ಕಾಲ್ತುಳಿತ‌ ಪ್ರಕರಣ: ರಾಜ್ಯ ಸರ್ಕಾರ ತನ್ನ ಜವಾಬ್ದಾರಿ ನಿಭಾಯಿಸುವಲ್ಲಿ ವಿಫಲ- ರಾಜಕೀಯ ಲಾಭದ ದುರುದ್ದೇಶದಿಂದ ಕಾರ್ಯಕ್ರಮ ಆಯೋಜನೆ- ಮೃತರ ಕುಟುಂಬಕ್ಕೆ1 ಕೋಟಿ ನಷ್ಟ ಪರಿಹಾರಕ್ಕೆ ಶಾಸಕ ಧೀರಜ್ ಮುನಿರಾಜ್ ಆಗ್ರಹ

ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆರ್​ಸಿಬಿ ವಿಜಯೋತ್ಸವದ ಸಮಯದಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ 11 ಮಂದಿ ಸಾವನ್ನಪ್ಪಿದ್ದಾರೆ. 47 ಮಂದಿ ಗಾಯಗೊಂಡು ಆಸ್ಪತ್ರೆ ಪಾಲಾಗಿದ್ದಾರೆ. ಈ ಪ್ರಕರಣ ಸಂಬಂಧ ರಾಜ್ಯ ಸರ್ಕಾರದ ವಿರುದ್ಧ ದೊಡ್ಡಬಳ್ಳಾಪುರ ಶಾಸಕ ಹಾಗೂ ಬಿಜೆಪಿ ಯುವ ಮೋರ್ಚಾ ರಾಜ್ಯಾಧ್ಯಕ್ಷ ಧೀರಜ್ ಮುನಿರಾಜ್ ವಾಗ್ದಾಳಿ ನಡೆಸಿದ್ದಾರೆ.

ನಗರದ ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಕರ್ನಾಟಕ ರಾಜ್ಯ ಸರ್ಕಾರವು ತನ್ನ ಜವಾಬ್ದಾರಿಯನ್ನು ನಿಭಾಯಿಸುವುದರಲ್ಲಿ ವಿಫಲವಾಗಿದೆ. ಸೂಕ್ತ ವ್ಯವಸ್ಥೆ, ಯೋಜ‌ನೆ ಮತ್ತು ಜನಸಂದಣಿಯ ನಿರ್ವಹಣೆ ಮಾಡದ ಪರಿಣಾಮ ಇಂತಹ ಹೃದಯವಿದ್ರಾವಕ ಘಟನೆ ನಡೆದಿದೆ ಎಂದು ಆಕ್ರೋಶವ್ಯಕ್ತಪಡಿಸಿದರು.

ವಿಧಾನಸೌಧ ಆವರಣದಲ್ಲಿ ಆರ್ಸಿಬಿ ತಂಡಕ್ಕೆ ಸನ್ಮಾನ ಮಾಡುವುದು ಬೇಡ ಎಂದು ಇದಕ್ಕೂ ಮುನ್ನ ಗುಪ್ತಚರ ಇಲಾಖೆ, ಗೃಹ ಇಲಾಖೆ ಸೇರಿದಂತೆ ಎಲ್ಲಾ ಮೂಲಗಳೂ ಎಚ್ಚರಿಸಿದ್ದರೂ ಅದೆಲ್ಲವನ್ನೂ ಕಡೆಗಣಿಸಿ ರಾಜಕೀಯ ಲಾಭ ಪಡೆಯುವ ದುರುದ್ದೇಶದಿಂದ ಕಾರ್ಯಕ್ರಮ ಆಯೋಜಿಸಿ 11 ಮುಗ್ದ ಅಮಾಯಕರ ಜೀವ ತೆಗೆಯಲಾಗಿದೆ ಎಂದು ಸರ್ಕಾರದ ವಿರುದ್ದ ಕಿಡಿಕಾರಿದರು.

