ಕಾವೇರಿ ನದಿ‌ ನೀರು ವಿವಾದ: ಮಾರಸಂದ್ರ ಟೋಲ್ ಬಳಿ ರಸ್ತೆ ತಡೆ ಮಾಡಿ ಪ್ರತಿಭಟಿಸಿದ ಕರವೇ ಬಿ.ಎಸ್. ಚಂದ್ರಶೇಖರ್ ಬಣ

ತಮಿಳುನಾಡಿಗೆ ಕಾವೇರಿ ನದಿ ನೀರು ಹರಿಸುವ ವಿಚಾರದಲ್ಲಿ ಉದ್ಭವವಾಗಿರುವ ವಿವಾದ ಹಾಗೂ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ನಿರ್ದೇಶನದಂತೆ ನೆರೆ ರಾಜ್ಯಕ್ಕೆ ನೀರು ಬಿಡುತ್ತಿರುವ ರಾಜ್ಯ ಸರ್ಕಾರದ ವಿರುದ್ಧ ಇಂದು ಹಲವು ಸಂಘಟನೆಗಳಿಂದ ಬೆಂಗಳೂರು ಬಂದ್ ಘೋಷಣೆ ಮಾಡಿ ಪ್ರತಿಭಟನೆ ನಡೆಸಲಾಯಿತು.

ಅದೇರೀತಿ ಕನ್ನಡಿಗರ ಕರ್ನಾಟಕ ರಕ್ಷಣಾ ವೇದಿಕೆ ಸಂಸ್ಥಾಪಕ ಅಧ್ಯಕ್ಷರಾದ ಬಿಎಸ್ ಚಂದ್ರಶೇಖರ್ ರವರ ನೇತೃತ್ವದಲ್ಲಿಂದು ಬೆಂಗಳೂರು ಬಂದ್ ಕರೆ ಬೆಂಬಲಿಸಿ ಮಾರಸಂದ್ರ ಟೋಲ್ ಬಳಿ ರಸ್ತೆ ತಡೆ ಮಾಡಿ ಕಾವೇರಿ ಹೋರಾಟಕ್ಕೆ ಸಂಘಟನೆಯಿಂದ ಬೆಂಬಲವನ್ನು ಸೂಚಿಸಲಾಯಿತು.

ಕಾರ್ಯಕ್ರಮದಲ್ಲಿ ಬಿ.ಎಸ್.ಚಂದ್ರಶೇಖರ್ ಅವರು ಮಾತನಾಡಿ, ಕಾವೇರಿ ಹೋರಾಟದ ಬಗ್ಗೆ ಸರಿಯಾದ ನಿರ್ಧಾರವನ್ನು ತೆಗೆದುಕೊಳ್ಳದೆ ಇದ್ದ ಪಕ್ಷದಲ್ಲಿ ನಮ್ಮ ಸಂಘಟನೆ ನಿರಂತರವಾಗಿ ಉಗ್ರವಾದ ಹೋರಾಟ ಮಾಡುತ್ತದೆ ಎಂದು ಎಚ್ಚರಿ ನೀಡಿದರು.

ಈ ವೇಳೆ ರಾಜ್ಯ ಪ್ರಧಾನ ಕಾರ್ಯದರ್ಶಿ ಆರ್ ರಮೇಶ್, ಉಪಾಧ್ಯಕ್ಷ ಆರಾಧ್ಯ, ರಾಜ್ಯ ಘಟಕದ ದೊಡ್ಡೇಗೌಡ, ಖಜಾಂಚಿ ಚೇತನ್ ಗೌಡ, ನಾಗೇಶ್, ನರೇಂದ್ರ, ವಾಸು, ಚಂದ್ರು, ಪುನೀತ್, ಭುವನ್, ತಾಲೂಕು ಯುವ ಘಟಕದ ಅಧ್ಯಕ್ಷರಾದ ರಂಜಿತ್ ಕುಮಾರ್, ಬಸವರಾಜ್, ಅಂಬರೀಶ್, ಲಕ್ಷ್ಮಿಕಾಂತ್, ಆಟೋ ಘಟಕದ ತನ್ವೀರ್ ಹಾಗೂ ಪದಾಧಿಕಾರಿಗಳು, ಮಹಿಳಾ ಘಟಕದ ಅಧ್ಯಕ್ಷರಾದ ರಾಧಮ್ಮ, ಗಂಗಮ್ಮ ಹಾಗೂ ಹೊಸಹಳ್ಳಿ ಘಟಕದ ಪದಾಧಿಕಾರಿಗಳು ಭಾಗವಹಿಸಿದ್ದರು.

Ramesh Babu

Journalist

Recent Posts

ಗುರುಭವನದಲ್ಲಿ ಅದ್ಧೂರಿ ವಿಶ್ವ ಮಹಿಳಾ ದಿನಾಚರಣೆ

ಸೇವೆಗಾಗಿ ಬಾಳು ಭಾರತ ಸೇವಾದಳ ಬೆಂಗಳೂರು ಗ್ರಾಮಾಂತರ ಜಿಲ್ಲೆ, ಭಾರತ ಸೇವಾದಳ ದೇವನಹಳ್ಳಿ ತಾಲೂಕು ಘಟಕ, ಕರ್ನಾಟಕ ರಾಜ್ಯ ಪ್ರಾಥಮಿಕ…

8 hours ago

ಭೂದಾಖಲೆಗಳ ತಿದ್ದುಪಡಿಗಾಗಿ ಸಾರ್ವಜನಿಕರಿಂದ ಲಂಚಕ್ಕೆ ಬೇಡಿಕೆ: ಲೋಕಾ ಬಲೆಗೆ ಬಿದ್ದ ಭ್ರಷ್ಟ ಗ್ರಾಮ ಆಡಳಿತಾಧಿಕಾರಿ

ಭೂದಾಖಲೆಗಳ ತಿದ್ದುಪಡಿಗಾಗಿ ಸಾರ್ವಜನಿಕರಿಂದ ಹಣಕ್ಕೆ ಬೇಡಿಕೆಯಿಟ್ಟಿದ್ದ ಗ್ರಾಮ ಆಡಳಿತಾಧಿಕಾರಿಯೊಬ್ಬರು ಲೋಕಾಯುಕ್ತ ಪೊಲೀಸರ ಕಾರ್ಯಾಚರಣೆಯಲ್ಲಿ ಸಿಕ್ಕಿಬಿದ್ದಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಜೋಯಿಡಾ…

9 hours ago

ಯುಗಾದಿ ಸಮಯದಲ್ಲಿ ಮತ್ತೆ ಚಿಗುರಿದ ಪ್ರೀತಿ: ವಿಚ್ಚೇದನಕ್ಕೆ ಅರ್ಜಿ ಸಲ್ಲಿಸಿದ್ದವರು ಕಟೆಕಟೆಯಲ್ಲಿ ಒಂದಾದರು: ಒಂದಾದ ದಂಪತಿಗೆ ಪ್ರೀತಿಯ ಪಾಠ ಹೇಳಿದ ನ್ಯಾಯಾಧೀಶರು

ಸಣ್ಣಪುಟ್ಟ ಜಗಳಗಳಿಂದ ಕೋರ್ಟಿನ ಮೆಟ್ಟಿಲೇರಿ ದೂರಾವಾಗಲು ನಿರ್ಧರಿಸಿದ್ದ ನಾಲ್ವರು ದಂಪತಿಗಳನ್ನು ಶನಿವಾರ ನಡೆದ ಲೋಕಾಅದಾಲತ್ ನಲ್ಲಿ ನ್ಯಾಯಾಧೀಶರುಗಳು ಹೇಳಿದ ಬುದ್ಧಿಮಾತಿನಿಂದ…

11 hours ago

ವಾರದೊಳಗೆ ಸಹಜ ಸ್ಥಿತಿಗೆ ಗ್ಯಾಸ್ ಸಿಲಿಂಡರ್ ಪೂರೈಕೆ- ಆಹಾರ ಸಚಿವ ಕೆ.ಎಚ್ ಮುನಿಯಪ್ಪ

ಕೊಲ್ಲಿ ದೇಶಗಳಲ್ಲಿ ಯುದ್ಧದ ಪರಿಸ್ಥಿತಿ ಹಿನ್ನೆಲೆಯಲ್ಲಿ ಉಂಟಾದ ಗೃಹ ಬಳಕೆ ಹಾಗೂ ವಾಣಿಜ್ಯ ಬಳಕೆ ಗ್ಯಾಸ್ ಸಿಲಿಂಡರ್ ಗಳ ಪೂರೈಕೆ…

12 hours ago

“ಗೃಹಬಳಕೆ ಸಿಲಿಂಡರ್ ವಾಣಿಜ್ಯ ಉದ್ದೇಶಕ್ಕಾಗಿ ಬಳಸಿದ್ದಲ್ಲಿ ಸೂಕ್ತ ಕಾನೂನು ಕ್ರಮ”

ಗೃಹಬಳಕೆ ಸಿಲಿಂಡರ್ ಅನ್ನು ವಾಣಿಜ್ಯ ಉದ್ದೇಶಕ್ಕಾಗಿ ಬಳಸಿದ್ದಲ್ಲಿ ಸೂಕ್ತ ಕಾನೂನುಕ್ರಮ ಕೈಗೊಳ್ಳಲು ಆಹಾರ ಸಚಿವರು ಸೂಚಿಸಿದ್ದು, ಅದರಂತೆ ಗೃಹ ಬಳಕೆ…

12 hours ago

ವಾಣಿಜ್ಯ ಗ್ಯಾಸ್ ಸಿಲಿಂಡರ್ ಸಮಸ್ಯೆ: ಆಹಾರ ಸಚಿವ ಕೆ.ಎಚ್.ಮುನಿಯಪ್ಪ ಏನಂದ್ರು ಗೊತ್ತಾ….?

ವಾಣಿಜ್ಯ ಗ್ಯಾಸ್ ಸಿಲಿಂಡರ್ ಸಮಸ್ಯೆ ಹಿನ್ನೆಲೆ ಆಹಾರ ಸಚಿವ ಕೆ.ಎಚ್.ಮುನಿಯಪ್ಪ ಪ್ರತಿಕ್ರಿಯೆ. ಈ ಸಮಸ್ಯೆ ಇನ್ನು ಒಂದು ವಾರಗಳ ಕಾಲ…

13 hours ago