ಕಾವೇರಿ ಜಲ ವಿವಾದ; ಕಾವೇರಿ ನೀರು ನಿಯಂತ್ರಣ ಪ್ರಾಧಿಕಾರದ ನಿರ್ಧಾರ ಮರುಪರಿಶೀಲಿಸುವಂತೆ ಕೇಂದ್ರ ಜಲಶಕ್ತಿಗೆ ರಾಜ್ಯ ಸರ್ಕಾರ ಮನವಿ

ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರವು ತಮಿಳುನಾಡಿಗೆ ನೀರು ಹರಿಸುವಂತೆ ನೀಡಿರುವ ಆದೇಶವನ್ನು ಬರದಿಂದ ಸಂಕಷ್ಟಕ್ಕೆ ಸಿಲುಕಿರುವ ಕರ್ನಾಟಕದ ರೈತರು ಮತ್ತು ಜನತೆಯ ಹಿತರಕ್ಷಣೆ ದೃಷ್ಟಿಯಿಂದ ಮರುಪರಿಶೀಲಿಸುವಂತೆ ನಿರ್ದೇಶನ ನೀಡಬೇಕೆಂದು ಕೋರಿ ಕೇಂದ್ರ ಜಲಶಕ್ತಿ ಸಚಿವರಾದ ಗಜೇಂದ್ರ ಸಿಂಗ್ ಶೇಖಾವತ್ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪತ್ರ ಬರೆದಿದ್ದಾರೆ.

ಪತ್ರದ ಸಾರಾಂಶ

ಕಾವೇರಿ ನೀರಿನ ಮೇಲೆ ಅವಲಂಬಿತರಾಗಿರುವ ರೈತರು, ಜಾನುವಾರು ಹಾಗೂ ಜನರ ಹಿತಾಸಕ್ತಿಯನ್ನು ಸಂಕಷ್ಟಕ್ಕೆ ದೂಡಿ ಕಾವೇರಿ ನೀರು ನಿಯಂತ್ರಣ ಸಮಿತಿಯ ತೀರ್ಪನ್ನು ಅನುಷ್ಠಾನ ಮಾಡಲು ಸಾಧ್ಯವಿಲ್ಲ. ಕಾವೇರಿ ನೀರು ನಿಯಂತ್ರಣ ಸಮಿತಿ ನಿರ್ಧರಿಸಿರುವಂತೆ 15 ದಿನಗಳ ಕಾಲ ಕೆ.ಆರ್.ಎಸ್.ಹಾಗೂ ಕಬಿನಿಯಿಂದ 5,000 ಕ್ಯೂಸೆಕ್ ನೀರನ್ನು ಬಿಳಿಗುಂಡ್ಲುವಿನಿಂದ ಹರಿಸುವುದು ಸಾಧ್ಯವಿಲ್ಲ, ಕರ್ನಾಟಕದ ಮನವಿಯನ್ನು ಪರಿಗಣಿಸಿ ಕಾವೇರಿ ನೀರು ನಿಯಂತ್ರಣ ಸಮಿತಿಯ ನಿರ್ಧಾರವನ್ನು ಮರುಪರಿಶೀಲಿಸಬೇಕು, ಬರಪೀಡಿತವಾಗಿರುವ ರಾಜ್ಯದ ಜನತೆ ಹಾಗೂ ಜಾನುವಾರುಗಳ ಹಿತಾಸಕ್ತಿಯನ್ನು ಕಾಪಾಡಬೇಕೆಂದು ಮನವಿ ಮಾಡುತ್ತೇನೆ ಎಂದು ಸಿಎಂ ಸಿದ್ದರಾಯ್ಯ ಪತ್ರದಲ್ಲಿ ಮನವಿ ಮಾಡಿದ್ದಾರೆ.

ಕರ್ನಾಟಕ ರಾಜ್ಯ ಸಮಿತಿಯ ಹಿಂದಿನ ನಿರ್ದೇಶನವನ್ನು ಪಾಲಿಸಿದ್ದು, ಕಾವೇರಿ ಜಲಾನಯನ ಪ್ರದೇಶದಲ್ಲಿರುವ ಬಹುತೇಕ ತಾಲ್ಲೂಕುಗಳು ಮುಂಗಾರು ವೈಫಲ್ಯದಿಂದ  ತೀವ್ರ ಬರಕ್ಕೆ ತುತ್ತಾಗಿವೆ. ಜೂನ್ ಮಾಹೆಯಿಂದ ಸೆಪ್ಟೆಂಬರ್ ಮಧ್ಯದವರೆಗೂ 92 ದಿನಗಳ ಕಾಲ 100 ಟಿಎಂಸಿ ನೀರನ್ನು ತಮಿಳುನಾಡು ಬಳಸಿಕೊಂಡಿದ್ದು, ಇದು ಹಿಂದೆ 1987-88, 2002-03, 2012-13, 2016-17 ಹಾಗೂ 2017-18 ರ ಬರಪರಿಸ್ಥಿತಿಯಲ್ಲಿ ಬಳಕೆಯಾದ ನೀರಿಗಿಂತಲೂ ಹೆಚ್ಚಾಗಿದೆ. ಕರ್ನಾಟಕದ ಜಲಾಶಯಗಳಲ್ಲಿ ಸಂಕಷ್ಟದ ಸ್ಥಿತಿಯಿದ್ದರೂ ತಮಿಳುನಾಡು ಭತ್ತವನ್ನು ವ್ಯಾಪಕವಾಗಿ ಬೆಳೆಯುತ್ತಿದೆ.

