ಕಾಳಸಂತೆಯಲ್ಲಿ ರಸಗೊಬ್ಬರಗಳನ್ನು ಮಾರಾಟ ಮಾಡಿದರೆ ಸೂಕ್ತ ಕಾನೂನು ಕ್ರಮ- ಜಿಲ್ಲಾಧಿಕಾರಿ ಎ.ಬಿ ಬಸವರಾಜು ಎಚ್ಚರಿಕೆ

ಅಧಿಕೃತ ರಸಗೊಬ್ಬರ ಮಾರಾಟ ಪರವಾನಿಗೆ ಇಲ್ಲದೆ ರಸಗೊಬ್ಬರಗಳನ್ನು ಕಾಳಸಂತೆಯಲ್ಲಿ ದಾಸ್ತಾನು ಹಾಗೂ ಮಾರಾಟ ಮಾಡಿದರೆ ಕಟ್ಟುನಿಟ್ಟಿನ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಧಿಕಾರಿ ಎ.ಬಿ ಬಸವರಾಜು ಅವರು ತಿಳಿಸಿದ್ದಾರೆ.

ರಸಗೊಬ್ಬರ ದಾಸ್ತಾನು ಮತ್ತು ಗರಿಷ್ಟ ಮಾರಾಟ (ಎಂ.ಆರ್.ಪಿ) ದರದ ವಿವರಗಳನ್ನು ಸಾರ್ವಜನಿಕರಿಗೆ ಎದ್ದು ಕಾಣುವಂತೆ ಪ್ರಮುಖವಾದ ಸ್ಥಳದಲ್ಲಿ ಪ್ರದರ್ಶಿಸಬೇಕು. ಗರಿಷ್ಟ ಮಾರಾಟ ದರಗಳಿಗಿಂತ ಹೆಚ್ಚಿನ ಬೆಲೆಗೆ ಯಾವುದೇ ರಸಗೊಬ್ಬರಗಳನ್ನು ಮಾರಾಟ ಮಾಡಿದರೆ ಅಂತವರ ವಿರುದ್ಧವು ಕೂಡ ಕ್ರಮ ಕೈಗೊಳ್ಳಲಾಗುವುದು.

*ರಸಗೊಬ್ಬರ ಮಿತ ಬಳಕೆ ಇರಲಿ*

ಅತಿಯಾದ ಯೂರಿಯಾ ರಸಗೊಬ್ಬರದ ಬಳಕೆಯಿಂದ ಸಸ್ಯಗಳ ಬೆಳವಣಿಗೆ ದುರ್ಬಲವಾಗಿ, ಹೂವು ಮತ್ತು ಹಣ್ಣಿನ ಇಳುವರಿಯಲ್ಲಿ ಕುಂಠಿತವಾಗುತ್ತದೆ ಹಾಗೂ ಕೀಟ ಮತ್ತು ರೋಗಗಳ ಉಲ್ಬಣಕ್ಕೆ ಕಾರಣವಾಗುತ್ತದೆ. ಅಲ್ಲದೇ ಮಣ್ಣಿನಲ್ಲಿರುವ ಸೂಕ್ಷ್ಮ ಜೀವಿಗಳ ವೈವಿಧ್ಯತೆ ಮತ್ತು ಪರಿಸರದ ಮೇಲೆ ಗಮನಾರ್ಹವಾದ ಪರಿಣಾಮ ಬೀರುತ್ತದೆ ಹಾಗಾಗಿ ಯೂರಿಯ ರಸಗೊಬ್ಬರ ಬಳಕೆ ಮಿತಿ ಇರಲಿ.

ಯೂರಿಯಾ ಗೊಬ್ಬರವು ರೂಪಾಂತರ ಗೊಳ್ಳುವಾಗ ಬಿಡುಗಡೆಯಾಗುವ ನೈಟ್ರೇಟ್‌ಗಳು ಅಂತರ್ಜಲ ಸೇರಿ ಮಾನವನ ಆರೋಗ್ಯದ ಮೇಲೆ ದುಷ್ಪರಿಣಾಮವನ್ನು ಬೀರುತ್ತದೆ. ಆದ್ದರಿಂದ ಯೂರಿಯಾ ಬಳಕೆಯ ಪರಿಣಾಮಕತ್ವವನ್ನು ಹೆಚ್ಚಿಸಲು ಮತ್ತು ಪರಿಸರದ ಮೇಲಿನ ದುಷ್ಪರಿಣಾಮವನ್ನು ಕಡಿಮೆ ಮಾಡಲು ಎಚ್ಚರಿಕೆಯಿಂದ ನಿರ್ವಹಿಸುವುದು ಹಾಗೂ ಇತರೆ ಪರ್ಯಾಯ ಮಾರ್ಗಗಳನ್ನು ಅನುಸರಿಸುವುದು ಸೂಕ್ತ.

