾನೆ ನೀರಿನಿಂದ ಮೇಲಕ್ಕೆ ಬರಲು ದಾರಿ ಮಾಡಿಕೊಟ್ಟಿದ್ದಾರೆ. ಇವರ ಪರಿಶ್ರಮದಿಂದಾಗಿ ಮರಿ ಆನೆ ಸುರಕ್ಷಿತವಾಗಿ ದಡ ಸೇರಿದೆ.
ಘಟನೆಯ ನಂತರ ಕಾಡು ಸೇರಿಕೊಂಡಿರುವ ತಾಯಿ ಆನೆಯೊಂದಿಗೆ ಅಂದಾಜು 6 ತಿಂಗಳ ಮರಿ ಆನೆಯನ್ನು ಸೇರಿಸುವ ಕಾರ್ಯಾಚರಣೆ ನಡೆಯುತ್ತಿದೆ.
ಮಳೆ ಎನ್ನುವುದು ರೈತನ ಬದುಕಿನ ಜೀವನಾಡಿ. ಮುಂಗಾರು ವಿಳಂಬವಾದಾಗ ಅಥವಾ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದಿದ್ದರೆ ರೈತರು ಮಾತ್ರವಲ್ಲ, ಗ್ರಾಮೀಣ ಜೀವನವೇ…
ದೊಡ್ಡಬಳ್ಳಾಪುರ–ನೆಲಮಂಗಲ ಮುಖ್ಯ ರಸ್ತೆಯ ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಳೆದರಾತ್ರಿ ಕಾರು ಹಾಗೂ ಅಶೋಕ್ ಲೇಲ್ಯಾಂಡ್ ಸರಕು ವಾಹನದ ನಡುವೆ…
ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…
ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…
ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…
ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…