ಕಾಳ ಸಂತೆ ಮಾರಾಟ ತಪ್ಪಿಸಲು 5 ಕೆಜಿ ಅಕ್ಕಿ ಕೊಟ್ಟು ಉಳಿದ ಐದು ಕೆಜಿ ಕಾಳು, ಬೇಳೆ ವಿತರಿಸಲು ತೀರ್ಮಾನ- ಸಿಎಂ ಸಿದ್ದರಾಮಯ್ಯ

ಹಸಿವಿನ ಸಂಕಟ, ಅನ್ನದ ಮೌಲ್ಯ ನನಗೆ ಗೊತ್ತಿದೆ. ಹಾಗಾಗಿಯೇ ಹಸಿದವರ ಹೊಟ್ಟೆತುಂಬಿಸುವ ಅನ್ನಭಾಗ್ಯ ಯೋಜನೆ ಜಾರಿಗೆ ತಂದಿರುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಇಂದು ಆಹಾರ ಮತ್ತು ನಾಗರಿಕ‌ ಸರಬರಾಜು ಇಲಾಖೆ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಆಯೋಜಿಸಿದ್ದ “ವಿಶ್ವ ಆಹಾರ ದಿನ” ಕಾರ್ಯಕ್ರಮವನ್ನು ಉದ್ಘಾಟಿಸಿ, ಮಾತನಾಡಿದರು

ಕವಿ ಬೇಂದ್ರೆಯವರು ರೈತರನ್ನು ಅನ್ನಬ್ರಹ್ಮ ಎಂದು ಕರೆದಿದ್ದಾರೆ. ಆದ್ದರಿಂದ ಅನ್ನ ವ್ಯರ್ಥ ಮಾಡುವುದು, ಬಿಸಾಡುವುದು ಅನ್ನಬ್ರಹ್ಮನಿಗೆ ಮಾಡುವ ಅವಮಾನ.
ನಾವು ಒಂದು ಕಾಲದಲ್ಲಿ ಅನ್ನಕ್ಕಾಗಿ ಅಮೇರಿಕಾದ ಮೇಲೆ ಅವಲಂಭಿತರಾಗಿದ್ದೆವು. ಈಗ ವಿದೇಶಗಳಿಗೆ ರಫ್ತು ಮಾಡುವ ಮಟ್ಟಕ್ಕೆ ಪ್ರಗತಿ ಸಾಧಿಸಿದ್ದೇವೆ. ಇದರ ಜೊತೆಗೆ ಊಟ ವ್ಯರ್ಥ ಮಾಡುವ ಪ್ರಮಾಣವೂ ಹೆಚ್ಚಾಗುತ್ತಿರುವುದು ಬೇಸರದ ಸಂಗತಿ ಎಂದರು.

ಅನ್ನ ವ್ಯರ್ಥ ಮಾಡುವುದು ಪಾಪದ ಕೆಲಸ ಎಂದು ಮಹಾತ್ಮ ಗಾಂಧಿ ಹೇಳಿದ್ದಾರೆ‌. ಬೆಂಗಳೂರು ಒಂದರಲ್ಲೇ ಪ್ರತೀ ವರ್ಷ 943 ಟನ್ ಆಹಾರ ವೇಸ್ಟ್ ಆಗುತ್ತಿದೆ. ಹೆಚ್ಚೂಕಡಿಮೆ 360 ಕೋಟಿ ಮೌಲ್ಯದ ಆಹಾರ ವೇಸ್ಟ್ ಮಾಡುತ್ತಿದ್ದೇವೆ ಎಂದು ಜಿಕೆವಿಕೆ ಅಧ್ಯಯನ ವರದಿ ಹೇಳುತ್ತಿದೆ. ಗೊತ್ತಿದ್ದೂ, ಗೊತ್ತಿದ್ದೂ ಆಹಾರ ವ್ಯರ್ಥ ಮಾಡುವುದು ಅನ್ನಕ್ಕೆ ತೋರಿಸುವ ಅಹಂಕಾರ ಎಂದು ಹೇಳಿದರು.

