ಕಾಳಸಂತೆಯಲ್ಲಿ ರಸಗೊಬ್ಬರಗಳನ್ನು ಮಾರಾಟ ಮಾಡಿದರೆ ಸೂಕ್ತ ಕಾನೂನು ಕ್ರಮ- ಜಿಲ್ಲಾಧಿಕಾರಿ ಎ.ಬಿ ಬಸವರಾಜು ಎಚ್ಚರಿಕೆ

ಅಧಿಕೃತ ರಸಗೊಬ್ಬರ ಮಾರಾಟ ಪರವಾನಿಗೆ ಇಲ್ಲದೆ ರಸಗೊಬ್ಬರಗಳನ್ನು ಕಾಳಸಂತೆಯಲ್ಲಿ ದಾಸ್ತಾನು ಹಾಗೂ ಮಾರಾಟ ಮಾಡಿದರೆ ಕಟ್ಟುನಿಟ್ಟಿನ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಧಿಕಾರಿ ಎ.ಬಿ ಬಸವರಾಜು ಅವರು ತಿಳಿಸಿದ್ದಾರೆ.

ರಸಗೊಬ್ಬರ ದಾಸ್ತಾನು ಮತ್ತು ಗರಿಷ್ಟ ಮಾರಾಟ (ಎಂ.ಆರ್.ಪಿ) ದರದ ವಿವರಗಳನ್ನು ಸಾರ್ವಜನಿಕರಿಗೆ ಎದ್ದು ಕಾಣುವಂತೆ ಪ್ರಮುಖವಾದ ಸ್ಥಳದಲ್ಲಿ ಪ್ರದರ್ಶಿಸಬೇಕು. ಗರಿಷ್ಟ ಮಾರಾಟ ದರಗಳಿಗಿಂತ ಹೆಚ್ಚಿನ ಬೆಲೆಗೆ ಯಾವುದೇ ರಸಗೊಬ್ಬರಗಳನ್ನು ಮಾರಾಟ ಮಾಡಿದರೆ ಅಂತವರ ವಿರುದ್ಧವು ಕೂಡ ಕ್ರಮ ಕೈಗೊಳ್ಳಲಾಗುವುದು.

*ರಸಗೊಬ್ಬರ ಮಿತ ಬಳಕೆ ಇರಲಿ*

ಅತಿಯಾದ ಯೂರಿಯಾ ರಸಗೊಬ್ಬರದ ಬಳಕೆಯಿಂದ ಸಸ್ಯಗಳ ಬೆಳವಣಿಗೆ ದುರ್ಬಲವಾಗಿ, ಹೂವು ಮತ್ತು ಹಣ್ಣಿನ ಇಳುವರಿಯಲ್ಲಿ ಕುಂಠಿತವಾಗುತ್ತದೆ ಹಾಗೂ ಕೀಟ ಮತ್ತು ರೋಗಗಳ ಉಲ್ಬಣಕ್ಕೆ ಕಾರಣವಾಗುತ್ತದೆ. ಅಲ್ಲದೇ ಮಣ್ಣಿನಲ್ಲಿರುವ ಸೂಕ್ಷ್ಮ ಜೀವಿಗಳ ವೈವಿಧ್ಯತೆ ಮತ್ತು ಪರಿಸರದ ಮೇಲೆ ಗಮನಾರ್ಹವಾದ ಪರಿಣಾಮ ಬೀರುತ್ತದೆ ಹಾಗಾಗಿ ಯೂರಿಯ ರಸಗೊಬ್ಬರ ಬಳಕೆ ಮಿತಿ ಇರಲಿ.

ಯೂರಿಯಾ ಗೊಬ್ಬರವು ರೂಪಾಂತರ ಗೊಳ್ಳುವಾಗ ಬಿಡುಗಡೆಯಾಗುವ ನೈಟ್ರೇಟ್‌ಗಳು ಅಂತರ್ಜಲ ಸೇರಿ ಮಾನವನ ಆರೋಗ್ಯದ ಮೇಲೆ ದುಷ್ಪರಿಣಾಮವನ್ನು ಬೀರುತ್ತದೆ. ಆದ್ದರಿಂದ ಯೂರಿಯಾ ಬಳಕೆಯ ಪರಿಣಾಮಕತ್ವವನ್ನು ಹೆಚ್ಚಿಸಲು ಮತ್ತು ಪರಿಸರದ ಮೇಲಿನ ದುಷ್ಪರಿಣಾಮವನ್ನು ಕಡಿಮೆ ಮಾಡಲು ಎಚ್ಚರಿಕೆಯಿಂದ ನಿರ್ವಹಿಸುವುದು ಹಾಗೂ ಇತರೆ ಪರ್ಯಾಯ ಮಾರ್ಗಗಳನ್ನು ಅನುಸರಿಸುವುದು ಸೂಕ್ತ.

