ಕಾಳ ಸಂತೆ ಮಾರಾಟ ತಪ್ಪಿಸಲು 5 ಕೆಜಿ ಅಕ್ಕಿ ಕೊಟ್ಟು ಉಳಿದ ಐದು ಕೆಜಿ ಕಾಳು, ಬೇಳೆ ವಿತರಿಸಲು ತೀರ್ಮಾನ- ಸಿಎಂ ಸಿದ್ದರಾಮಯ್ಯ

ಹಸಿವಿನ ಸಂಕಟ, ಅನ್ನದ ಮೌಲ್ಯ ನನಗೆ ಗೊತ್ತಿದೆ. ಹಾಗಾಗಿಯೇ ಹಸಿದವರ ಹೊಟ್ಟೆತುಂಬಿಸುವ ಅನ್ನಭಾಗ್ಯ ಯೋಜನೆ ಜಾರಿಗೆ ತಂದಿರುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಇಂದು ಆಹಾರ ಮತ್ತು ನಾಗರಿಕ‌ ಸರಬರಾಜು ಇಲಾಖೆ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಆಯೋಜಿಸಿದ್ದ “ವಿಶ್ವ ಆಹಾರ ದಿನ” ಕಾರ್ಯಕ್ರಮವನ್ನು ಉದ್ಘಾಟಿಸಿ, ಮಾತನಾಡಿದರು

ಕವಿ ಬೇಂದ್ರೆಯವರು ರೈತರನ್ನು ಅನ್ನಬ್ರಹ್ಮ ಎಂದು ಕರೆದಿದ್ದಾರೆ. ಆದ್ದರಿಂದ ಅನ್ನ ವ್ಯರ್ಥ ಮಾಡುವುದು, ಬಿಸಾಡುವುದು ಅನ್ನಬ್ರಹ್ಮನಿಗೆ ಮಾಡುವ ಅವಮಾನ.
ನಾವು ಒಂದು ಕಾಲದಲ್ಲಿ ಅನ್ನಕ್ಕಾಗಿ ಅಮೇರಿಕಾದ ಮೇಲೆ ಅವಲಂಭಿತರಾಗಿದ್ದೆವು. ಈಗ ವಿದೇಶಗಳಿಗೆ ರಫ್ತು ಮಾಡುವ ಮಟ್ಟಕ್ಕೆ ಪ್ರಗತಿ ಸಾಧಿಸಿದ್ದೇವೆ. ಇದರ ಜೊತೆಗೆ ಊಟ ವ್ಯರ್ಥ ಮಾಡುವ ಪ್ರಮಾಣವೂ ಹೆಚ್ಚಾಗುತ್ತಿರುವುದು ಬೇಸರದ ಸಂಗತಿ ಎಂದರು.

ಅನ್ನ ವ್ಯರ್ಥ ಮಾಡುವುದು ಪಾಪದ ಕೆಲಸ ಎಂದು ಮಹಾತ್ಮ ಗಾಂಧಿ ಹೇಳಿದ್ದಾರೆ‌. ಬೆಂಗಳೂರು ಒಂದರಲ್ಲೇ ಪ್ರತೀ ವರ್ಷ 943 ಟನ್ ಆಹಾರ ವೇಸ್ಟ್ ಆಗುತ್ತಿದೆ. ಹೆಚ್ಚೂಕಡಿಮೆ 360 ಕೋಟಿ ಮೌಲ್ಯದ ಆಹಾರ ವೇಸ್ಟ್ ಮಾಡುತ್ತಿದ್ದೇವೆ ಎಂದು ಜಿಕೆವಿಕೆ ಅಧ್ಯಯನ ವರದಿ ಹೇಳುತ್ತಿದೆ. ಗೊತ್ತಿದ್ದೂ, ಗೊತ್ತಿದ್ದೂ ಆಹಾರ ವ್ಯರ್ಥ ಮಾಡುವುದು ಅನ್ನಕ್ಕೆ ತೋರಿಸುವ ಅಹಂಕಾರ ಎಂದು ಹೇಳಿದರು.