ಯಾರೂ ಹಸಿವಿನಿಂದ ಮಲಗಬಾರದು ಎನ್ನುವುದು ನಮ್ಮ ಬದ್ಧತೆ. ಹೀಗಾಗಿ ಬಡವರ ಪರವಾದ ಕಾರ್ಯಕ್ರಮಗಳನ್ನು ಜಾರಿಗೆ ತಂದವರು ನಾವು. ಆಹಾರ ಭದ್ರತಾ ಕಾಯ್ದೆಯನ್ನು ಜಾರಿಗೆ ತಂದಿದ್ದು ಪ್ರಧಾನಿ ಮನಮೋಹನ್ ಸಿಂಗ್ ಅವರು. ಆಹಾರ ಭದ್ರತೆ ಕಾಯ್ದೆಯನ್ನು ಬಿಜೆಪಿ ತೀವ್ರವಾಗಿ ವಿರೋಧಿಸಿತ್ತು. ಬಡವರ ವಿರೋಧಿ ನೀತಿ ಬಿಜೆಪಿಯ ಸಿದ್ಧಾಂತ. ಇದನ್ನು ಅರ್ಥ ಮಾಡಿಕೊಳ್ಳಬೇಕು. ಆ ಕಡೆ ಬಿಜೆಪಿಗೂ ಚಪ್ಪಾಳೆ ತಟ್ಟೋದು, ಈ ಕಡೆ ಬಡವರ ಪರ ಕಾರ್ಯಕ್ರಮ ಕೊಟ್ಟ ನಮಗೂ ಚಪ್ಪಾಳೆ ತಟ್ಟೋದು ಮಾಡಬೇಡಿ. ಅನ್ನದ ಪರವಾಗಿ ಇರುವ ನಮ್ಮ ಬದ್ಧತೆಯನ್ನು ನೀವೆಲ್ಲರೂ ಅರ್ಥ ಮಾಡಿಕೊಳ್ಳಬೇಕು‌ ಎಂದು ತಿಳಿಸಿದರು.

ಅನ್ನಭಾಗ್ಯದ ಅಕ್ಕಿಯನ್ನು ಸಂಗ್ರಹಿಸಿ ಕಾಳ ಸಂತೆಯಲ್ಲಿ ಮಾರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು. ಕಾಳ ಸಂತೆ ಮಾರಾಟ ತಪ್ಪಿಸಲು 5 ಕೆಜಿ ಅಕ್ಕಿ ಕೊಟ್ಟು ಉಳಿದ ಐದು ಕೆಜಿ ಕಾಳು, ಬೇಳೆ ವಿತರಿಸಲು ತೀರ್ಮಾನಿಸಿದ್ದೇವೆ. ಆಹಾರದ ಬಗ್ಗೆ ಜಾಗ್ರತೆ, ಸಣ್ಣ ರೈತರ ರಕ್ಷಣೆ ಮಾಡುವುದು ನಮ್ಮ, ನಿಮ್ಮ ಮತ್ತು ನಾಗರಿಕ ಸಮಾಜದ ಜವಾಬ್ದಾರಿ ಎಂದರು.

Ramesh Babu

Journalist

Recent Posts

ಕೆ.ಸಿ.ವ್ಯಾಲಿಯಿಂದ ಜಿಲ್ಲೆಯ ರೈತರ ಬದುಕು ಹಸನು- ಕಾಂಗ್ರೆಸ್‌ ಮುಖಂಡ ಜನಪಹಳ್ಳಿ ನವೀನ್‌

ಕೋಲಾರ: ಕೆ.ಸಿ.ವ್ಯಾಲಿ ಯೋಜನೆಯಿಂದ ಅಂತರ್ಜಲ ಹೆಚ್ಚಿ ರೈತರ ಬದುಕು ಹಸನಾಗಿದ್ದು, ಜೆಡಿಎಸ್‌ ಪಕ್ಷ ಸೇರಿದಂತೆ ಕೆಲ ಮುಖಂಡರಿಂದ ದಾರಿ ತಪ್ಪಿಸುವ…