ಆರ್ಸಿಬಿ ತಂಡವನ್ನು ಅಭಿನಂದಿಸುವ ಕಾರ್ಯಕ್ರಮವನ್ನು ರಾಜ್ಯ ಸರ್ಕಾರ ಆಯೋಜಿಸಿದೆ. ಆದರೆ, ಇದು ರಾಜ್ಯದ ಕಾರ್ಯಕ್ರಮವಾ ಅಥವಾ ಪಕ್ಷದ ಕಾರ್ಯಕ್ರಮವಾ…? ಇದನ್ನೂ ಕೇವಲ ರಾಜಕೀಯ ಲಾಭಕ್ಕಾಗಿ ಆಯೋಜನೆ ಮಾಡಲಾಗಿದೆ. ಈ ಕಾರ್ಯಕ್ರಮಕ್ಕೆ ರಾಜ್ಯದ ವಿರೋಧಪಕ್ಷದ ನಾಯಕರಿಗಾಗಲಿ ಅಥವಾ ಶಾಸಕರಿಗಾಗಲಿ ಆಹ್ವಾನ ನೀಡಿಲ್ಲ, ಕಾಂಗ್ರೆಸ್ ಮುಖಂಡರು ಅವರ ಮಕ್ಕಳು, ಮೊಮ್ಮಕ್ಕಳು ಮಾತ್ರ ವೇದಿಕೆಯಲ್ಲಿದ್ದರು ಇದನ್ನು ಪಾರ್ಟಿ ಕಾರ್ಯಕ್ರಮದಂತೆ ಮೇಲ್ನೋಟಕ್ಕೆ ಕಂಡುಬಂದಿದೆ….

ಮೃತರ ಕುಟುಂಬಕ್ಕೆ 1 ಕೋಟಿ ನಷ್ಟ ಪರಿಹಾರಕ್ಕೆ ಆಗ್ರಹ:

ಬೆಂಗಳೂರಿನ ವಿಧಾನಸೌಧ ಆವರಣದಲ್ಲಿ ತಮ್ಮ ನೆಚ್ಚಿನ ತಂಡದ ಆಟಗಾರರನ್ನು ನೋಡಲು ಲಕ್ಷಾಂತರ ಸಂಖ್ಯೆಯಲ್ಲಿ ಆರ್ಸಿಬಿ ಅಭಿಮಾನಿಗಳು ಜಮಾಯಿಸಿದ್ದರು. ಸ್ಥಳದಲ್ಲಿ ಉಂಟಾದ ನೂಕುನುಗ್ಗಲಿನಿಂದ 11 ಜನರ ಸಾವಿಗೀಡಾಗಿದ್ದಾರೆ. ಇದಕ್ಕೆ ನೇರ ಹೊಣೆ ರಾಜ್ಯ ಸರ್ಕಾರ, ಸದ್ಯ ಈಗ ಘೋಷಿಸಿರುವ 10 ಲಕ್ಷ ಪರಿಹಾರದಿಂದ ಯುವಕರ ಸಾವಿಗೆ ನ್ಯಾಯ ಸಿಗುವುದಿಲ್ಲ ಹೀಗಾಗಿ ಕನಿಷ್ಟ 1 ಕೋಟಿ ಪರಿಹಾರ ಜೊತೆಗೆ ಮೃತರ ಕುಟುಂಬಸ್ಥರಲ್ಲಿ ಒಬ್ಬರಿಗೆ ಸರ್ಕಾರಿ ನೌಕರಿ ನೀಡಬೇಕು ಎಂದು ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ರಾಮಕೃಷ್ಣಪ್ಪ, ಜಿಲ್ಲಾ ವಕ್ತಾರರಾದ ಪುಷ್ಪಶಿವಶಂಕರ್, ದೊಡ್ಡಬಳ್ಳಾಪುರ ಬಿಜೆಪಿ ನಗರಾಧ್ಯಕ್ಷ ಮುದ್ದಪ್ಪ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹಾಗೂ ನಗರಸಭಾ ಸದಸ್ಯ ಬಂತಿ ವೆಂಕಟೇಶ್, ಮುಖಂಡರಾದ ಮಂಜಣ್ಣ ಸೇರಿದಂತೆ ಇತರರು ಇದ್ದರು.

