ಕಾಳ ಸಂತೆ ಮಾರಾಟ ತಪ್ಪಿಸಲು 5 ಕೆಜಿ ಅಕ್ಕಿ ಕೊಟ್ಟು ಉಳಿದ ಐದು ಕೆಜಿ ಕಾಳು, ಬೇಳೆ ವಿತರಿಸಲು ತೀರ್ಮಾನ- ಸಿಎಂ ಸಿದ್ದರಾಮಯ್ಯ

ಹಸಿವಿನ ಸಂಕಟ, ಅನ್ನದ ಮೌಲ್ಯ ನನಗೆ ಗೊತ್ತಿದೆ. ಹಾಗಾಗಿಯೇ ಹಸಿದವರ ಹೊಟ್ಟೆತುಂಬಿಸುವ ಅನ್ನಭಾಗ್ಯ ಯೋಜನೆ ಜಾರಿಗೆ ತಂದಿರುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಇಂದು ಆಹಾರ ಮತ್ತು ನಾಗರಿಕ‌ ಸರಬರಾಜು ಇಲಾಖೆ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಆಯೋಜಿಸಿದ್ದ “ವಿಶ್ವ ಆಹಾರ ದಿನ” ಕಾರ್ಯಕ್ರಮವನ್ನು ಉದ್ಘಾಟಿಸಿ, ಮಾತನಾಡಿದರು

ಕವಿ ಬೇಂದ್ರೆಯವರು ರೈತರನ್ನು ಅನ್ನಬ್ರಹ್ಮ ಎಂದು ಕರೆದಿದ್ದಾರೆ. ಆದ್ದರಿಂದ ಅನ್ನ ವ್ಯರ್ಥ ಮಾಡುವುದು, ಬಿಸಾಡುವುದು ಅನ್ನಬ್ರಹ್ಮನಿಗೆ ಮಾಡುವ ಅವಮಾನ.
ನಾವು ಒಂದು ಕಾಲದಲ್ಲಿ ಅನ್ನಕ್ಕಾಗಿ ಅಮೇರಿಕಾದ ಮೇಲೆ ಅವಲಂಭಿತರಾಗಿದ್ದೆವು. ಈಗ ವಿದೇಶಗಳಿಗೆ ರಫ್ತು ಮಾಡುವ ಮಟ್ಟಕ್ಕೆ ಪ್ರಗತಿ ಸಾಧಿಸಿದ್ದೇವೆ. ಇದರ ಜೊತೆಗೆ ಊಟ ವ್ಯರ್ಥ ಮಾಡುವ ಪ್ರಮಾಣವೂ ಹೆಚ್ಚಾಗುತ್ತಿರುವುದು ಬೇಸರದ ಸಂಗತಿ ಎಂದರು.

ಅನ್ನ ವ್ಯರ್ಥ ಮಾಡುವುದು ಪಾಪದ ಕೆಲಸ ಎಂದು ಮಹಾತ್ಮ ಗಾಂಧಿ ಹೇಳಿದ್ದಾರೆ‌. ಬೆಂಗಳೂರು ಒಂದರಲ್ಲೇ ಪ್ರತೀ ವರ್ಷ 943 ಟನ್ ಆಹಾರ ವೇಸ್ಟ್ ಆಗುತ್ತಿದೆ. ಹೆಚ್ಚೂಕಡಿಮೆ 360 ಕೋಟಿ ಮೌಲ್ಯದ ಆಹಾರ ವೇಸ್ಟ್ ಮಾಡುತ್ತಿದ್ದೇವೆ ಎಂದು ಜಿಕೆವಿಕೆ ಅಧ್ಯಯನ ವರದಿ ಹೇಳುತ್ತಿದೆ. ಗೊತ್ತಿದ್ದೂ, ಗೊತ್ತಿದ್ದೂ ಆಹಾರ ವ್ಯರ್ಥ ಮಾಡುವುದು ಅನ್ನಕ್ಕೆ ತೋರಿಸುವ ಅಹಂಕಾರ ಎಂದು ಹೇಳಿದರು.

ಯಾರೂ ಹಸಿವಿನಿಂದ ಮಲಗಬಾರದು ಎನ್ನುವುದು ನಮ್ಮ ಬದ್ಧತೆ. ಹೀಗಾಗಿ ಬಡವರ ಪರವಾದ ಕಾರ್ಯಕ್ರಮಗಳನ್ನು ಜಾರಿಗೆ ತಂದವರು ನಾವು. ಆಹಾರ ಭದ್ರತಾ ಕಾಯ್ದೆಯನ್ನು ಜಾರಿಗೆ ತಂದಿದ್ದು ಪ್ರಧಾನಿ ಮನಮೋಹನ್ ಸಿಂಗ್ ಅವರು. ಆಹಾರ ಭದ್ರತೆ ಕಾಯ್ದೆಯನ್ನು ಬಿಜೆಪಿ ತೀವ್ರವಾಗಿ ವಿರೋಧಿಸಿತ್ತು. ಬಡವರ ವಿರೋಧಿ ನೀತಿ ಬಿಜೆಪಿಯ ಸಿದ್ಧಾಂತ. ಇದನ್ನು ಅರ್ಥ ಮಾಡಿಕೊಳ್ಳಬೇಕು. ಆ ಕಡೆ ಬಿಜೆಪಿಗೂ ಚಪ್ಪಾಳೆ ತಟ್ಟೋದು, ಈ ಕಡೆ ಬಡವರ ಪರ ಕಾರ್ಯಕ್ರಮ ಕೊಟ್ಟ ನಮಗೂ ಚಪ್ಪಾಳೆ ತಟ್ಟೋದು ಮಾಡಬೇಡಿ. ಅನ್ನದ ಪರವಾಗಿ ಇರುವ ನಮ್ಮ ಬದ್ಧತೆಯನ್ನು ನೀವೆಲ್ಲರೂ ಅರ್ಥ ಮಾಡಿಕೊಳ್ಳಬೇಕು‌ ಎಂದು ತಿಳಿಸಿದರು.

ಅನ್ನಭಾಗ್ಯದ ಅಕ್ಕಿಯನ್ನು ಸಂಗ್ರಹಿಸಿ ಕಾಳ ಸಂತೆಯಲ್ಲಿ ಮಾರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು. ಕಾಳ ಸಂತೆ ಮಾರಾಟ ತಪ್ಪಿಸಲು 5 ಕೆಜಿ ಅಕ್ಕಿ ಕೊಟ್ಟು ಉಳಿದ ಐದು ಕೆಜಿ ಕಾಳು, ಬೇಳೆ ವಿತರಿಸಲು ತೀರ್ಮಾನಿಸಿದ್ದೇವೆ. ಆಹಾರದ ಬಗ್ಗೆ ಜಾಗ್ರತೆ, ಸಣ್ಣ ರೈತರ ರಕ್ಷಣೆ ಮಾಡುವುದು ನಮ್ಮ, ನಿಮ್ಮ ಮತ್ತು ನಾಗರಿಕ ಸಮಾಜದ ಜವಾಬ್ದಾರಿ ಎಂದರು.

Ramesh Babu

Journalist

Recent Posts

ಬಿಸವನಹಳ್ಳಿಯಲ್ಲಿ ಅದ್ವಿತಾ ಜನ್ಮದಿನ ಅರ್ಥಪೂರ್ಣ ಆಚರಣೆ

ಗಣೇಶ್ ಕುಮಾರ್ ಮತ್ತು ಪೂರ್ಣಿಮಾ ಅವರ ಪೋಷಕತ್ವದಲ್ಲಿ, ಕೇಶವ ಮತ್ತು ಸುಷ್ಮಾ ದಂಪತಿಯ ಪುತ್ರಿ ಅದ್ವಿತಾ ಅವರ ಜನ್ಮದಿನವನ್ನು ಬಿಸವನಹಳ್ಳಿ…

2 hours ago

ಕಾರಿಗೆ ಅಡ್ಡ ಬಂದ ನಾಯಿ: ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ

ದೊಡ್ಡಬಳ್ಳಾಪುರ: ಹಿಂದೂಪುರ–ಯಲಹಂಕ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರಿಗೆ ದಿಢೀರನೆ ನಾಯಿ ಅಡ್ಡ ಬಂದ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ…

5 hours ago

ಅನುಭವ, ಹಿರಿತನಕ್ಕೆ ತಕ್ಕಂತೆ ಸಚಿವ ಸ್ಥಾನ ನೀಡಿ- ಮನು.ಆರ್.ವಿ ಒತ್ತಾಯ

ಕೆ.ಎಚ್ ಮುನಿಯಪ್ಪನವರು ಏಳು ಬಾರಿ ಲೋಕಸಭಾ ಸದಸ್ಯರಾಗಿ, ಎರಡು ಬಾರಿ ಕೇಂದ್ರ ಸಚಿವರಾಗಿ, ಅಪಾರ ಅನುಭವ ಹಾಗೂ ಅವರ ಹಿರಿತನಕ್ಕೆ…

17 hours ago

ಜೂ..7ರಂದು ‘ವಾಸ್ತುವಿನ ನಡಿಗೆ ಗ್ರಾಮದ ಕಡೆಗೆ’ ಕಾರ್ಯಕ್ರಮ: ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಭಾಗಿ- ಪೂತಮಾನಸ ಜ್ಯೋತಿಷ್ಯಾಲಯ ವ್ಯವಸ್ಥಾಪಕ ಡಾ.ಗಿರೀಶ್ ಕೆ

ಸಾಮಾನ್ಯ ಜನರಿಗೆ ವಾಸ್ತು ಸೂತ್ರಗಳ ಅನ್ವಯ ಜ್ಞಾನವನ್ನು ನೀಡುವ ಸಲುವಾಗಿ ಶ್ರೀ ಪೂತಮಾನಸ ಜ್ಯೋತಿಷ್ಯಾಲಯ ವತಿಯಿಂದ ಸುಕನ್ಯ ಮತ್ತು ಎಸ್.ಕೃಷ್ಣಮೂರ್ತಿ…

18 hours ago

ಜೂ. 20 ರಿಂದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಅರಂಭ- ಜಿಲ್ಲಾಧಿಕಾರಿ ಡಾ. ಕೆ.ಎನ್ ಅನುರಾಧ

ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಜೂನ್ 20 ರಿಂದ ಜಿಲ್ಲೆಯಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ಯನ್ನು…

20 hours ago

ಪರಿಸರ ಸಂರಕ್ಷಣೆ ಪ್ರತಿಯೊಬ್ಬ ನಾಗರಿಕನ ಕರ್ತವ್ಯ

  ದೊಡ್ಡಬಳ್ಳಾಪುರ: ಪರಿಸರವನ್ನು ಕಾಪಾಡುವುದು ಕೇವಲ ಸರ್ಕಾರದ ಜವಾಬ್ದಾರಿಯಲ್ಲ, ಅದು ಪ್ರತಿಯೊಬ್ಬ ನಾಗರಿಕನ ಕರ್ತವ್ಯವಾಗಿದೆ. ನಾವು ಇಂದು ಮಾಡುವ ಸಣ್ಣ…

22 hours ago