*ಕೊಟ್ಟಿಗೆ, ಸಾವಯವ ಗೊಬ್ಬರ ಬಳಕೆಗೆ ಕೃಷಿ ಇಲಾಖೆ ಸಲಹೆ*

ರೈತರು 3 ವರ್ಷಗಳಿಗೊಮ್ಮೆ ಮಣ್ಣಿನ ಪರೀಕ್ಷೆ ಮಾಡಿಸಿ, ತಮ್ಮ ಜಮೀನಿನ ಮಣ್ಣಿನಲ್ಲಿರುವ ಪೋಷಕಾಂಶಗಳ ಬಗ್ಗೆ ಮಾಹಿತಿ ಪಡೆಯಿರಿ, ಪ್ರತಿ ವರ್ಷ ಇಲ್ಲವಾದಲ್ಲಿ ಎರಡು ವರ್ಷಳಿಗೊಮ್ಮೆ ಕೊಟ್ಟಿಗೆ ಗೊಬ್ಬರ ಅಥವಾ ಸಾವಯವ ಗೊಬ್ಬರ ನೀಡಿ. ಮುಖ್ಯ ಬೆಳೆ ಬಿತ್ತನೆಗೆ ಒಂದೆರಡು ತಿಂಗಳ ಮೊದಲೇ ಹಸಿರು ಗೊಬ್ಬರ ಬೀಜಗಳಾದ ವೆಲೈಟ್ ಬೀನ್ಸ್, ಅಲಸಂದೆ, ಹುರುಳಿ, ಅಪ್ಪಣಬು, ಡಯಾಂಚ ಇಂತಹ ಬೆಳೆಗಳನ್ನು ಹೂವಾಡುವವರೆಗೂ ಬೆಳೆಸಿ, ಮಣ್ಣಿಗೇ ಸೇರಿಸಿ. ಶೇ 50 ರಷ್ಟು ಸಾರಜನಕವನ್ನು ಯೂರಿಯಾ ರೂಪದಲ್ಲಿ ನೀಡಿ. ನೀರಾವರಿ ಇದ್ದಲಿ ಬೆಳವಣಿಗೆ ಹಂತದಲ್ಲಿ ಅವಶ್ಯವಿದ್ದಲ್ಲಿ ಶೇಖಡ 100% ನೀರಿನಲ್ಲಿ ಕರಗುವ ಸಂಯುಕ್ತ ರಸಗೊಬ್ಬರಗಳು ಅಥವಾ ನ್ಯಾನೋ ಯೂರಿಯಾ/ನ್ಯಾನೋ ಡಿಎಪಿ ಸಿಂಪರಣೆ ಮಾಡಿಸಲು ಕೃಷಿ ಇಲಾಖೆ ರೈತರಿಗೆ ಸಲಹೆ ನೀಡಿದೆ.

Ramesh Babu

Journalist

Recent Posts

ಬಿಎಲ್‌ಒ ಕೆಲಸ ಬೇಡ: ಅಂಗನವಾಡಿಗಳಲ್ಲೇ ಎಲ್‌ಕೆಜಿ–ಯುಕೆಜಿ ಆರಂಭಕ್ಕೆ ಅಂಗನವಾಡಿ ನೌಕರರ ಸಂಘ ಒತ್ತಾಯ

ಬೆಂಗಳೂರು ಗ್ರಾಮಾಂತರ: ಬೂತ್ ಮಟ್ಟದ ಅಧಿಕಾರಿ (ಬಿಎಲ್‌ಒ) ಕೆಲಸವನ್ನು ಅಂಗನವಾಡಿ ನೌಕರರಿಗೆ ನೀಡುವುದನ್ನು ತಕ್ಷಣವೇ ಸ್ಥಗಿತಗೊಳಿಸಬೇಕು ಎಂದು ರಾಜ್ಯ ಅಂಗನವಾಡಿ…

12 hours ago

ಟ್ರಂಪ್ ಕಾರ್ಡ್…….