ಯಾರೂ ಹಸಿವಿನಿಂದ ಮಲಗಬಾರದು ಎನ್ನುವುದು ನಮ್ಮ ಬದ್ಧತೆ. ಹೀಗಾಗಿ ಬಡವರ ಪರವಾದ ಕಾರ್ಯಕ್ರಮಗಳನ್ನು ಜಾರಿಗೆ ತಂದವರು ನಾವು. ಆಹಾರ ಭದ್ರತಾ ಕಾಯ್ದೆಯನ್ನು ಜಾರಿಗೆ ತಂದಿದ್ದು ಪ್ರಧಾನಿ ಮನಮೋಹನ್ ಸಿಂಗ್ ಅವರು. ಆಹಾರ ಭದ್ರತೆ ಕಾಯ್ದೆಯನ್ನು ಬಿಜೆಪಿ ತೀವ್ರವಾಗಿ ವಿರೋಧಿಸಿತ್ತು. ಬಡವರ ವಿರೋಧಿ ನೀತಿ ಬಿಜೆಪಿಯ ಸಿದ್ಧಾಂತ. ಇದನ್ನು ಅರ್ಥ ಮಾಡಿಕೊಳ್ಳಬೇಕು. ಆ ಕಡೆ ಬಿಜೆಪಿಗೂ ಚಪ್ಪಾಳೆ ತಟ್ಟೋದು, ಈ ಕಡೆ ಬಡವರ ಪರ ಕಾರ್ಯಕ್ರಮ ಕೊಟ್ಟ ನಮಗೂ ಚಪ್ಪಾಳೆ ತಟ್ಟೋದು ಮಾಡಬೇಡಿ. ಅನ್ನದ ಪರವಾಗಿ ಇರುವ ನಮ್ಮ ಬದ್ಧತೆಯನ್ನು ನೀವೆಲ್ಲರೂ ಅರ್ಥ ಮಾಡಿಕೊಳ್ಳಬೇಕು‌ ಎಂದು ತಿಳಿಸಿದರು.

ಅನ್ನಭಾಗ್ಯದ ಅಕ್ಕಿಯನ್ನು ಸಂಗ್ರಹಿಸಿ ಕಾಳ ಸಂತೆಯಲ್ಲಿ ಮಾರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು. ಕಾಳ ಸಂತೆ ಮಾರಾಟ ತಪ್ಪಿಸಲು 5 ಕೆಜಿ ಅಕ್ಕಿ ಕೊಟ್ಟು ಉಳಿದ ಐದು ಕೆಜಿ ಕಾಳು, ಬೇಳೆ ವಿತರಿಸಲು ತೀರ್ಮಾನಿಸಿದ್ದೇವೆ. ಆಹಾರದ ಬಗ್ಗೆ ಜಾಗ್ರತೆ, ಸಣ್ಣ ರೈತರ ರಕ್ಷಣೆ ಮಾಡುವುದು ನಮ್ಮ, ನಿಮ್ಮ ಮತ್ತು ನಾಗರಿಕ ಸಮಾಜದ ಜವಾಬ್ದಾರಿ ಎಂದರು.

