ಬೆಂಗಳೂರಿನ ಕೆಂಪಾಪುರದಲ್ಲಿರುವ ಕಾಲೇಜಿನಲ್ಲಿ ಕಾಲೇಜು ಸೆಕ್ಯೂರಿಟಿ ಗಾರ್ಡ್ ನ ಕೊಲೆ ನಡೆದಿದೆ. ಕಾಲೇಜಿನ ವಿದ್ಯಾರ್ಥಿಯಿಂದಲೇ ಸೆಕ್ಯೂರಿಟಿ ಗಾರ್ಡ್ ಕೊಲೆ ಆಗಿದೆ. ವಿದ್ಯಾರ್ಥಿಯು ಕಾಲೇಜಿಗೆ ಮದ್ಯ ಸೇವಿಸಿ ಬಂದಿದ್ದ. ಈ ವೇಳೆ ಕಾಲೇಜಿನೊಳಗೆ ಬಿಡದಿದ್ದಕ್ಕೆ ಕೊಲೆ ನಡೆದಿದೆ ಎನ್ನಲಾಗಿದೆ.
ಹೊಟ್ಟೆಪಾಡಿಗಾಗಿ ಕಾಲೇಜಿನಲ್ಲಿ ಸೆಕ್ಯೂರಿಟಿಯಾಗಿ ಕೆಲಸ ಮಾಡುವ ವೇಳೆ ಈ ದುರ್ಘಟನೆ ನಡೆದಿರುವುದು ಖಂಡನೀಯ. ಈ ಕುರಿತು ಸೂಕ್ತ ತನಿಖೆಯಾಗಿ ತಪ್ಪಿತಸ್ಥನಿಗೆ ತಕ್ಕ ಶಿಕ್ಷೆಯಾಗಬೇಕು ಎಂದು ರೈತ ಮುಖಂಡ ಅಂಬರೀಶ್ ಒತ್ತಾಯಿಸಿದ್ದಾರೆ.
ಈ ಕುರಿತು ಸಂಬಂಧಪಟ್ಟವರು ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ನೊಂದ ಕುಟುಂಬಕ್ಕೆ ಸಾಂತ್ವನ ನೀಡದೇ ಇರುವುದು ವಿಪರ್ಯಾಸವೇ ಸರಿ. ಬಡ ಕುಟುಂಬಕ್ಕೆ ನ್ಯಾಯ ಒದಗಿಸಬೇಕು ಎಂದು ಆಗ್ರಹಿಸಿದರು.
ಅಸ್ಸಾಂ ಮೂಲದ ಭಾರ್ಗಬ್ ಪಿಜಿಯಲ್ಲಿ ವಾಸವಿದ್ದು, ಕಾಲೇಜಿನಲ್ಲಿ ಬಿಎ ಅಂತಿಮ ವರ್ಷದಲ್ಲಿ ವ್ಯಾಸಂಗ ಮಾಡುತ್ತಿದ್ದ. ಸದ್ಯ ಕೊಲೆ ಆರೋಪಿಯನ್ನು ಅಮೃತಹಳ್ಳಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕೊಲೆಯಾದ ಕಿಶೋರ್ ಉತ್ತರ ಭಾರತ ಮೂಲದವರಾಗಿದ್ದು, ಕಳೆದ ಹತ್ತು ವರ್ಷಗಳಿಂದ ಇದೇ ಕಾಲೇಜಿನಲ್ಲಿ ಸೆಕ್ಯೂರಿಟಿ ಗಾರ್ಡ್ಗಳ ಮೇಲ್ವಿಚಾರಕರಾಗಿ ಕೆಲಸ ಮಾಡುತ್ತಿದ್ದರು. ಕಾಲೇಜಿನ ಭದ್ರತಾ ಲೋಪವೇ ಈ ಸಾವಿಗೆ ಕಾರಣ ಎಂದು ಮೃತ ಕಿಶೋರ್ ಕುಟುಂಬಸ್ಥರು ಆರೋಪಿಸಿದ್ದಾರೆ.
ಅಮೃತಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…
ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…
ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…
ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (ಎಸ್ಐಆರ್) ಪ್ರಕ್ರಿಯೆ ಬಿರುಸಿನಿಂದ ಸಾಗುತ್ತಿದ್ದು, ಜಿಲ್ಲೆಯಾದ್ಯಂತ ಒಟ್ಟು 15,721 ಮೃತರ…
ಧಾರ್ಮಿಕ ದತ್ತಿ ಇಲಾಖೆ ವ್ಯಾಪ್ತಿಗೆ ಒಳಪಡುವ ಪ್ರವರ್ಗ ಎ ಮತ್ತು ಬಿ ದೇವಾಲಯಗಳ ಹುಂಡಿ ಭದ್ರತೆ ಸೇರಿದಂತೆ ಎಣಿಕೆ ಕಾರ್ಯ,…