ಕಾಲೇಜು ಸೆಕ್ಯೂರಿಟಿ ಗಾರ್ಡ್ ನ ಕೊಲೆ ಪ್ರಕರಣ: ಸೂಕ್ತ ತನಿಖೆ ಹಾಗೂ ತಪ್ಪಿತಸ್ಥನಿಗೆ ತಕ್ಕ ಶಿಕ್ಷೆಗೆ ರೈತ ಮುಖಂಡನಿಂದ ಆಗ್ರಹ

ಬೆಂಗಳೂರಿನ ಕೆಂಪಾಪುರದಲ್ಲಿರುವ ಕಾಲೇಜಿನಲ್ಲಿ ಕಾಲೇಜು ಸೆಕ್ಯೂರಿಟಿ ಗಾರ್ಡ್ ನ ಕೊಲೆ ನಡೆದಿದೆ. ಕಾಲೇಜಿನ ವಿದ್ಯಾರ್ಥಿಯಿಂದಲೇ ಸೆಕ್ಯೂರಿಟಿ ಗಾರ್ಡ್ ಕೊಲೆ ಆಗಿದೆ. ವಿದ್ಯಾರ್ಥಿಯು ಕಾಲೇಜಿಗೆ ಮದ್ಯ ಸೇವಿಸಿ ಬಂದಿದ್ದ. ಈ ವೇಳೆ ಕಾಲೇಜಿನೊಳಗೆ ಬಿಡದಿದ್ದಕ್ಕೆ ಕೊಲೆ ನಡೆದಿದೆ ಎನ್ನಲಾಗಿದೆ.

ಹೊಟ್ಟೆಪಾಡಿಗಾಗಿ ಕಾಲೇಜಿನಲ್ಲಿ ಸೆಕ್ಯೂರಿಟಿಯಾಗಿ ಕೆಲಸ ಮಾಡುವ ವೇಳೆ ಈ ದುರ್ಘಟನೆ ನಡೆದಿರುವುದು ಖಂಡನೀಯ. ಈ ಕುರಿತು ಸೂಕ್ತ ತನಿಖೆಯಾಗಿ ತಪ್ಪಿತಸ್ಥನಿಗೆ ತಕ್ಕ ಶಿಕ್ಷೆಯಾಗಬೇಕು ಎಂದು ರೈತ ಮುಖಂಡ ಅಂಬರೀಶ್ ಒತ್ತಾಯಿಸಿದ್ದಾರೆ.

ಈ ಕುರಿತು ಸಂಬಂಧಪಟ್ಟವರು ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ನೊಂದ ಕುಟುಂಬಕ್ಕೆ ಸಾಂತ್ವನ ನೀಡದೇ ಇರುವುದು ವಿಪರ್ಯಾಸವೇ ಸರಿ. ಬಡ ಕುಟುಂಬಕ್ಕೆ ನ್ಯಾಯ ಒದಗಿಸಬೇಕು ಎಂದು ಆಗ್ರಹಿಸಿದರು.

ಅಸ್ಸಾಂ ಮೂಲದ ಭಾರ್ಗಬ್ ಪಿಜಿಯಲ್ಲಿ ವಾಸವಿದ್ದು,  ಕಾಲೇಜಿನಲ್ಲಿ ಬಿಎ ಅಂತಿಮ ವರ್ಷದಲ್ಲಿ ವ್ಯಾಸಂಗ ಮಾಡುತ್ತಿದ್ದ. ಸದ್ಯ ಕೊಲೆ ಆರೋಪಿಯನ್ನು ಅಮೃತಹಳ್ಳಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕೊಲೆಯಾದ ಕಿಶೋರ್ ಉತ್ತರ ಭಾರತ ಮೂಲದವರಾಗಿದ್ದು, ಕಳೆದ ಹತ್ತು ವರ್ಷಗಳಿಂದ ಇದೇ ಕಾಲೇಜಿನಲ್ಲಿ ಸೆಕ್ಯೂರಿಟಿ ಗಾರ್ಡ್‌ಗಳ ಮೇಲ್ವಿಚಾರಕರಾಗಿ ಕೆಲಸ ಮಾಡುತ್ತಿದ್ದರು. ಕಾಲೇಜಿನ ಭದ್ರತಾ ಲೋಪವೇ ಈ ಸಾವಿಗೆ ಕಾರಣ ಎಂದು ಮೃತ ಕಿಶೋರ್ ಕುಟುಂಬಸ್ಥರು ಆರೋಪಿಸಿದ್ದಾರೆ.

ಅಮೃತಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Leave a Reply

Your email address will not be published. Required fields are marked *