ಕಾಳ ಸಂತೆ ಮಾರಾಟ ತಪ್ಪಿಸಲು 5 ಕೆಜಿ ಅಕ್ಕಿ ಕೊಟ್ಟು ಉಳಿದ ಐದು ಕೆಜಿ ಕಾಳು, ಬೇಳೆ ವಿತರಿಸಲು ತೀರ್ಮಾನ- ಸಿಎಂ ಸಿದ್ದರಾಮಯ್ಯ

ಹಸಿವಿನ ಸಂಕಟ, ಅನ್ನದ ಮೌಲ್ಯ ನನಗೆ ಗೊತ್ತಿದೆ. ಹಾಗಾಗಿಯೇ ಹಸಿದವರ ಹೊಟ್ಟೆತುಂಬಿಸುವ ಅನ್ನಭಾಗ್ಯ ಯೋಜನೆ ಜಾರಿಗೆ ತಂದಿರುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಇಂದು ಆಹಾರ ಮತ್ತು ನಾಗರಿಕ‌ ಸರಬರಾಜು ಇಲಾಖೆ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಆಯೋಜಿಸಿದ್ದ “ವಿಶ್ವ ಆಹಾರ ದಿನ” ಕಾರ್ಯಕ್ರಮವನ್ನು ಉದ್ಘಾಟಿಸಿ, ಮಾತನಾಡಿದರು

ಕವಿ ಬೇಂದ್ರೆಯವರು ರೈತರನ್ನು ಅನ್ನಬ್ರಹ್ಮ ಎಂದು ಕರೆದಿದ್ದಾರೆ. ಆದ್ದರಿಂದ ಅನ್ನ ವ್ಯರ್ಥ ಮಾಡುವುದು, ಬಿಸಾಡುವುದು ಅನ್ನಬ್ರಹ್ಮನಿಗೆ ಮಾಡುವ ಅವಮಾನ.
ನಾವು ಒಂದು ಕಾಲದಲ್ಲಿ ಅನ್ನಕ್ಕಾಗಿ ಅಮೇರಿಕಾದ ಮೇಲೆ ಅವಲಂಭಿತರಾಗಿದ್ದೆವು. ಈಗ ವಿದೇಶಗಳಿಗೆ ರಫ್ತು ಮಾಡುವ ಮಟ್ಟಕ್ಕೆ ಪ್ರಗತಿ ಸಾಧಿಸಿದ್ದೇವೆ. ಇದರ ಜೊತೆಗೆ ಊಟ ವ್ಯರ್ಥ ಮಾಡುವ ಪ್ರಮಾಣವೂ ಹೆಚ್ಚಾಗುತ್ತಿರುವುದು ಬೇಸರದ ಸಂಗತಿ ಎಂದರು.

ಅನ್ನ ವ್ಯರ್ಥ ಮಾಡುವುದು ಪಾಪದ ಕೆಲಸ ಎಂದು ಮಹಾತ್ಮ ಗಾಂಧಿ ಹೇಳಿದ್ದಾರೆ‌. ಬೆಂಗಳೂರು ಒಂದರಲ್ಲೇ ಪ್ರತೀ ವರ್ಷ 943 ಟನ್ ಆಹಾರ ವೇಸ್ಟ್ ಆಗುತ್ತಿದೆ. ಹೆಚ್ಚೂಕಡಿಮೆ 360 ಕೋಟಿ ಮೌಲ್ಯದ ಆಹಾರ ವೇಸ್ಟ್ ಮಾಡುತ್ತಿದ್ದೇವೆ ಎಂದು ಜಿಕೆವಿಕೆ ಅಧ್ಯಯನ ವರದಿ ಹೇಳುತ್ತಿದೆ. ಗೊತ್ತಿದ್ದೂ, ಗೊತ್ತಿದ್ದೂ ಆಹಾರ ವ್ಯರ್ಥ ಮಾಡುವುದು ಅನ್ನಕ್ಕೆ ತೋರಿಸುವ ಅಹಂಕಾರ ಎಂದು ಹೇಳಿದರು.

