ಕಾವೇರಿ ಜಲ ವಿವಾದ; ಕಾವೇರಿ ನೀರು ನಿಯಂತ್ರಣ ಪ್ರಾಧಿಕಾರದ ನಿರ್ಧಾರ ಮರುಪರಿಶೀಲಿಸುವಂತೆ ಕೇಂದ್ರ ಜಲಶಕ್ತಿಗೆ ರಾಜ್ಯ ಸರ್ಕಾರ ಮನವಿ

ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರವು ತಮಿಳುನಾಡಿಗೆ ನೀರು ಹರಿಸುವಂತೆ ನೀಡಿರುವ ಆದೇಶವನ್ನು ಬರದಿಂದ ಸಂಕಷ್ಟಕ್ಕೆ ಸಿಲುಕಿರುವ ಕರ್ನಾಟಕದ ರೈತರು ಮತ್ತು ಜನತೆಯ ಹಿತರಕ್ಷಣೆ ದೃಷ್ಟಿಯಿಂದ ಮರುಪರಿಶೀಲಿಸುವಂತೆ ನಿರ್ದೇಶನ ನೀಡಬೇಕೆಂದು ಕೋರಿ ಕೇಂದ್ರ ಜಲಶಕ್ತಿ ಸಚಿವರಾದ ಗಜೇಂದ್ರ ಸಿಂಗ್ ಶೇಖಾವತ್ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪತ್ರ ಬರೆದಿದ್ದಾರೆ.

ಪತ್ರದ ಸಾರಾಂಶ

ಕಾವೇರಿ ನೀರಿನ ಮೇಲೆ ಅವಲಂಬಿತರಾಗಿರುವ ರೈತರು, ಜಾನುವಾರು ಹಾಗೂ ಜನರ ಹಿತಾಸಕ್ತಿಯನ್ನು ಸಂಕಷ್ಟಕ್ಕೆ ದೂಡಿ ಕಾವೇರಿ ನೀರು ನಿಯಂತ್ರಣ ಸಮಿತಿಯ ತೀರ್ಪನ್ನು ಅನುಷ್ಠಾನ ಮಾಡಲು ಸಾಧ್ಯವಿಲ್ಲ. ಕಾವೇರಿ ನೀರು ನಿಯಂತ್ರಣ ಸಮಿತಿ ನಿರ್ಧರಿಸಿರುವಂತೆ 15 ದಿನಗಳ ಕಾಲ ಕೆ.ಆರ್.ಎಸ್.ಹಾಗೂ ಕಬಿನಿಯಿಂದ 5,000 ಕ್ಯೂಸೆಕ್ ನೀರನ್ನು ಬಿಳಿಗುಂಡ್ಲುವಿನಿಂದ ಹರಿಸುವುದು ಸಾಧ್ಯವಿಲ್ಲ, ಕರ್ನಾಟಕದ ಮನವಿಯನ್ನು ಪರಿಗಣಿಸಿ ಕಾವೇರಿ ನೀರು ನಿಯಂತ್ರಣ ಸಮಿತಿಯ ನಿರ್ಧಾರವನ್ನು ಮರುಪರಿಶೀಲಿಸಬೇಕು, ಬರಪೀಡಿತವಾಗಿರುವ ರಾಜ್ಯದ ಜನತೆ ಹಾಗೂ ಜಾನುವಾರುಗಳ ಹಿತಾಸಕ್ತಿಯನ್ನು ಕಾಪಾಡಬೇಕೆಂದು ಮನವಿ ಮಾಡುತ್ತೇನೆ ಎಂದು ಸಿಎಂ ಸಿದ್ದರಾಯ್ಯ ಪತ್ರದಲ್ಲಿ ಮನವಿ ಮಾಡಿದ್ದಾರೆ.

