ಕಾಳ ಸಂತೆ ಮಾರಾಟ ತಪ್ಪಿಸಲು 5 ಕೆಜಿ ಅಕ್ಕಿ ಕೊಟ್ಟು ಉಳಿದ ಐದು ಕೆಜಿ ಕಾಳು, ಬೇಳೆ ವಿತರಿಸಲು ತೀರ್ಮಾನ- ಸಿಎಂ ಸಿದ್ದರಾಮಯ್ಯ

ಹಸಿವಿನ ಸಂಕಟ, ಅನ್ನದ ಮೌಲ್ಯ ನನಗೆ ಗೊತ್ತಿದೆ. ಹಾಗಾಗಿಯೇ ಹಸಿದವರ ಹೊಟ್ಟೆತುಂಬಿಸುವ ಅನ್ನಭಾಗ್ಯ ಯೋಜನೆ ಜಾರಿಗೆ ತಂದಿರುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಇಂದು ಆಹಾರ ಮತ್ತು ನಾಗರಿಕ‌ ಸರಬರಾಜು ಇಲಾಖೆ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಆಯೋಜಿಸಿದ್ದ “ವಿಶ್ವ ಆಹಾರ ದಿನ” ಕಾರ್ಯಕ್ರಮವನ್ನು ಉದ್ಘಾಟಿಸಿ, ಮಾತನಾಡಿದರು

ಕವಿ ಬೇಂದ್ರೆಯವರು ರೈತರನ್ನು ಅನ್ನಬ್ರಹ್ಮ ಎಂದು ಕರೆದಿದ್ದಾರೆ. ಆದ್ದರಿಂದ ಅನ್ನ ವ್ಯರ್ಥ ಮಾಡುವುದು, ಬಿಸಾಡುವುದು ಅನ್ನಬ್ರಹ್ಮನಿಗೆ ಮಾಡುವ ಅವಮಾನ.
ನಾವು ಒಂದು ಕಾಲದಲ್ಲಿ ಅನ್ನಕ್ಕಾಗಿ ಅಮೇರಿಕಾದ ಮೇಲೆ ಅವಲಂಭಿತರಾಗಿದ್ದೆವು. ಈಗ ವಿದೇಶಗಳಿಗೆ ರಫ್ತು ಮಾಡುವ ಮಟ್ಟಕ್ಕೆ ಪ್ರಗತಿ ಸಾಧಿಸಿದ್ದೇವೆ. ಇದರ ಜೊತೆಗೆ ಊಟ ವ್ಯರ್ಥ ಮಾಡುವ ಪ್ರಮಾಣವೂ ಹೆಚ್ಚಾಗುತ್ತಿರುವುದು ಬೇಸರದ ಸಂಗತಿ ಎಂದರು.

ಅನ್ನ ವ್ಯರ್ಥ ಮಾಡುವುದು ಪಾಪದ ಕೆಲಸ ಎಂದು ಮಹಾತ್ಮ ಗಾಂಧಿ ಹೇಳಿದ್ದಾರೆ‌. ಬೆಂಗಳೂರು ಒಂದರಲ್ಲೇ ಪ್ರತೀ ವರ್ಷ 943 ಟನ್ ಆಹಾರ ವೇಸ್ಟ್ ಆಗುತ್ತಿದೆ. ಹೆಚ್ಚೂಕಡಿಮೆ 360 ಕೋಟಿ ಮೌಲ್ಯದ ಆಹಾರ ವೇಸ್ಟ್ ಮಾಡುತ್ತಿದ್ದೇವೆ ಎಂದು ಜಿಕೆವಿಕೆ ಅಧ್ಯಯನ ವರದಿ ಹೇಳುತ್ತಿದೆ. ಗೊತ್ತಿದ್ದೂ, ಗೊತ್ತಿದ್ದೂ ಆಹಾರ ವ್ಯರ್ಥ ಮಾಡುವುದು ಅನ್ನಕ್ಕೆ ತೋರಿಸುವ ಅಹಂಕಾರ ಎಂದು ಹೇಳಿದರು.

