ಕಾಳಸಂತೆಯಲ್ಲಿ ರಸಗೊಬ್ಬರಗಳನ್ನು ಮಾರಾಟ ಮಾಡಿದರೆ ಸೂಕ್ತ ಕಾನೂನು ಕ್ರಮ- ಜಿಲ್ಲಾಧಿಕಾರಿ ಎ.ಬಿ ಬಸವರಾಜು ಎಚ್ಚರಿಕೆ

ಅಧಿಕೃತ ರಸಗೊಬ್ಬರ ಮಾರಾಟ ಪರವಾನಿಗೆ ಇಲ್ಲದೆ ರಸಗೊಬ್ಬರಗಳನ್ನು ಕಾಳಸಂತೆಯಲ್ಲಿ ದಾಸ್ತಾನು ಹಾಗೂ ಮಾರಾಟ ಮಾಡಿದರೆ ಕಟ್ಟುನಿಟ್ಟಿನ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಧಿಕಾರಿ ಎ.ಬಿ ಬಸವರಾಜು ಅವರು ತಿಳಿಸಿದ್ದಾರೆ.

ರಸಗೊಬ್ಬರ ದಾಸ್ತಾನು ಮತ್ತು ಗರಿಷ್ಟ ಮಾರಾಟ (ಎಂ.ಆರ್.ಪಿ) ದರದ ವಿವರಗಳನ್ನು ಸಾರ್ವಜನಿಕರಿಗೆ ಎದ್ದು ಕಾಣುವಂತೆ ಪ್ರಮುಖವಾದ ಸ್ಥಳದಲ್ಲಿ ಪ್ರದರ್ಶಿಸಬೇಕು. ಗರಿಷ್ಟ ಮಾರಾಟ ದರಗಳಿಗಿಂತ ಹೆಚ್ಚಿನ ಬೆಲೆಗೆ ಯಾವುದೇ ರಸಗೊಬ್ಬರಗಳನ್ನು ಮಾರಾಟ ಮಾಡಿದರೆ ಅಂತವರ ವಿರುದ್ಧವು ಕೂಡ ಕ್ರಮ ಕೈಗೊಳ್ಳಲಾಗುವುದು.

*ರಸಗೊಬ್ಬರ ಮಿತ ಬಳಕೆ ಇರಲಿ*

ಅತಿಯಾದ ಯೂರಿಯಾ ರಸಗೊಬ್ಬರದ ಬಳಕೆಯಿಂದ ಸಸ್ಯಗಳ ಬೆಳವಣಿಗೆ ದುರ್ಬಲವಾಗಿ, ಹೂವು ಮತ್ತು ಹಣ್ಣಿನ ಇಳುವರಿಯಲ್ಲಿ ಕುಂಠಿತವಾಗುತ್ತದೆ ಹಾಗೂ ಕೀಟ ಮತ್ತು ರೋಗಗಳ ಉಲ್ಬಣಕ್ಕೆ ಕಾರಣವಾಗುತ್ತದೆ. ಅಲ್ಲದೇ ಮಣ್ಣಿನಲ್ಲಿರುವ ಸೂಕ್ಷ್ಮ ಜೀವಿಗಳ ವೈವಿಧ್ಯತೆ ಮತ್ತು ಪರಿಸರದ ಮೇಲೆ ಗಮನಾರ್ಹವಾದ ಪರಿಣಾಮ ಬೀರುತ್ತದೆ ಹಾಗಾಗಿ ಯೂರಿಯ ರಸಗೊಬ್ಬರ ಬಳಕೆ ಮಿತಿ ಇರಲಿ.