ಸೆಪ್ಟೆಂಬರ್ 12 ಹಾಗೂ 24 ವರೆಗೆ ಐಎಂಡಿ ಹವಾಮಾನ ಮುನ್ಸೂಚನೆಯಂತೆ ಮಳೆಯಾಗುವ ಲಕ್ಷಣಗಳಿಲ್ಲ. ಮೆಟ್ಟೂರು ಜಲಾಶಯದಲ್ಲಿ ಡಿ: 12.09.2023 ರಂದು 24.233 ಟಿಎಂಸಿ ಸಂಗ್ರಹವಿದ್ದು ( live storage) ಪ್ರಸ್ತುತ ಬಿಡುಗಡೆಯಾಗಿರುವ ನೀರನ್ನು ಪರಿಗಣಿಸಿದರೆ, ತಮಿಳುನಾಡಿನ ಅವಶ್ಯಕತೆ ಯನ್ನು ಪೂರೈಸಲು ಸಾಕಾಗುವಷ್ಟು ನೀರು ಲಭ್ಯವಿದೆ.

ಕರ್ನಾಟಕದ ಬೆಳೆಗಳ ರಕ್ಷಣೆಗೆ 70 ಟಿಎಂಸಿ, ಕುಡಿಯುವ ನೀರಿಗೆ 33 ಟಿಎಂಸಿ ಹಾಗೂ ಕೈಗಾರಿಕೆಗಳಿಗೆ 3 ಟಿಎಂಸಿ ನೀರು ಅಗತ್ಯವಿದೆ. ನಮ್ಮ ಸಂಗ್ರಹ 53 ಟಿಎಂಸಿ ಮಾತ್ರವಿದ್ದು, ನಮ್ಮ ಅವಶ್ಯಕತೆಗಳನ್ನು ಪೂರೈಸಿಕೊಳ್ಳಲು ಈ ಸಂಗ್ರಹ ಸಾಕಾಗುವುದಿಲ್ಲ. ಹೀಗಾಗಿ ತಾವು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರವು ತಮಿಳುನಾಡಿಗೆ ನೀರು ಹರಿಸುವಂತೆ ನೀಡಿರುವ ಆದೇಶವನ್ನು ಬರದಿಂದ ಸಂಕಷ್ಟಕ್ಕೆ ಸಿಲುಕಿರುವ ಕರ್ನಾಟಕದ ರೈತರು ಮತ್ತು ಜನತೆಯ ಹಿತರಕ್ಷಣೆ ದೃಷ್ಟಿಯಿಂದ ಮರುಪರಿಶೀಲಿಸುವಂತೆ ನಿರ್ದೇಶನ ನೀಡಬೇಕೆಂದು ಕೋರುತ್ತೇನೆ ಎಂದಿದ್ದಾರೆ.

Ramesh Babu

Journalist

Recent Posts

ಕ್ರೀಡಾ ಪ್ರತಿಭೆಗಳ ಅನಾವರಣಕ್ಕೆ ನ್ಯಾಷನಲ್ ಪ್ರೈಡ್ ಶಾಲೆಯಲ್ಲಿ ಹೊಸ ವೇದಿಕೆ ಒಂದೇ ಆವರಣದಲ್ಲಿ ಬಾಕ್ಸಿಂಗ್, ಕುಸ್ತಿ, ಜೂಡೋ, ಕಬ್ಬಡಿ, ಬ್ಯಾಡ್ಮಿಂಟನ್, ಸ್ಕೇಟಿಂಗ್ ಸೌಲಭ್ಯ

ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…

10 hours ago

ಶಾಲೆ ಬಿಟ್ಟ ಮಕ್ಕಳ ಪತ್ತೆಗೆ ಅಭಿಯಾನ: ವಲಸೆ ಕಾರ್ಮಿಕರ ಮಕ್ಕಳನ್ನು ಶಾಲೆಗೆ ಕರೆತರಲು ಕ್ರಮ

  ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…

15 hours ago

ಪಾಕಿಸ್ತಾನಿ ಗ್ಯಾಂಗ್‌ ಜೊತೆ ಸಂಪರ್ಕ ಆರೋಪ: ದೊಡ್ಡಬಳ್ಳಾಪುರದಲ್ಲಿ ವ್ಯಕ್ತಿ ಬಂಧನ

ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್‌ಸ್ಟರ್‌ಗಳೊಂದಿಗೆ ಇನ್‌ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…

1 day ago

ದೊಡ್ಡಬಳ್ಳಾಪುರದಲ್ಲಿ ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ

ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…

2 days ago

ಘಾಟಿ ಕ್ಷೇತ್ರದಲ್ಲಿ ವರಮಹಾಲಕ್ಷ್ಮಿ ಸಂಭ್ರಮ; ಮಹಿಳೆಯರಿಗೆ ಬಳೆ, ಅರಶಿನ–ಕುಂಕುಮ ವಿತರಣೆ

ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ…

2 days ago

ವರಮಹಾಲಕ್ಷ್ಮಿ ಹಬ್ಬ…..

ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…

3 days ago