ಯಾರೂ ಹಸಿವಿನಿಂದ ಮಲಗಬಾರದು ಎನ್ನುವುದು ನಮ್ಮ ಬದ್ಧತೆ. ಹೀಗಾಗಿ ಬಡವರ ಪರವಾದ ಕಾರ್ಯಕ್ರಮಗಳನ್ನು ಜಾರಿಗೆ ತಂದವರು ನಾವು. ಆಹಾರ ಭದ್ರತಾ ಕಾಯ್ದೆಯನ್ನು ಜಾರಿಗೆ ತಂದಿದ್ದು ಪ್ರಧಾನಿ ಮನಮೋಹನ್ ಸಿಂಗ್ ಅವರು. ಆಹಾರ ಭದ್ರತೆ ಕಾಯ್ದೆಯನ್ನು ಬಿಜೆಪಿ ತೀವ್ರವಾಗಿ ವಿರೋಧಿಸಿತ್ತು. ಬಡವರ ವಿರೋಧಿ ನೀತಿ ಬಿಜೆಪಿಯ ಸಿದ್ಧಾಂತ. ಇದನ್ನು ಅರ್ಥ ಮಾಡಿಕೊಳ್ಳಬೇಕು. ಆ ಕಡೆ ಬಿಜೆಪಿಗೂ ಚಪ್ಪಾಳೆ ತಟ್ಟೋದು, ಈ ಕಡೆ ಬಡವರ ಪರ ಕಾರ್ಯಕ್ರಮ ಕೊಟ್ಟ ನಮಗೂ ಚಪ್ಪಾಳೆ ತಟ್ಟೋದು ಮಾಡಬೇಡಿ. ಅನ್ನದ ಪರವಾಗಿ ಇರುವ ನಮ್ಮ ಬದ್ಧತೆಯನ್ನು ನೀವೆಲ್ಲರೂ ಅರ್ಥ ಮಾಡಿಕೊಳ್ಳಬೇಕು‌ ಎಂದು ತಿಳಿಸಿದರು.

ಅನ್ನಭಾಗ್ಯದ ಅಕ್ಕಿಯನ್ನು ಸಂಗ್ರಹಿಸಿ ಕಾಳ ಸಂತೆಯಲ್ಲಿ ಮಾರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು. ಕಾಳ ಸಂತೆ ಮಾರಾಟ ತಪ್ಪಿಸಲು 5 ಕೆಜಿ ಅಕ್ಕಿ ಕೊಟ್ಟು ಉಳಿದ ಐದು ಕೆಜಿ ಕಾಳು, ಬೇಳೆ ವಿತರಿಸಲು ತೀರ್ಮಾನಿಸಿದ್ದೇವೆ. ಆಹಾರದ ಬಗ್ಗೆ ಜಾಗ್ರತೆ, ಸಣ್ಣ ರೈತರ ರಕ್ಷಣೆ ಮಾಡುವುದು ನಮ್ಮ, ನಿಮ್ಮ ಮತ್ತು ನಾಗರಿಕ ಸಮಾಜದ ಜವಾಬ್ದಾರಿ ಎಂದರು.

Ramesh Babu

Journalist

Recent Posts

ಗ್ಯಾಸ್ ಸಿಲಿಂಡರ್ ವಿತರಣೆಯಲ್ಲಿ ಸಮಸ್ಯೆ ಉಂಟಾದಲ್ಲಿ ಆಹಾರ ನಿರೀಕ್ಷಕರನ್ನು ಸಂಪರ್ಕಿಸಿ- ಡಿಸಿ ಡಾ. ಕೆ.ಎನ್ ಅನುರಾಧ

ಜಿಲ್ಲೆಯಾದ್ಯಂತ ಎಲ್ಪಿಜಿ ಸಿಲಿಂಡರ್ ಪೂರೈಕೆಯಲ್ಲಿ ಸಾರ್ವಜನಿಕ ಕುಂದುಕೊರತೆಗಳು ಕಂಡು ಬಂದಲ್ಲಿ ತಾಲ್ಲೂಕಿನ ಆಹಾರ ಶಾಖೆಯ ಆಹಾರ ನಿರೀಕ್ಷಕರನ್ನು ದೂರವಾಣಿ ಮೂಲಕ…

