Categories: ಕೊಡಗು

ಕಾಲುವೆಯಲ್ಲಿ ಸಿಲುಕಿಕೊಂಡ ಮರಿಯಾನೆ: ಅರಣ್ಯ ಇಲಾಖೆ ಹಾಗೂ ಸಾರ್ವಜನಿಕರಿಂದ ಜಂಟಿ ಕಾರ್ಯಾಚರಣೆ ಯಶಸ್ವಿ

ತಾಯಿ ಆನೆಯೊಂದಿಗೆ ಕಾಲುವೆ ದಾಟುತ್ತಿದ್ದ ಮರಿಯಾನೆ ಆಕಸ್ಮಿಕವಾಗಿ ನೀರಿನೊಳಗೆ ಬಿದ್ದು ನಂತರ ಅರಣ್ಯ ಇಲಾಖೆಯ ಸಿಬ್ಬಂದಿಗಳು ಮತ್ತು ಸ್ಥಳೀಯರ ನೆರವಿನಿಂದ ರಕ್ಷಿಸಲ್ಪಟ್ಟಿರುವ ಘಟನೆ ಕಂಬಿಬಾಣೆ ಚಿಕ್ಲಿಹೊಳೆ ಜಲಾಶಯ ಸಮೀಪ ನಡೆದಿದೆ.

ಕಳೆದ ಒಂದು ವಾರದಿಂದ
ತಾಯಿ ಆನೆ ಮತ್ತು ಅದರ ಮರಿ ಚಿಕ್ಲಿಹೊಳೆ ಜಲಾಶಯ ಸಮೀಪದಲ್ಲಿ ಅಡ್ಡಾಡಿಕೊಂಡಿದ್ದು,
ಮೊನ್ನೆ ರಾತ್ರಿ ಕಬ್ಬಿನಗದ್ದೆ ಕಾಲುವೆಯನ್ನು ದಾಟಲು ಮುಂದಾಗಿವೆ. ತಾಯಿ ಆನೆ ಕಾಲುವೆ ದಾಟಿದೆ. ಆದರೆ ಮರಿ ಆನೆ ಕಾಲುವೆಯಿಂದ ಹಾರುವಾಗ ನೀರಿನೊಳಗೆ ಬಿದ್ದಿದೆ. ನೆನ್ನೆ ಬೆಳಿಗ್ಗೆ ಇದನ್ನು ಗಮನಿಸಿದ ಸ್ಥಳೀಯರು ಆನೆಕಾಡು ಮೀಸಲು ಅರಣ್ಯ ಇಲಾಖೆಯವರ ಗಮನಕ್ಕೆ ತಂದಿದ್ದಾರೆ. ನಂತರ ಅರಣ್ಯ ಇಲಾಖೆಯವರು ಮತ್ತು ಸ್ಥಳೀಯರು ಕಾಲುವೆಯ ಒಂದು ಭಾಗದಲ್ಲಿ ಕಾಡಾನೆ ನೀರಿನಿಂದ ಮೇಲಕ್ಕೆ ಬರಲು ದಾರಿ ಮಾಡಿಕೊಟ್ಟಿದ್ದಾರೆ. ಇವರ ಪರಿಶ್ರಮದಿಂದಾಗಿ ಮರಿ ಆನೆ ಸುರಕ್ಷಿತವಾಗಿ ದಡ ಸೇರಿದೆ.

ಘಟನೆಯ ನಂತರ ಕಾಡು ಸೇರಿಕೊಂಡಿರುವ ತಾಯಿ ಆನೆಯೊಂದಿಗೆ ಅಂದಾಜು 6 ತಿಂಗಳ ಮರಿ ಆನೆಯನ್ನು ಸೇರಿಸುವ ಕಾರ್ಯಾಚರಣೆ ನಡೆಯುತ್ತಿದೆ.

