ತಮಿಳುನಾಡಿಗೆ ಕಾವೇರಿ ನದಿ ನೀರು ಹರಿಸುವ ವಿಚಾರದಲ್ಲಿ ಉದ್ಭವವಾಗಿರುವ ವಿವಾದ ಹಾಗೂ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ನಿರ್ದೇಶನದಂತೆ ನೆರೆ ರಾಜ್ಯಕ್ಕೆ ನೀರು ಬಿಡುತ್ತಿರುವ ರಾಜ್ಯ ಸರ್ಕಾರದ ವಿರುದ್ಧ ಇಂದು ಹಲವು ಸಂಘಟನೆಗಳಿಂದ ಬೆಂಗಳೂರು ಬಂದ್ ಘೋಷಣೆ ಮಾಡಿ ಪ್ರತಿಭಟನೆ ನಡೆಸಲಾಯಿತು.
ಅದೇರೀತಿ ಕನ್ನಡಿಗರ ಕರ್ನಾಟಕ ರಕ್ಷಣಾ ವೇದಿಕೆ ಸಂಸ್ಥಾಪಕ ಅಧ್ಯಕ್ಷರಾದ ಬಿಎಸ್ ಚಂದ್ರಶೇಖರ್ ರವರ ನೇತೃತ್ವದಲ್ಲಿಂದು ಬೆಂಗಳೂರು ಬಂದ್ ಕರೆ ಬೆಂಬಲಿಸಿ ಮಾರಸಂದ್ರ ಟೋಲ್ ಬಳಿ ರಸ್ತೆ ತಡೆ ಮಾಡಿ ಕಾವೇರಿ ಹೋರಾಟಕ್ಕೆ ಸಂಘಟನೆಯಿಂದ ಬೆಂಬಲವನ್ನು ಸೂಚಿಸಲಾಯಿತು.
ಕಾರ್ಯಕ್ರಮದಲ್ಲಿ ಬಿ.ಎಸ್.ಚಂದ್ರಶೇಖರ್ ಅವರು ಮಾತನಾಡಿ, ಕಾವೇರಿ ಹೋರಾಟದ ಬಗ್ಗೆ ಸರಿಯಾದ ನಿರ್ಧಾರವನ್ನು ತೆಗೆದುಕೊಳ್ಳದೆ ಇದ್ದ ಪಕ್ಷದಲ್ಲಿ ನಮ್ಮ ಸಂಘಟನೆ ನಿರಂತರವಾಗಿ ಉಗ್ರವಾದ ಹೋರಾಟ ಮಾಡುತ್ತದೆ ಎಂದು ಎಚ್ಚರಿ ನೀಡಿದರು.
ಈ ವೇಳೆ ರಾಜ್ಯ ಪ್ರಧಾನ ಕಾರ್ಯದರ್ಶಿ ಆರ್ ರಮೇಶ್, ಉಪಾಧ್ಯಕ್ಷ ಆರಾಧ್ಯ, ರಾಜ್ಯ ಘಟಕದ ದೊಡ್ಡೇಗೌಡ, ಖಜಾಂಚಿ ಚೇತನ್ ಗೌಡ, ನಾಗೇಶ್, ನರೇಂದ್ರ, ವಾಸು, ಚಂದ್ರು, ಪುನೀತ್, ಭುವನ್, ತಾಲೂಕು ಯುವ ಘಟಕದ ಅಧ್ಯಕ್ಷರಾದ ರಂಜಿತ್ ಕುಮಾರ್, ಬಸವರಾಜ್, ಅಂಬರೀಶ್, ಲಕ್ಷ್ಮಿಕಾಂತ್, ಆಟೋ ಘಟಕದ ತನ್ವೀರ್ ಹಾಗೂ ಪದಾಧಿಕಾರಿಗಳು, ಮಹಿಳಾ ಘಟಕದ ಅಧ್ಯಕ್ಷರಾದ ರಾಧಮ್ಮ, ಗಂಗಮ್ಮ ಹಾಗೂ ಹೊಸಹಳ್ಳಿ ಘಟಕದ ಪದಾಧಿಕಾರಿಗಳು ಭಾಗವಹಿಸಿದ್ದರು.
ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…
ನಾಗಮಂಗಲ: ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಕನ್ಯಾಘಟ್ಟ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಮಹಾಗಣಪತಿ ದೇವಸ್ಥಾನದ ಲೋಕಾರ್ಪಣೆ ಸಮಾರಂಭದಲ್ಲಿ ಮಾತನಾಡಿದ ಜಲಸಂಪನ್ಮೂಲ…
ದೇವನಹಳ್ಳಿ: ಮನೆ ಮಾಲೀಕರು ಮನೆಯಲ್ಲಿದ್ದ ಸಂದರ್ಭದಲ್ಲೇ ಕಳ್ಳತನ ನಡೆಸಿ ಪರಾರಿಯಾಗಿದ್ದ ಆರೋಪಿಯನ್ನು ವಿಜಯಪುರ ಪೊಲೀಸರು ಕಳ್ಳತನ ನಡೆದ 24 ಗಂಟೆಯೊಳಗೆ…
ದೊಡ್ಡಬಳ್ಳಾಪುರ: ತಾಲೂಕಿನ ಸೋಮಶೆಟ್ಟಿಹಳ್ಳಿ ಗ್ರಾಮದಲ್ಲಿ ತಡರಾತ್ರಿ ಕೋಳಿಫಾರ್ಮ್ಗೆ ಚಿರತೆ ದಾಳಿ ನಡೆಸಿರುವ ಶಂಕೆ ವ್ಯಕ್ತವಾಗಿದ್ದು, 950ಕ್ಕೂ ಅಧಿಕ ಕೋಳಿಮರಿಗಳು…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ನೂತನ ಸದಸ್ಯರಾಗಿ ಆಯ್ಕೆಯಾಗಿರುವ ಎಸ್.ಡಿ. ಮುನಿರಾಜು ಅವರನ್ನು ತೂಬಗೆರೆ ಯುವ ಕಾಂಗ್ರೆಸ್ ಸಮಿತಿ ವತಿಯಿಂದ…
ದೇವನಹಳ್ಳಿ: ವಿಯೆಟ್ನಾಂನ ಹಾನೊಯ್ ನಗರದಿಂದ ಬೆಂಗಳೂರಿಗೆ ವಿಮಾನದ ಮೂಲಕ ಹೈಡ್ರೋಫೋನಿಕ್ ಗಾಂಜಾ ಕಳ್ಳಸಾಗಣೆ ಮಾಡುತ್ತಿದ್ದ ಆರೋಪಿಯನ್ನು ದೇವನಹಳ್ಳಿ ಕೆಂಪೇಗೌಡ ಅಂತರರಾಷ್ಟ್ರೀಯ…