ಕಾವೇರಿ ಜಲ ವಿವಾದ; ಕಾವೇರಿ ನೀರು ನಿಯಂತ್ರಣ ಪ್ರಾಧಿಕಾರದ ನಿರ್ಧಾರ ಮರುಪರಿಶೀಲಿಸುವಂತೆ ಕೇಂದ್ರ ಜಲಶಕ್ತಿಗೆ ರಾಜ್ಯ ಸರ್ಕಾರ ಮನವಿ

ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರವು ತಮಿಳುನಾಡಿಗೆ ನೀರು ಹರಿಸುವಂತೆ ನೀಡಿರುವ ಆದೇಶವನ್ನು ಬರದಿಂದ ಸಂಕಷ್ಟಕ್ಕೆ ಸಿಲುಕಿರುವ ಕರ್ನಾಟಕದ ರೈತರು ಮತ್ತು ಜನತೆಯ ಹಿತರಕ್ಷಣೆ ದೃಷ್ಟಿಯಿಂದ ಮರುಪರಿಶೀಲಿಸುವಂತೆ ನಿರ್ದೇಶನ ನೀಡಬೇಕೆಂದು ಕೋರಿ ಕೇಂದ್ರ ಜಲಶಕ್ತಿ ಸಚಿವರಾದ ಗಜೇಂದ್ರ ಸಿಂಗ್ ಶೇಖಾವತ್ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪತ್ರ ಬರೆದಿದ್ದಾರೆ.

ಪತ್ರದ ಸಾರಾಂಶ

ಕಾವೇರಿ ನೀರಿನ ಮೇಲೆ ಅವಲಂಬಿತರಾಗಿರುವ ರೈತರು, ಜಾನುವಾರು ಹಾಗೂ ಜನರ ಹಿತಾಸಕ್ತಿಯನ್ನು ಸಂಕಷ್ಟಕ್ಕೆ ದೂಡಿ ಕಾವೇರಿ ನೀರು ನಿಯಂತ್ರಣ ಸಮಿತಿಯ ತೀರ್ಪನ್ನು ಅನುಷ್ಠಾನ ಮಾಡಲು ಸಾಧ್ಯವಿಲ್ಲ. ಕಾವೇರಿ ನೀರು ನಿಯಂತ್ರಣ ಸಮಿತಿ ನಿರ್ಧರಿಸಿರುವಂತೆ 15 ದಿನಗಳ ಕಾಲ ಕೆ.ಆರ್.ಎಸ್.ಹಾಗೂ ಕಬಿನಿಯಿಂದ 5,000 ಕ್ಯೂಸೆಕ್ ನೀರನ್ನು ಬಿಳಿಗುಂಡ್ಲುವಿನಿಂದ ಹರಿಸುವುದು ಸಾಧ್ಯವಿಲ್ಲ, ಕರ್ನಾಟಕದ ಮನವಿಯನ್ನು ಪರಿಗಣಿಸಿ ಕಾವೇರಿ ನೀರು ನಿಯಂತ್ರಣ ಸಮಿತಿಯ ನಿರ್ಧಾರವನ್ನು ಮರುಪರಿಶೀಲಿಸಬೇಕು, ಬರಪೀಡಿತವಾಗಿರುವ ರಾಜ್ಯದ ಜನತೆ ಹಾಗೂ ಜಾನುವಾರುಗಳ ಹಿತಾಸಕ್ತಿಯನ್ನು ಕಾಪಾಡಬೇಕೆಂದು ಮನವಿ ಮಾಡುತ್ತೇನೆ ಎಂದು ಸಿಎಂ ಸಿದ್ದರಾಯ್ಯ ಪತ್ರದಲ್ಲಿ ಮನವಿ ಮಾಡಿದ್ದಾರೆ.

ಕರ್ನಾಟಕ ರಾಜ್ಯ ಸಮಿತಿಯ ಹಿಂದಿನ ನಿರ್ದೇಶನವನ್ನು ಪಾಲಿಸಿದ್ದು, ಕಾವೇರಿ ಜಲಾನಯನ ಪ್ರದೇಶದಲ್ಲಿರುವ ಬಹುತೇಕ ತಾಲ್ಲೂಕುಗಳು ಮುಂಗಾರು ವೈಫಲ್ಯದಿಂದ  ತೀವ್ರ ಬರಕ್ಕೆ ತುತ್ತಾಗಿವೆ. ಜೂನ್ ಮಾಹೆಯಿಂದ ಸೆಪ್ಟೆಂಬರ್ ಮಧ್ಯದವರೆಗೂ 92 ದಿನಗಳ ಕಾಲ 100 ಟಿಎಂಸಿ ನೀರನ್ನು ತಮಿಳುನಾಡು ಬಳಸಿಕೊಂಡಿದ್ದು, ಇದು ಹಿಂದೆ 1987-88, 2002-03, 2012-13, 2016-17 ಹಾಗೂ 2017-18 ರ ಬರಪರಿಸ್ಥಿತಿಯಲ್ಲಿ ಬಳಕೆಯಾದ ನೀರಿಗಿಂತಲೂ ಹೆಚ್ಚಾಗಿದೆ. ಕರ್ನಾಟಕದ ಜಲಾಶಯಗಳಲ್ಲಿ ಸಂಕಷ್ಟದ ಸ್ಥಿತಿಯಿದ್ದರೂ ತಮಿಳುನಾಡು ಭತ್ತವನ್ನು ವ್ಯಾಪಕವಾಗಿ ಬೆಳೆಯುತ್ತಿದೆ.

ಸೆಪ್ಟೆಂಬರ್ 12 ಹಾಗೂ 24 ವರೆಗೆ ಐಎಂಡಿ ಹವಾಮಾನ ಮುನ್ಸೂಚನೆಯಂತೆ ಮಳೆಯಾಗುವ ಲಕ್ಷಣಗಳಿಲ್ಲ. ಮೆಟ್ಟೂರು ಜಲಾಶಯದಲ್ಲಿ ಡಿ: 12.09.2023 ರಂದು 24.233 ಟಿಎಂಸಿ ಸಂಗ್ರಹವಿದ್ದು ( live storage) ಪ್ರಸ್ತುತ ಬಿಡುಗಡೆಯಾಗಿರುವ ನೀರನ್ನು ಪರಿಗಣಿಸಿದರೆ, ತಮಿಳುನಾಡಿನ ಅವಶ್ಯಕತೆ ಯನ್ನು ಪೂರೈಸಲು ಸಾಕಾಗುವಷ್ಟು ನೀರು ಲಭ್ಯವಿದೆ.

ಕರ್ನಾಟಕದ ಬೆಳೆಗಳ ರಕ್ಷಣೆಗೆ 70 ಟಿಎಂಸಿ, ಕುಡಿಯುವ ನೀರಿಗೆ 33 ಟಿಎಂಸಿ ಹಾಗೂ ಕೈಗಾರಿಕೆಗಳಿಗೆ 3 ಟಿಎಂಸಿ ನೀರು ಅಗತ್ಯವಿದೆ. ನಮ್ಮ ಸಂಗ್ರಹ 53 ಟಿಎಂಸಿ ಮಾತ್ರವಿದ್ದು, ನಮ್ಮ ಅವಶ್ಯಕತೆಗಳನ್ನು ಪೂರೈಸಿಕೊಳ್ಳಲು ಈ ಸಂಗ್ರಹ ಸಾಕಾಗುವುದಿಲ್ಲ. ಹೀಗಾಗಿ ತಾವು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರವು ತಮಿಳುನಾಡಿಗೆ ನೀರು ಹರಿಸುವಂತೆ ನೀಡಿರುವ ಆದೇಶವನ್ನು ಬರದಿಂದ ಸಂಕಷ್ಟಕ್ಕೆ ಸಿಲುಕಿರುವ ಕರ್ನಾಟಕದ ರೈತರು ಮತ್ತು ಜನತೆಯ ಹಿತರಕ್ಷಣೆ ದೃಷ್ಟಿಯಿಂದ ಮರುಪರಿಶೀಲಿಸುವಂತೆ ನಿರ್ದೇಶನ ನೀಡಬೇಕೆಂದು ಕೋರುತ್ತೇನೆ ಎಂದಿದ್ದಾರೆ.

Ramesh Babu

Journalist

Recent Posts

ಜನರನ್ನು ತಾಲೂಕು ಕಚೇರಿಗೆ ಅಲೆದಾಟ ತಪ್ಪಿಸಿ ಸ್ಥಳದಲ್ಲೇ ಸಮಸ್ಯೆ ಪರಿಹರಿಸಿ- ಶಾಸಕ ಕೊತ್ತೂರು ಮಂಜುನಾಥ್

ಕೋಲಾರ: ಸಾರ್ವಜನಿಕರು ತಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ತಾಲೂಕು ಕಚೇರಿಗೆ ಅಲೆದಾಡುವುದನ್ನು ತಪ್ಪಿಸಿ, ಸ್ಥಳದಲ್ಲಿಯೇ ಸೇವೆ ಒದಗಿಸುವ ನಿಟ್ಟಿನಲ್ಲಿ ಪ್ರಜಾ ಸೇವಾ…

11 hours ago

ಭಾರತಕ್ಕೆ ಕ್ಸಿ ಜಿನ್‌ಪಿಂಗ್ ಭೇಟಿ: ಮೋದಿ–ಕ್ಸಿ ದ್ವಿಪಕ್ಷೀಯ ಮಾತುಕತೆ ಇಂದು

ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರು ಎರಡು ದಿನಗಳ ಭಾರತ ಭೇಟಿಗಾಗಿ ಶನಿವಾರ ಮಧ್ಯಾಹ್ನ ರಾಷ್ಟ್ರ ರಾಜಧಾನಿ ನವದೆಹಲಿಗೆ…

15 hours ago

ಮಧುರೆ ದೇವಾಲಯದ ಬಳಿ ಮೇಲ್ಸೇತುವೆ ಅವ್ಯವಸ್ಥೆ: ಮೇಲಕ್ಕೆ ಚಾಚಿರುವ ಕಂಬಿಗಳಿಂದ ವಾಹನ ಸವಾರರಿಗೆ ತೊಂದರೆ

ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಮಧುರೆ ದೇವಾಲಯದ ಸಮೀಪ ಹೊಸದಾಗಿ ನಿರ್ಮಿಸಿರುವ ಮೇಲ್ಸೇತುವೆ ವಾಹನ ಸವಾರರಿಗೆ ತೀವ್ರ ತೊಂದರೆ ಉಂಟುಮಾಡುತ್ತಿದೆ.…

22 hours ago

ನಾಯಿ ಕಡಿತದ ಆತಂಕಕ್ಕೆ ಲಸಿಕೆಯ ಕವಚ: ರೇಬೀಸ್ ನಿಯಂತ್ರಣಕ್ಕೆ 32 ಸಾವಿರ ಲಸಿಕೆ

ಬೆಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಹಾಗೂ ರೇಬೀಸ್ ಸೋಂಕಿನ ಆತಂಕಕ್ಕೆ ಕಡಿವಾಣ ಹಾಕಲು ಪಶುಪಾಲನಾ ಇಲಾಖೆ ಬೃಹತ್…

23 hours ago

2028ರ ಚುನಾವಣೆಗೆ ಜಾಲತಾಣವೇ ಅಸ್ತ್ರ- ಸಿಎಂಆರ್ ಶ್ರೀನಾಥ್

ಕೋಲಾರ: 2028ರಲ್ಲಿ ರಾಜ್ಯದಲ್ಲಿ ಎನ್‌ಡಿಎ ಸರ್ಕಾರ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಖಚಿತ. ಸಾಮಾಜಿಕ ಜಾಲತಾಣ ಈಗ ಪರಿಣಾಮಕಾರಿಯಾಗಿದೆ. ಅದನ್ನು…

1 day ago

ಗಣೇಶ ವಿಸರ್ಜನೆ ವೇಳೆ ಮುಂಜಾಗ್ರತೆ ವಹಿಸಲು ರೈತ ಸಂಘ ಒತ್ತಾಯ: ಕೃಷಿ ಹೊಂಡ, ಕೆರೆ-ಕುಂಟೆಗಳಲ್ಲಿ ವಿಸರ್ಜನೆಗೆ ಕಡಿವಾಣ ಹಾಕಿ: ಜಿಲ್ಲಾಧಿಕಾರಿಗೆ ಮನವಿ

ಕೋಲಾರ : ಗಣೇಶ ಮೂರ್ತಿ ವಿಸರ್ಜನೆ ಸಂದರ್ಭದಲ್ಲಿ ಯಾವುದೇ ರೀತಿಯ ಅನಾಹುತ, ಅಹಿತಕರ ಘಟನೆಗಳು ಸಂಭವಿಸದಂತೆ ಗ್ರಾಮೀಣ ಪ್ರದೇಶಗಳಲ್ಲಿ ಕರಪತ್ರಗಳ…

1 day ago