Ramesh Babu

Journalist

Recent Posts

ಮೀಸಲಾತಿ ಘೋಷಣೆ ಬೆನ್ನಲ್ಲೇ ಗ್ರಾಮಾಂತರದಲ್ಲಿ ಚುನಾವಣಾ ಕಾವು: ಹಳ್ಳಿಗಳಲ್ಲಿ ಚುರುಕಾದ ರಾಜಕೀಯ ಚಟುವಟಿಕೆ: ಆಕಾಂಕ್ಷಿಗಳಿಂದ ಲೆಕ್ಕಾಚಾರ ಆರಂಭ

  ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗ್ರಾಮ ಪಂಚಾಯಿತಿಗಳ ಚುನಾವಣೆಗೆ ಮೀಸಲಾತಿ ಪ್ರಕಟವಾಗುತ್ತಿದ್ದಂತೆ ಗ್ರಾಮೀಣ ಭಾಗದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಯಾವ…

51 minutes ago

ಹೆದ್ದಾರಿ ಸರ್ವೀಸ್ ರಸ್ತೆಗಳಲ್ಲಿ ಭಾರೀ ವಾಹನಗಳ ಅನಧಿಕೃತ ನಿಲುಗಡೆ: ಸಾರ್ವಜನಿಕರ ಜೀವದೊಂದಿಗೆ ಚೆಲ್ಲಾಟ

  ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮೂಲಕ ಹಾದುಹೋಗುವ ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಗಳ ಸರ್ವೀಸ್ ರಸ್ತೆಗಳು ದಿನದಿಂದ ದಿನಕ್ಕೆ ಭಾರಿ…

1 day ago

ಬೆಂಗಳೂರು ಗ್ರಾಮಾಂತರದಲ್ಲಿ ಕ್ಷಯರೋಗದ ಆತಂಕ: ಏಳು ತಿಂಗಳಲ್ಲಿ 26,531 ಮಂದಿಗೆ ಕಫ ಪರೀಕ್ಷೆ; 434 ಪ್ರಕರಣಗಳು ಪತ್ತೆ, 530 ಸಕ್ರಿಯ ರೋಗಿಗಳು

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕ್ಷಯರೋಗ (ಟಿಬಿ) ನಿಯಂತ್ರಣಕ್ಕೆ ಆರೋಗ್ಯ ಇಲಾಖೆ ಹಲವು ಹಂತಗಳಲ್ಲಿ ತಪಾಸಣೆ ಹಾಗೂ ಚಿಕಿತ್ಸಾ ಕ್ರಮಗಳನ್ನು ಕೈಗೊಂಡಿದ್ದರೂ,…

2 days ago

ಘಾಟಿ ಕ್ಷೇತ್ರದಲ್ಲಿ ನಾಗರ ಪಂಚಮಿ ಸಂಭ್ರಮ

ದೊಡ್ಡಬಳ್ಳಾಪುರ: ನಾಗರಾಧನೆಗೆ ಪ್ರಸಿದ್ಧವಾಗಿರುವ ತಾಲೂಕಿನ ಘಾಟಿ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಸೋಮವಾರ ನಾಗರ ಪಂಚಮಿ ಹಬ್ಬವನ್ನು ಭಕ್ತಿಭಾವದಿಂದ ಆಚರಿಸಲಾಯಿತು. ನಾಗರ ಪಂಚಮಿ…

3 days ago

ದೊಡ್ಡಬಳ್ಳಾಪುರದಲ್ಲಿ ಆ.18ರಂದು ವಿದ್ಯುತ್ ವ್ಯತ್ಯಯ

ದೊಡ್ಡಬಳ್ಳಾಪುರ: ನಗರದ 66/11 ಕೆವಿ ಡಿ.ಕ್ರಾಸ್ ವಿದ್ಯುತ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗಿರುವ ಹಿನ್ನೆಲೆಯಲ್ಲಿ ಆ.18ರಂದು ಬೆಳಿಗ್ಗೆ 10ರಿಂದ…

4 days ago

ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷ, ಸದಸ್ಯರ ನೇಮಕ: ಯೋಜಿತ ನಗರಾಭಿವೃದ್ಧಿಗೆ ಆದ್ಯತೆ- ಸದಸ್ಯ ಎಸ್.ಡಿ. ಮುನಿರಾಜು

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಲಾಗಿದೆ. ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರನ್ನು ಅಧ್ಯಕ್ಷರಾಗಿ,…

4 days ago