ಕಾಳಸಂತೆಯಲ್ಲಿ ರಸಗೊಬ್ಬರಗಳನ್ನು ಮಾರಾಟ ಮಾಡಿದರೆ ಸೂಕ್ತ ಕಾನೂನು ಕ್ರಮ- ಜಿಲ್ಲಾಧಿಕಾರಿ ಎ.ಬಿ ಬಸವರಾಜು ಎಚ್ಚರಿಕೆ

ಅಧಿಕೃತ ರಸಗೊಬ್ಬರ ಮಾರಾಟ ಪರವಾನಿಗೆ ಇಲ್ಲದೆ ರಸಗೊಬ್ಬರಗಳನ್ನು ಕಾಳಸಂತೆಯಲ್ಲಿ ದಾಸ್ತಾನು ಹಾಗೂ ಮಾರಾಟ ಮಾಡಿದರೆ ಕಟ್ಟುನಿಟ್ಟಿನ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಧಿಕಾರಿ ಎ.ಬಿ ಬಸವರಾಜು ಅವರು ತಿಳಿಸಿದ್ದಾರೆ.

ರಸಗೊಬ್ಬರ ದಾಸ್ತಾನು ಮತ್ತು ಗರಿಷ್ಟ ಮಾರಾಟ (ಎಂ.ಆರ್.ಪಿ) ದರದ ವಿವರಗಳನ್ನು ಸಾರ್ವಜನಿಕರಿಗೆ ಎದ್ದು ಕಾಣುವಂತೆ ಪ್ರಮುಖವಾದ ಸ್ಥಳದಲ್ಲಿ ಪ್ರದರ್ಶಿಸಬೇಕು. ಗರಿಷ್ಟ ಮಾರಾಟ ದರಗಳಿಗಿಂತ ಹೆಚ್ಚಿನ ಬೆಲೆಗೆ ಯಾವುದೇ ರಸಗೊಬ್ಬರಗಳನ್ನು ಮಾರಾಟ ಮಾಡಿದರೆ ಅಂತವರ ವಿರುದ್ಧವು ಕೂಡ ಕ್ರಮ ಕೈಗೊಳ್ಳಲಾಗುವುದು.

*ರಸಗೊಬ್ಬರ ಮಿತ ಬಳಕೆ ಇರಲಿ*

ಅತಿಯಾದ ಯೂರಿಯಾ ರಸಗೊಬ್ಬರದ ಬಳಕೆಯಿಂದ ಸಸ್ಯಗಳ ಬೆಳವಣಿಗೆ ದುರ್ಬಲವಾಗಿ, ಹೂವು ಮತ್ತು ಹಣ್ಣಿನ ಇಳುವರಿಯಲ್ಲಿ ಕುಂಠಿತವಾಗುತ್ತದೆ ಹಾಗೂ ಕೀಟ ಮತ್ತು ರೋಗಗಳ ಉಲ್ಬಣಕ್ಕೆ ಕಾರಣವಾಗುತ್ತದೆ. ಅಲ್ಲದೇ ಮಣ್ಣಿನಲ್ಲಿರುವ ಸೂಕ್ಷ್ಮ ಜೀವಿಗಳ ವೈವಿಧ್ಯತೆ ಮತ್ತು ಪರಿಸರದ ಮೇಲೆ ಗಮನಾರ್ಹವಾದ ಪರಿಣಾಮ ಬೀರುತ್ತದೆ ಹಾಗಾಗಿ ಯೂರಿಯ ರಸಗೊಬ್ಬರ ಬಳಕೆ ಮಿತಿ ಇರಲಿ.