ಕರ್ನಾಟಕ ರಾಜ್ಯ ಸಮಿತಿಯ ಹಿಂದಿನ ನಿರ್ದೇಶನವನ್ನು ಪಾಲಿಸಿದ್ದು, ಕಾವೇರಿ ಜಲಾನಯನ ಪ್ರದೇಶದಲ್ಲಿರುವ ಬಹುತೇಕ ತಾಲ್ಲೂಕುಗಳು ಮುಂಗಾರು ವೈಫಲ್ಯದಿಂದ  ತೀವ್ರ ಬರಕ್ಕೆ ತುತ್ತಾಗಿವೆ. ಜೂನ್ ಮಾಹೆಯಿಂದ ಸೆಪ್ಟೆಂಬರ್ ಮಧ್ಯದವರೆಗೂ 92 ದಿನಗಳ ಕಾಲ 100 ಟಿಎಂಸಿ ನೀರನ್ನು ತಮಿಳುನಾಡು ಬಳಸಿಕೊಂಡಿದ್ದು, ಇದು ಹಿಂದೆ 1987-88, 2002-03, 2012-13, 2016-17 ಹಾಗೂ 2017-18 ರ ಬರಪರಿಸ್ಥಿತಿಯಲ್ಲಿ ಬಳಕೆಯಾದ ನೀರಿಗಿಂತಲೂ ಹೆಚ್ಚಾಗಿದೆ. ಕರ್ನಾಟಕದ ಜಲಾಶಯಗಳಲ್ಲಿ ಸಂಕಷ್ಟದ ಸ್ಥಿತಿಯಿದ್ದರೂ ತಮಿಳುನಾಡು ಭತ್ತವನ್ನು ವ್ಯಾಪಕವಾಗಿ ಬೆಳೆಯುತ್ತಿದೆ.

ಸೆಪ್ಟೆಂಬರ್ 12 ಹಾಗೂ 24 ವರೆಗೆ ಐಎಂಡಿ ಹವಾಮಾನ ಮುನ್ಸೂಚನೆಯಂತೆ ಮಳೆಯಾಗುವ ಲಕ್ಷಣಗಳಿಲ್ಲ. ಮೆಟ್ಟೂರು ಜಲಾಶಯದಲ್ಲಿ ಡಿ: 12.09.2023 ರಂದು 24.233 ಟಿಎಂಸಿ ಸಂಗ್ರಹವಿದ್ದು ( live storage) ಪ್ರಸ್ತುತ ಬಿಡುಗಡೆಯಾಗಿರುವ ನೀರನ್ನು ಪರಿಗಣಿಸಿದರೆ, ತಮಿಳುನಾಡಿನ ಅವಶ್ಯಕತೆ ಯನ್ನು ಪೂರೈಸಲು ಸಾಕಾಗುವಷ್ಟು ನೀರು ಲಭ್ಯವಿದೆ.

ಕರ್ನಾಟಕದ ಬೆಳೆಗಳ ರಕ್ಷಣೆಗೆ 70 ಟಿಎಂಸಿ, ಕುಡಿಯುವ ನೀರಿಗೆ 33 ಟಿಎಂಸಿ ಹಾಗೂ ಕೈಗಾರಿಕೆಗಳಿಗೆ 3 ಟಿಎಂಸಿ ನೀರು ಅಗತ್ಯವಿದೆ. ನಮ್ಮ ಸಂಗ್ರಹ 53 ಟಿಎಂಸಿ ಮಾತ್ರವಿದ್ದು, ನಮ್ಮ ಅವಶ್ಯಕತೆಗಳನ್ನು ಪೂರೈಸಿಕೊಳ್ಳಲು ಈ ಸಂಗ್ರಹ ಸಾಕಾಗುವುದಿಲ್ಲ. ಹೀಗಾಗಿ ತಾವು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರವು ತಮಿಳುನಾಡಿಗೆ ನೀರು ಹರಿಸುವಂತೆ ನೀಡಿರುವ ಆದೇಶವನ್ನು ಬರದಿಂದ ಸಂಕಷ್ಟಕ್ಕೆ ಸಿಲುಕಿರುವ ಕರ್ನಾಟಕದ ರೈತರು ಮತ್ತು ಜನತೆಯ ಹಿತರಕ್ಷಣೆ ದೃಷ್ಟಿಯಿಂದ ಮರುಪರಿಶೀಲಿಸುವಂತೆ ನಿರ್ದೇಶನ ನೀಡಬೇಕೆಂದು ಕೋರುತ್ತೇನೆ ಎಂದಿದ್ದಾರೆ.