ಯಾರೂ ಹಸಿವಿನಿಂದ ಮಲಗಬಾರದು ಎನ್ನುವುದು ನಮ್ಮ ಬದ್ಧತೆ. ಹೀಗಾಗಿ ಬಡವರ ಪರವಾದ ಕಾರ್ಯಕ್ರಮಗಳನ್ನು ಜಾರಿಗೆ ತಂದವರು ನಾವು. ಆಹಾರ ಭದ್ರತಾ ಕಾಯ್ದೆಯನ್ನು ಜಾರಿಗೆ ತಂದಿದ್ದು ಪ್ರಧಾನಿ ಮನಮೋಹನ್ ಸಿಂಗ್ ಅವರು. ಆಹಾರ ಭದ್ರತೆ ಕಾಯ್ದೆಯನ್ನು ಬಿಜೆಪಿ ತೀವ್ರವಾಗಿ ವಿರೋಧಿಸಿತ್ತು. ಬಡವರ ವಿರೋಧಿ ನೀತಿ ಬಿಜೆಪಿಯ ಸಿದ್ಧಾಂತ. ಇದನ್ನು ಅರ್ಥ ಮಾಡಿಕೊಳ್ಳಬೇಕು. ಆ ಕಡೆ ಬಿಜೆಪಿಗೂ ಚಪ್ಪಾಳೆ ತಟ್ಟೋದು, ಈ ಕಡೆ ಬಡವರ ಪರ ಕಾರ್ಯಕ್ರಮ ಕೊಟ್ಟ ನಮಗೂ ಚಪ್ಪಾಳೆ ತಟ್ಟೋದು ಮಾಡಬೇಡಿ. ಅನ್ನದ ಪರವಾಗಿ ಇರುವ ನಮ್ಮ ಬದ್ಧತೆಯನ್ನು ನೀವೆಲ್ಲರೂ ಅರ್ಥ ಮಾಡಿಕೊಳ್ಳಬೇಕು‌ ಎಂದು ತಿಳಿಸಿದರು.

ಅನ್ನಭಾಗ್ಯದ ಅಕ್ಕಿಯನ್ನು ಸಂಗ್ರಹಿಸಿ ಕಾಳ ಸಂತೆಯಲ್ಲಿ ಮಾರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು. ಕಾಳ ಸಂತೆ ಮಾರಾಟ ತಪ್ಪಿಸಲು 5 ಕೆಜಿ ಅಕ್ಕಿ ಕೊಟ್ಟು ಉಳಿದ ಐದು ಕೆಜಿ ಕಾಳು, ಬೇಳೆ ವಿತರಿಸಲು ತೀರ್ಮಾನಿಸಿದ್ದೇವೆ. ಆಹಾರದ ಬಗ್ಗೆ ಜಾಗ್ರತೆ, ಸಣ್ಣ ರೈತರ ರಕ್ಷಣೆ ಮಾಡುವುದು ನಮ್ಮ, ನಿಮ್ಮ ಮತ್ತು ನಾಗರಿಕ ಸಮಾಜದ ಜವಾಬ್ದಾರಿ ಎಂದರು.

Ramesh Babu

Journalist

Recent Posts

ಲೀಸ್ ಜಮೀನು ವಿವಾದ: ಲೀಸ್ ಪಡೆದ ರೈತನ ಮೇಲೆ ಪಿಸ್ತೂಲ್‌ನಿಂದ ಹಲ್ಲೆ; ಗಾಳಿಯಲ್ಲಿ 7–8 ಸುತ್ತು ಗುಂಡು ಹಾರಿಸಿ ಬೆದರಿಕೆ ಆರೋಪ: ದೂರು ದಾಖಲು