9 hours ago

ಸಾಲುಮರದ ತಿಮ್ಮಕ್ಕ ಅವರಿಗೆ ನುಡಿನಮನ

ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಕನ್ನಡ ಜಾಗೃತ ಪರಿಷತ್ತು  ವತಿಯಿಂದ ಪದ್ಮಶ್ರೀ ಸಾಲುಮರದ ತಿಮ್ಮಕ್ಕ ಅವರಿಗೆ ನುಡಿನಮನ…

10 hours ago

ಆಲಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯ ಸಹ ಶಿಕ್ಷಕ ಅರುಣ್ ಅವರು ವರ್ಗಾವಣೆ: ಮಕ್ಕಳು, ಶಿಕ್ಷಕ ಭಾವುಕ

ಆಲಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯ ಸಹ ಶಿಕ್ಷಕ ಅರುಣ್ ಅವರು ವರ್ಗಾವಣೆಗೊಂಡಿದ್ದು, ಈ ಹಿನ್ನೆಲೆ ಇಂದು ಎಸ್…

12 hours ago

ಬಿಜೆಪಿ-ಜೆಡಿಎಸ್ ಸಂಸದರು ರಾಜ್ಯಕ್ಕೆ ಕೇಂದ್ರದಿಂದ ಆಗುತ್ತಿರುವ ಅನ್ಯಾಯದ ಬಗ್ಗೆ ಬಾಯಿಯನ್ನೇ ಬಿಡುತ್ತಿಲ್ಲ- ಸಿಎಂ ಸಿದ್ದರಾಮಯ್ಯ

ಬಿಜೆಪಿ-ಜೆಡಿಎಸ್ ಸಂಸದರು ರಾಜ್ಯಕ್ಕೆ ಕೇಂದ್ರದಿಂದ ಆಗುತ್ತಿರುವ ಅನ್ಯಾಯದ ಬಗ್ಗೆ ಬಾಯಿಯನ್ನೇ ಬಿಡುತ್ತಿಲ್ಲ.‌ ಪ್ರಹ್ಲಾದ್ ಜೋಶಿ ಕೂಡ ಒಂದೇ ಒಂದು ದಿನ…

20 hours ago

ಚುನಾವಣಾ ಫಲಿತಾಂಶದ ವಿಶ್ಲೇಷಣೆ…..

ಗೆದ್ದವರಿಗೆ ಅಭಿನಂದಿಸುತ್ತಾ, ಸೋತವರಿಗೆ ಸಾಂತ್ವನ ಹೇಳುತ್ತಾ, ಮತದಾರರಿಗೆ ಧನ್ಯವಾದಗಳನ್ನು ಅರ್ಪಿಸುತ್ತಾ, ಸಂವಿಧಾನಕ್ಕೆ ಸಲಾಂ ಹೊಡೆಯುತ್ತಾ, ನಮ್ಮ ಮುಗ್ದತೆ ಮತ್ತು ಮೂರ್ಖತನ…

22 hours ago

ಡಿ.13ರಂದು ರಾಷ್ಟ್ರೀಯ ಲೋಕ ಅದಾಲತ್: ರಾಜೀಯಾಗುವ ಪ್ರಕರಣಗಳ ವಿಲೇವಾರಿಗೊಳಿಸಲು ಸಭೆ

ಡಿ.13ರಂದು ರಾಷ್ಟ್ರೀಯ ಲೋಕ ಅದಾಲತ್ ನಡೆಯಲಿದ್ದು, ರಾಷ್ಟ್ರೀಯ ಲೋಕ ಅದಾಲತ್ ಮುಖೇನ ರಾಜೀಯಾಗುವ ಪ್ರಕರಣಗಳ ವಿಲೇವಾರಿಗೊಳಿಸುವಂತೆ ಕರ್ನಾಟಕ ರಾಜ್ಯ ಕಾನೂನು…

1 day ago