Ramesh Babu

Journalist

Recent Posts

ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ಎಲೆಕ್ಷನ್: ಗೆದ್ದ ಅಭ್ಯರ್ಥಿ ಪಡೆದ ಮತ ಎಷ್ಟು ಗೊತ್ತಾ…?

ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ಎಲೆಕ್ಷನ್: ಗೆದ್ದ ಅಭ್ಯರ್ಥಿ ಪಡೆದ ಮತ ಎಷ್ಟು ಗೊತ್ತಾ...? ವಾರ್ಡ್ ನಂ.: 1 ಹೆಸರು: ಶ್ವೇತಾ…

37 minutes ago

ಮರ್ಯಾದಾ ಹತ್ಯೆ……..

  ಮರ್ಯಾದಾ ಹತ್ಯೆ........ ಕ್ಷಮಿಸಿ ಬಿಡು ಮಾನ್ಯ ಎಂಬ ಹುಬ್ಬಳ್ಳಿ ಹತ್ತಿರದ ನನ್ನ ಗರ್ಭಿಣಿ ತಂಗಿಯೇ..... ನಮ್ಮದೇ ದೇಶದ, ನಮ್ಮದೇ…

10 hours ago

ಅಪಘಾತದಲ್ಲಿ ಪ್ರಜ್ಞೆ ತಪ್ಪಿಬಿದ್ದ ವ್ಯಕ್ತಿ: ಆಸ್ಪತ್ರೆಗೆ ದಾಖಲಿಸುವುದಾಗಿ ನಂಬಿಸಿ ಫೋನ್ ಪೇ ಮೂಲಕ 80 ಸಾವಿರ ವಸೂಲಿ: ಆಸ್ಪತ್ರೆಗೆ ದಾಖಲಿಸದೇ ಪರಾರಿಯಾಗಿದ್ದ ಐನಾತಿಗಳ ಬಂಧನ

ಅಪಘಾತವಾಗಿ ಬಿದ್ದಿದ್ದ ವ್ಯಕ್ತಿಯ ಮೊಬೈಲ್ ನಿಂದ ಫೋನ್ ಪೇ ಮೂಲಕ 80 ಸಾವಿರ ಮೋಸದಿಂದ ಪಡೆದು ಆಸ್ಪತ್ರೆಗೂ ಸಹ ದಾಖಲಿಸದೇ…

21 hours ago

ಚಿನ್ನಾಭರಣ ಮಳಿಗೆಯಲ್ಲಿ ದರೋಡೆ….3 ಕೋಟಿ ಮೌಲ್ಯದ 140 ಕೆಜಿ ಬೆಳ್ಳಿ ಅಭರಣಗಳ ಕಳವು

ಚಿಕ್ಕಬಳ್ಳಾಪುರ ನಗರದ ಬಿ ಬಿ ರಸ್ತೆಯಲ್ಲಿರುವ ಎಯು ಜ್ಯುವೆಲ್ಲರಿ ಶಾಪ್ ಗೆ ಕನ್ನ ಹಾಕಿರುವ ಕಳ್ಳರು ಸರಿಸುಮಾರು 3 ಕೋಟಿ…

1 day ago

ಕಾಲೇಜಿನಿಂದ ಸಹೋದರನನ್ನು ಮನೆಗೆ ಕರೆದುಕೊಂಡು ಬರುವಾಗ ಜೆಸಿಬಿ ಹಾಗೂ ಬೈಕ್ ನಡುವೆ ಅಪಘಾತ: ಬೈಕ್ ನಲ್ಲಿದ್ದ ಅಣ್ಣ ಸಾವು, ತಮ್ಮನಿಗೆ ಗಾಯ

ಜೆಸಿಬಿ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿ ಓರ್ವ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮತ್ತೋರ್ವನಿಗೆ ಗಾಯಗಳಾಗಿರುವ ಘಟನೆ ನಿನ್ನೆ…

1 day ago