Ramesh Babu

Journalist

Recent Posts

ಜ್ಞಾನದ ಬೆಳಕನ್ನು ಜಗತ್ತಿಗೆ ಸಾರಿದ ಮಹಾನ್ ವ್ಯಕ್ತಿ ಭಗವಾನ್ ಬುದ್ಧ- ಎಡಿಸಿ ಸೈಯಿದಾ ಆಯಿಷಾ

ಜ್ಞಾನದ ಬೆಳಕನ್ನು ಜಗತ್ತಿಗೇ ಸಾರಿದಂತಹ ಮಹಾನ್ ಪುರುಷ ಭಗವಾನ್ ಬುದ್ಧರ ತತ್ವಾದರ್ಶಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಂಡು ಒಳ್ಳೆಯ ಸಮಾಜ ನಿರ್ಮಿಸಲು…

2 hours ago

ಗಂಟಿಗಾನಹಳ್ಳಿಯಲ್ಲಿ ಮೇ.3ರಂದು ರಾಷ್ಟ್ರೀಯ ಸೇವಾ ಯೋಜನೆ ವಾರ್ಷಿಕ ವಿಶೇಷ ಶಿಬಿರ: ರಂಗೋಲಿ ಸ್ಪರ್ಧೆ, ವಾಲಿಬಾಲ್ ಪಂದ್ಯಾವಳಿ, ಆರ್ಕೆಸ್ಟ್ರಾ ಆಯೋಜನೆ

ಕಾಲೇಜು ಶಿಕ್ಷಣ ಇಲಾಖೆ, ಡಾ|| ಮನಮೋಹನ್ ಸಿಂಗ್ ಬೆಂಗಳೂರು ನಗರ ವಿಶ್ವವಿದ್ಯಾಲಯ, ಮಲ್ಲೇಶ್ವರಂನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ…

4 hours ago

ಗೋಡೆ ಕೊರೆದು ಕೋಟ್ಯಂತರ ರೂ. ಮೌಲ್ಯದ ಬೆಳ್ಳಿ ಕಳವು

ಗೋಡೆ ಕೊರೆದ ಕಳ್ಳರು ಕೋಟ್ಯಂತರ ರೂ. ಮೌಲ್ಯದ ಚಿನ್ನಾಭರಣ ದೋಚಿ ಎಸ್ಕೇಪ್ ಆಗಿದ್ದಾರೆ. ಗೋಡೆ ಕೊರೆದು 1.20 ಕೋಟಿ ಬೆಲೆ…

6 hours ago

ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಕುಸಿದು ಏಳು‌ ಮಂದಿ ಸಾವು ಪ್ರಕರಣ: ಇಂಜಿನಿಯರ್‌ ರನ್ನು ಅಮಾನತುಗೊಳಿಸಿ, ಆಸ್ಪತ್ರೆ ಮುಖ್ಯಸ್ಥರಿಗೆ ನೋಟಿಸ್‌ ಜಾರಿಗೆ ಸಿಎಂ ಸೂಚನೆ

ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಕುಸಿದು ಏಳು‌ ಮಂದಿ ಸಾವು ಪ್ರಕರಣ: ಇಂಜಿನಿಯರ್‌ ರನ್ನು ಅಮಾನತುಗೊಳಿಸಿ, ಆಸ್ಪತ್ರೆ ಮುಖ್ಯಸ್ಥರಿಗೆ ನೋಟಿಸ್‌…

23 hours ago

ಸಂಭ್ರಮದ ಹಸಿ ಕರಗ ಮಹೋತ್ಸವ

ದೊಡ್ಡಬಳ್ಳಾಪುರ ನಗರದ ಚಿಕ್ಕಪೇಟೆಯ ಇತಿಹಾಸ ಪ್ರಸಿದ್ಧ ಶ್ರೀ ಆದಿಶಕ್ತ್ಯಾತ್ಮಕ ದ್ರೌಪದಾದೇವಿ ಕರಗ ಮಹಹೋತ್ಸವ ಅಂಗವಾಗಿ ಹಸಿ ಕರಗ ಉತ್ಸವ ಸಂಭ್ರಮದಿಂದ…

1 day ago

ನೀರಿನ ಸಮಸ್ಯೆ ತಲೆದೂರದಂತೆ ಹೆಚ್ಚಿನ ನಿಗಾ- ಬೆಂ ಗ್ರಾ ಜಿಪಂ ಸಿಇಒ ಡಾ. ವಾಸಂತಿ ಅಮರ್ ಬಿ.ವಿ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿನ 101 ಗ್ರಾಪಂ ವ್ಯಾಪ್ತಿಯಲ್ಲಿ ನೀರಿನ ಸಮಸ್ಯೆ ತಲೆದೂರದಂತೆ ಹೆಚ್ಚಿನ ನಿಗಾವಹಿಸಲಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಪಂ…

1 day ago