ಯೂರಿಯಾ ಗೊಬ್ಬರವು ರೂಪಾಂತರ ಗೊಳ್ಳುವಾಗ ಬಿಡುಗಡೆಯಾಗುವ ನೈಟ್ರೇಟ್‌ಗಳು ಅಂತರ್ಜಲ ಸೇರಿ ಮಾನವನ ಆರೋಗ್ಯದ ಮೇಲೆ ದುಷ್ಪರಿಣಾಮವನ್ನು ಬೀರುತ್ತದೆ. ಆದ್ದರಿಂದ ಯೂರಿಯಾ ಬಳಕೆಯ ಪರಿಣಾಮಕತ್ವವನ್ನು ಹೆಚ್ಚಿಸಲು ಮತ್ತು ಪರಿಸರದ ಮೇಲಿನ ದುಷ್ಪರಿಣಾಮವನ್ನು ಕಡಿಮೆ ಮಾಡಲು ಎಚ್ಚರಿಕೆಯಿಂದ ನಿರ್ವಹಿಸುವುದು ಹಾಗೂ ಇತರೆ ಪರ್ಯಾಯ ಮಾರ್ಗಗಳನ್ನು ಅನುಸರಿಸುವುದು ಸೂಕ್ತ.

*ಕೊಟ್ಟಿಗೆ, ಸಾವಯವ ಗೊಬ್ಬರ ಬಳಕೆಗೆ ಕೃಷಿ ಇಲಾಖೆ ಸಲಹೆ*

ರೈತರು 3 ವರ್ಷಗಳಿಗೊಮ್ಮೆ ಮಣ್ಣಿನ ಪರೀಕ್ಷೆ ಮಾಡಿಸಿ, ತಮ್ಮ ಜಮೀನಿನ ಮಣ್ಣಿನಲ್ಲಿರುವ ಪೋಷಕಾಂಶಗಳ ಬಗ್ಗೆ ಮಾಹಿತಿ ಪಡೆಯಿರಿ, ಪ್ರತಿ ವರ್ಷ ಇಲ್ಲವಾದಲ್ಲಿ ಎರಡು ವರ್ಷಳಿಗೊಮ್ಮೆ ಕೊಟ್ಟಿಗೆ ಗೊಬ್ಬರ ಅಥವಾ ಸಾವಯವ ಗೊಬ್ಬರ ನೀಡಿ. ಮುಖ್ಯ ಬೆಳೆ ಬಿತ್ತನೆಗೆ ಒಂದೆರಡು ತಿಂಗಳ ಮೊದಲೇ ಹಸಿರು ಗೊಬ್ಬರ ಬೀಜಗಳಾದ ವೆಲೈಟ್ ಬೀನ್ಸ್, ಅಲಸಂದೆ, ಹುರುಳಿ, ಅಪ್ಪಣಬು, ಡಯಾಂಚ ಇಂತಹ ಬೆಳೆಗಳನ್ನು ಹೂವಾಡುವವರೆಗೂ ಬೆಳೆಸಿ, ಮಣ್ಣಿಗೇ ಸೇರಿಸಿ. ಶೇ 50 ರಷ್ಟು ಸಾರಜನಕವನ್ನು ಯೂರಿಯಾ ರೂಪದಲ್ಲಿ ನೀಡಿ. ನೀರಾವರಿ ಇದ್ದಲಿ ಬೆಳವಣಿಗೆ ಹಂತದಲ್ಲಿ ಅವಶ್ಯವಿದ್ದಲ್ಲಿ ಶೇಖಡ 100% ನೀರಿನಲ್ಲಿ ಕರಗುವ ಸಂಯುಕ್ತ ರಸಗೊಬ್ಬರಗಳು ಅಥವಾ ನ್ಯಾನೋ ಯೂರಿಯಾ/ನ್ಯಾನೋ ಡಿಎಪಿ ಸಿಂಪರಣೆ ಮಾಡಿಸಲು ಕೃಷಿ ಇಲಾಖೆ ರೈತರಿಗೆ ಸಲಹೆ ನೀಡಿದೆ.