ಟ್ರಂಪ್ ಕಾರ್ಡ್....... ವಿಶ್ವದ ಕ್ರೀಡಾ ಸಂಸ್ಕೃತಿಯ ಘನತೆಗೆ ಚ್ಯುತಿ ತಂದ ಡೊನಾಲ್ಡ್ ಟ್ರಂಪ್... ವಿಶ್ವದ ಕ್ರೀಡಾ ಸಂಸ್ಕೃತಿಗೆ ಅವಮಾನ ಮಾಡಿದ,…

22 hours ago

ಚಿಕ್ಕಮಧುರೆ ಶನಿಮಹಾತ್ಮ ದೇವಾಲಯ ಬಳಿ ಕ್ಯಾಂಟರ್ ಪಲ್ಟಿ: ರಸ್ತೆಬದಿಯ ಅಂಗಡಿಗಳು ಜಖಂ

ದೊಡ್ಡಬಳ್ಳಾಪುರ: ತಾಲೂಕಿನ ಚಿಕ್ಕಮಧುರೆ ಗ್ರಾಮದ ಶನಿಮಹಾತ್ಮ ದೇವಾಲಯದ ಬಳಿ ಕಳೆದ ರಾತ್ರಿ ಸಂಭವಿಸಿದ ಕ್ಯಾಂಟರ್ ಅಪಘಾತದಲ್ಲಿ ರಸ್ತೆಬದಿಯ ಮೂರು-ನಾಲ್ಕು ಅಂಗಡಿಗಳು…

23 hours ago

ಹಾಲಿನ ಖರೀದಿ ದರ ಹೆಚ್ಚಳಕ್ಕೆ ರೈತರ ಬೃಹತ್ ಪ್ರತಿಭಟನೆ

ಹಾಲಿನ ಖರೀದಿ ದರವನ್ನು ಪ್ರತಿ ಲೀಟರ್‌ಗೆ ರೂ. 10 ಹೆಚ್ಚಿಸಬೇಕು ಹಾಗೂ ಹಾಲು ಉತ್ಪಾದಕರಿಗೆ ನೀಡುತ್ತಿರುವ ಪ್ರೋತ್ಸಾಹಧನವನ್ನು ಹೆಚ್ಚಿಸಬೇಕು ಎಂದು…

1 day ago

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿ ಕೇಂದ್ರ ಉನ್ನತೀಕರಣಕ್ಕೆ ಗುದ್ದಲಿ ಪೂಜೆ

ದೊಡ್ಡಬಳ್ಳಾಪುರ: ತಾಲೂಕಿನ ಅನಿಬೆಸೆಂಟ್ ಪಾರ್ಕ್‌ನಲ್ಲಿರುವ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿ ಕೇಂದ್ರವನ್ನು ಉನ್ನತೀಕರಿಸುವ ಕಾಮಗಾರಿಗೆ ಶಾಸಕ ಧೀರಜ್ ಮುನಿರಾಜ್…

1 day ago

ಪ್ರೆಸ್ಟೀಜ್ ಗಾಲ್ಫ್‌ಶೈರ್ ರೆಸಾರ್ಟ್ ವಿಲ್ಲಾಸ್‌ನಲ್ಲಿ ಕರಡಿಗಳ ಪ್ರತ್ಯಕ್ಷ: ನಂದಿಬೆಟ್ಟ ಸಮೀಪ ವನ್ಯಜೀವಿಗಳ ಓಡಾಟದಿಂದ ಆತಂಕ

ದೇವನಹಳ್ಳಿ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಕೋಡಗುರ್ಕಿ ಗ್ರಾಮದ ಸಮೀಪದ ಪ್ರಖ್ಯಾತ ಪ್ರೆಸ್ಟೀಜ್ ಗಾಲ್ಫ್‌ಶೈರ್ ರೆಸಾರ್ಟ್ ವಿಲ್ಲಾಸ್ ಆವರಣದಲ್ಲಿ…

1 day ago