ದೊಡ್ಡಬಳ್ಳಾಪುರ: ಲೀಸ್‌ಗೆ ಪಡೆದಿದ್ದ ಜಮೀನಿನ ವಿಚಾರವಾಗಿ ರೈತನೊಬ್ಬರ ಮೇಲೆ ಪಿಸ್ತೂಲ್‌ನಿಂದ ಹಲ್ಲೆ ನಡೆಸಿ, ಗಾಳಿಯಲ್ಲಿ ಹಲವು ಸುತ್ತು ಗುಂಡು ಹಾರಿಸಿ…

20 hours ago

ಬಸ್-ನೀರಿನ ಟ್ಯಾಂಕರ್ ಟ್ರ್ಯಾಕ್ಟರ್ ನಡುವೆ ಅಪಘಾತ: ಫುಲ್ ಟ್ರಾಫಿಕ್ ಜಾಮ್: ವಾಹನ ಸವಾರರ ಪರದಾಟ

ದೊಡ್ಡಬಳ್ಳಾಪುರ ತಾಲೂಕಿನ ಪಾಲನಜೋಗಹಳ್ಳಿ ಸಮೀಪ ಹಿಂದೂಪುರ–ಯಲಹಂಕ ರಾಜ್ಯ ಹೆದ್ದಾರಿಯಲ್ಲಿ ಬಸ್ ಹಾಗೂ ನೀರಿನ ಟ್ಯಾಂಕರ್ ಹೊತ್ತ ಟ್ರ್ಯಾಕ್ಟರ್ ನಡುವೆ ಸಂಭವಿಸಿದ…

1 day ago

ಶಾಸಕ ಪ್ರದೀಪ್ ಈಶ್ವರ್ ಕಾರಿಗೆ ಮುತ್ತಿಗೆ; ಚಪ್ಪಲಿ ಎಸೆತ, ಉದ್ವಿಗ್ನ ವಾತಾವರಣ

ಚಿಕ್ಕಬಳ್ಳಾಪುರ: ಶಾಸಕ ಪ್ರದೀಪ್ ಈಶ್ವರ್ ಅವರ ಕಾರಿಗೆ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಬೆಂಬಲಿಗರು ಮುತ್ತಿಗೆ ಹಾಕಿದ ಘಟನೆ ಶನಿವಾರ…

2 days ago

ಹೆಚ್‌ಡಿಕೆಗೆ ಶಾಸಕ ಪ್ರದೀಪ್ ಈಶ್ವರ್ ಟಾಂಗ್: “32 ಎಕರೆ ಆಸ್ತಿ ದಾಖಲೆ ನನ್ನ ಮುಖದ ಮೇಲೆ ಬಿಸಾಕಿ”

ದೇವನಹಳ್ಳಿ: ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್, ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ…

2 days ago

ಕೆಂಪೇಗೌಡರ ಹೆಸರನ್ನು ಶಾಶ್ವತಗೊಳಿಸಲು ಹೊಸ ಯೋಜನೆಗಳು: ಟೌನ್ ಪ್ಲಾನಿಂಗ್, ಕಾಲೇಜು, ಅಭಿವೃದ್ಧಿ ಕೇಂದ್ರ ಸ್ಥಾಪನೆ – ಸಿಎಂ ಡಿ.ಕೆ ಶಿವಕುಮಾರ್

ಬೆಂಗಳೂರು: ನಾಡಪ್ರಭು ಕೆಂಪೇಗೌಡರ 517ನೇ ಜಯಂತಿಯ ಅಂಗವಾಗಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್…

2 days ago

517ನೇ ಕೆಂಪೇಗೌಡ ಜಯಂತಿ: ವಿಮಾನ ನಿಲ್ದಾಣದಲ್ಲಿ ನಾಡಪ್ರಭುವಿಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಪುಷ್ಪನಮನ

ದೇವನಹಳ್ಳಿ: 517ನೇ ನಾಡಪ್ರಭು ಕೆಂಪೇಗೌಡ ಜಯಂತಿಯನ್ನು ದೇವನಹಳ್ಳಿಯ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಆವರಣದಲ್ಲಿ ಶನಿವಾರ ಸಂಭ್ರಮದಿಂದ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ…

2 days ago