ಬೆಂಗಳೂರಿನ ಕೆಂಪಾಪುರದಲ್ಲಿರುವ ಕಾಲೇಜಿನಲ್ಲಿ ಕಾಲೇಜು ಸೆಕ್ಯೂರಿಟಿ ಗಾರ್ಡ್ ನ ಕೊಲೆ ನಡೆದಿದೆ. ಕಾಲೇಜಿನ ವಿದ್ಯಾರ್ಥಿಯಿಂದಲೇ ಸೆಕ್ಯೂರಿಟಿ ಗಾರ್ಡ್ ಕೊಲೆ ಆಗಿದೆ. ವಿದ್ಯಾರ್ಥಿಯು ಕಾಲೇಜಿಗೆ ಮದ್ಯ ಸೇವಿಸಿ ಬಂದಿದ್ದ. ಈ ವೇಳೆ ಕಾಲೇಜಿನೊಳಗೆ ಬಿಡದಿದ್ದಕ್ಕೆ ಕೊಲೆ ನಡೆದಿದೆ ಎನ್ನಲಾಗಿದೆ.
ಹೊಟ್ಟೆಪಾಡಿಗಾಗಿ ಕಾಲೇಜಿನಲ್ಲಿ ಸೆಕ್ಯೂರಿಟಿಯಾಗಿ ಕೆಲಸ ಮಾಡುವ ವೇಳೆ ಈ ದುರ್ಘಟನೆ ನಡೆದಿರುವುದು ಖಂಡನೀಯ. ಈ ಕುರಿತು ಸೂಕ್ತ ತನಿಖೆಯಾಗಿ ತಪ್ಪಿತಸ್ಥನಿಗೆ ತಕ್ಕ ಶಿಕ್ಷೆಯಾಗಬೇಕು ಎಂದು ರೈತ ಮುಖಂಡ ಅಂಬರೀಶ್ ಒತ್ತಾಯಿಸಿದ್ದಾರೆ.
ಈ ಕುರಿತು ಸಂಬಂಧಪಟ್ಟವರು ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ನೊಂದ ಕುಟುಂಬಕ್ಕೆ ಸಾಂತ್ವನ ನೀಡದೇ ಇರುವುದು ವಿಪರ್ಯಾಸವೇ ಸರಿ. ಬಡ ಕುಟುಂಬಕ್ಕೆ ನ್ಯಾಯ ಒದಗಿಸಬೇಕು ಎಂದು ಆಗ್ರಹಿಸಿದರು.
ಅಸ್ಸಾಂ ಮೂಲದ ಭಾರ್ಗಬ್ ಪಿಜಿಯಲ್ಲಿ ವಾಸವಿದ್ದು, ಕಾಲೇಜಿನಲ್ಲಿ ಬಿಎ ಅಂತಿಮ ವರ್ಷದಲ್ಲಿ ವ್ಯಾಸಂಗ ಮಾಡುತ್ತಿದ್ದ. ಸದ್ಯ ಕೊಲೆ ಆರೋಪಿಯನ್ನು ಅಮೃತಹಳ್ಳಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕೊಲೆಯಾದ ಕಿಶೋರ್ ಉತ್ತರ ಭಾರತ ಮೂಲದವರಾಗಿದ್ದು, ಕಳೆದ ಹತ್ತು ವರ್ಷಗಳಿಂದ ಇದೇ ಕಾಲೇಜಿನಲ್ಲಿ ಸೆಕ್ಯೂರಿಟಿ ಗಾರ್ಡ್ಗಳ ಮೇಲ್ವಿಚಾರಕರಾಗಿ ಕೆಲಸ ಮಾಡುತ್ತಿದ್ದರು. ಕಾಲೇಜಿನ ಭದ್ರತಾ ಲೋಪವೇ ಈ ಸಾವಿಗೆ ಕಾರಣ ಎಂದು ಮೃತ ಕಿಶೋರ್ ಕುಟುಂಬಸ್ಥರು ಆರೋಪಿಸಿದ್ದಾರೆ.
ಅಮೃತಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಭಾರತದ ಅಗ್ರ ಪೀಠೋಪಕರಣ ಬ್ರ್ಯಾಂಡ್ ಆಗಿರುವ ರಾಯಲ್ ಓಕ್ ಫರ್ನಿಚರ್, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ನೂತನ ಮಳಿಗೆಗೆ ಚಾಲನೆ…
ಎಲ್ಲಾ ವಲಯಗಳಿಗೂ ಯಾವುದೇ ಅಡೆತಡೆ ಇಲ್ಲದೆ ಎಲ್.ಪಿ.ಜಿ ಸರಬರಾಜು ಮಾಡಲಾಗುತ್ತಿದೆ ಅಲ್ಲದೇ ವಿಶೇಷವಾಗಿ *ಆಟೋ ಎಲ್.ಪಿ.ಜಿ*.ಗೆ ಯಾವುದೇ ರೀತಿಯ ಕೊರತೆ…
Cheap Emotional Support Animal Letter: Affordable ESA Documentation Affordable Emotional Support Animal Letters for Enhanced…
ಶ್ರೀರಾಮನವಮಿ ಅಂಗವಾಗಿ ವಿಶ್ವ ಹಿಂದೂ ಪರಿಷತ್ ಬಜರಂಗ ದಳ ವತಿಯಿಂದ ದೊಡ್ಡಬಳ್ಳಾಪುರ ನಗರದಲ್ಲಿ ಮಾರ್ಚ್ 27 ರಿಂದ ಮೂರು ದಿನಗಳ…
ಆಟವಾಡುತ್ತಾ ಈಜಲು ಹೋದ ನಾಲ್ವರು ಮಕ್ಕಳು ಕೃಷಿ ಹೊಂಡದಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಯಾದಗಿರಿ ಜಿಲ್ಲೆಯ ಸುರಪುರ ತಾಲ್ಲೂಕಿನ ನಗನೂರು…
ಶ್ರೀರಾಮನವಮಿ ಅನ್ನ ಪ್ರಸಾದಿಂದ ಗ್ರಾಮಸ್ಥರಿಗೆ ಫುಡ್ ಪಾಯಿಸನ್...!!?ಆಗಿದ್ದು, ಅನ್ನಪ್ರಸಾದ ಸೇವಿಸಿದ ಗ್ರಾಮಸ್ಥರಲ್ಲಿ ಬಹುತೇಕ ಜನ ಆಸ್ಪತ್ರೆ ಪಾಲಾಗಿದ್ದಾರೆ. ಆಸ್ಪತ್ರೆಯಲ್ಲಿ ದಾಖಲಾಗಿರುವ…