*ಕೊಟ್ಟಿಗೆ, ಸಾವಯವ ಗೊಬ್ಬರ ಬಳಕೆಗೆ ಕೃಷಿ ಇಲಾಖೆ ಸಲಹೆ*

ರೈತರು 3 ವರ್ಷಗಳಿಗೊಮ್ಮೆ ಮಣ್ಣಿನ ಪರೀಕ್ಷೆ ಮಾಡಿಸಿ, ತಮ್ಮ ಜಮೀನಿನ ಮಣ್ಣಿನಲ್ಲಿರುವ ಪೋಷಕಾಂಶಗಳ ಬಗ್ಗೆ ಮಾಹಿತಿ ಪಡೆಯಿರಿ, ಪ್ರತಿ ವರ್ಷ ಇಲ್ಲವಾದಲ್ಲಿ ಎರಡು ವರ್ಷಳಿಗೊಮ್ಮೆ ಕೊಟ್ಟಿಗೆ ಗೊಬ್ಬರ ಅಥವಾ ಸಾವಯವ ಗೊಬ್ಬರ ನೀಡಿ. ಮುಖ್ಯ ಬೆಳೆ ಬಿತ್ತನೆಗೆ ಒಂದೆರಡು ತಿಂಗಳ ಮೊದಲೇ ಹಸಿರು ಗೊಬ್ಬರ ಬೀಜಗಳಾದ ವೆಲೈಟ್ ಬೀನ್ಸ್, ಅಲಸಂದೆ, ಹುರುಳಿ, ಅಪ್ಪಣಬು, ಡಯಾಂಚ ಇಂತಹ ಬೆಳೆಗಳನ್ನು ಹೂವಾಡುವವರೆಗೂ ಬೆಳೆಸಿ, ಮಣ್ಣಿಗೇ ಸೇರಿಸಿ. ಶೇ 50 ರಷ್ಟು ಸಾರಜನಕವನ್ನು ಯೂರಿಯಾ ರೂಪದಲ್ಲಿ ನೀಡಿ. ನೀರಾವರಿ ಇದ್ದಲಿ ಬೆಳವಣಿಗೆ ಹಂತದಲ್ಲಿ ಅವಶ್ಯವಿದ್ದಲ್ಲಿ ಶೇಖಡ 100% ನೀರಿನಲ್ಲಿ ಕರಗುವ ಸಂಯುಕ್ತ ರಸಗೊಬ್ಬರಗಳು ಅಥವಾ ನ್ಯಾನೋ ಯೂರಿಯಾ/ನ್ಯಾನೋ ಡಿಎಪಿ ಸಿಂಪರಣೆ ಮಾಡಿಸಲು ಕೃಷಿ ಇಲಾಖೆ ರೈತರಿಗೆ ಸಲಹೆ ನೀಡಿದೆ.

Ramesh Babu

Journalist

Recent Posts

ಫ್ರಿಡ್ಜ್ ಕ್ಲೀನ್ ಮಾಡುವಾಗ ವಿದ್ಯುತ್ ಶಾಕ್: ಮಹಿಳೆ ದುರ್ಮರಣ

ದೊಡ್ಡಬಳ್ಳಾಪುರ: ಫ್ರಿಡ್ಜ್ ಸ್ವಚ್ಛಗೊಳಿಸುತ್ತಿದ್ದ ವೇಳೆ ವಿದ್ಯುತ್ ಶಾಕ್ ಹೊಡೆದು ಮಹಿಳೆಯೊಬ್ಬರು ಮೃತಪಟ್ಟಿರುವ ದುರ್ಘಟನೆ ದೊಡ್ಡಬಳ್ಳಾಪುರ ನಗರದ ಚೈತನ್ಯನಗರದಲ್ಲಿ ನಡೆದಿದೆ. ಮೃತರನ್ನು…

3 hours ago

“ಎಲ್ಲವೂ ವಿಫಲವಾದಾಗ ತಾಳ್ಮೆ ಸಫಲವಾಗುತ್ತದೆ”…….

" ಎಲ್ಲವೂ ವಿಫಲವಾದಾಗ ತಾಳ್ಮೆಯು ಸಫಲವಾಗುತ್ತದೆ....." ಎಂಬ ದಾರ್ಶನಿಕರ ಮಾತು ಎಷ್ಟೊಂದು ಅನುಭಾವದ ಅರ್ಥಪೂರ್ಣ ಮಾತಲ್ಲವೇ.... ಇದಕ್ಕೆ ಅತ್ಯಂತ ನೈಜ…

12 hours ago

ಎಲ್ರಿ ಅಧಿಕಾರಿಗಳು, ಜನರ ಸಮಸ್ಯೆ ಕೇಳೋದ್ಯಾರು..?- ತಹಶೀಲ್ದಾರ್ ಮಲ್ಲಪ್ಪ ಕೆ ಯರಗೋಳಗೆ ಸಚಿವ ಕೆ.ಎಚ್ ಮುನಿಯಪ್ಪ ತೀವ್ರ ತರಾಟೆ

ಎಲ್ರಿ ಅಧಿಕಾರಿಗಳು, ಜನ್ರ ಸಮಸ್ಯೆ ಕೇಳೋದ್ಯಾರು..?ಜನ ನನಗೆ ವೋಟ್ ಹಾಕಿದ್ಯಾಕೆ..? ಅಧಿಕಾರಿಗಳು ಇಲ್ಲಿದ್ರೆ ಜನರ ಸಮಸ್ಯೆ ಕೂಡಲೇ ಬಗೆಹರಿಸಬಹುದಲ್ವಾ.. ವೋಟ್…

23 hours ago

1 ಕೋಟಿ ರೂ. ವೆಚ್ಚದ ಸಿಸಿ ರಸ್ತೆ, ಚರಂಡಿ ಕಾಮಗಾರಿಗೆ ಚಾಲನೆ

ದೇವನಹಳ್ಳಿ ವಿಧಾನ ಸಭಾ ಕ್ಷೇತ್ರದ ಶಾಸಕನಾಗಿರುವ ಜೊತೆಗೆ ಜಿಲ್ಲೆಯ ಉಸ್ತುವಾರಿ ಮಂತ್ರಿಯಾಗಿದ್ದು, ಜಿಲ್ಲೆಯ ಎಲ್ಲಾ ವಿಧಾನಸಭಾ ಕ್ಷೇತಗಳ ಸರ್ವಾಂಗೀಣ ಅಭಿವೃದ್ಧಿಗಳಿಗೆ…

1 day ago

ಪ್ರಸ್ತುತ ಒಂದು ಮಲೇರಿಯಾ, 6 ಡೆಂಗ್ಯೂ ದಾಖಲು: ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಿ:- ಡಿಸಿ ಡಾ.ಕೆ ಎನ್ ಅನುರಾಧ

ಮುಂಗಾರು ಹಂಗಾಮಿನಲ್ಲಿ ಮಳೆಯಿಂದಾಗಿ ಸೊಳ್ಳೆಗಳ ಉತ್ಪತ್ತಿ ಹೆಚ್ಚಾಗಲಿದ್ದು ಇದರಿಂದ ಸಾಂಕ್ರಾಮಿಕ ರೋಗಗಳು ಹರಡುವ ಸಾಧ್ಯತೆ ಇರುವುದರಿಂದ ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ…

2 days ago

ಗ್ರಾಮಾಂತರ ಪೊಲೀಸ್ ಠಾಣೆಗೆ ಬೊಲೆರೋ ವಾಹನ ಹಸ್ತಾಂತರ

ನಗರಕ್ಕೆ ಸಂಚಾರಿ ಪೊಲೀಸ್ ಠಾಣೆ ಮಂಜೂರಾಗಿದೆ. ಆದರೆ, ಇಲ್ಲಿಯವರೆಗೂ ಅನುದಾನ ಬಿಡುಗಡೆ ಮಾಡಿಲ್ಲ. ಪೊಲೀಸ್ ಠಾಣೆಯ ಜೀಪ್ ಗೂ ಶಾಸಕರ…

2 days ago