ಹುಬ್ಬಳ್ಳಿಯಿಂದ ದಾಂಡೇಲಿಗೆ ಪ್ರವಾಸಕ್ಕೆಂದು ಬಂದಿದ್ದ ಒಂದೇ ಕುಟುಂಬದ 6 ಮಂದಿ ಕಾಳಿ ನದಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ.
ಉತ್ತರಕನ್ನಡ ಜಿಲ್ಲೆಯ ದಾಂಡೇಲಿ ತಾಲೂಕಿನ ಬಿರಿಯಂಪಾಲಿ ಗ್ರಾಮದ ಅಕೋಡಾ ಗ್ರಾಮದ ಬಳಿ ಹರಿಯುವ ಕಾಳಿ ನದಿಯಲ್ಲಿ ಘಟನೆ ನಡೆದಿದೆ.
ಹುಬ್ಬಳ್ಳಿಯ ಈಶ್ವರ ನಗರದಿಂದ ಪ್ರವಾಸಕ್ಕೆಂದು ಒಂದೇ ಕುಟುಂಬದ ಆರು ಜನರು ಸಾವನ್ನಪ್ಪಿದ್ದಾರೆ. ನೀರಿನಲ್ಲಿ ಮುಳುಗುತ್ತಿದ್ದ ಒಬ್ಬರನ್ನೊಬ್ಬರು ರಕ್ಷಣೆ ಮಾಡುವುದಕ್ಕೆಂದು ತೆರಳಿ ಎಲ್ಲರೂ ಸಾವನ್ನಪ್ಪಿದ್ದಾರೆ ಎಂದು ಮೇಲ್ನೋಟಕ್ಕೆ ತಿಳಿದುಬಂದಿದೆ.
ಅಗ್ನಿ ಶಾಮಕ ಸಿಬ್ಬಂದಿ ಹಾಗೂ ಸ್ಥಳೀಯ ಈಜುಗಾರರ ಸಹಾಯದಿಂದ ಪೊಲೀಸರು ಮೃತ ದೇಹಗಳನ್ನು ನೀರಿನಿಂದ ಹೊರಗೆ ತೆಗೆದಿದ್ದಾರೆ.
ಮೃತರನ್ನು ನಜೀರ್ ಅಹ್ಮದ್ (40), ರೇಷ್ಮಾ ಉನ್ನಿಸಾ (38), ಇಫ್ರಾ ಅಹ್ಮದ್ (15), ಅಲ್ಛೀಯಾ ಅಹ್ಮದ್ (10), ಆಬೀದ್ ಅಹ್ಮದ್ (12) ಹಾಗೂ ಮೋಹಿನ್ ಅಹ್ಮದ್ (6) ಎಂದು ಗುರುತಿಸಲಾಗಿದೆ.
ತುಮಕೂರು: ರಾಜ್ಯದ 28ಕ್ಕೂ ಹೆಚ್ಚು ಜಿಲ್ಲೆಗಳು ಸಮರ್ಪಕ ಮಳೆಯ ಕೊರತೆಯಿಂದ ತೀವ್ರ ಬರದ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತರ ಹಿತದೃಷ್ಟಿಯಿಂದ ರಾಜ್ಯ…
ರಾಜ್ಯದಲ್ಲಿ ಉಂಟಾಗಿರುವ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಸಚಿವ ಸಂಪುಟದ ಸದಸ್ಯರಿಗೆ…
ದೊಡ್ಡಬಳ್ಳಾಪುರ: ಸಮಾಜ ಸೇವೆಯೇ ಲಯನ್ಸ್ ಕ್ಲಬ್ನ ಮೂಲ ಧ್ಯೇಯವಾಗಿದ್ದು, ನಿರಂತರವಾಗಿ ಸೇವಾ ಕಾರ್ಯಗಳನ್ನು ಮುಂದುವರಿಸಬೇಕು. ಲಯನ್ಸ್ ಕ್ಲಬ್ ಆಫ್ ಕೊನಘಟ್ಟ…
ಮೈಸೂರು: ಹುಣಸೂರು ಉಪ ವಿಭಾಗಾಧಿಕಾರಿ (ಎಸಿ) ಕಾವ್ಯಾರಾಣಿ ಅವರು ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಲೋಕಾಯುಕ್ತ…
ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಹಂತದಲ್ಲಿ 20 ಮಂದಿ ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಇದೇ…
ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಪಟ್ಟಿಯಲ್ಲಿ ಸಚಿವ ಸ್ಥಾನ ಪಡೆಯುವ ನಿರೀಕ್ಷೆಯಲ್ಲಿದ್ದ ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ…