ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರವು ತಮಿಳುನಾಡಿಗೆ ನೀರು ಹರಿಸುವಂತೆ ನೀಡಿರುವ ಆದೇಶವನ್ನು ಬರದಿಂದ ಸಂಕಷ್ಟಕ್ಕೆ ಸಿಲುಕಿರುವ ಕರ್ನಾಟಕದ ರೈತರು ಮತ್ತು ಜನತೆಯ ಹಿತರಕ್ಷಣೆ ದೃಷ್ಟಿಯಿಂದ ಮರುಪರಿಶೀಲಿಸುವಂತೆ ನಿರ್ದೇಶನ ನೀಡಬೇಕೆಂದು ಕೋರಿ ಕೇಂದ್ರ ಜಲಶಕ್ತಿ ಸಚಿವರಾದ ಗಜೇಂದ್ರ ಸಿಂಗ್ ಶೇಖಾವತ್ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪತ್ರ ಬರೆದಿದ್ದಾರೆ.
ಪತ್ರದ ಸಾರಾಂಶ
ಕಾವೇರಿ ನೀರಿನ ಮೇಲೆ ಅವಲಂಬಿತರಾಗಿರುವ ರೈತರು, ಜಾನುವಾರು ಹಾಗೂ ಜನರ ಹಿತಾಸಕ್ತಿಯನ್ನು ಸಂಕಷ್ಟಕ್ಕೆ ದೂಡಿ ಕಾವೇರಿ ನೀರು ನಿಯಂತ್ರಣ ಸಮಿತಿಯ ತೀರ್ಪನ್ನು ಅನುಷ್ಠಾನ ಮಾಡಲು ಸಾಧ್ಯವಿಲ್ಲ. ಕಾವೇರಿ ನೀರು ನಿಯಂತ್ರಣ ಸಮಿತಿ ನಿರ್ಧರಿಸಿರುವಂತೆ 15 ದಿನಗಳ ಕಾಲ ಕೆ.ಆರ್.ಎಸ್.ಹಾಗೂ ಕಬಿನಿಯಿಂದ 5,000 ಕ್ಯೂಸೆಕ್ ನೀರನ್ನು ಬಿಳಿಗುಂಡ್ಲುವಿನಿಂದ ಹರಿಸುವುದು ಸಾಧ್ಯವಿಲ್ಲ, ಕರ್ನಾಟಕದ ಮನವಿಯನ್ನು ಪರಿಗಣಿಸಿ ಕಾವೇರಿ ನೀರು ನಿಯಂತ್ರಣ ಸಮಿತಿಯ ನಿರ್ಧಾರವನ್ನು ಮರುಪರಿಶೀಲಿಸಬೇಕು, ಬರಪೀಡಿತವಾಗಿರುವ ರಾಜ್ಯದ ಜನತೆ ಹಾಗೂ ಜಾನುವಾರುಗಳ ಹಿತಾಸಕ್ತಿಯನ್ನು ಕಾಪಾಡಬೇಕೆಂದು ಮನವಿ ಮಾಡುತ್ತೇನೆ ಎಂದು ಸಿಎಂ ಸಿದ್ದರಾಯ್ಯ ಪತ್ರದಲ್ಲಿ ಮನವಿ ಮಾಡಿದ್ದಾರೆ.
ಕರ್ನಾಟಕ ರಾಜ್ಯ ಸಮಿತಿಯ ಹಿಂದಿನ ನಿರ್ದೇಶನವನ್ನು ಪಾಲಿಸಿದ್ದು, ಕಾವೇರಿ ಜಲಾನಯನ ಪ್ರದೇಶದಲ್ಲಿರುವ ಬಹುತೇಕ ತಾಲ್ಲೂಕುಗಳು ಮುಂಗಾರು ವೈಫಲ್ಯದಿಂದ ತೀವ್ರ ಬರಕ್ಕೆ ತುತ್ತಾಗಿವೆ. ಜೂನ್ ಮಾಹೆಯಿಂದ ಸೆಪ್ಟೆಂಬರ್ ಮಧ್ಯದವರೆಗೂ 92 ದಿನಗಳ ಕಾಲ 100 ಟಿಎಂಸಿ ನೀರನ್ನು ತಮಿಳುನಾಡು ಬಳಸಿಕೊಂಡಿದ್ದು, ಇದು ಹಿಂದೆ 1987-88, 2002-03, 2012-13, 2016-17 ಹಾಗೂ 2017-18 ರ ಬರಪರಿಸ್ಥಿತಿಯಲ್ಲಿ ಬಳಕೆಯಾದ ನೀರಿಗಿಂತಲೂ ಹೆಚ್ಚಾಗಿದೆ. ಕರ್ನಾಟಕದ ಜಲಾಶಯಗಳಲ್ಲಿ ಸಂಕಷ್ಟದ ಸ್ಥಿತಿಯಿದ್ದರೂ ತಮಿಳುನಾಡು ಭತ್ತವನ್ನು ವ್ಯಾಪಕವಾಗಿ ಬೆಳೆಯುತ್ತಿದೆ.
ಸೆಪ್ಟೆಂಬರ್ 12 ಹಾಗೂ 24 ವರೆಗೆ ಐಎಂಡಿ ಹವಾಮಾನ ಮುನ್ಸೂಚನೆಯಂತೆ ಮಳೆಯಾಗುವ ಲಕ್ಷಣಗಳಿಲ್ಲ. ಮೆಟ್ಟೂರು ಜಲಾಶಯದಲ್ಲಿ ಡಿ: 12.09.2023 ರಂದು 24.233 ಟಿಎಂಸಿ ಸಂಗ್ರಹವಿದ್ದು ( live storage) ಪ್ರಸ್ತುತ ಬಿಡುಗಡೆಯಾಗಿರುವ ನೀರನ್ನು ಪರಿಗಣಿಸಿದರೆ, ತಮಿಳುನಾಡಿನ ಅವಶ್ಯಕತೆ ಯನ್ನು ಪೂರೈಸಲು ಸಾಕಾಗುವಷ್ಟು ನೀರು ಲಭ್ಯವಿದೆ.
ಕರ್ನಾಟಕದ ಬೆಳೆಗಳ ರಕ್ಷಣೆಗೆ 70 ಟಿಎಂಸಿ, ಕುಡಿಯುವ ನೀರಿಗೆ 33 ಟಿಎಂಸಿ ಹಾಗೂ ಕೈಗಾರಿಕೆಗಳಿಗೆ 3 ಟಿಎಂಸಿ ನೀರು ಅಗತ್ಯವಿದೆ. ನಮ್ಮ ಸಂಗ್ರಹ 53 ಟಿಎಂಸಿ ಮಾತ್ರವಿದ್ದು, ನಮ್ಮ ಅವಶ್ಯಕತೆಗಳನ್ನು ಪೂರೈಸಿಕೊಳ್ಳಲು ಈ ಸಂಗ್ರಹ ಸಾಕಾಗುವುದಿಲ್ಲ. ಹೀಗಾಗಿ ತಾವು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರವು ತಮಿಳುನಾಡಿಗೆ ನೀರು ಹರಿಸುವಂತೆ ನೀಡಿರುವ ಆದೇಶವನ್ನು ಬರದಿಂದ ಸಂಕಷ್ಟಕ್ಕೆ ಸಿಲುಕಿರುವ ಕರ್ನಾಟಕದ ರೈತರು ಮತ್ತು ಜನತೆಯ ಹಿತರಕ್ಷಣೆ ದೃಷ್ಟಿಯಿಂದ ಮರುಪರಿಶೀಲಿಸುವಂತೆ ನಿರ್ದೇಶನ ನೀಡಬೇಕೆಂದು ಕೋರುತ್ತೇನೆ ಎಂದಿದ್ದಾರೆ.
ಜ್ಞಾನದ ಬೆಳಕನ್ನು ಜಗತ್ತಿಗೇ ಸಾರಿದಂತಹ ಮಹಾನ್ ಪುರುಷ ಭಗವಾನ್ ಬುದ್ಧರ ತತ್ವಾದರ್ಶಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಂಡು ಒಳ್ಳೆಯ ಸಮಾಜ ನಿರ್ಮಿಸಲು…
ಕಾಲೇಜು ಶಿಕ್ಷಣ ಇಲಾಖೆ, ಡಾ|| ಮನಮೋಹನ್ ಸಿಂಗ್ ಬೆಂಗಳೂರು ನಗರ ವಿಶ್ವವಿದ್ಯಾಲಯ, ಮಲ್ಲೇಶ್ವರಂನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ…
ಗೋಡೆ ಕೊರೆದ ಕಳ್ಳರು ಕೋಟ್ಯಂತರ ರೂ. ಮೌಲ್ಯದ ಚಿನ್ನಾಭರಣ ದೋಚಿ ಎಸ್ಕೇಪ್ ಆಗಿದ್ದಾರೆ. ಗೋಡೆ ಕೊರೆದು 1.20 ಕೋಟಿ ಬೆಲೆ…
ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಕುಸಿದು ಏಳು ಮಂದಿ ಸಾವು ಪ್ರಕರಣ: ಇಂಜಿನಿಯರ್ ರನ್ನು ಅಮಾನತುಗೊಳಿಸಿ, ಆಸ್ಪತ್ರೆ ಮುಖ್ಯಸ್ಥರಿಗೆ ನೋಟಿಸ್…
ದೊಡ್ಡಬಳ್ಳಾಪುರ ನಗರದ ಚಿಕ್ಕಪೇಟೆಯ ಇತಿಹಾಸ ಪ್ರಸಿದ್ಧ ಶ್ರೀ ಆದಿಶಕ್ತ್ಯಾತ್ಮಕ ದ್ರೌಪದಾದೇವಿ ಕರಗ ಮಹಹೋತ್ಸವ ಅಂಗವಾಗಿ ಹಸಿ ಕರಗ ಉತ್ಸವ ಸಂಭ್ರಮದಿಂದ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿನ 101 ಗ್ರಾಪಂ ವ್ಯಾಪ್ತಿಯಲ್ಲಿ ನೀರಿನ ಸಮಸ್ಯೆ ತಲೆದೂರದಂತೆ ಹೆಚ್ಚಿನ ನಿಗಾವಹಿಸಲಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಪಂ…