ಹಸಿವಿನ ಸಂಕಟ, ಅನ್ನದ ಮೌಲ್ಯ ನನಗೆ ಗೊತ್ತಿದೆ. ಹಾಗಾಗಿಯೇ ಹಸಿದವರ ಹೊಟ್ಟೆತುಂಬಿಸುವ ಅನ್ನಭಾಗ್ಯ ಯೋಜನೆ ಜಾರಿಗೆ ತಂದಿರುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
ಇಂದು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಆಯೋಜಿಸಿದ್ದ “ವಿಶ್ವ ಆಹಾರ ದಿನ” ಕಾರ್ಯಕ್ರಮವನ್ನು ಉದ್ಘಾಟಿಸಿ, ಮಾತನಾಡಿದರು
ಕವಿ ಬೇಂದ್ರೆಯವರು ರೈತರನ್ನು ಅನ್ನಬ್ರಹ್ಮ ಎಂದು ಕರೆದಿದ್ದಾರೆ. ಆದ್ದರಿಂದ ಅನ್ನ ವ್ಯರ್ಥ ಮಾಡುವುದು, ಬಿಸಾಡುವುದು ಅನ್ನಬ್ರಹ್ಮನಿಗೆ ಮಾಡುವ ಅವಮಾನ.
ನಾವು ಒಂದು ಕಾಲದಲ್ಲಿ ಅನ್ನಕ್ಕಾಗಿ ಅಮೇರಿಕಾದ ಮೇಲೆ ಅವಲಂಭಿತರಾಗಿದ್ದೆವು. ಈಗ ವಿದೇಶಗಳಿಗೆ ರಫ್ತು ಮಾಡುವ ಮಟ್ಟಕ್ಕೆ ಪ್ರಗತಿ ಸಾಧಿಸಿದ್ದೇವೆ. ಇದರ ಜೊತೆಗೆ ಊಟ ವ್ಯರ್ಥ ಮಾಡುವ ಪ್ರಮಾಣವೂ ಹೆಚ್ಚಾಗುತ್ತಿರುವುದು ಬೇಸರದ ಸಂಗತಿ ಎಂದರು.
ಅನ್ನ ವ್ಯರ್ಥ ಮಾಡುವುದು ಪಾಪದ ಕೆಲಸ ಎಂದು ಮಹಾತ್ಮ ಗಾಂಧಿ ಹೇಳಿದ್ದಾರೆ. ಬೆಂಗಳೂರು ಒಂದರಲ್ಲೇ ಪ್ರತೀ ವರ್ಷ 943 ಟನ್ ಆಹಾರ ವೇಸ್ಟ್ ಆಗುತ್ತಿದೆ. ಹೆಚ್ಚೂಕಡಿಮೆ 360 ಕೋಟಿ ಮೌಲ್ಯದ ಆಹಾರ ವೇಸ್ಟ್ ಮಾಡುತ್ತಿದ್ದೇವೆ ಎಂದು ಜಿಕೆವಿಕೆ ಅಧ್ಯಯನ ವರದಿ ಹೇಳುತ್ತಿದೆ. ಗೊತ್ತಿದ್ದೂ, ಗೊತ್ತಿದ್ದೂ ಆಹಾರ ವ್ಯರ್ಥ ಮಾಡುವುದು ಅನ್ನಕ್ಕೆ ತೋರಿಸುವ ಅಹಂಕಾರ ಎಂದು ಹೇಳಿದರು.
ಯಾರೂ ಹಸಿವಿನಿಂದ ಮಲಗಬಾರದು ಎನ್ನುವುದು ನಮ್ಮ ಬದ್ಧತೆ. ಹೀಗಾಗಿ ಬಡವರ ಪರವಾದ ಕಾರ್ಯಕ್ರಮಗಳನ್ನು ಜಾರಿಗೆ ತಂದವರು ನಾವು. ಆಹಾರ ಭದ್ರತಾ ಕಾಯ್ದೆಯನ್ನು ಜಾರಿಗೆ ತಂದಿದ್ದು ಪ್ರಧಾನಿ ಮನಮೋಹನ್ ಸಿಂಗ್ ಅವರು. ಆಹಾರ ಭದ್ರತೆ ಕಾಯ್ದೆಯನ್ನು ಬಿಜೆಪಿ ತೀವ್ರವಾಗಿ ವಿರೋಧಿಸಿತ್ತು. ಬಡವರ ವಿರೋಧಿ ನೀತಿ ಬಿಜೆಪಿಯ ಸಿದ್ಧಾಂತ. ಇದನ್ನು ಅರ್ಥ ಮಾಡಿಕೊಳ್ಳಬೇಕು. ಆ ಕಡೆ ಬಿಜೆಪಿಗೂ ಚಪ್ಪಾಳೆ ತಟ್ಟೋದು, ಈ ಕಡೆ ಬಡವರ ಪರ ಕಾರ್ಯಕ್ರಮ ಕೊಟ್ಟ ನಮಗೂ ಚಪ್ಪಾಳೆ ತಟ್ಟೋದು ಮಾಡಬೇಡಿ. ಅನ್ನದ ಪರವಾಗಿ ಇರುವ ನಮ್ಮ ಬದ್ಧತೆಯನ್ನು ನೀವೆಲ್ಲರೂ ಅರ್ಥ ಮಾಡಿಕೊಳ್ಳಬೇಕು ಎಂದು ತಿಳಿಸಿದರು.
ಅನ್ನಭಾಗ್ಯದ ಅಕ್ಕಿಯನ್ನು ಸಂಗ್ರಹಿಸಿ ಕಾಳ ಸಂತೆಯಲ್ಲಿ ಮಾರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು. ಕಾಳ ಸಂತೆ ಮಾರಾಟ ತಪ್ಪಿಸಲು 5 ಕೆಜಿ ಅಕ್ಕಿ ಕೊಟ್ಟು ಉಳಿದ ಐದು ಕೆಜಿ ಕಾಳು, ಬೇಳೆ ವಿತರಿಸಲು ತೀರ್ಮಾನಿಸಿದ್ದೇವೆ. ಆಹಾರದ ಬಗ್ಗೆ ಜಾಗ್ರತೆ, ಸಣ್ಣ ರೈತರ ರಕ್ಷಣೆ ಮಾಡುವುದು ನಮ್ಮ, ನಿಮ್ಮ ಮತ್ತು ನಾಗರಿಕ ಸಮಾಜದ ಜವಾಬ್ದಾರಿ ಎಂದರು.
ದೊಡ್ಡಬಳ್ಳಾಪುರ: ಅಲ್ಯೂಮಿನಿಯಂ ವಿದ್ಯುತ್ ಕೇಬಲ್ ಕಳ್ಳತನ ಪ್ರಕರಣಗಳನ್ನು ಭೇದಿಸಿರುವ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು, ಅಂತರರಾಜ್ಯ ಕೇಬಲ್ ಕಳ್ಳರ ಜಾಲವನ್ನು…
ದೊಡ್ಡಬಳ್ಳಾಪುರ : ಹೊರದೇಶಗಳಲ್ಲಿ ಅಲ್ಲಿನ ನೆಲದ ಕಾನೂನಿಗೆ ಬದ್ಧವಾಗಿ ನೋಂದಣಿ ಮಾಡಿಸಿಕೊಂಡಿರುವ ಸಂಘ ಪರಿವಾರ, ಇಲ್ಲಿನ ನೆಲದ ಕಾನೂನಿಗೆ ವ್ಯತಿರಿಕ್ತವಾಗಿ…
ದೊಡ್ಡಬಳ್ಳಾಪುರ: ತೂಬಗೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಮಂಗಳವಾರ ನಡೆಯಬೇಕಿದ್ದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವು ಕೊನೆಯ ಕ್ಷಣದಲ್ಲಿ ಕಾಲೇಜು ವತಿಯಿಂದ…
ಮುಂಗಾರು ಆರಂಭವಾಗಿದ್ದರೂ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಆತಂಕಕಾರಿ ರೀತಿಯಲ್ಲಿ ಕುಸಿಯುತ್ತಿದೆ. ಸಾಮಾನ್ಯವಾಗಿ…
ರಕ್ತ ಸಿಕ್ತ ದೆಹಲಿ...... ಇದು ಒಳ್ಳೆಯ ಬೆಳವಣಿಗೆಯಲ್ಲ.... ದೆಹಲಿ ವಿದ್ಯಾರ್ಥಿಗಳ ಪ್ರತಿಭಟನೆ ಲಾಟಿಚಾರ್ಜ್ ಹಂತಕ್ಕೆ ತಲುಪುವ ಮೊದಲೇ ಸರ್ಕಾರ ಒಂದಷ್ಟು…
ದೊಡ್ಡಬಳ್ಳಾಪುರ: ಎತ್ತಿನಹೊಳೆ ಸಮಗ್ರ ಕುಡಿಯುವ ನೀರಿನ ಯೋಜನೆಯ ಅಂಗವಾಗಿ ದೊಡ್ಡಬಳ್ಳಾಪುರ ತಾಲ್ಲೂಕಿನ ಲಕ್ಕೇನಹಳ್ಳಿ ಬಳಿ ಡ್ಯಾಂ ನಿರ್ಮಿಸಲು ಉದ್ದೇಶಿಸಿರುವ ಕ್ರಮಕ್ಕೆ…