Ramesh Babu

Journalist

Recent Posts

ಮದುವೆಗೆ ಹೆಣ್ಣು ಸಿಗದಿದ್ದಕ್ಕೆ ಒಂದೇ ದಿನ ಇಬ್ಬರು ಯುವಕರು ಆತ್ಮಹತ್ಯೆ….!

ಮದುವೆ ಮಾಡಿಕೊಳ್ಳಲು ಹೆಣ್ಣು ಸಿಗುತ್ತಿಲ್ಲವೆಂದು ಮನನೊಂದು ಒಂದೇ ದಿನ ರಾಜ್ಯದ ಇಬ್ಬರು ಯುವಕರು ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆಗಳು ಚಿಕ್ಕಮಗಳೂರು…

10 hours ago

ದೇವರ ಆಶೀರ್ವಾದದಿಂದಲೇ ಎರಡು ಬಾರಿ ಸಿಎಂ ಆಗಿದ್ದೇನೆ- ಸಿಎಂ ಸಿದ್ದರಾಮಯ್ಯ

ನಮ್ಮ ಮನೆ ದೇವರಾದ ರಾಮೇಶ್ವರ–ಸಿದ್ದೇಶ್ವರ ಸ್ವಾಮಿಗಳ ಆಶೀರ್ವಾದದಿಂದಲೇ ರಾಜ್ಯದಲ್ಲಿ ಎರಡು ಬಾರಿ ಮುಖ್ಯಮಂತ್ರಿಯಾಗಿ ಹಾಗೂ ಎರಡು ಬಾರಿ ವಿಪಕ್ಷ ನಾಯಕನಾಗಿ…

10 hours ago

ತೂಬಗೆರೆಯಲ್ಲಿಂದು ಉಚಿತ ಆರೋಗ್ಯ ತಪಾಸಣಾ ಶಿಬಿರ ಮತ್ತು ರಕ್ತದಾನ ಶಿಬಿರ: ಗ್ರಾಮೀಣ ಜನರ ಆರೋಗ್ಯ ಬಹಳ ಮುಖ್ಯ- ಡಾ. ಜ್ಞಾನೇಶ್ವರಿ

ಉಚಿತ ಆರೋಗ್ಯ ತಪಾಸಣಾ ಶಿಬಿರ ಮತ್ತು ರಕ್ತದಾನ ಶಿಬಿರ ಅತ್ಯಂತ ಅವಶ್ಯಕ. ಇಂತಹ ಶಿಬಿರಗಳು ಕಾಲಕಾಲಕ್ಕೆ ಗ್ರಾಮೀಣ ಭಾಗಗಳಲ್ಲಿ ನಡೆಯುತ್ತಲೇ…

11 hours ago

ಜಾತ್ರೆಯಲ್ಲಿ ವ್ಯಕ್ತಿಯ ಭೀಕರ ಕೊಲೆ

ಜಾತ್ರೆಯೊಂದರಲ್ಲಿ ವ್ಯಕ್ತಿಯ ಭೀಕರ ಕೊಲೆಯಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಹಣ್ಣಿಕೇರಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಸಂಗನಗೌಡ ಪಾಟೀಲ್…

17 hours ago

ಲಾರಿ-ಕಾರು ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ ಇಬ್ಬರು ಸಾವು

ಲಾರಿ-ಕಾರು ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿರುವ ಘಟನೆ ಚಿತ್ರದುರ್ಗ ಜಿಲ್ಲೆ ಮೊಳಕಾಲ್ಮೂರು ತಾಲ್ಲೂಕು ರಾಜಾಪುರ ಬಳಿ ನಡೆದಿದೆ. ಬೆಂಗಳೂರು…

19 hours ago

ಹಸಿವಿನ ಔಷಧಿ ಮತ್ತು ಮತದಾನ…..

ಇತ್ತೀಚೆಗೆ Social Media ಗಳಲ್ಲಿ ಅತ್ಯಂತ ಗಮನಸೆಳೆದ ಮನಮಿಡಿಯುವ ಚಿತ್ರ...... ಒಬ್ಬ ಬಾಲಕ ಡಾಕ್ಟರ್ ಬಳಿ " ಹಸಿವು ಹೋಗಲಾಡಿಸಲು…

22 hours ago