ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರವು ತಮಿಳುನಾಡಿಗೆ ನೀರು ಹರಿಸುವಂತೆ ನೀಡಿರುವ ಆದೇಶವನ್ನು ಬರದಿಂದ ಸಂಕಷ್ಟಕ್ಕೆ ಸಿಲುಕಿರುವ ಕರ್ನಾಟಕದ ರೈತರು ಮತ್ತು ಜನತೆಯ ಹಿತರಕ್ಷಣೆ ದೃಷ್ಟಿಯಿಂದ ಮರುಪರಿಶೀಲಿಸುವಂತೆ ನಿರ್ದೇಶನ ನೀಡಬೇಕೆಂದು ಕೋರಿ ಕೇಂದ್ರ ಜಲಶಕ್ತಿ ಸಚಿವರಾದ ಗಜೇಂದ್ರ ಸಿಂಗ್ ಶೇಖಾವತ್ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪತ್ರ ಬರೆದಿದ್ದಾರೆ.
ಪತ್ರದ ಸಾರಾಂಶ
ಕಾವೇರಿ ನೀರಿನ ಮೇಲೆ ಅವಲಂಬಿತರಾಗಿರುವ ರೈತರು, ಜಾನುವಾರು ಹಾಗೂ ಜನರ ಹಿತಾಸಕ್ತಿಯನ್ನು ಸಂಕಷ್ಟಕ್ಕೆ ದೂಡಿ ಕಾವೇರಿ ನೀರು ನಿಯಂತ್ರಣ ಸಮಿತಿಯ ತೀರ್ಪನ್ನು ಅನುಷ್ಠಾನ ಮಾಡಲು ಸಾಧ್ಯವಿಲ್ಲ. ಕಾವೇರಿ ನೀರು ನಿಯಂತ್ರಣ ಸಮಿತಿ ನಿರ್ಧರಿಸಿರುವಂತೆ 15 ದಿನಗಳ ಕಾಲ ಕೆ.ಆರ್.ಎಸ್.ಹಾಗೂ ಕಬಿನಿಯಿಂದ 5,000 ಕ್ಯೂಸೆಕ್ ನೀರನ್ನು ಬಿಳಿಗುಂಡ್ಲುವಿನಿಂದ ಹರಿಸುವುದು ಸಾಧ್ಯವಿಲ್ಲ, ಕರ್ನಾಟಕದ ಮನವಿಯನ್ನು ಪರಿಗಣಿಸಿ ಕಾವೇರಿ ನೀರು ನಿಯಂತ್ರಣ ಸಮಿತಿಯ ನಿರ್ಧಾರವನ್ನು ಮರುಪರಿಶೀಲಿಸಬೇಕು, ಬರಪೀಡಿತವಾಗಿರುವ ರಾಜ್ಯದ ಜನತೆ ಹಾಗೂ ಜಾನುವಾರುಗಳ ಹಿತಾಸಕ್ತಿಯನ್ನು ಕಾಪಾಡಬೇಕೆಂದು ಮನವಿ ಮಾಡುತ್ತೇನೆ ಎಂದು ಸಿಎಂ ಸಿದ್ದರಾಯ್ಯ ಪತ್ರದಲ್ಲಿ ಮನವಿ ಮಾಡಿದ್ದಾರೆ.
ಕರ್ನಾಟಕ ರಾಜ್ಯ ಸಮಿತಿಯ ಹಿಂದಿನ ನಿರ್ದೇಶನವನ್ನು ಪಾಲಿಸಿದ್ದು, ಕಾವೇರಿ ಜಲಾನಯನ ಪ್ರದೇಶದಲ್ಲಿರುವ ಬಹುತೇಕ ತಾಲ್ಲೂಕುಗಳು ಮುಂಗಾರು ವೈಫಲ್ಯದಿಂದ ತೀವ್ರ ಬರಕ್ಕೆ ತುತ್ತಾಗಿವೆ. ಜೂನ್ ಮಾಹೆಯಿಂದ ಸೆಪ್ಟೆಂಬರ್ ಮಧ್ಯದವರೆಗೂ 92 ದಿನಗಳ ಕಾಲ 100 ಟಿಎಂಸಿ ನೀರನ್ನು ತಮಿಳುನಾಡು ಬಳಸಿಕೊಂಡಿದ್ದು, ಇದು ಹಿಂದೆ 1987-88, 2002-03, 2012-13, 2016-17 ಹಾಗೂ 2017-18 ರ ಬರಪರಿಸ್ಥಿತಿಯಲ್ಲಿ ಬಳಕೆಯಾದ ನೀರಿಗಿಂತಲೂ ಹೆಚ್ಚಾಗಿದೆ. ಕರ್ನಾಟಕದ ಜಲಾಶಯಗಳಲ್ಲಿ ಸಂಕಷ್ಟದ ಸ್ಥಿತಿಯಿದ್ದರೂ ತಮಿಳುನಾಡು ಭತ್ತವನ್ನು ವ್ಯಾಪಕವಾಗಿ ಬೆಳೆಯುತ್ತಿದೆ.
ಸೆಪ್ಟೆಂಬರ್ 12 ಹಾಗೂ 24 ವರೆಗೆ ಐಎಂಡಿ ಹವಾಮಾನ ಮುನ್ಸೂಚನೆಯಂತೆ ಮಳೆಯಾಗುವ ಲಕ್ಷಣಗಳಿಲ್ಲ. ಮೆಟ್ಟೂರು ಜಲಾಶಯದಲ್ಲಿ ಡಿ: 12.09.2023 ರಂದು 24.233 ಟಿಎಂಸಿ ಸಂಗ್ರಹವಿದ್ದು ( live storage) ಪ್ರಸ್ತುತ ಬಿಡುಗಡೆಯಾಗಿರುವ ನೀರನ್ನು ಪರಿಗಣಿಸಿದರೆ, ತಮಿಳುನಾಡಿನ ಅವಶ್ಯಕತೆ ಯನ್ನು ಪೂರೈಸಲು ಸಾಕಾಗುವಷ್ಟು ನೀರು ಲಭ್ಯವಿದೆ.
ಕರ್ನಾಟಕದ ಬೆಳೆಗಳ ರಕ್ಷಣೆಗೆ 70 ಟಿಎಂಸಿ, ಕುಡಿಯುವ ನೀರಿಗೆ 33 ಟಿಎಂಸಿ ಹಾಗೂ ಕೈಗಾರಿಕೆಗಳಿಗೆ 3 ಟಿಎಂಸಿ ನೀರು ಅಗತ್ಯವಿದೆ. ನಮ್ಮ ಸಂಗ್ರಹ 53 ಟಿಎಂಸಿ ಮಾತ್ರವಿದ್ದು, ನಮ್ಮ ಅವಶ್ಯಕತೆಗಳನ್ನು ಪೂರೈಸಿಕೊಳ್ಳಲು ಈ ಸಂಗ್ರಹ ಸಾಕಾಗುವುದಿಲ್ಲ. ಹೀಗಾಗಿ ತಾವು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರವು ತಮಿಳುನಾಡಿಗೆ ನೀರು ಹರಿಸುವಂತೆ ನೀಡಿರುವ ಆದೇಶವನ್ನು ಬರದಿಂದ ಸಂಕಷ್ಟಕ್ಕೆ ಸಿಲುಕಿರುವ ಕರ್ನಾಟಕದ ರೈತರು ಮತ್ತು ಜನತೆಯ ಹಿತರಕ್ಷಣೆ ದೃಷ್ಟಿಯಿಂದ ಮರುಪರಿಶೀಲಿಸುವಂತೆ ನಿರ್ದೇಶನ ನೀಡಬೇಕೆಂದು ಕೋರುತ್ತೇನೆ ಎಂದಿದ್ದಾರೆ.
ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಪಟ್ಟಿಯಲ್ಲಿ ಸಚಿವ ಸ್ಥಾನ ಪಡೆಯುವ ನಿರೀಕ್ಷೆಯಲ್ಲಿದ್ದ ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ…
ಬೆಂಗಳೂರು ಗ್ರಾಮಾಂತರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಸಾವಿರಾರು ವಿದ್ಯಾರ್ಥಿಗಳ ಶಿಕ್ಷಣಕ್ಕೆ ಆಧಾರ್ ಕಾರ್ಡ್ ದೊಡ್ಡ…
ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘ (ಎಂ.ಪಿ.ಆರ್.ಎ.ಸಿ.ಎಸ್.)ದ 2026–2031ನೇ ಅವಧಿಯ ಆಡಳಿತ ಮಂಡಳಿ…
ದೊಡ್ಡಬಳ್ಳಾಪುರ: ಆಷಾಢ ಮಾಸದಲ್ಲಿ ಗಾಳಿಪಟ ಹಾರಿಸುವುದು ನಮ್ಮ ಭಾಗದ ಸಾಂಪ್ರದಾಯಿಕ ಆಚರಣೆಯಾಗಿದ್ದು, ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ…
ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕರ್ನಾಟಕ ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆ ಭಾನುವಾರ ಯಾವುದೇ ಅಡಚಣೆ ಅಥವಾ…
ಇತ್ತೀಚೆಗೆ ಹೊಸದಾಗಿ ವಿಧಾನಪರಿಷತ್ ಸದಸ್ಯರಾಗಿ ಆಯ್ಕೆಯಾದ, ಡಾಕ್ಟರ್ ರಾಮ್ ಮನೋಹರ್ ಲೋಹಿಯಾ ವೇದಿಕೆಯ ಸಂಸ್ಥಾಪಕ ಅಧ್ಯಕ್ಷರಾದ ಶ್ರೀ ಮಳವಳ್ಳಿ ಶಿವಣ್ಣ…