ಯೂರಿಯಾ ಗೊಬ್ಬರವು ರೂಪಾಂತರ ಗೊಳ್ಳುವಾಗ ಬಿಡುಗಡೆಯಾಗುವ ನೈಟ್ರೇಟ್‌ಗಳು ಅಂತರ್ಜಲ ಸೇರಿ ಮಾನವನ ಆರೋಗ್ಯದ ಮೇಲೆ ದುಷ್ಪರಿಣಾಮವನ್ನು ಬೀರುತ್ತದೆ. ಆದ್ದರಿಂದ ಯೂರಿಯಾ ಬಳಕೆಯ ಪರಿಣಾಮಕತ್ವವನ್ನು ಹೆಚ್ಚಿಸಲು ಮತ್ತು ಪರಿಸರದ ಮೇಲಿನ ದುಷ್ಪರಿಣಾಮವನ್ನು ಕಡಿಮೆ ಮಾಡಲು ಎಚ್ಚರಿಕೆಯಿಂದ ನಿರ್ವಹಿಸುವುದು ಹಾಗೂ ಇತರೆ ಪರ್ಯಾಯ ಮಾರ್ಗಗಳನ್ನು ಅನುಸರಿಸುವುದು ಸೂಕ್ತ.

*ಕೊಟ್ಟಿಗೆ, ಸಾವಯವ ಗೊಬ್ಬರ ಬಳಕೆಗೆ ಕೃಷಿ ಇಲಾಖೆ ಸಲಹೆ*

ರೈತರು 3 ವರ್ಷಗಳಿಗೊಮ್ಮೆ ಮಣ್ಣಿನ ಪರೀಕ್ಷೆ ಮಾಡಿಸಿ, ತಮ್ಮ ಜಮೀನಿನ ಮಣ್ಣಿನಲ್ಲಿರುವ ಪೋಷಕಾಂಶಗಳ ಬಗ್ಗೆ ಮಾಹಿತಿ ಪಡೆಯಿರಿ, ಪ್ರತಿ ವರ್ಷ ಇಲ್ಲವಾದಲ್ಲಿ ಎರಡು ವರ್ಷಳಿಗೊಮ್ಮೆ ಕೊಟ್ಟಿಗೆ ಗೊಬ್ಬರ ಅಥವಾ ಸಾವಯವ ಗೊಬ್ಬರ ನೀಡಿ. ಮುಖ್ಯ ಬೆಳೆ ಬಿತ್ತನೆಗೆ ಒಂದೆರಡು ತಿಂಗಳ ಮೊದಲೇ ಹಸಿರು ಗೊಬ್ಬರ ಬೀಜಗಳಾದ ವೆಲೈಟ್ ಬೀನ್ಸ್, ಅಲಸಂದೆ, ಹುರುಳಿ, ಅಪ್ಪಣಬು, ಡಯಾಂಚ ಇಂತಹ ಬೆಳೆಗಳನ್ನು ಹೂವಾಡುವವರೆಗೂ ಬೆಳೆಸಿ, ಮಣ್ಣಿಗೇ ಸೇರಿಸಿ. ಶೇ 50 ರಷ್ಟು ಸಾರಜನಕವನ್ನು ಯೂರಿಯಾ ರೂಪದಲ್ಲಿ ನೀಡಿ. ನೀರಾವರಿ ಇದ್ದಲಿ ಬೆಳವಣಿಗೆ ಹಂತದಲ್ಲಿ ಅವಶ್ಯವಿದ್ದಲ್ಲಿ ಶೇಖಡ 100% ನೀರಿನಲ್ಲಿ ಕರಗುವ ಸಂಯುಕ್ತ ರಸಗೊಬ್ಬರಗಳು ಅಥವಾ ನ್ಯಾನೋ ಯೂರಿಯಾ/ನ್ಯಾನೋ ಡಿಎಪಿ ಸಿಂಪರಣೆ ಮಾಡಿಸಲು ಕೃಷಿ ಇಲಾಖೆ ರೈತರಿಗೆ ಸಲಹೆ ನೀಡಿದೆ.

Ramesh Babu

Journalist

Recent Posts

ಮಧುರೆ ದೇವಾಲಯದ ಬಳಿ ಮೇಲ್ಸೇತುವೆ ಅವ್ಯವಸ್ಥೆ: ಮೇಲಕ್ಕೆ ಚಾಚಿರುವ ಕಂಬಿಗಳಿಂದ ವಾಹನ ಸವಾರರಿಗೆ ತೊಂದರೆ

ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಮಧುರೆ ದೇವಾಲಯದ ಸಮೀಪ ಹೊಸದಾಗಿ ನಿರ್ಮಿಸಿರುವ ಮೇಲ್ಸೇತುವೆ ವಾಹನ ಸವಾರರಿಗೆ ತೀವ್ರ ತೊಂದರೆ ಉಂಟುಮಾಡುತ್ತಿದೆ.…

57 minutes ago

ನಾಯಿ ಕಡಿತದ ಆತಂಕಕ್ಕೆ ಲಸಿಕೆಯ ಕವಚ: ರೇಬೀಸ್ ನಿಯಂತ್ರಣಕ್ಕೆ 32 ಸಾವಿರ ಲಸಿಕೆ

ಬೆಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಹಾಗೂ ರೇಬೀಸ್ ಸೋಂಕಿನ ಆತಂಕಕ್ಕೆ ಕಡಿವಾಣ ಹಾಕಲು ಪಶುಪಾಲನಾ ಇಲಾಖೆ ಬೃಹತ್…

2 hours ago

2028ರ ಚುನಾವಣೆಗೆ ಜಾಲತಾಣವೇ ಅಸ್ತ್ರ- ಸಿಎಂಆರ್ ಶ್ರೀನಾಥ್

ಕೋಲಾರ: 2028ರಲ್ಲಿ ರಾಜ್ಯದಲ್ಲಿ ಎನ್‌ಡಿಎ ಸರ್ಕಾರ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಖಚಿತ. ಸಾಮಾಜಿಕ ಜಾಲತಾಣ ಈಗ ಪರಿಣಾಮಕಾರಿಯಾಗಿದೆ. ಅದನ್ನು…

15 hours ago

ಗಣೇಶ ವಿಸರ್ಜನೆ ವೇಳೆ ಮುಂಜಾಗ್ರತೆ ವಹಿಸಲು ರೈತ ಸಂಘ ಒತ್ತಾಯ: ಕೃಷಿ ಹೊಂಡ, ಕೆರೆ-ಕುಂಟೆಗಳಲ್ಲಿ ವಿಸರ್ಜನೆಗೆ ಕಡಿವಾಣ ಹಾಕಿ: ಜಿಲ್ಲಾಧಿಕಾರಿಗೆ ಮನವಿ

ಕೋಲಾರ : ಗಣೇಶ ಮೂರ್ತಿ ವಿಸರ್ಜನೆ ಸಂದರ್ಭದಲ್ಲಿ ಯಾವುದೇ ರೀತಿಯ ಅನಾಹುತ, ಅಹಿತಕರ ಘಟನೆಗಳು ಸಂಭವಿಸದಂತೆ ಗ್ರಾಮೀಣ ಪ್ರದೇಶಗಳಲ್ಲಿ ಕರಪತ್ರಗಳ…

15 hours ago

ರೈಲಿಗೆ ಸಿಲುಕಿ ಅಪರಿಚಿತ ವ್ಯಕ್ತಿ ಸಾವು

ದೊಡ್ಡಬಳ್ಳಾಪುರ: ಒಡ್ಡರಹಳ್ಳಿ ಹಾಗೂ ದೊಡ್ಡಬಳ್ಳಾಪುರ ರೈಲು ನಿಲ್ದಾಣಗಳ ನಡುವಿನ ಡಿ ಕ್ರಾಸ್ ರೈಲ್ವೆ ಬ್ರಿಡ್ಜ್ ಸಮೀಪ ಶುಕ್ರವಾರ (ಸೆ.11) ಮಧ್ಯಾಹ್ನ…

15 hours ago

ಬಾಶೆಟ್ಟಿಹಳ್ಳಿ ಪಪಂಗೆ ಮೂವರು ನಾಮನಿರ್ದೇಶಿತ ಸದಸ್ಯರ ನೇಮಕ

ದೊಡ್ಡಬಳ್ಳಾಪುರ: ತಾಲೂಕಿನ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿಗೆ ಸರ್ಕಾರವು ಮೂವರು ನಾಮನಿರ್ದೇಶಿತ ಸದಸ್ಯರನ್ನು ನೇಮಕ ಮಾಡಿ ಆದೇಶ ಹೊರಡಿಸಿದೆ. ಕರ್ನಾಟಕ ಪೌರಸಭೆಗಳ…

16 hours ago