10 hours ago

ಶೀಘ್ರದಲ್ಲೇ ಹೋಟೆಲ್ ಗಳಿಗೂ ಅಡಿಗೆ ಅನಿಲ ಪೂರೈಕೆ – ಆಹಾರ ಸಚಿವ ಕೆ ಎಚ್ ಮುನಿಯಪ್ಪ‌

ರಾಜ್ಯದಲ್ಲಿ ಎಲ್‌ಪಿಜಿ ಸಿಲಿಂಡರ್ ಕೊರತೆ ಇಲ್ಲದೆ ಸರಬರಾಜು ನಿಯಮಿತವಾಗಿ ನಡೆಯುತ್ತಿದೆ. ಕೆಲವೆಡೆ ಜನರು ಪ್ಯಾನಿಕ್‌ನಿಂದ ಅಗತ್ಯಕ್ಕಿಂತ ಹೆಚ್ಚು ಬುಕ್ಕಿಂಗ್ ಮಾಡುತ್ತಿರುವುದರಿಂದ…

15 hours ago

‘ಪ್ರಸಾದ್ 2.0’ (PRASHAD 2.0) ಯೋಜನೆಯಡಿ ಘಾಟಿ ಸುಬ್ರಹ್ಮಣ್ಯ ಸ್ವಾಮಿ ದೇವಾಲಯದ ಸಮಗ್ರ ಅಭಿವೃದ್ಧಿ ವಿಚಾರ: ಶ್ರೀ ಘಾಟಿ ಸುಬ್ರಹ್ಮಣ್ಯ ಅಭಿವೃದ್ಧಿ ಪ್ರಾಧಿಕಾರ ಸದಸ್ಯರಾದ ರಂಗಪ್ಪ, ಆರ್.ವಿ ಮಹೇಶ್ ಕುಮಾರ್ ಸಂತಸ

ನವದೆಹಲಿಯಲ್ಲಿ ಕೇಂದ್ರ ಪ್ರವಾಸೋದ್ಯಮ ಸಚಿವರಾದ ಶ್ರೀ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು ಸಂಸದ ಡಾ.ಕೆ.ಸುಧಾಕರ್ ಭೇಟಿ ಮಾಡಿ, 'ಪ್ರಸಾದ್ 2.0'…

15 hours ago

ರೀಲ್ಸ್ ಮಾಡುವ ಮಹಿಳೆಯರ ಜೊತೆ ರೀಲ್ಸ್ ಮಂಜಣ್ಣ ಹೆಲ್ಮೆಟ್ ಇಲ್ಲದೇ ಬೈಕಿನಲ್ಲಿ ತ್ರಿಬಲ್ ರೈಡಿಂಗ್: ಸಾಮಾಜಿಕ‌ ಜಾಲತಣದಲ್ಲಿ ವಿಡಿಯೋ ಪೋಸ್ಟ್: ಪೊಲೀಸರಿಂದ ಬಿತ್ತು ಫೈನ್: ಕೊನೆಗೆ ಫೈನ್ ಕಟ್ಟಿ ಕ್ಷಮೆಯಾಚನೆ

ಸಾಮಾಜಿಕ ಜಾಲತಾಣಗಳಲ್ಲಿ ವಿಚಿತ್ರ, ವಿಕಾರವಾಗಿ ರೀಲ್ಸ್ ಮಾಡುತ್ತಿದ್ದ ರೀಲ್ಸ್ ಮಂಜಣ್ಣ ಅಂತಾನೇ ಕರೆಸಿಕೊಳ್ಳುವ ಮಂಜ ಬೈಕ್ ನಲ್ಲಿ ತ್ರಿಬಲ್ ರೈಡ್…

23 hours ago

ಆನ್ ಲೈನ್ ನಲ್ಲಿ ಒಂದು ರೂ. ಗೆ ಹಾಲು ಮಾರಾಟ: ಪ್ರಾಂತ ರೈತ ಸಂಘ ಆಕ್ರೋಶ: ಅಮಿತ್ ಶಾ ರಾಜೀನಾಮೆಗೆ ಆಗ್ರಹ

ಕೋಲಾರ: ಅಮೆಜಾನ್‌ ಸಹಭಾಗಿತ್ವದ ಫ್ಲಿಪ್ ಕಾರ್ಟ್ ನಲ್ಲಿ ಲೀಟರ್ ಹಾಲನ್ನು ಒಂದು ರೂ. ಗೆ ಮಾರಾಟದ ಅವಕಾಶ ಕಲ್ಪಿಸಿರುವುದು ಅತ್ಯಂತ…

2 days ago