Ramesh Babu

Journalist

Recent Posts

ಸುಮಾರು 500 ಕೋಟಿ ಮೌಲ್ಯದ ಜಮೀನು ಖಾತೆ ಬದಲಾವಣೆ ಆರೋಪ: ದೊಡ್ಡಬಳ್ಳಾಪುರ ಉಪವಿಭಾಗದ ಹಿಂದಿನ ಎಸಿ ದುರ್ಗಾಶ್ರೀ ಹಾಗೂ ಕಚೇರಿ ಸಿಬ್ಬಂದಿ ವಿರುದ್ದ ಲೋಕಾಯುಕ್ತ ಸ್ವಯಂಪ್ರೇರಿತ ಪ್ರಕರಣ ದಾಖಲು

ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…

7 hours ago

ಹೂ ಕೀಳುವಾಗ ಹಾವು ಕಚ್ಚಿ ಮಹಿಳೆ ಸಾವು

ದೊಡ್ಡಬಳ್ಳಾಪುರ: ತೋಟದಲ್ಲಿ ಸುಗಂಧರಾಜ ಹೂ ಕೀಳುವಾಗ ಹಾವು ಕಚ್ಚಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಪಚ್ಚಾರ್ಲಳ್ಳಿ…

8 hours ago

ದೇವರಾಜ ಅರಸು ಅವರ ಆಶಯಗಳಿಗೆ ಧ್ವನಿಯಾಗೋಣ-ಡಿಸಿ ಡಾ. ಕೆ.ಎನ್ ಅನುರಾಧ

ಕರ್ನಾಟಕ ಕಂಡ ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಜನಪರ ಯೋಜನೆಗಳು, ಆಶೋತ್ತರಗಳಿಗೆ ನಾವೆಲ್ಲರೂ ಧ್ವನಿಯಾಗಿ ಮುಂದಿನ…

9 hours ago

ಅಂಗನವಾಡಿ ಕಟ್ಟಡ ಅರ್ಧಕ್ಕೆ; ಬಾಡಿಗೆ ಮನೆಯಲ್ಲಿ 30 ಕಂದಮ್ಮಗಳ ಪರದಾಟ: 17.50 ಲಕ್ಷ ವೆಚ್ಚದ ಕಾಮಗಾರಿ ಪೂರ್ಣಗೊಳಿಸದೆ ನಿರ್ಲಕ್ಷ್ಯ ಆರೋಪ

ಮನೆಯಲ್ಲಿ ಆಟವಾಡಿಕೊಂಡು ಕಾಲ ಕಳೆಯುತ್ತಿದ್ದ ಪುಟ್ಟ ಕಂದಮ್ಮಗಳನ್ನು ಪೋಷಕರು ಉತ್ತಮ ಶಿಕ್ಷಣ ದೊರೆಯಲಿ ಎಂಬ ಆಶಯದಿಂದ ಅಂಗನವಾಡಿ ಕೇಂದ್ರಕ್ಕೆ ಕಳುಹಿಸುತ್ತಿದ್ದಾರೆ.…

10 hours ago

ಮೀಸಲಾತಿ ಘೋಷಣೆ ಬೆನ್ನಲ್ಲೇ ಗ್ರಾಮಾಂತರದಲ್ಲಿ ಚುನಾವಣಾ ಕಾವು: ಹಳ್ಳಿಗಳಲ್ಲಿ ಚುರುಕಾದ ರಾಜಕೀಯ ಚಟುವಟಿಕೆ: ಆಕಾಂಕ್ಷಿಗಳಿಂದ ಲೆಕ್ಕಾಚಾರ ಆರಂಭ

  ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗ್ರಾಮ ಪಂಚಾಯಿತಿಗಳ ಚುನಾವಣೆಗೆ ಮೀಸಲಾತಿ ಪ್ರಕಟವಾಗುತ್ತಿದ್ದಂತೆ ಗ್ರಾಮೀಣ ಭಾಗದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಯಾವ…

17 hours ago

ಹೆದ್ದಾರಿ ಸರ್ವೀಸ್ ರಸ್ತೆಗಳಲ್ಲಿ ಭಾರೀ ವಾಹನಗಳ ಅನಧಿಕೃತ ನಿಲುಗಡೆ: ಸಾರ್ವಜನಿಕರ ಜೀವದೊಂದಿಗೆ ಚೆಲ್ಲಾಟ

  ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮೂಲಕ ಹಾದುಹೋಗುವ ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಗಳ ಸರ್ವೀಸ್ ರಸ್ತೆಗಳು ದಿನದಿಂದ ದಿನಕ್ಕೆ ಭಾರಿ…

2 days ago